Homeಕರ್ನಾಟಕಅಮಾಯಕ ದಲಿತನ ಮೇಲೆ ಹಾಸನ ಪೊಲೀಸರ ಅಟ್ಟಹಾಸ; ಜಡ್ಡುಗಟ್ಟಿನ ವ್ಯವಸ್ಥೆಯಲ್ಲಿ ನ್ಯಾಯ ಮರೀಚಿಕೆ

ಅಮಾಯಕ ದಲಿತನ ಮೇಲೆ ಹಾಸನ ಪೊಲೀಸರ ಅಟ್ಟಹಾಸ; ಜಡ್ಡುಗಟ್ಟಿನ ವ್ಯವಸ್ಥೆಯಲ್ಲಿ ನ್ಯಾಯ ಮರೀಚಿಕೆ

- Advertisement -
- Advertisement -

ಅಮಾಯಕ ದಲಿತ ಕಾರ್ಮಿಕನ ಮೇಲೆ ಪೊಲೀಸರು ವಿನಾಕಾರಣ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸಾವುಬದುಕಿನ ನಡುವೆ ಸಂತ್ರಸ್ತ ದಲಿತ ಹೋರಾಡುತ್ತಿದ್ದರೆ, ಆತನ ಕುಟುಂಬಕ್ಕೆ ಪೊಲೀಸರು ಬೆದರಿಕೆ ಹಾಕಿದ್ದಾರೆಂಬ ಆರೋಪವೂ ಕೇಳಿಬಂದಿದೆ.

ಬೇಲೂರು ತಾಲೂಕಿನ ಅಪ್ಪಗೌಡನಹಳ್ಳಿ ಗ್ರಾಮದ ಶೇಖರ  ಅವರು ಕೆಲಸ ಮುಗಿಸಿಕೊಂಡು ಜ.5ನೇ ತಾರೀಕು ರಾತ್ರಿ 10.30ರ ಸುಮಾರಿಗೆ ಬಸ್ಸಿನಿಂದ ಇಳಿದು ಹಾಸನದಲ್ಲಿರುವ ತನ್ನ ಬಾಡಿಗೆ ಮನೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ ಘಟನೆ ನಡೆದಿದೆ ಎಂದು ಶೇಖರ ಅವರ ಪತ್ನಿ ಸುಧಾ ದೂರು ನೀಡಿದ್ದಾರೆ.

“ನನ್ನ ಗಂಡ ಶೇಖರರವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಎಎಸ್‌ಐ ಹರೀಶ್‌ ಹಾಗೂ ಇತರೆ ಮೂರು ಜನ ಪೊಲೀಸ್ ಪೇದೆಗಳ ಮೇಲೆ ದೂರು ದಾಖಲಿಸದೆ ವಿಳಂಬ ಮಾಡಲಾಗುತ್ತಿದೆ” ಎಂದು ಜಿಲ್ಲಾಧಿಕಾರಿಯವರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂತ್ರಸ್ತರ ಆರೋಪವೇನು?

ಬೇಲೂರು ತಾಲೂಕಿನ ಅಪ್ಪಗೌಡನಹಳ್ಳಿ ಗ್ರಾಮದ ಶೇಖರ್ ರಾತ್ರಿ 10.30ರ ಸುಮಾರಿಗೆ ಬಸ್ಸಿನಿಂದ ಇಳಿದು ಹಾಸನದ ಹಳೇ ಮಾರ್ಕೆಟ್‌ ಬಳಿ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ ಪೊಲೀಸರು ಹಲ್ಲೆ ನಡೆಸಿದ್ದಾರೆ.

ಹಾಸನ ನಗರ ಠಾಣೆಯ ಎಎಸ್‌ಐ ಹರೀಶ್ ಮತ್ತು ಸಿಬ್ಬಂದಿ ಏಕಾಏಕಿ ಶೇಖರ್‌ ಮೇಲೆ ಕಳ್ಳತನದ ಆರೋಪ ಹೊರಿಸಿ ಹೊಡೆದಿದ್ದಾರೆ. ಕಳ್ಳತನ ಮಾಡಲು ಹೊಂಚು ಹಾಕುತ್ತಿದ್ದೀಯ ಎಂದು ಗದರಿಸಿ ವಾಚಾಮ ಗೋಚರವಾಗಿ ನಿಂದಿಸಿ, ನೆಲದ ಮೇಲೆ ಬೀಳಿಸಿ ಬಟ್ಟೆಹರಿದು ಹಾಕಿದ್ದಾರೆ. ಬೂಟು ಕಾಲಿನಿಂದ ಒದ್ದಿದ್ದಾರೆ. ಕೈ ಮೂಳೆ ಮುರಿದು ಹೋಗುವ ಹಾಗೆ ಥಳಿಸಿದ್ದಾರೆ.

