Homeಕರ್ನಾಟಕಹಾಸನ: ಹೊಯ್ಸಳ ಸಾಹಿತ್ಯೋತ್ಸವ ಪ್ರವೇಶಕ್ಕೆ 250 ರೂ. ಶುಲ್ಕ; ತೀರಿಹೋಗಿರುವ ರಂಗಕರ್ಮಿ ವಿಶೇಷ ಅತಿಥಿ!

ಹಾಸನ: ಹೊಯ್ಸಳ ಸಾಹಿತ್ಯೋತ್ಸವ ಪ್ರವೇಶಕ್ಕೆ 250 ರೂ. ಶುಲ್ಕ; ತೀರಿಹೋಗಿರುವ ರಂಗಕರ್ಮಿ ವಿಶೇಷ ಅತಿಥಿ!

‘ಹೊಯ್ಸಳ ಸಾಹಿತ್ಯೋತ್ಸವ’ ಎಂದು ಹೆಸರಿರುವ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲೆಯವರಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ ಎಂಬ ಆರೋಪ ಬಂದಿದೆ. ‘ಶುದ್ಧ ಸಾಹಿತ್ಯ’ದ ಕಮಟು ಕೂಡ ಬರಲಾರಂಭಿಸಿದೆ.

- Advertisement -
- Advertisement -

ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಕ್ಟೋಬರ್‌ 22, 23ರಂದು ಹಾಸನದಲ್ಲಿ ಆಯೋಜಿಸಲಾಗಿರುವ ‘ಹೊಯ್ಸಳ ಸಾಹಿತ್ಯೋತ್ಸವ’ ಪ್ರವೇಶಕ್ಕೆ 250 ರೂ. ಶುಲ್ಕವನ್ನು ವಿಧಿಸಲಾಗಿದೆ. ಜನಸಾಮಾನ್ಯರ ಪರವಾಗಿರಬೇಕಿದ್ದ ಕಸಾಪ, ಖಾಸಗಿ ಸಂಸ್ಥೆಯಂತೆ ಶುಲ್ಕ ವಿಧಿಸಿದೆ ಎಂಬ ಟೀಕೆಗಳು ಬಂದಿವೆ. ಜೊತೆಗೆ ಸ್ಥಳೀಯ ಪ್ರಾತಿನಿಧ್ಯವನ್ನು ಕಡೆಗಣಿಸಿ ಕಾರ್ಯಕ್ರಮ ಆಯೋಜಿಸಿರುವ ಕುರಿತು ಆಕ್ಷೇಪಗಳು ವ್ಯಕ್ತವಾಗುತ್ತಿವೆ.

ಶುಲ್ಕ ವಿಧಿಸಿರುವುದಷ್ಟೇ ಅಲ್ಲದೇ ತೀರಿ ಹೋಗಿರುವ ರಂಗಕರ್ಮಿ, ಮೈಸೂರು ರಂಗಾಯಣದ ಮಾಜಿ ನಿರ್ದೇಶಕರಾದ ಲಿಂಗದೇವರು ಹಳೆಮನೆಯವರ ಹೆಸರನ್ನೂ ವಿಶೇಷ ಆಹ್ವಾನಿತರ ಪಟ್ಟಿಯಲ್ಲಿ ಸೇರಿಸಲಾಗಿದೆ. ವಾಟ್ಸ್‌ಅಪ್‌ನಲ್ಲಿ ಹರಿದಾಡಿರುವ ಸಂದೇಶಗಳಲ್ಲಿ ‘ಶುದ್ಧ ಸಾಹಿತ್ಯ’ ಎಂಬ ಪದವೂ ಸೇರಿರುವುದು ಗೊಂದಲ ಮೂಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾಹಿತ್ಯ ಪರಿಷತ್‌ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ, “ಹಾಸನ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನಪೀಠ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ವಹಿಸಲಿದ್ದಾರೆ. ಸಾಹಿತ್ಯಲೋಕದ ಪ್ರಮುಖ ಹಿರಿಯ, ಕಿರಿಯ ದಿಗ್ಗಜ ಕವಿಗಳು, ಸಾಹಿತಿಗಳು, ವಿಮರ್ಶಕರು ಹಾಗೂ ವಿದ್ವಾಂಸರು ಈ ಸಾಹಿತ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಐತಿಹಾಸಿಕವಾದ ಸಾಹಿತ್ಯೋತ್ಸವಕ್ಕೆ ಕೇವಲ 500 ಜನರಿಗೆ ಮಾತ್ರ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಹಾಸನ ಜಿಲ್ಲೆಯ ಆಸಕ್ತ ಸಾಹಿತ್ಯ ಮನಸ್ಸುಗಳು ಕೆಳಗೆ ನೀಡಿರುವ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ದಿನಾಂಕ 15-10-2022 ರೊಳಗೆ ನೋಂದಣಿಯಾಗಬಹುದು” ಎಂದು ಕೆಲವರು ಸಂಪರ್ಕ ಸಂಖ್ಯೆಯನ್ನು ನೀಡಲಾಗಿದೆ.

