Homeಕರ್ನಾಟಕಹಾಸನ: ಹೊಯ್ಸಳ ಸಾಹಿತ್ಯೋತ್ಸವ ಪ್ರವೇಶಕ್ಕೆ 250 ರೂ. ಶುಲ್ಕ; ತೀರಿಹೋಗಿರುವ ರಂಗಕರ್ಮಿ ವಿಶೇಷ ಅತಿಥಿ!

ಹಾಸನ: ಹೊಯ್ಸಳ ಸಾಹಿತ್ಯೋತ್ಸವ ಪ್ರವೇಶಕ್ಕೆ 250 ರೂ. ಶುಲ್ಕ; ತೀರಿಹೋಗಿರುವ ರಂಗಕರ್ಮಿ ವಿಶೇಷ ಅತಿಥಿ!

‘ಹೊಯ್ಸಳ ಸಾಹಿತ್ಯೋತ್ಸವ’ ಎಂದು ಹೆಸರಿರುವ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲೆಯವರಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ ಎಂಬ ಆರೋಪ ಬಂದಿದೆ. ‘ಶುದ್ಧ ಸಾಹಿತ್ಯ’ದ ಕಮಟು ಕೂಡ ಬರಲಾರಂಭಿಸಿದೆ.

- Advertisement -
- Advertisement -

ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಕ್ಟೋಬರ್‌ 22, 23ರಂದು ಹಾಸನದಲ್ಲಿ ಆಯೋಜಿಸಲಾಗಿರುವ ‘ಹೊಯ್ಸಳ ಸಾಹಿತ್ಯೋತ್ಸವ’ ಪ್ರವೇಶಕ್ಕೆ 250 ರೂ. ಶುಲ್ಕವನ್ನು ವಿಧಿಸಲಾಗಿದೆ. ಜನಸಾಮಾನ್ಯರ ಪರವಾಗಿರಬೇಕಿದ್ದ ಕಸಾಪ, ಖಾಸಗಿ ಸಂಸ್ಥೆಯಂತೆ ಶುಲ್ಕ ವಿಧಿಸಿದೆ ಎಂಬ ಟೀಕೆಗಳು ಬಂದಿವೆ. ಜೊತೆಗೆ ಸ್ಥಳೀಯ ಪ್ರಾತಿನಿಧ್ಯವನ್ನು ಕಡೆಗಣಿಸಿ ಕಾರ್ಯಕ್ರಮ ಆಯೋಜಿಸಿರುವ ಕುರಿತು ಆಕ್ಷೇಪಗಳು ವ್ಯಕ್ತವಾಗುತ್ತಿವೆ.

ಶುಲ್ಕ ವಿಧಿಸಿರುವುದಷ್ಟೇ ಅಲ್ಲದೇ ತೀರಿ ಹೋಗಿರುವ ರಂಗಕರ್ಮಿ, ಮೈಸೂರು ರಂಗಾಯಣದ ಮಾಜಿ ನಿರ್ದೇಶಕರಾದ ಲಿಂಗದೇವರು ಹಳೆಮನೆಯವರ ಹೆಸರನ್ನೂ ವಿಶೇಷ ಆಹ್ವಾನಿತರ ಪಟ್ಟಿಯಲ್ಲಿ ಸೇರಿಸಲಾಗಿದೆ. ವಾಟ್ಸ್‌ಅಪ್‌ನಲ್ಲಿ ಹರಿದಾಡಿರುವ ಸಂದೇಶಗಳಲ್ಲಿ ‘ಶುದ್ಧ ಸಾಹಿತ್ಯ’ ಎಂಬ ಪದವೂ ಸೇರಿರುವುದು ಗೊಂದಲ ಮೂಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾಹಿತ್ಯ ಪರಿಷತ್‌ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ, “ಹಾಸನ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನಪೀಠ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ವಹಿಸಲಿದ್ದಾರೆ. ಸಾಹಿತ್ಯಲೋಕದ ಪ್ರಮುಖ ಹಿರಿಯ, ಕಿರಿಯ ದಿಗ್ಗಜ ಕವಿಗಳು, ಸಾಹಿತಿಗಳು, ವಿಮರ್ಶಕರು ಹಾಗೂ ವಿದ್ವಾಂಸರು ಈ ಸಾಹಿತ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಐತಿಹಾಸಿಕವಾದ ಸಾಹಿತ್ಯೋತ್ಸವಕ್ಕೆ ಕೇವಲ 500 ಜನರಿಗೆ ಮಾತ್ರ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಹಾಸನ ಜಿಲ್ಲೆಯ ಆಸಕ್ತ ಸಾಹಿತ್ಯ ಮನಸ್ಸುಗಳು ಕೆಳಗೆ ನೀಡಿರುವ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ದಿನಾಂಕ 15-10-2022 ರೊಳಗೆ ನೋಂದಣಿಯಾಗಬಹುದು” ಎಂದು ಕೆಲವರು ಸಂಪರ್ಕ ಸಂಖ್ಯೆಯನ್ನು ನೀಡಲಾಗಿದೆ.

