Homeಕರ್ನಾಟಕಅಮಾಯಕ ದಲಿತನ ಮೇಲೆ ಹಾಸನ ಪೊಲೀಸರ ಅಟ್ಟಹಾಸ; ಜಡ್ಡುಗಟ್ಟಿನ ವ್ಯವಸ್ಥೆಯಲ್ಲಿ ನ್ಯಾಯ ಮರೀಚಿಕೆ

ಅಮಾಯಕ ದಲಿತನ ಮೇಲೆ ಹಾಸನ ಪೊಲೀಸರ ಅಟ್ಟಹಾಸ; ಜಡ್ಡುಗಟ್ಟಿನ ವ್ಯವಸ್ಥೆಯಲ್ಲಿ ನ್ಯಾಯ ಮರೀಚಿಕೆ

- Advertisement -
- Advertisement -

ಅಮಾಯಕ ದಲಿತ ಕಾರ್ಮಿಕನ ಮೇಲೆ ಪೊಲೀಸರು ವಿನಾಕಾರಣ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸಾವುಬದುಕಿನ ನಡುವೆ ಸಂತ್ರಸ್ತ ದಲಿತ ಹೋರಾಡುತ್ತಿದ್ದರೆ, ಆತನ ಕುಟುಂಬಕ್ಕೆ ಪೊಲೀಸರು ಬೆದರಿಕೆ ಹಾಕಿದ್ದಾರೆಂಬ ಆರೋಪವೂ ಕೇಳಿಬಂದಿದೆ.

ಬೇಲೂರು ತಾಲೂಕಿನ ಅಪ್ಪಗೌಡನಹಳ್ಳಿ ಗ್ರಾಮದ ಶೇಖರ  ಅವರು ಕೆಲಸ ಮುಗಿಸಿಕೊಂಡು ಜ.5ನೇ ತಾರೀಕು ರಾತ್ರಿ 10.30ರ ಸುಮಾರಿಗೆ ಬಸ್ಸಿನಿಂದ ಇಳಿದು ಹಾಸನದಲ್ಲಿರುವ ತನ್ನ ಬಾಡಿಗೆ ಮನೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ ಘಟನೆ ನಡೆದಿದೆ ಎಂದು ಶೇಖರ ಅವರ ಪತ್ನಿ ಸುಧಾ ದೂರು ನೀಡಿದ್ದಾರೆ.

“ನನ್ನ ಗಂಡ ಶೇಖರರವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಎಎಸ್‌ಐ ಹರೀಶ್‌ ಹಾಗೂ ಇತರೆ ಮೂರು ಜನ ಪೊಲೀಸ್ ಪೇದೆಗಳ ಮೇಲೆ ದೂರು ದಾಖಲಿಸದೆ ವಿಳಂಬ ಮಾಡಲಾಗುತ್ತಿದೆ” ಎಂದು ಜಿಲ್ಲಾಧಿಕಾರಿಯವರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂತ್ರಸ್ತರ ಆರೋಪವೇನು?

ಬೇಲೂರು ತಾಲೂಕಿನ ಅಪ್ಪಗೌಡನಹಳ್ಳಿ ಗ್ರಾಮದ ಶೇಖರ್ ರಾತ್ರಿ 10.30ರ ಸುಮಾರಿಗೆ ಬಸ್ಸಿನಿಂದ ಇಳಿದು ಹಾಸನದ ಹಳೇ ಮಾರ್ಕೆಟ್‌ ಬಳಿ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ ಪೊಲೀಸರು ಹಲ್ಲೆ ನಡೆಸಿದ್ದಾರೆ.

ಹಾಸನ ನಗರ ಠಾಣೆಯ ಎಎಸ್‌ಐ ಹರೀಶ್ ಮತ್ತು ಸಿಬ್ಬಂದಿ ಏಕಾಏಕಿ ಶೇಖರ್‌ ಮೇಲೆ ಕಳ್ಳತನದ ಆರೋಪ ಹೊರಿಸಿ ಹೊಡೆದಿದ್ದಾರೆ. ಕಳ್ಳತನ ಮಾಡಲು ಹೊಂಚು ಹಾಕುತ್ತಿದ್ದೀಯ ಎಂದು ಗದರಿಸಿ ವಾಚಾಮ ಗೋಚರವಾಗಿ ನಿಂದಿಸಿ, ನೆಲದ ಮೇಲೆ ಬೀಳಿಸಿ ಬಟ್ಟೆಹರಿದು ಹಾಕಿದ್ದಾರೆ. ಬೂಟು ಕಾಲಿನಿಂದ ಒದ್ದಿದ್ದಾರೆ. ಕೈ ಮೂಳೆ ಮುರಿದು ಹೋಗುವ ಹಾಗೆ ಥಳಿಸಿದ್ದಾರೆ.

