Homeಕರ್ನಾಟಕಅಮಾಯಕ ದಲಿತನ ಮೇಲೆ ಹಾಸನ ಪೊಲೀಸರ ಅಟ್ಟಹಾಸ; ಜಡ್ಡುಗಟ್ಟಿನ ವ್ಯವಸ್ಥೆಯಲ್ಲಿ ನ್ಯಾಯ ಮರೀಚಿಕೆ

ಅಮಾಯಕ ದಲಿತನ ಮೇಲೆ ಹಾಸನ ಪೊಲೀಸರ ಅಟ್ಟಹಾಸ; ಜಡ್ಡುಗಟ್ಟಿನ ವ್ಯವಸ್ಥೆಯಲ್ಲಿ ನ್ಯಾಯ ಮರೀಚಿಕೆ

- Advertisement -
- Advertisement -

ಅಮಾಯಕ ದಲಿತ ಕಾರ್ಮಿಕನ ಮೇಲೆ ಪೊಲೀಸರು ವಿನಾಕಾರಣ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸಾವುಬದುಕಿನ ನಡುವೆ ಸಂತ್ರಸ್ತ ದಲಿತ ಹೋರಾಡುತ್ತಿದ್ದರೆ, ಆತನ ಕುಟುಂಬಕ್ಕೆ ಪೊಲೀಸರು ಬೆದರಿಕೆ ಹಾಕಿದ್ದಾರೆಂಬ ಆರೋಪವೂ ಕೇಳಿಬಂದಿದೆ.

ಬೇಲೂರು ತಾಲೂಕಿನ ಅಪ್ಪಗೌಡನಹಳ್ಳಿ ಗ್ರಾಮದ ಶೇಖರ  ಅವರು ಕೆಲಸ ಮುಗಿಸಿಕೊಂಡು ಜ.5ನೇ ತಾರೀಕು ರಾತ್ರಿ 10.30ರ ಸುಮಾರಿಗೆ ಬಸ್ಸಿನಿಂದ ಇಳಿದು ಹಾಸನದಲ್ಲಿರುವ ತನ್ನ ಬಾಡಿಗೆ ಮನೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ ಘಟನೆ ನಡೆದಿದೆ ಎಂದು ಶೇಖರ ಅವರ ಪತ್ನಿ ಸುಧಾ ದೂರು ನೀಡಿದ್ದಾರೆ.

“ನನ್ನ ಗಂಡ ಶೇಖರರವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಎಎಸ್‌ಐ ಹರೀಶ್‌ ಹಾಗೂ ಇತರೆ ಮೂರು ಜನ ಪೊಲೀಸ್ ಪೇದೆಗಳ ಮೇಲೆ ದೂರು ದಾಖಲಿಸದೆ ವಿಳಂಬ ಮಾಡಲಾಗುತ್ತಿದೆ” ಎಂದು ಜಿಲ್ಲಾಧಿಕಾರಿಯವರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂತ್ರಸ್ತರ ಆರೋಪವೇನು?

ಬೇಲೂರು ತಾಲೂಕಿನ ಅಪ್ಪಗೌಡನಹಳ್ಳಿ ಗ್ರಾಮದ ಶೇಖರ್ ರಾತ್ರಿ 10.30ರ ಸುಮಾರಿಗೆ ಬಸ್ಸಿನಿಂದ ಇಳಿದು ಹಾಸನದ ಹಳೇ ಮಾರ್ಕೆಟ್‌ ಬಳಿ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ ಪೊಲೀಸರು ಹಲ್ಲೆ ನಡೆಸಿದ್ದಾರೆ.

ಹಾಸನ ನಗರ ಠಾಣೆಯ ಎಎಸ್‌ಐ ಹರೀಶ್ ಮತ್ತು ಸಿಬ್ಬಂದಿ ಏಕಾಏಕಿ ಶೇಖರ್‌ ಮೇಲೆ ಕಳ್ಳತನದ ಆರೋಪ ಹೊರಿಸಿ ಹೊಡೆದಿದ್ದಾರೆ. ಕಳ್ಳತನ ಮಾಡಲು ಹೊಂಚು ಹಾಕುತ್ತಿದ್ದೀಯ ಎಂದು ಗದರಿಸಿ ವಾಚಾಮ ಗೋಚರವಾಗಿ ನಿಂದಿಸಿ, ನೆಲದ ಮೇಲೆ ಬೀಳಿಸಿ ಬಟ್ಟೆಹರಿದು ಹಾಕಿದ್ದಾರೆ. ಬೂಟು ಕಾಲಿನಿಂದ ಒದ್ದಿದ್ದಾರೆ. ಕೈ ಮೂಳೆ ಮುರಿದು ಹೋಗುವ ಹಾಗೆ ಥಳಿಸಿದ್ದಾರೆ.