ಮುಖ್ಯವಾಗಿ ಸ್ಥಳೀಯರಲ್ಲದವರು ಸ್ವಾಗತ ಸಮಿತಿಯಲ್ಲಿದ್ದಾರೆ. ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಸಾಹಿತಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ, ಸಂಚಾಲಕರಾಗಿ ಕವಿ ಬಿ.ಆರ್.ಲಕ್ಷ್ಮಣರಾವ್, ಪತ್ರಕರ್ತ ಜೋಗಿ, ಕಾರ್ಯದರ್ಶಿಯಾಗಿ ಜಿಲ್ಲಾ ಕಸಾಪ ಅಧ್ಯಕ್ಷರಾದ ಡಾ.ಎಚ್.ಎಲ್.ಮಲ್ಲೇಶಗೌಡ ಇದ್ದಾರೆ.

‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ‘ಜೇನುಗಿರಿ’ ಪತ್ರಿಕೆ ಸಂಪಾದಕರಾದ ಚಲಂ ಹಾಡ್ಲಹಳ್ಳಿ, “ಹಾಸನ ಜಿಲ್ಲೆಯನ್ನು ಪ್ರತಿನಿಧಿಸುವಂತೆ ಪ್ರತಿವರ್ಷ ಹೊಯ್ಸಳ ಉತ್ಸವ ನಡೆಯುತ್ತಿತ್ತು. ಆದರೆ ಕೆಲವು ವರ್ಷಗಳಿಂದ ಈ ಕಾರ್ಯಕ್ರಮ ಆಯೋಜನೆಯಾಗಿಲ್ಲ. ಹೊಯ್ಸಳ ಸಾಹಿತ್ಯೋತ್ಸವವು ಹೊಯ್ಸಳ ಉತ್ಸವದ ನೆರಳಿನಂತೆ ಕಾಣುತ್ತಿದೆ. ಅಥವಾ ಹೊಯ್ಸಳ ಉತ್ಸವವನ್ನು ನಡೆಸದಿದ್ದರೂ ಆಗುತ್ತದೆ. ಇದನ್ನೇ ತೋರಿಸಿ ಸರ್ಕಾರ ನುಣುಚಿಕೊಳ್ಳಲೂ ಸಾಧ್ಯವಿದೆ. ಹೀಗಿರುವಾಗ ಸ್ಥಳೀಯರಿಗೆ ಅವಕಾಶ ನೀಡಬೇಕಿತ್ತು. ಸ್ವಾಗತ ಸಮಿತಿಯಲ್ಲೂ ಹೊರಗಿನವರೇ ಇದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