“ಇಲ್ಲ ಸ್ವಾಮಿ ನಾನು ಅಮಾಯಕ. ನಾನು ಹಳೇಬೀಡಿನಲ್ಲಿ ಕೆಲಸ ಮುಗಿಸಿಕೊಂಡು ಬರುತ್ತಿದ್ದೇನೆ. ಹಾಸನದ ಚನ್ನಪಟ್ಟಣದಲ್ಲಿರುವ ಬಾಡಿಗೆ ಮನೆಗೆ ಮಲಗಲು ಹೋಗುತ್ತಿದ್ದೇನೆ” ಎಂದು ಶೇಖರ್‌ ಅಂಗಲಾಚಿದರೂ ಕೇಳದೆ ಮನಸೋಇಚ್ಛೆ ಹೊಡೆದಿದ್ದಾರೆ. ಎಷ್ಟು ಕಾಡಿ ಬೇಡಿದರೂ ಕೈಕಾಲು ಹಿಡಿದರೂ ಶೇಖರ್‌ ಅವರನ್ನು ಪೊಲೀಸರು ಬಿಡಲಿಲ್ಲ.

ಹಲ್ಲೆಗೊಳಗಾದ ಶೇಖರ್‌

“ಹೇಳು, ಏನು ಕದಿಯಲು ಬಂದಿದ್ದೆ? ಎಲ್ಲಿಟ್ಟಿದ್ದೀಯಾ? ಎಂದು ಏಕಪಕ್ಷೀಯವಾಗಿ ನನ್ನ ಮೇಲೆ ಹಲ್ಲೆ ಮಾಡಿದರು. ಮುಂದುವರಿದು ಪೊಲೀಸ್‌ ಭಾಷೆಯಲ್ಲಿ ಮಾತನಾಡುತ್ತಾ, ಯಾವುದೋ ನಿನ್ನ ಜಾತಿ ಎಂದು ಕೇಳಿದರು. ನಾನು ಪರಿಶಿಷ್ಟ ಜಾತಿಯಯವನು ಎಂದು ಹೇಳಿದಾಗ ಕೆರಳಿ ಕೆಂಡವಾದ ಇಡೀ ಸಿಬ್ಬಂದಿ ನನಗೆ ಮತ್ತೆ ಮನಬಂದಂತೆ ಥಳಿಸಿದರು. ಜಾತಿ ನಿಂದನೆ ಮಾಡಿದರು. ಮಗನೇ ಈ ವಿಚಾರವನ್ನು ಎಲ್ಲಿಯಾದರೂ ಹೇಳಿದರೆ ಅಥವಾ ದೂರು ಕೊಟ್ಟರೆ ನಿನ್ನ ಕಥೆ ಮುಗಿಸುತ್ತೇವೆ ಎಂದು ಹೆದರಿಸಿ ಬೆದರಿಸಿ ಹೋದರು” ಎಂದು ಶೇಖರ್‌ ಘಟನೆಯನ್ನು ವಿವರಿಸಿರುವುದಾಗಿ ಆತನ ಪತ್ನಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ನನ್ನ ಗಂಡನ ಮೊಬೈಲ್ ಹಾಗೂ ಹಣವನ್ನು ಕಿತ್ತುಕೊಂಡು ಪೊಲೀಸರು ಹೋಗಿದ್ದಾರೆ. ನನ್ನ ಗಂಡನ ಮೊಬೈಲ್‌ನಿಂದಲೇ ನನಗೆ ಕರೆ ಮಾಡಿ ಅಮಾಯಕನಿಗೆ ಹೊಡೆದಿರುವುದಾಗಿ ತಿಳಿಸಿದ್ದಾರೆ. ನನ್ನ ಗಂಡ ಬಸ್‌ಸ್ಟಾಂಡ್‌ನಲ್ಲಿಯೇ ಇದ್ದು ಬೆಳಿಗ್ಗೆ ಬಂದಿದ್ದಾರೆ. ಬೇಲೂರಿಗೆ ಹೋಗಿ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದು, ಎಕ್ಸ್‌ರೇ ಮಾಡಿಸಿದಾಗ ಕೈ ಮೂಳೆ ಮುರಿದಿರುವುದು ನಮಗೆ ಕಂಡು ಬಂದಿದೆ. ಆಪರೇಷನ್ ಸಹ ಮಾಡಿಸಿರುತ್ತೇವೆ. ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ತಿರುಮಲನಹಳ್ಳಿ ಶಿವಕುಮಾರ್ ಮಾತನಾಡಿ, “ಅಮಾಯಕ ದಲಿತ ಶೇಖರ್ ರವರ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯ ಖಂಡನೀಯ. ಕುಟುಂಬದ ಆಶ್ರಯದಾತನಾಗಿದ್ದ ಈತ ಈಗ ತೀವ್ರತರಾದ ಅನಾರೋಗ್ಯದಿಂದ ಬಳಲುವಂತಾಗಿದೆ. ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಹಾಸನ ನಗರ ಠಾಣೆಯ ಎಎಸ್ಐ ಹರೀಶ್ ಮತ್ತು ತಂಡದವರಿಂದ ಮಾನವ ಹಕ್ಕುಗಳ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಹಾಸನ ಸಿಟಿ ಪೊಲೀಸ್ ಸ್ಟೇಷನ್ ಸಿಬ್ಬಂದಿ ಮೇಲೆ ಕಾನೂನು ರೀತಿ ಕ್ರಮ ಕೈಗೊಂಡು ತನಿಖೆ ನಡೆಸಬೇಕು. ಕೆಲಸದಿಂದಲೇ ವಜಾ ಮಾಡಬೇಕು ಹಾಗೂ ಕಾನೂನನ್ನು ಪರಿಪಾಲುಸುವವರೇ ಕಾನೂನನ್ನು ಕೈಗೆ ತೆಗೆದುಕೊಂಡರೆ ಈ ಜನಸಾಮಾನ್ಯರ ಪಾಡೇನು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಬೆಳ್ತಂಗಡಿ: ದಲಿತ ಯುವಕನ ಕೊಲೆ ಪ್ರಕರಣದಲ್ಲಿ ನಾಲ್ವರ ಬಂಧನ