“ಇಲ್ಲ ಸ್ವಾಮಿ ನಾನು ಅಮಾಯಕ. ನಾನು ಹಳೇಬೀಡಿನಲ್ಲಿ ಕೆಲಸ ಮುಗಿಸಿಕೊಂಡು ಬರುತ್ತಿದ್ದೇನೆ. ಹಾಸನದ ಚನ್ನಪಟ್ಟಣದಲ್ಲಿರುವ ಬಾಡಿಗೆ ಮನೆಗೆ ಮಲಗಲು ಹೋಗುತ್ತಿದ್ದೇನೆ” ಎಂದು ಶೇಖರ್‌ ಅಂಗಲಾಚಿದರೂ ಕೇಳದೆ ಮನಸೋಇಚ್ಛೆ ಹೊಡೆದಿದ್ದಾರೆ. ಎಷ್ಟು ಕಾಡಿ ಬೇಡಿದರೂ ಕೈಕಾಲು ಹಿಡಿದರೂ ಶೇಖರ್‌ ಅವರನ್ನು ಪೊಲೀಸರು ಬಿಡಲಿಲ್ಲ.

ಹಲ್ಲೆಗೊಳಗಾದ ಶೇಖರ್‌

“ಹೇಳು, ಏನು ಕದಿಯಲು ಬಂದಿದ್ದೆ? ಎಲ್ಲಿಟ್ಟಿದ್ದೀಯಾ? ಎಂದು ಏಕಪಕ್ಷೀಯವಾಗಿ ನನ್ನ ಮೇಲೆ ಹಲ್ಲೆ ಮಾಡಿದರು. ಮುಂದುವರಿದು ಪೊಲೀಸ್‌ ಭಾಷೆಯಲ್ಲಿ ಮಾತನಾಡುತ್ತಾ, ಯಾವುದೋ ನಿನ್ನ ಜಾತಿ ಎಂದು ಕೇಳಿದರು. ನಾನು ಪರಿಶಿಷ್ಟ ಜಾತಿಯಯವನು ಎಂದು ಹೇಳಿದಾಗ ಕೆರಳಿ ಕೆಂಡವಾದ ಇಡೀ ಸಿಬ್ಬಂದಿ ನನಗೆ ಮತ್ತೆ ಮನಬಂದಂತೆ ಥಳಿಸಿದರು. ಜಾತಿ ನಿಂದನೆ ಮಾಡಿದರು. ಮಗನೇ ಈ ವಿಚಾರವನ್ನು ಎಲ್ಲಿಯಾದರೂ ಹೇಳಿದರೆ ಅಥವಾ ದೂರು ಕೊಟ್ಟರೆ ನಿನ್ನ ಕಥೆ ಮುಗಿಸುತ್ತೇವೆ ಎಂದು ಹೆದರಿಸಿ ಬೆದರಿಸಿ ಹೋದರು” ಎಂದು ಶೇಖರ್‌ ಘಟನೆಯನ್ನು ವಿವರಿಸಿರುವುದಾಗಿ ಆತನ ಪತ್ನಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ನನ್ನ ಗಂಡನ ಮೊಬೈಲ್ ಹಾಗೂ ಹಣವನ್ನು ಕಿತ್ತುಕೊಂಡು ಪೊಲೀಸರು ಹೋಗಿದ್ದಾರೆ. ನನ್ನ ಗಂಡನ ಮೊಬೈಲ್‌ನಿಂದಲೇ ನನಗೆ ಕರೆ ಮಾಡಿ ಅಮಾಯಕನಿಗೆ ಹೊಡೆದಿರುವುದಾಗಿ ತಿಳಿಸಿದ್ದಾರೆ. ನನ್ನ ಗಂಡ ಬಸ್‌ಸ್ಟಾಂಡ್‌ನಲ್ಲಿಯೇ ಇದ್ದು ಬೆಳಿಗ್ಗೆ ಬಂದಿದ್ದಾರೆ. ಬೇಲೂರಿಗೆ ಹೋಗಿ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದು, ಎಕ್ಸ್‌ರೇ ಮಾಡಿಸಿದಾಗ ಕೈ ಮೂಳೆ ಮುರಿದಿರುವುದು ನಮಗೆ ಕಂಡು ಬಂದಿದೆ. ಆಪರೇಷನ್ ಸಹ ಮಾಡಿಸಿರುತ್ತೇವೆ. ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ತಿರುಮಲನಹಳ್ಳಿ ಶಿವಕುಮಾರ್ ಮಾತನಾಡಿ, “ಅಮಾಯಕ ದಲಿತ ಶೇಖರ್ ರವರ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯ ಖಂಡನೀಯ. ಕುಟುಂಬದ ಆಶ್ರಯದಾತನಾಗಿದ್ದ ಈತ ಈಗ ತೀವ್ರತರಾದ ಅನಾರೋಗ್ಯದಿಂದ ಬಳಲುವಂತಾಗಿದೆ. ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಹಾಸನ ನಗರ ಠಾಣೆಯ ಎಎಸ್ಐ ಹರೀಶ್ ಮತ್ತು ತಂಡದವರಿಂದ ಮಾನವ ಹಕ್ಕುಗಳ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಹಾಸನ ಸಿಟಿ ಪೊಲೀಸ್ ಸ್ಟೇಷನ್ ಸಿಬ್ಬಂದಿ ಮೇಲೆ ಕಾನೂನು ರೀತಿ ಕ್ರಮ ಕೈಗೊಂಡು ತನಿಖೆ ನಡೆಸಬೇಕು. ಕೆಲಸದಿಂದಲೇ ವಜಾ ಮಾಡಬೇಕು ಹಾಗೂ ಕಾನೂನನ್ನು ಪರಿಪಾಲುಸುವವರೇ ಕಾನೂನನ್ನು ಕೈಗೆ ತೆಗೆದುಕೊಂಡರೆ ಈ ಜನಸಾಮಾನ್ಯರ ಪಾಡೇನು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಬೆಳ್ತಂಗಡಿ: ದಲಿತ ಯುವಕನ ಕೊಲೆ ಪ್ರಕರಣದಲ್ಲಿ ನಾಲ್ವರ ಬಂಧನ

