Homeಕರ್ನಾಟಕಅಮಾಯಕ ದಲಿತನ ಮೇಲೆ ಹಾಸನ ಪೊಲೀಸರ ಅಟ್ಟಹಾಸ; ಜಡ್ಡುಗಟ್ಟಿನ ವ್ಯವಸ್ಥೆಯಲ್ಲಿ ನ್ಯಾಯ ಮರೀಚಿಕೆ

ಅಮಾಯಕ ದಲಿತನ ಮೇಲೆ ಹಾಸನ ಪೊಲೀಸರ ಅಟ್ಟಹಾಸ; ಜಡ್ಡುಗಟ್ಟಿನ ವ್ಯವಸ್ಥೆಯಲ್ಲಿ ನ್ಯಾಯ ಮರೀಚಿಕೆ

- Advertisement -
- Advertisement -

ಅಮಾಯಕ ದಲಿತ ಕಾರ್ಮಿಕನ ಮೇಲೆ ಪೊಲೀಸರು ವಿನಾಕಾರಣ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸಾವುಬದುಕಿನ ನಡುವೆ ಸಂತ್ರಸ್ತ ದಲಿತ ಹೋರಾಡುತ್ತಿದ್ದರೆ, ಆತನ ಕುಟುಂಬಕ್ಕೆ ಪೊಲೀಸರು ಬೆದರಿಕೆ ಹಾಕಿದ್ದಾರೆಂಬ ಆರೋಪವೂ ಕೇಳಿಬಂದಿದೆ.

ಬೇಲೂರು ತಾಲೂಕಿನ ಅಪ್ಪಗೌಡನಹಳ್ಳಿ ಗ್ರಾಮದ ಶೇಖರ  ಅವರು ಕೆಲಸ ಮುಗಿಸಿಕೊಂಡು ಜ.5ನೇ ತಾರೀಕು ರಾತ್ರಿ 10.30ರ ಸುಮಾರಿಗೆ ಬಸ್ಸಿನಿಂದ ಇಳಿದು ಹಾಸನದಲ್ಲಿರುವ ತನ್ನ ಬಾಡಿಗೆ ಮನೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ ಘಟನೆ ನಡೆದಿದೆ ಎಂದು ಶೇಖರ ಅವರ ಪತ್ನಿ ಸುಧಾ ದೂರು ನೀಡಿದ್ದಾರೆ.

“ನನ್ನ ಗಂಡ ಶೇಖರರವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಎಎಸ್‌ಐ ಹರೀಶ್‌ ಹಾಗೂ ಇತರೆ ಮೂರು ಜನ ಪೊಲೀಸ್ ಪೇದೆಗಳ ಮೇಲೆ ದೂರು ದಾಖಲಿಸದೆ ವಿಳಂಬ ಮಾಡಲಾಗುತ್ತಿದೆ” ಎಂದು ಜಿಲ್ಲಾಧಿಕಾರಿಯವರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂತ್ರಸ್ತರ ಆರೋಪವೇನು?

ಬೇಲೂರು ತಾಲೂಕಿನ ಅಪ್ಪಗೌಡನಹಳ್ಳಿ ಗ್ರಾಮದ ಶೇಖರ್ ರಾತ್ರಿ 10.30ರ ಸುಮಾರಿಗೆ ಬಸ್ಸಿನಿಂದ ಇಳಿದು ಹಾಸನದ ಹಳೇ ಮಾರ್ಕೆಟ್‌ ಬಳಿ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ ಪೊಲೀಸರು ಹಲ್ಲೆ ನಡೆಸಿದ್ದಾರೆ.

ಹಾಸನ ನಗರ ಠಾಣೆಯ ಎಎಸ್‌ಐ ಹರೀಶ್ ಮತ್ತು ಸಿಬ್ಬಂದಿ ಏಕಾಏಕಿ ಶೇಖರ್‌ ಮೇಲೆ ಕಳ್ಳತನದ ಆರೋಪ ಹೊರಿಸಿ ಹೊಡೆದಿದ್ದಾರೆ. ಕಳ್ಳತನ ಮಾಡಲು ಹೊಂಚು ಹಾಕುತ್ತಿದ್ದೀಯ ಎಂದು ಗದರಿಸಿ ವಾಚಾಮ ಗೋಚರವಾಗಿ ನಿಂದಿಸಿ, ನೆಲದ ಮೇಲೆ ಬೀಳಿಸಿ ಬಟ್ಟೆಹರಿದು ಹಾಕಿದ್ದಾರೆ. ಬೂಟು ಕಾಲಿನಿಂದ ಒದ್ದಿದ್ದಾರೆ. ಕೈ ಮೂಳೆ ಮುರಿದು ಹೋಗುವ ಹಾಗೆ ಥಳಿಸಿದ್ದಾರೆ.