“ಇಲ್ಲ ಸ್ವಾಮಿ ನಾನು ಅಮಾಯಕ. ನಾನು ಹಳೇಬೀಡಿನಲ್ಲಿ ಕೆಲಸ ಮುಗಿಸಿಕೊಂಡು ಬರುತ್ತಿದ್ದೇನೆ. ಹಾಸನದ ಚನ್ನಪಟ್ಟಣದಲ್ಲಿರುವ ಬಾಡಿಗೆ ಮನೆಗೆ ಮಲಗಲು ಹೋಗುತ್ತಿದ್ದೇನೆ” ಎಂದು ಶೇಖರ್‌ ಅಂಗಲಾಚಿದರೂ ಕೇಳದೆ ಮನಸೋಇಚ್ಛೆ ಹೊಡೆದಿದ್ದಾರೆ. ಎಷ್ಟು ಕಾಡಿ ಬೇಡಿದರೂ ಕೈಕಾಲು ಹಿಡಿದರೂ ಶೇಖರ್‌ ಅವರನ್ನು ಪೊಲೀಸರು ಬಿಡಲಿಲ್ಲ.

ಹಲ್ಲೆಗೊಳಗಾದ ಶೇಖರ್‌

“ಹೇಳು, ಏನು ಕದಿಯಲು ಬಂದಿದ್ದೆ? ಎಲ್ಲಿಟ್ಟಿದ್ದೀಯಾ? ಎಂದು ಏಕಪಕ್ಷೀಯವಾಗಿ ನನ್ನ ಮೇಲೆ ಹಲ್ಲೆ ಮಾಡಿದರು. ಮುಂದುವರಿದು ಪೊಲೀಸ್‌ ಭಾಷೆಯಲ್ಲಿ ಮಾತನಾಡುತ್ತಾ, ಯಾವುದೋ ನಿನ್ನ ಜಾತಿ ಎಂದು ಕೇಳಿದರು. ನಾನು ಪರಿಶಿಷ್ಟ ಜಾತಿಯಯವನು ಎಂದು ಹೇಳಿದಾಗ ಕೆರಳಿ ಕೆಂಡವಾದ ಇಡೀ ಸಿಬ್ಬಂದಿ ನನಗೆ ಮತ್ತೆ ಮನಬಂದಂತೆ ಥಳಿಸಿದರು. ಜಾತಿ ನಿಂದನೆ ಮಾಡಿದರು. ಮಗನೇ ಈ ವಿಚಾರವನ್ನು ಎಲ್ಲಿಯಾದರೂ ಹೇಳಿದರೆ ಅಥವಾ ದೂರು ಕೊಟ್ಟರೆ ನಿನ್ನ ಕಥೆ ಮುಗಿಸುತ್ತೇವೆ ಎಂದು ಹೆದರಿಸಿ ಬೆದರಿಸಿ ಹೋದರು” ಎಂದು ಶೇಖರ್‌ ಘಟನೆಯನ್ನು ವಿವರಿಸಿರುವುದಾಗಿ ಆತನ ಪತ್ನಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ನನ್ನ ಗಂಡನ ಮೊಬೈಲ್ ಹಾಗೂ ಹಣವನ್ನು ಕಿತ್ತುಕೊಂಡು ಪೊಲೀಸರು ಹೋಗಿದ್ದಾರೆ. ನನ್ನ ಗಂಡನ ಮೊಬೈಲ್‌ನಿಂದಲೇ ನನಗೆ ಕರೆ ಮಾಡಿ ಅಮಾಯಕನಿಗೆ ಹೊಡೆದಿರುವುದಾಗಿ ತಿಳಿಸಿದ್ದಾರೆ. ನನ್ನ ಗಂಡ ಬಸ್‌ಸ್ಟಾಂಡ್‌ನಲ್ಲಿಯೇ ಇದ್ದು ಬೆಳಿಗ್ಗೆ ಬಂದಿದ್ದಾರೆ. ಬೇಲೂರಿಗೆ ಹೋಗಿ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದು, ಎಕ್ಸ್‌ರೇ ಮಾಡಿಸಿದಾಗ ಕೈ ಮೂಳೆ ಮುರಿದಿರುವುದು ನಮಗೆ ಕಂಡು ಬಂದಿದೆ. ಆಪರೇಷನ್ ಸಹ ಮಾಡಿಸಿರುತ್ತೇವೆ. ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ತಿರುಮಲನಹಳ್ಳಿ ಶಿವಕುಮಾರ್ ಮಾತನಾಡಿ, “ಅಮಾಯಕ ದಲಿತ ಶೇಖರ್ ರವರ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯ ಖಂಡನೀಯ. ಕುಟುಂಬದ ಆಶ್ರಯದಾತನಾಗಿದ್ದ ಈತ ಈಗ ತೀವ್ರತರಾದ ಅನಾರೋಗ್ಯದಿಂದ ಬಳಲುವಂತಾಗಿದೆ. ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಹಾಸನ ನಗರ ಠಾಣೆಯ ಎಎಸ್ಐ ಹರೀಶ್ ಮತ್ತು ತಂಡದವರಿಂದ ಮಾನವ ಹಕ್ಕುಗಳ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಹಾಸನ ಸಿಟಿ ಪೊಲೀಸ್ ಸ್ಟೇಷನ್ ಸಿಬ್ಬಂದಿ ಮೇಲೆ ಕಾನೂನು ರೀತಿ ಕ್ರಮ ಕೈಗೊಂಡು ತನಿಖೆ ನಡೆಸಬೇಕು. ಕೆಲಸದಿಂದಲೇ ವಜಾ ಮಾಡಬೇಕು ಹಾಗೂ ಕಾನೂನನ್ನು ಪರಿಪಾಲುಸುವವರೇ ಕಾನೂನನ್ನು ಕೈಗೆ ತೆಗೆದುಕೊಂಡರೆ ಈ ಜನಸಾಮಾನ್ಯರ ಪಾಡೇನು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಬೆಳ್ತಂಗಡಿ: ದಲಿತ ಯುವಕನ ಕೊಲೆ ಪ್ರಕರಣದಲ್ಲಿ ನಾಲ್ವರ ಬಂಧನ

