Homeಕರ್ನಾಟಕಹಾಸನ: ಹೊಯ್ಸಳ ಸಾಹಿತ್ಯೋತ್ಸವ ಪ್ರವೇಶಕ್ಕೆ 250 ರೂ. ಶುಲ್ಕ; ತೀರಿಹೋಗಿರುವ ರಂಗಕರ್ಮಿ ವಿಶೇಷ ಅತಿಥಿ!

ಹಾಸನ: ಹೊಯ್ಸಳ ಸಾಹಿತ್ಯೋತ್ಸವ ಪ್ರವೇಶಕ್ಕೆ 250 ರೂ. ಶುಲ್ಕ; ತೀರಿಹೋಗಿರುವ ರಂಗಕರ್ಮಿ ವಿಶೇಷ ಅತಿಥಿ!

‘ಹೊಯ್ಸಳ ಸಾಹಿತ್ಯೋತ್ಸವ’ ಎಂದು ಹೆಸರಿರುವ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲೆಯವರಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ ಎಂಬ ಆರೋಪ ಬಂದಿದೆ. ‘ಶುದ್ಧ ಸಾಹಿತ್ಯ’ದ ಕಮಟು ಕೂಡ ಬರಲಾರಂಭಿಸಿದೆ.

- Advertisement -
- Advertisement -

ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಕ್ಟೋಬರ್‌ 22, 23ರಂದು ಹಾಸನದಲ್ಲಿ ಆಯೋಜಿಸಲಾಗಿರುವ ‘ಹೊಯ್ಸಳ ಸಾಹಿತ್ಯೋತ್ಸವ’ ಪ್ರವೇಶಕ್ಕೆ 250 ರೂ. ಶುಲ್ಕವನ್ನು ವಿಧಿಸಲಾಗಿದೆ. ಜನಸಾಮಾನ್ಯರ ಪರವಾಗಿರಬೇಕಿದ್ದ ಕಸಾಪ, ಖಾಸಗಿ ಸಂಸ್ಥೆಯಂತೆ ಶುಲ್ಕ ವಿಧಿಸಿದೆ ಎಂಬ ಟೀಕೆಗಳು ಬಂದಿವೆ. ಜೊತೆಗೆ ಸ್ಥಳೀಯ ಪ್ರಾತಿನಿಧ್ಯವನ್ನು ಕಡೆಗಣಿಸಿ ಕಾರ್ಯಕ್ರಮ ಆಯೋಜಿಸಿರುವ ಕುರಿತು ಆಕ್ಷೇಪಗಳು ವ್ಯಕ್ತವಾಗುತ್ತಿವೆ.

ಶುಲ್ಕ ವಿಧಿಸಿರುವುದಷ್ಟೇ ಅಲ್ಲದೇ ತೀರಿ ಹೋಗಿರುವ ರಂಗಕರ್ಮಿ, ಮೈಸೂರು ರಂಗಾಯಣದ ಮಾಜಿ ನಿರ್ದೇಶಕರಾದ ಲಿಂಗದೇವರು ಹಳೆಮನೆಯವರ ಹೆಸರನ್ನೂ ವಿಶೇಷ ಆಹ್ವಾನಿತರ ಪಟ್ಟಿಯಲ್ಲಿ ಸೇರಿಸಲಾಗಿದೆ. ವಾಟ್ಸ್‌ಅಪ್‌ನಲ್ಲಿ ಹರಿದಾಡಿರುವ ಸಂದೇಶಗಳಲ್ಲಿ ‘ಶುದ್ಧ ಸಾಹಿತ್ಯ’ ಎಂಬ ಪದವೂ ಸೇರಿರುವುದು ಗೊಂದಲ ಮೂಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾಹಿತ್ಯ ಪರಿಷತ್‌ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ, “ಹಾಸನ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನಪೀಠ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ವಹಿಸಲಿದ್ದಾರೆ. ಸಾಹಿತ್ಯಲೋಕದ ಪ್ರಮುಖ ಹಿರಿಯ, ಕಿರಿಯ ದಿಗ್ಗಜ ಕವಿಗಳು, ಸಾಹಿತಿಗಳು, ವಿಮರ್ಶಕರು ಹಾಗೂ ವಿದ್ವಾಂಸರು ಈ ಸಾಹಿತ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಐತಿಹಾಸಿಕವಾದ ಸಾಹಿತ್ಯೋತ್ಸವಕ್ಕೆ ಕೇವಲ 500 ಜನರಿಗೆ ಮಾತ್ರ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಹಾಸನ ಜಿಲ್ಲೆಯ ಆಸಕ್ತ ಸಾಹಿತ್ಯ ಮನಸ್ಸುಗಳು ಕೆಳಗೆ ನೀಡಿರುವ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ದಿನಾಂಕ 15-10-2022 ರೊಳಗೆ ನೋಂದಣಿಯಾಗಬಹುದು” ಎಂದು ಕೆಲವರು ಸಂಪರ್ಕ ಸಂಖ್ಯೆಯನ್ನು ನೀಡಲಾಗಿದೆ.