“ಹೊಯ್ಸಳ ಎಂಬುದೇ ಒಂದು ಪ್ರಾದೇಶಿಕತೆಯನ್ನು ಬಿಂಬಿಸುತ್ತದೆ. ಕರಾವಳಿ ಉತ್ಸವ, ಹಂಪಿ ಉತ್ಸವ, ಹೊಯ್ಸಳ ಉತ್ಸವ- ಇವುಗಳಿಗೆಲ್ಲ ವ್ಯತ್ಯಾಸಗಳಿರುತ್ತವೆ. ಈ ನಿಟ್ಟಿನಲ್ಲಿ ಪ್ರಾತಿನಿಧಿಕತೆಯ ಪ್ರಶ್ನೆ ಬರುತ್ತದೆ. ಎಚ್.ಎಸ್.ವೆಂಕಟೇಶಮೂರ್ತಿ, ಬಿ.ಆರ್‌.ಲಕ್ಷ್ಮಣರಾವ್, ಜೋಗಿ ಇವರೆಲ್ಲ ಹಾಸನವನ್ನು ಹೇಗೆ ಪ್ರತಿನಿಧಿಸಬಲ್ಲರು? ಅತಿಥಿಗಳಾಗಿ ಬಂದಿದ್ದರೆ ಪ್ರಶ್ನೆ ಉದ್ಭವಿಸುತ್ತಿರಲಿಲ್ಲ. ಕಾರ್ಯಕ್ರಮ ಹೇಗಿರಬೇಕೆಂದು ನಿರ್ಧರಿಸುವವರೇ ಹೊರಗಿನವರಾಗಿರುವುದು ಎಷ್ಟು ಸರಿ? ಸಕಲೇಶಪುರ ಭಾಗದ ಕಾಡಿನ ಸಮಸ್ಯೆ ಇವರಿಗೆ ಗೊತ್ತಿದೆಯೇ? ಚನ್ನರಾಯಪಟ್ಟಣ ಭಾಗದ ತೆಂಗಿನ ಸಮಸ್ಯೆ ಗೊತ್ತಿದೆಯೇ? ಅರಕಲಗೂಡು ಭಾಗದ ತಂಬಾಕಿನ ಸಮಸ್ಯೆ ಗೊತ್ತಿದೆಯೇ? ಈ ಅಂಶಗಳನ್ನು ತಿರಸ್ಕರಿಸಿ ‘ಇದು ಶುದ್ಧಸಾಹಿತ್ಯ ಸಮ್ಮೇಳನ’ ಎಂದು ಕರೆಯುತ್ತಿದ್ದಾರೆಂದು ತಿಳಿದುಬಂದಿದೆ” ಎಂದು ವಿಷಾದಿಸಿದರು.

“ಹಾಸನ ಜಿಲ್ಲಾ ಕಸಾಪವು ಖಾಸಗಿ ಸಂಸ್ಥೆಯಂತೆ ವರ್ತಿಸುತ್ತಿದೆ” ಎಂದು ಸ್ಥಳೀಯ ನಿವಾಸಿ, ಲೇಖಕ ಕೊಟ್ರೇಶ್ ತಂಬ್ರಳ್ಳಿ ಆಕ್ಷೇಪ ವ್ಯಕ್ತಪಡಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. “ಕನ್ನಡ ಸಾಹಿತ್ಯ ಪರಿಷತ್ತನ್ನು ಹುಟ್ಟುಹಾಕಿದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರಿಗೆ ಅನೇಕ ಕನಸುಗಳಿದ್ಧವು. ಶ್ರೀಸಾಮಾನ್ಯನೂ ಸಾಹಿತ್ಯ ಕೈಂಕರ್ಯದಲ್ಲಿ ಭಾಗವಹಿಸಬೇಕು ಎಂಬ ಆಶಯ ಇತ್ತು. ಜಿಲ್ಲಾ ಮತ್ತು ತಾಲೂಕು ಘಟಕಗಳು ಇರುವುದೇ ಸ್ಥಳೀಯವಾಗಿಯೂ ಕೂಡ ಪರಿಷತ್ತು ಕಾರ್ಯೋನ್ಮುಖವಾಗಿ ಇರಬೇಕೆಂದು. ಹೊಯ್ಸಳ ಸಾಹಿತ್ಯೋತ್ಸವದಲ್ಲಿ ಹಾಸನದ ಕವಿ, ಲೇಖಕ, ಕಲಾವಿದರಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಕ್ಕಿಲ್ಲ” ಎಂದು ಆರೋಪಿಸಿದ್ದಾರೆ.

“ಕಾರ್ಯಕ್ರಮದಲ್ಲಿ ಭಾಗವಹಿಸಲು ಕಡ್ಡಾಯವಾಗಿ ನೋಂದಣಿಯಾಗಿರಬೇಕೆಂದು ಸೂಚಿಸಲಾಗಿದೆ. 250 ರೂಪಾಯಿ ಶುಲ್ಕವನ್ನು ವಿಧಿಸಲಾಗಿದೆ. ಹಾಗಾದರೆ ಖಾಸಗಿ ಸಂಸ್ಥೆಗಳಿಗೂ ಕನ್ನಡ ನಾಡಿನ ಜನರ ಧ್ವನಿಯಾಗಿರುವ ಪರಿಷತ್ತಿಗೂ ಏನು ವ್ಯತ್ಯಾಸ? ನೋಂದಣಿ ಮಾಡಿಕೊಳ್ಳುವುದು ಸರಿ. ಆದರೆ 500-550 ಜನರ ಮಿತಿ ಏತಕ್ಕೆ?” ಎಂದು ಪ್ರಶ್ನಿಸಿದ್ದಾರೆ.