“ಇಲ್ಲ ಸ್ವಾಮಿ ನಾನು ಅಮಾಯಕ. ನಾನು ಹಳೇಬೀಡಿನಲ್ಲಿ ಕೆಲಸ ಮುಗಿಸಿಕೊಂಡು ಬರುತ್ತಿದ್ದೇನೆ. ಹಾಸನದ ಚನ್ನಪಟ್ಟಣದಲ್ಲಿರುವ ಬಾಡಿಗೆ ಮನೆಗೆ ಮಲಗಲು ಹೋಗುತ್ತಿದ್ದೇನೆ” ಎಂದು ಶೇಖರ್‌ ಅಂಗಲಾಚಿದರೂ ಕೇಳದೆ ಮನಸೋಇಚ್ಛೆ ಹೊಡೆದಿದ್ದಾರೆ. ಎಷ್ಟು ಕಾಡಿ ಬೇಡಿದರೂ ಕೈಕಾಲು ಹಿಡಿದರೂ ಶೇಖರ್‌ ಅವರನ್ನು ಪೊಲೀಸರು ಬಿಡಲಿಲ್ಲ.

ಹಲ್ಲೆಗೊಳಗಾದ ಶೇಖರ್‌

“ಹೇಳು, ಏನು ಕದಿಯಲು ಬಂದಿದ್ದೆ? ಎಲ್ಲಿಟ್ಟಿದ್ದೀಯಾ? ಎಂದು ಏಕಪಕ್ಷೀಯವಾಗಿ ನನ್ನ ಮೇಲೆ ಹಲ್ಲೆ ಮಾಡಿದರು. ಮುಂದುವರಿದು ಪೊಲೀಸ್‌ ಭಾಷೆಯಲ್ಲಿ ಮಾತನಾಡುತ್ತಾ, ಯಾವುದೋ ನಿನ್ನ ಜಾತಿ ಎಂದು ಕೇಳಿದರು. ನಾನು ಪರಿಶಿಷ್ಟ ಜಾತಿಯಯವನು ಎಂದು ಹೇಳಿದಾಗ ಕೆರಳಿ ಕೆಂಡವಾದ ಇಡೀ ಸಿಬ್ಬಂದಿ ನನಗೆ ಮತ್ತೆ ಮನಬಂದಂತೆ ಥಳಿಸಿದರು. ಜಾತಿ ನಿಂದನೆ ಮಾಡಿದರು. ಮಗನೇ ಈ ವಿಚಾರವನ್ನು ಎಲ್ಲಿಯಾದರೂ ಹೇಳಿದರೆ ಅಥವಾ ದೂರು ಕೊಟ್ಟರೆ ನಿನ್ನ ಕಥೆ ಮುಗಿಸುತ್ತೇವೆ ಎಂದು ಹೆದರಿಸಿ ಬೆದರಿಸಿ ಹೋದರು” ಎಂದು ಶೇಖರ್‌ ಘಟನೆಯನ್ನು ವಿವರಿಸಿರುವುದಾಗಿ ಆತನ ಪತ್ನಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ನನ್ನ ಗಂಡನ ಮೊಬೈಲ್ ಹಾಗೂ ಹಣವನ್ನು ಕಿತ್ತುಕೊಂಡು ಪೊಲೀಸರು ಹೋಗಿದ್ದಾರೆ. ನನ್ನ ಗಂಡನ ಮೊಬೈಲ್‌ನಿಂದಲೇ ನನಗೆ ಕರೆ ಮಾಡಿ ಅಮಾಯಕನಿಗೆ ಹೊಡೆದಿರುವುದಾಗಿ ತಿಳಿಸಿದ್ದಾರೆ. ನನ್ನ ಗಂಡ ಬಸ್‌ಸ್ಟಾಂಡ್‌ನಲ್ಲಿಯೇ ಇದ್ದು ಬೆಳಿಗ್ಗೆ ಬಂದಿದ್ದಾರೆ. ಬೇಲೂರಿಗೆ ಹೋಗಿ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದು, ಎಕ್ಸ್‌ರೇ ಮಾಡಿಸಿದಾಗ ಕೈ ಮೂಳೆ ಮುರಿದಿರುವುದು ನಮಗೆ ಕಂಡು ಬಂದಿದೆ. ಆಪರೇಷನ್ ಸಹ ಮಾಡಿಸಿರುತ್ತೇವೆ. ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ತಿರುಮಲನಹಳ್ಳಿ ಶಿವಕುಮಾರ್ ಮಾತನಾಡಿ, “ಅಮಾಯಕ ದಲಿತ ಶೇಖರ್ ರವರ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯ ಖಂಡನೀಯ. ಕುಟುಂಬದ ಆಶ್ರಯದಾತನಾಗಿದ್ದ ಈತ ಈಗ ತೀವ್ರತರಾದ ಅನಾರೋಗ್ಯದಿಂದ ಬಳಲುವಂತಾಗಿದೆ. ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಹಾಸನ ನಗರ ಠಾಣೆಯ ಎಎಸ್ಐ ಹರೀಶ್ ಮತ್ತು ತಂಡದವರಿಂದ ಮಾನವ ಹಕ್ಕುಗಳ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಹಾಸನ ಸಿಟಿ ಪೊಲೀಸ್ ಸ್ಟೇಷನ್ ಸಿಬ್ಬಂದಿ ಮೇಲೆ ಕಾನೂನು ರೀತಿ ಕ್ರಮ ಕೈಗೊಂಡು ತನಿಖೆ ನಡೆಸಬೇಕು. ಕೆಲಸದಿಂದಲೇ ವಜಾ ಮಾಡಬೇಕು ಹಾಗೂ ಕಾನೂನನ್ನು ಪರಿಪಾಲುಸುವವರೇ ಕಾನೂನನ್ನು ಕೈಗೆ ತೆಗೆದುಕೊಂಡರೆ ಈ ಜನಸಾಮಾನ್ಯರ ಪಾಡೇನು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಬೆಳ್ತಂಗಡಿ: ದಲಿತ ಯುವಕನ ಕೊಲೆ ಪ್ರಕರಣದಲ್ಲಿ ನಾಲ್ವರ ಬಂಧನ