ಮುಖ್ಯವಾಗಿ ಸ್ಥಳೀಯರಲ್ಲದವರು ಸ್ವಾಗತ ಸಮಿತಿಯಲ್ಲಿದ್ದಾರೆ. ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಸಾಹಿತಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ, ಸಂಚಾಲಕರಾಗಿ ಕವಿ ಬಿ.ಆರ್.ಲಕ್ಷ್ಮಣರಾವ್, ಪತ್ರಕರ್ತ ಜೋಗಿ, ಕಾರ್ಯದರ್ಶಿಯಾಗಿ ಜಿಲ್ಲಾ ಕಸಾಪ ಅಧ್ಯಕ್ಷರಾದ ಡಾ.ಎಚ್.ಎಲ್.ಮಲ್ಲೇಶಗೌಡ ಇದ್ದಾರೆ.

‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ‘ಜೇನುಗಿರಿ’ ಪತ್ರಿಕೆ ಸಂಪಾದಕರಾದ ಚಲಂ ಹಾಡ್ಲಹಳ್ಳಿ, “ಹಾಸನ ಜಿಲ್ಲೆಯನ್ನು ಪ್ರತಿನಿಧಿಸುವಂತೆ ಪ್ರತಿವರ್ಷ ಹೊಯ್ಸಳ ಉತ್ಸವ ನಡೆಯುತ್ತಿತ್ತು. ಆದರೆ ಕೆಲವು ವರ್ಷಗಳಿಂದ ಈ ಕಾರ್ಯಕ್ರಮ ಆಯೋಜನೆಯಾಗಿಲ್ಲ. ಹೊಯ್ಸಳ ಸಾಹಿತ್ಯೋತ್ಸವವು ಹೊಯ್ಸಳ ಉತ್ಸವದ ನೆರಳಿನಂತೆ ಕಾಣುತ್ತಿದೆ. ಅಥವಾ ಹೊಯ್ಸಳ ಉತ್ಸವವನ್ನು ನಡೆಸದಿದ್ದರೂ ಆಗುತ್ತದೆ. ಇದನ್ನೇ ತೋರಿಸಿ ಸರ್ಕಾರ ನುಣುಚಿಕೊಳ್ಳಲೂ ಸಾಧ್ಯವಿದೆ. ಹೀಗಿರುವಾಗ ಸ್ಥಳೀಯರಿಗೆ ಅವಕಾಶ ನೀಡಬೇಕಿತ್ತು. ಸ್ವಾಗತ ಸಮಿತಿಯಲ್ಲೂ ಹೊರಗಿನವರೇ ಇದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