“ಈವೆಂಟ್ ಮ್ಯಾನ್ಮೇಜ್ಮೆಂಟ್‌ಗಳ ಕೈಯಲ್ಲಿ ಇವತ್ತು ಪರಿಷತ್ತು ಸಿಲುಕಿದೆ. ಜನಸಾಮಾನ್ಯರಿಂದ ದೂರ ಇರುವ ಸಾಹಿತ್ಯ ಪರಿಷತ್ತು ನಮ್ಮ ಜನಗಳಿಗೆ ಅವಶ್ಯ ಇದೆಯಾ?” ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲ್ಲ: ಜನಾಕ್ರೋಶದ ಬಳಿಕ ಹಿಂದೆ ಸರಿದ ಕಸಾಪ

ಈಗ ಉಂಟಾಗಿರುವ ಗೊಂದಲಗಳಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾ’ಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಕಸಾಪ ಅಧ್ಯಕ್ಷರಾದ ಡಾ.ಎಚ್‌.ಎಲ್.ಮಲ್ಲೇಶ್‌ಗೌಡ, “ಕಾರ್ಯಕ್ರಮದಲ್ಲಿ ಸುಮಾರು 750 ಜನರಿಗೆ ಅವಕಾಶ ಕಲ್ಪಿಸಲಾಗುತ್ತಿದೆ. 250 ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರವೇಶವಿರುತ್ತದೆ. ಆಸಕ್ತರು ಮಾತ್ರ ಪಾಲ್ಗೊಳ್ಳಲಿ ಎಂದು ನೋಂದಣಿ ಹಾಗೂ ಪ್ರವೇಶ ಶುಲ್ಕ ವಿಧಿಸಿದ್ದೇವೆ. ಕಾರ್ಯಕ್ರಮಕ್ಕೆ ಬಂದು ಮಧ್ಯೆದಲ್ಲೇ ಎದ್ದುಹೋಗುವವರು ಇರುತ್ತಾರೆ. ಇದನ್ನು ತಪ್ಪಿಸಲೆಂದು ಶುಲ್ಕ ವಿಧಿಸುತ್ತಿದ್ದೇವೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇಳೆಯೂ ಹೀಗೆಯೇ ನೋಂದಣಿ ನಡೆಯುತ್ತದೆ” ಎಂದು ಸಮರ್ಥಿಸಿಕೊಂಡರು.

“ಇದು ರಾಜ್ಯಮಟ್ಟದ ಕಾರ್ಯಕ್ರಮವಾಗಿದ್ದು, ಹೀಗಾಗಿ ಸ್ಥಳೀಯ ಸಾಹಿತಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಿಲ್ಲ. ಹೊಯ್ಸಳ ಸಾಹಿತ್ಯೋತ್ಸವವಲ್ಲದೆ ಜಿಲ್ಲಾ ಸಾಹಿತ್ಯ ಸಮ್ಮೇಳನವೂ ನಡೆಯಲಿದೆ. ಅಲ್ಲಿ ಸ್ಥಳೀಯರಿಗೆ ಅವಕಾಶಗಳನ್ನು ಕಲ್ಪಿಸಲಾಗುತ್ತದೆ” ಎಂದು ಸ್ಪಷ್ಟಪಡಿಸಿದರು.

“ಲಿಂಗದೇವರು ಹಳೆಮನೆಯವರ ಹೆಸರು ಕಣ್ತಪ್ಪಿನಿಂದ ಸೇರಿದೆ. ಚಲನಚಿತ್ರ ನಿರ್ದೇಶಕ ‘ಬಿ.ಎಸ್.ಲಿಂಗದೇವರು’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿ.ಎಸ್‌.ಲಿಂಗದೇವರು ಎಂಬುದು ‘ಲಿಂಗದೇವರು ಹಳೆಮನೆ’ ಎಂದಾಗಿದೆ. ಅಧಿಕೃತವಲ್ಲದ ಪಿಡಿಎಫ್‌ ಪ್ರತಿ ಹರಿದಾಡಿದೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಬಿ.ಎಸ್.ಲಿಂಗದೇವರು ಎಂದು ತಿದ್ದಲಾಗಿದೆ” ಎಂದು ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...