ಮುಖ್ಯವಾಗಿ ಸ್ಥಳೀಯರಲ್ಲದವರು ಸ್ವಾಗತ ಸಮಿತಿಯಲ್ಲಿದ್ದಾರೆ. ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಸಾಹಿತಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ, ಸಂಚಾಲಕರಾಗಿ ಕವಿ ಬಿ.ಆರ್.ಲಕ್ಷ್ಮಣರಾವ್, ಪತ್ರಕರ್ತ ಜೋಗಿ, ಕಾರ್ಯದರ್ಶಿಯಾಗಿ ಜಿಲ್ಲಾ ಕಸಾಪ ಅಧ್ಯಕ್ಷರಾದ ಡಾ.ಎಚ್.ಎಲ್.ಮಲ್ಲೇಶಗೌಡ ಇದ್ದಾರೆ.

‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ‘ಜೇನುಗಿರಿ’ ಪತ್ರಿಕೆ ಸಂಪಾದಕರಾದ ಚಲಂ ಹಾಡ್ಲಹಳ್ಳಿ, “ಹಾಸನ ಜಿಲ್ಲೆಯನ್ನು ಪ್ರತಿನಿಧಿಸುವಂತೆ ಪ್ರತಿವರ್ಷ ಹೊಯ್ಸಳ ಉತ್ಸವ ನಡೆಯುತ್ತಿತ್ತು. ಆದರೆ ಕೆಲವು ವರ್ಷಗಳಿಂದ ಈ ಕಾರ್ಯಕ್ರಮ ಆಯೋಜನೆಯಾಗಿಲ್ಲ. ಹೊಯ್ಸಳ ಸಾಹಿತ್ಯೋತ್ಸವವು ಹೊಯ್ಸಳ ಉತ್ಸವದ ನೆರಳಿನಂತೆ ಕಾಣುತ್ತಿದೆ. ಅಥವಾ ಹೊಯ್ಸಳ ಉತ್ಸವವನ್ನು ನಡೆಸದಿದ್ದರೂ ಆಗುತ್ತದೆ. ಇದನ್ನೇ ತೋರಿಸಿ ಸರ್ಕಾರ ನುಣುಚಿಕೊಳ್ಳಲೂ ಸಾಧ್ಯವಿದೆ. ಹೀಗಿರುವಾಗ ಸ್ಥಳೀಯರಿಗೆ ಅವಕಾಶ ನೀಡಬೇಕಿತ್ತು. ಸ್ವಾಗತ ಸಮಿತಿಯಲ್ಲೂ ಹೊರಗಿನವರೇ ಇದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