“ಹೊಯ್ಸಳ ಎಂಬುದೇ ಒಂದು ಪ್ರಾದೇಶಿಕತೆಯನ್ನು ಬಿಂಬಿಸುತ್ತದೆ. ಕರಾವಳಿ ಉತ್ಸವ, ಹಂಪಿ ಉತ್ಸವ, ಹೊಯ್ಸಳ ಉತ್ಸವ- ಇವುಗಳಿಗೆಲ್ಲ ವ್ಯತ್ಯಾಸಗಳಿರುತ್ತವೆ. ಈ ನಿಟ್ಟಿನಲ್ಲಿ ಪ್ರಾತಿನಿಧಿಕತೆಯ ಪ್ರಶ್ನೆ ಬರುತ್ತದೆ. ಎಚ್.ಎಸ್.ವೆಂಕಟೇಶಮೂರ್ತಿ, ಬಿ.ಆರ್‌.ಲಕ್ಷ್ಮಣರಾವ್, ಜೋಗಿ ಇವರೆಲ್ಲ ಹಾಸನವನ್ನು ಹೇಗೆ ಪ್ರತಿನಿಧಿಸಬಲ್ಲರು? ಅತಿಥಿಗಳಾಗಿ ಬಂದಿದ್ದರೆ ಪ್ರಶ್ನೆ ಉದ್ಭವಿಸುತ್ತಿರಲಿಲ್ಲ. ಕಾರ್ಯಕ್ರಮ ಹೇಗಿರಬೇಕೆಂದು ನಿರ್ಧರಿಸುವವರೇ ಹೊರಗಿನವರಾಗಿರುವುದು ಎಷ್ಟು ಸರಿ? ಸಕಲೇಶಪುರ ಭಾಗದ ಕಾಡಿನ ಸಮಸ್ಯೆ ಇವರಿಗೆ ಗೊತ್ತಿದೆಯೇ? ಚನ್ನರಾಯಪಟ್ಟಣ ಭಾಗದ ತೆಂಗಿನ ಸಮಸ್ಯೆ ಗೊತ್ತಿದೆಯೇ? ಅರಕಲಗೂಡು ಭಾಗದ ತಂಬಾಕಿನ ಸಮಸ್ಯೆ ಗೊತ್ತಿದೆಯೇ? ಈ ಅಂಶಗಳನ್ನು ತಿರಸ್ಕರಿಸಿ ‘ಇದು ಶುದ್ಧಸಾಹಿತ್ಯ ಸಮ್ಮೇಳನ’ ಎಂದು ಕರೆಯುತ್ತಿದ್ದಾರೆಂದು ತಿಳಿದುಬಂದಿದೆ” ಎಂದು ವಿಷಾದಿಸಿದರು.

“ಹಾಸನ ಜಿಲ್ಲಾ ಕಸಾಪವು ಖಾಸಗಿ ಸಂಸ್ಥೆಯಂತೆ ವರ್ತಿಸುತ್ತಿದೆ” ಎಂದು ಸ್ಥಳೀಯ ನಿವಾಸಿ, ಲೇಖಕ ಕೊಟ್ರೇಶ್ ತಂಬ್ರಳ್ಳಿ ಆಕ್ಷೇಪ ವ್ಯಕ್ತಪಡಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. “ಕನ್ನಡ ಸಾಹಿತ್ಯ ಪರಿಷತ್ತನ್ನು ಹುಟ್ಟುಹಾಕಿದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರಿಗೆ ಅನೇಕ ಕನಸುಗಳಿದ್ಧವು. ಶ್ರೀಸಾಮಾನ್ಯನೂ ಸಾಹಿತ್ಯ ಕೈಂಕರ್ಯದಲ್ಲಿ ಭಾಗವಹಿಸಬೇಕು ಎಂಬ ಆಶಯ ಇತ್ತು. ಜಿಲ್ಲಾ ಮತ್ತು ತಾಲೂಕು ಘಟಕಗಳು ಇರುವುದೇ ಸ್ಥಳೀಯವಾಗಿಯೂ ಕೂಡ ಪರಿಷತ್ತು ಕಾರ್ಯೋನ್ಮುಖವಾಗಿ ಇರಬೇಕೆಂದು. ಹೊಯ್ಸಳ ಸಾಹಿತ್ಯೋತ್ಸವದಲ್ಲಿ ಹಾಸನದ ಕವಿ, ಲೇಖಕ, ಕಲಾವಿದರಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಕ್ಕಿಲ್ಲ” ಎಂದು ಆರೋಪಿಸಿದ್ದಾರೆ.

“ಕಾರ್ಯಕ್ರಮದಲ್ಲಿ ಭಾಗವಹಿಸಲು ಕಡ್ಡಾಯವಾಗಿ ನೋಂದಣಿಯಾಗಿರಬೇಕೆಂದು ಸೂಚಿಸಲಾಗಿದೆ. 250 ರೂಪಾಯಿ ಶುಲ್ಕವನ್ನು ವಿಧಿಸಲಾಗಿದೆ. ಹಾಗಾದರೆ ಖಾಸಗಿ ಸಂಸ್ಥೆಗಳಿಗೂ ಕನ್ನಡ ನಾಡಿನ ಜನರ ಧ್ವನಿಯಾಗಿರುವ ಪರಿಷತ್ತಿಗೂ ಏನು ವ್ಯತ್ಯಾಸ? ನೋಂದಣಿ ಮಾಡಿಕೊಳ್ಳುವುದು ಸರಿ. ಆದರೆ 500-550 ಜನರ ಮಿತಿ ಏತಕ್ಕೆ?” ಎಂದು ಪ್ರಶ್ನಿಸಿದ್ದಾರೆ.