ತಬಲ ನುಡಿಸಿ ಜೀವನ ನಡೆಸುತ್ತಿದ್ದರು ಶೇಖರ್‌…

ದಲಿತ ಸಮುದಾಯದ ಶೇಖರ್‌ ಕೂಲಿ ಮಾಡಿಕೊಂಡು, ಕೆಲವು ಸಂದರ್ಭಗಳಲ್ಲಿ ತಬಲ ನುಡಿಸಿಕೊಂಡು ಜೀವನ ನಡೆಸುತ್ತಿದ್ದರು. ಈಗ ಕೈ ಬೆರಳುಗಳಿಗೆ ಹಾನಿ ಮಾಡಿರುವುದರಿಂದ ಬದುಕು ಅತಂತ್ರವಾಗಿದೆ.

ಘಟನೆಯ ಕುರಿತು ಯಾವುದಾದರೂ ಕ್ರಮ ಜರುಗಿಸಿದ್ದಾರಾ ಎಂದು ತಿಳಿಯಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್ ಶಂಕರ್‌ ಅವರನ್ನು ನಾಲ್ಕೈದು ಬಾರಿ ಸಂಪರ್ಕಿಸಲು ಪ್ರಯತ್ನಿಸಲಾಯಿತು. ಆದರೆ ಅವರು ಕರೆಯನ್ನು ಸ್ವೀಕರಿಸಲಿಲ್ಲ.

ಹಾಸನದ ಸ್ಥಳೀಯ ಪತ್ರಿಕೆಯ ಭೀಮವಿಜಯಕ್ಕೆ ಎಸ್‌ಪಿ ಪ್ರತಿಕ್ರಿಯೆ ನೀಡಿರುವುದು ವರದಿಯಾಗಿದ್ದು, “ಇಲಾಖೆ ಸಿಬ್ಬಂದಿ ಕಾರಣವಿಲ್ಲದೆ ಯಾರ ಮೇಲೂ ಹಲ್ಲೆ ನಡೆಸುವುದಿಲ್ಲ. ಆದರೂ ಈ ರೀತಿ ಹಲ್ಲೆ ನಡೆಸಿರುವುದನ್ನು ನಾವು ಸಹಿಸುವುದಿಲ್ಲ. ಈ ಸಂಬಂಧ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...