“ಹೊಯ್ಸಳ ಎಂಬುದೇ ಒಂದು ಪ್ರಾದೇಶಿಕತೆಯನ್ನು ಬಿಂಬಿಸುತ್ತದೆ. ಕರಾವಳಿ ಉತ್ಸವ, ಹಂಪಿ ಉತ್ಸವ, ಹೊಯ್ಸಳ ಉತ್ಸವ- ಇವುಗಳಿಗೆಲ್ಲ ವ್ಯತ್ಯಾಸಗಳಿರುತ್ತವೆ. ಈ ನಿಟ್ಟಿನಲ್ಲಿ ಪ್ರಾತಿನಿಧಿಕತೆಯ ಪ್ರಶ್ನೆ ಬರುತ್ತದೆ. ಎಚ್.ಎಸ್.ವೆಂಕಟೇಶಮೂರ್ತಿ, ಬಿ.ಆರ್‌.ಲಕ್ಷ್ಮಣರಾವ್, ಜೋಗಿ ಇವರೆಲ್ಲ ಹಾಸನವನ್ನು ಹೇಗೆ ಪ್ರತಿನಿಧಿಸಬಲ್ಲರು? ಅತಿಥಿಗಳಾಗಿ ಬಂದಿದ್ದರೆ ಪ್ರಶ್ನೆ ಉದ್ಭವಿಸುತ್ತಿರಲಿಲ್ಲ. ಕಾರ್ಯಕ್ರಮ ಹೇಗಿರಬೇಕೆಂದು ನಿರ್ಧರಿಸುವವರೇ ಹೊರಗಿನವರಾಗಿರುವುದು ಎಷ್ಟು ಸರಿ? ಸಕಲೇಶಪುರ ಭಾಗದ ಕಾಡಿನ ಸಮಸ್ಯೆ ಇವರಿಗೆ ಗೊತ್ತಿದೆಯೇ? ಚನ್ನರಾಯಪಟ್ಟಣ ಭಾಗದ ತೆಂಗಿನ ಸಮಸ್ಯೆ ಗೊತ್ತಿದೆಯೇ? ಅರಕಲಗೂಡು ಭಾಗದ ತಂಬಾಕಿನ ಸಮಸ್ಯೆ ಗೊತ್ತಿದೆಯೇ? ಈ ಅಂಶಗಳನ್ನು ತಿರಸ್ಕರಿಸಿ ‘ಇದು ಶುದ್ಧಸಾಹಿತ್ಯ ಸಮ್ಮೇಳನ’ ಎಂದು ಕರೆಯುತ್ತಿದ್ದಾರೆಂದು ತಿಳಿದುಬಂದಿದೆ” ಎಂದು ವಿಷಾದಿಸಿದರು.

“ಹಾಸನ ಜಿಲ್ಲಾ ಕಸಾಪವು ಖಾಸಗಿ ಸಂಸ್ಥೆಯಂತೆ ವರ್ತಿಸುತ್ತಿದೆ” ಎಂದು ಸ್ಥಳೀಯ ನಿವಾಸಿ, ಲೇಖಕ ಕೊಟ್ರೇಶ್ ತಂಬ್ರಳ್ಳಿ ಆಕ್ಷೇಪ ವ್ಯಕ್ತಪಡಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. “ಕನ್ನಡ ಸಾಹಿತ್ಯ ಪರಿಷತ್ತನ್ನು ಹುಟ್ಟುಹಾಕಿದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರಿಗೆ ಅನೇಕ ಕನಸುಗಳಿದ್ಧವು. ಶ್ರೀಸಾಮಾನ್ಯನೂ ಸಾಹಿತ್ಯ ಕೈಂಕರ್ಯದಲ್ಲಿ ಭಾಗವಹಿಸಬೇಕು ಎಂಬ ಆಶಯ ಇತ್ತು. ಜಿಲ್ಲಾ ಮತ್ತು ತಾಲೂಕು ಘಟಕಗಳು ಇರುವುದೇ ಸ್ಥಳೀಯವಾಗಿಯೂ ಕೂಡ ಪರಿಷತ್ತು ಕಾರ್ಯೋನ್ಮುಖವಾಗಿ ಇರಬೇಕೆಂದು. ಹೊಯ್ಸಳ ಸಾಹಿತ್ಯೋತ್ಸವದಲ್ಲಿ ಹಾಸನದ ಕವಿ, ಲೇಖಕ, ಕಲಾವಿದರಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಕ್ಕಿಲ್ಲ” ಎಂದು ಆರೋಪಿಸಿದ್ದಾರೆ.

“ಕಾರ್ಯಕ್ರಮದಲ್ಲಿ ಭಾಗವಹಿಸಲು ಕಡ್ಡಾಯವಾಗಿ ನೋಂದಣಿಯಾಗಿರಬೇಕೆಂದು ಸೂಚಿಸಲಾಗಿದೆ. 250 ರೂಪಾಯಿ ಶುಲ್ಕವನ್ನು ವಿಧಿಸಲಾಗಿದೆ. ಹಾಗಾದರೆ ಖಾಸಗಿ ಸಂಸ್ಥೆಗಳಿಗೂ ಕನ್ನಡ ನಾಡಿನ ಜನರ ಧ್ವನಿಯಾಗಿರುವ ಪರಿಷತ್ತಿಗೂ ಏನು ವ್ಯತ್ಯಾಸ? ನೋಂದಣಿ ಮಾಡಿಕೊಳ್ಳುವುದು ಸರಿ. ಆದರೆ 500-550 ಜನರ ಮಿತಿ ಏತಕ್ಕೆ?” ಎಂದು ಪ್ರಶ್ನಿಸಿದ್ದಾರೆ.