ತಬಲ ನುಡಿಸಿ ಜೀವನ ನಡೆಸುತ್ತಿದ್ದರು ಶೇಖರ್‌…

ದಲಿತ ಸಮುದಾಯದ ಶೇಖರ್‌ ಕೂಲಿ ಮಾಡಿಕೊಂಡು, ಕೆಲವು ಸಂದರ್ಭಗಳಲ್ಲಿ ತಬಲ ನುಡಿಸಿಕೊಂಡು ಜೀವನ ನಡೆಸುತ್ತಿದ್ದರು. ಈಗ ಕೈ ಬೆರಳುಗಳಿಗೆ ಹಾನಿ ಮಾಡಿರುವುದರಿಂದ ಬದುಕು ಅತಂತ್ರವಾಗಿದೆ.

ಘಟನೆಯ ಕುರಿತು ಯಾವುದಾದರೂ ಕ್ರಮ ಜರುಗಿಸಿದ್ದಾರಾ ಎಂದು ತಿಳಿಯಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್ ಶಂಕರ್‌ ಅವರನ್ನು ನಾಲ್ಕೈದು ಬಾರಿ ಸಂಪರ್ಕಿಸಲು ಪ್ರಯತ್ನಿಸಲಾಯಿತು. ಆದರೆ ಅವರು ಕರೆಯನ್ನು ಸ್ವೀಕರಿಸಲಿಲ್ಲ.

ಹಾಸನದ ಸ್ಥಳೀಯ ಪತ್ರಿಕೆಯ ಭೀಮವಿಜಯಕ್ಕೆ ಎಸ್‌ಪಿ ಪ್ರತಿಕ್ರಿಯೆ ನೀಡಿರುವುದು ವರದಿಯಾಗಿದ್ದು, “ಇಲಾಖೆ ಸಿಬ್ಬಂದಿ ಕಾರಣವಿಲ್ಲದೆ ಯಾರ ಮೇಲೂ ಹಲ್ಲೆ ನಡೆಸುವುದಿಲ್ಲ. ಆದರೂ ಈ ರೀತಿ ಹಲ್ಲೆ ನಡೆಸಿರುವುದನ್ನು ನಾವು ಸಹಿಸುವುದಿಲ್ಲ. ಈ ಸಂಬಂಧ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...