“ಈವೆಂಟ್ ಮ್ಯಾನ್ಮೇಜ್ಮೆಂಟ್‌ಗಳ ಕೈಯಲ್ಲಿ ಇವತ್ತು ಪರಿಷತ್ತು ಸಿಲುಕಿದೆ. ಜನಸಾಮಾನ್ಯರಿಂದ ದೂರ ಇರುವ ಸಾಹಿತ್ಯ ಪರಿಷತ್ತು ನಮ್ಮ ಜನಗಳಿಗೆ ಅವಶ್ಯ ಇದೆಯಾ?” ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲ್ಲ: ಜನಾಕ್ರೋಶದ ಬಳಿಕ ಹಿಂದೆ ಸರಿದ ಕಸಾಪ

ಈಗ ಉಂಟಾಗಿರುವ ಗೊಂದಲಗಳಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾ’ಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಕಸಾಪ ಅಧ್ಯಕ್ಷರಾದ ಡಾ.ಎಚ್‌.ಎಲ್.ಮಲ್ಲೇಶ್‌ಗೌಡ, “ಕಾರ್ಯಕ್ರಮದಲ್ಲಿ ಸುಮಾರು 750 ಜನರಿಗೆ ಅವಕಾಶ ಕಲ್ಪಿಸಲಾಗುತ್ತಿದೆ. 250 ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರವೇಶವಿರುತ್ತದೆ. ಆಸಕ್ತರು ಮಾತ್ರ ಪಾಲ್ಗೊಳ್ಳಲಿ ಎಂದು ನೋಂದಣಿ ಹಾಗೂ ಪ್ರವೇಶ ಶುಲ್ಕ ವಿಧಿಸಿದ್ದೇವೆ. ಕಾರ್ಯಕ್ರಮಕ್ಕೆ ಬಂದು ಮಧ್ಯೆದಲ್ಲೇ ಎದ್ದುಹೋಗುವವರು ಇರುತ್ತಾರೆ. ಇದನ್ನು ತಪ್ಪಿಸಲೆಂದು ಶುಲ್ಕ ವಿಧಿಸುತ್ತಿದ್ದೇವೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇಳೆಯೂ ಹೀಗೆಯೇ ನೋಂದಣಿ ನಡೆಯುತ್ತದೆ” ಎಂದು ಸಮರ್ಥಿಸಿಕೊಂಡರು.

“ಇದು ರಾಜ್ಯಮಟ್ಟದ ಕಾರ್ಯಕ್ರಮವಾಗಿದ್ದು, ಹೀಗಾಗಿ ಸ್ಥಳೀಯ ಸಾಹಿತಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಿಲ್ಲ. ಹೊಯ್ಸಳ ಸಾಹಿತ್ಯೋತ್ಸವವಲ್ಲದೆ ಜಿಲ್ಲಾ ಸಾಹಿತ್ಯ ಸಮ್ಮೇಳನವೂ ನಡೆಯಲಿದೆ. ಅಲ್ಲಿ ಸ್ಥಳೀಯರಿಗೆ ಅವಕಾಶಗಳನ್ನು ಕಲ್ಪಿಸಲಾಗುತ್ತದೆ” ಎಂದು ಸ್ಪಷ್ಟಪಡಿಸಿದರು.

“ಲಿಂಗದೇವರು ಹಳೆಮನೆಯವರ ಹೆಸರು ಕಣ್ತಪ್ಪಿನಿಂದ ಸೇರಿದೆ. ಚಲನಚಿತ್ರ ನಿರ್ದೇಶಕ ‘ಬಿ.ಎಸ್.ಲಿಂಗದೇವರು’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿ.ಎಸ್‌.ಲಿಂಗದೇವರು ಎಂಬುದು ‘ಲಿಂಗದೇವರು ಹಳೆಮನೆ’ ಎಂದಾಗಿದೆ. ಅಧಿಕೃತವಲ್ಲದ ಪಿಡಿಎಫ್‌ ಪ್ರತಿ ಹರಿದಾಡಿದೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಬಿ.ಎಸ್.ಲಿಂಗದೇವರು ಎಂದು ತಿದ್ದಲಾಗಿದೆ” ಎಂದು ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...