ತಬಲ ನುಡಿಸಿ ಜೀವನ ನಡೆಸುತ್ತಿದ್ದರು ಶೇಖರ್‌…

ದಲಿತ ಸಮುದಾಯದ ಶೇಖರ್‌ ಕೂಲಿ ಮಾಡಿಕೊಂಡು, ಕೆಲವು ಸಂದರ್ಭಗಳಲ್ಲಿ ತಬಲ ನುಡಿಸಿಕೊಂಡು ಜೀವನ ನಡೆಸುತ್ತಿದ್ದರು. ಈಗ ಕೈ ಬೆರಳುಗಳಿಗೆ ಹಾನಿ ಮಾಡಿರುವುದರಿಂದ ಬದುಕು ಅತಂತ್ರವಾಗಿದೆ.

ಘಟನೆಯ ಕುರಿತು ಯಾವುದಾದರೂ ಕ್ರಮ ಜರುಗಿಸಿದ್ದಾರಾ ಎಂದು ತಿಳಿಯಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್ ಶಂಕರ್‌ ಅವರನ್ನು ನಾಲ್ಕೈದು ಬಾರಿ ಸಂಪರ್ಕಿಸಲು ಪ್ರಯತ್ನಿಸಲಾಯಿತು. ಆದರೆ ಅವರು ಕರೆಯನ್ನು ಸ್ವೀಕರಿಸಲಿಲ್ಲ.

ಹಾಸನದ ಸ್ಥಳೀಯ ಪತ್ರಿಕೆಯ ಭೀಮವಿಜಯಕ್ಕೆ ಎಸ್‌ಪಿ ಪ್ರತಿಕ್ರಿಯೆ ನೀಡಿರುವುದು ವರದಿಯಾಗಿದ್ದು, “ಇಲಾಖೆ ಸಿಬ್ಬಂದಿ ಕಾರಣವಿಲ್ಲದೆ ಯಾರ ಮೇಲೂ ಹಲ್ಲೆ ನಡೆಸುವುದಿಲ್ಲ. ಆದರೂ ಈ ರೀತಿ ಹಲ್ಲೆ ನಡೆಸಿರುವುದನ್ನು ನಾವು ಸಹಿಸುವುದಿಲ್ಲ. ಈ ಸಂಬಂಧ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...