ತಬಲ ನುಡಿಸಿ ಜೀವನ ನಡೆಸುತ್ತಿದ್ದರು ಶೇಖರ್‌…

ದಲಿತ ಸಮುದಾಯದ ಶೇಖರ್‌ ಕೂಲಿ ಮಾಡಿಕೊಂಡು, ಕೆಲವು ಸಂದರ್ಭಗಳಲ್ಲಿ ತಬಲ ನುಡಿಸಿಕೊಂಡು ಜೀವನ ನಡೆಸುತ್ತಿದ್ದರು. ಈಗ ಕೈ ಬೆರಳುಗಳಿಗೆ ಹಾನಿ ಮಾಡಿರುವುದರಿಂದ ಬದುಕು ಅತಂತ್ರವಾಗಿದೆ.

ಘಟನೆಯ ಕುರಿತು ಯಾವುದಾದರೂ ಕ್ರಮ ಜರುಗಿಸಿದ್ದಾರಾ ಎಂದು ತಿಳಿಯಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್ ಶಂಕರ್‌ ಅವರನ್ನು ನಾಲ್ಕೈದು ಬಾರಿ ಸಂಪರ್ಕಿಸಲು ಪ್ರಯತ್ನಿಸಲಾಯಿತು. ಆದರೆ ಅವರು ಕರೆಯನ್ನು ಸ್ವೀಕರಿಸಲಿಲ್ಲ.

ಹಾಸನದ ಸ್ಥಳೀಯ ಪತ್ರಿಕೆಯ ಭೀಮವಿಜಯಕ್ಕೆ ಎಸ್‌ಪಿ ಪ್ರತಿಕ್ರಿಯೆ ನೀಡಿರುವುದು ವರದಿಯಾಗಿದ್ದು, “ಇಲಾಖೆ ಸಿಬ್ಬಂದಿ ಕಾರಣವಿಲ್ಲದೆ ಯಾರ ಮೇಲೂ ಹಲ್ಲೆ ನಡೆಸುವುದಿಲ್ಲ. ಆದರೂ ಈ ರೀತಿ ಹಲ್ಲೆ ನಡೆಸಿರುವುದನ್ನು ನಾವು ಸಹಿಸುವುದಿಲ್ಲ. ಈ ಸಂಬಂಧ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...