“ಈವೆಂಟ್ ಮ್ಯಾನ್ಮೇಜ್ಮೆಂಟ್‌ಗಳ ಕೈಯಲ್ಲಿ ಇವತ್ತು ಪರಿಷತ್ತು ಸಿಲುಕಿದೆ. ಜನಸಾಮಾನ್ಯರಿಂದ ದೂರ ಇರುವ ಸಾಹಿತ್ಯ ಪರಿಷತ್ತು ನಮ್ಮ ಜನಗಳಿಗೆ ಅವಶ್ಯ ಇದೆಯಾ?” ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲ್ಲ: ಜನಾಕ್ರೋಶದ ಬಳಿಕ ಹಿಂದೆ ಸರಿದ ಕಸಾಪ

ಈಗ ಉಂಟಾಗಿರುವ ಗೊಂದಲಗಳಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾ’ಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಕಸಾಪ ಅಧ್ಯಕ್ಷರಾದ ಡಾ.ಎಚ್‌.ಎಲ್.ಮಲ್ಲೇಶ್‌ಗೌಡ, “ಕಾರ್ಯಕ್ರಮದಲ್ಲಿ ಸುಮಾರು 750 ಜನರಿಗೆ ಅವಕಾಶ ಕಲ್ಪಿಸಲಾಗುತ್ತಿದೆ. 250 ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರವೇಶವಿರುತ್ತದೆ. ಆಸಕ್ತರು ಮಾತ್ರ ಪಾಲ್ಗೊಳ್ಳಲಿ ಎಂದು ನೋಂದಣಿ ಹಾಗೂ ಪ್ರವೇಶ ಶುಲ್ಕ ವಿಧಿಸಿದ್ದೇವೆ. ಕಾರ್ಯಕ್ರಮಕ್ಕೆ ಬಂದು ಮಧ್ಯೆದಲ್ಲೇ ಎದ್ದುಹೋಗುವವರು ಇರುತ್ತಾರೆ. ಇದನ್ನು ತಪ್ಪಿಸಲೆಂದು ಶುಲ್ಕ ವಿಧಿಸುತ್ತಿದ್ದೇವೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇಳೆಯೂ ಹೀಗೆಯೇ ನೋಂದಣಿ ನಡೆಯುತ್ತದೆ” ಎಂದು ಸಮರ್ಥಿಸಿಕೊಂಡರು.

“ಇದು ರಾಜ್ಯಮಟ್ಟದ ಕಾರ್ಯಕ್ರಮವಾಗಿದ್ದು, ಹೀಗಾಗಿ ಸ್ಥಳೀಯ ಸಾಹಿತಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಿಲ್ಲ. ಹೊಯ್ಸಳ ಸಾಹಿತ್ಯೋತ್ಸವವಲ್ಲದೆ ಜಿಲ್ಲಾ ಸಾಹಿತ್ಯ ಸಮ್ಮೇಳನವೂ ನಡೆಯಲಿದೆ. ಅಲ್ಲಿ ಸ್ಥಳೀಯರಿಗೆ ಅವಕಾಶಗಳನ್ನು ಕಲ್ಪಿಸಲಾಗುತ್ತದೆ” ಎಂದು ಸ್ಪಷ್ಟಪಡಿಸಿದರು.

“ಲಿಂಗದೇವರು ಹಳೆಮನೆಯವರ ಹೆಸರು ಕಣ್ತಪ್ಪಿನಿಂದ ಸೇರಿದೆ. ಚಲನಚಿತ್ರ ನಿರ್ದೇಶಕ ‘ಬಿ.ಎಸ್.ಲಿಂಗದೇವರು’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿ.ಎಸ್‌.ಲಿಂಗದೇವರು ಎಂಬುದು ‘ಲಿಂಗದೇವರು ಹಳೆಮನೆ’ ಎಂದಾಗಿದೆ. ಅಧಿಕೃತವಲ್ಲದ ಪಿಡಿಎಫ್‌ ಪ್ರತಿ ಹರಿದಾಡಿದೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಬಿ.ಎಸ್.ಲಿಂಗದೇವರು ಎಂದು ತಿದ್ದಲಾಗಿದೆ” ಎಂದು ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...