Homeಕರ್ನಾಟಕಹಾಸನ: ಹೊಯ್ಸಳ ಸಾಹಿತ್ಯೋತ್ಸವ ಪ್ರವೇಶಕ್ಕೆ 250 ರೂ. ಶುಲ್ಕ; ತೀರಿಹೋಗಿರುವ ರಂಗಕರ್ಮಿ ವಿಶೇಷ ಅತಿಥಿ!

ಹಾಸನ: ಹೊಯ್ಸಳ ಸಾಹಿತ್ಯೋತ್ಸವ ಪ್ರವೇಶಕ್ಕೆ 250 ರೂ. ಶುಲ್ಕ; ತೀರಿಹೋಗಿರುವ ರಂಗಕರ್ಮಿ ವಿಶೇಷ ಅತಿಥಿ!

‘ಹೊಯ್ಸಳ ಸಾಹಿತ್ಯೋತ್ಸವ’ ಎಂದು ಹೆಸರಿರುವ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲೆಯವರಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ ಎಂಬ ಆರೋಪ ಬಂದಿದೆ. ‘ಶುದ್ಧ ಸಾಹಿತ್ಯ’ದ ಕಮಟು ಕೂಡ ಬರಲಾರಂಭಿಸಿದೆ.

- Advertisement -
- Advertisement -

ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಕ್ಟೋಬರ್‌ 22, 23ರಂದು ಹಾಸನದಲ್ಲಿ ಆಯೋಜಿಸಲಾಗಿರುವ ‘ಹೊಯ್ಸಳ ಸಾಹಿತ್ಯೋತ್ಸವ’ ಪ್ರವೇಶಕ್ಕೆ 250 ರೂ. ಶುಲ್ಕವನ್ನು ವಿಧಿಸಲಾಗಿದೆ. ಜನಸಾಮಾನ್ಯರ ಪರವಾಗಿರಬೇಕಿದ್ದ ಕಸಾಪ, ಖಾಸಗಿ ಸಂಸ್ಥೆಯಂತೆ ಶುಲ್ಕ ವಿಧಿಸಿದೆ ಎಂಬ ಟೀಕೆಗಳು ಬಂದಿವೆ. ಜೊತೆಗೆ ಸ್ಥಳೀಯ ಪ್ರಾತಿನಿಧ್ಯವನ್ನು ಕಡೆಗಣಿಸಿ ಕಾರ್ಯಕ್ರಮ ಆಯೋಜಿಸಿರುವ ಕುರಿತು ಆಕ್ಷೇಪಗಳು ವ್ಯಕ್ತವಾಗುತ್ತಿವೆ.

ಶುಲ್ಕ ವಿಧಿಸಿರುವುದಷ್ಟೇ ಅಲ್ಲದೇ ತೀರಿ ಹೋಗಿರುವ ರಂಗಕರ್ಮಿ, ಮೈಸೂರು ರಂಗಾಯಣದ ಮಾಜಿ ನಿರ್ದೇಶಕರಾದ ಲಿಂಗದೇವರು ಹಳೆಮನೆಯವರ ಹೆಸರನ್ನೂ ವಿಶೇಷ ಆಹ್ವಾನಿತರ ಪಟ್ಟಿಯಲ್ಲಿ ಸೇರಿಸಲಾಗಿದೆ. ವಾಟ್ಸ್‌ಅಪ್‌ನಲ್ಲಿ ಹರಿದಾಡಿರುವ ಸಂದೇಶಗಳಲ್ಲಿ ‘ಶುದ್ಧ ಸಾಹಿತ್ಯ’ ಎಂಬ ಪದವೂ ಸೇರಿರುವುದು ಗೊಂದಲ ಮೂಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾಹಿತ್ಯ ಪರಿಷತ್‌ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ, “ಹಾಸನ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನಪೀಠ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ವಹಿಸಲಿದ್ದಾರೆ. ಸಾಹಿತ್ಯಲೋಕದ ಪ್ರಮುಖ ಹಿರಿಯ, ಕಿರಿಯ ದಿಗ್ಗಜ ಕವಿಗಳು, ಸಾಹಿತಿಗಳು, ವಿಮರ್ಶಕರು ಹಾಗೂ ವಿದ್ವಾಂಸರು ಈ ಸಾಹಿತ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಐತಿಹಾಸಿಕವಾದ ಸಾಹಿತ್ಯೋತ್ಸವಕ್ಕೆ ಕೇವಲ 500 ಜನರಿಗೆ ಮಾತ್ರ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಹಾಸನ ಜಿಲ್ಲೆಯ ಆಸಕ್ತ ಸಾಹಿತ್ಯ ಮನಸ್ಸುಗಳು ಕೆಳಗೆ ನೀಡಿರುವ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ದಿನಾಂಕ 15-10-2022 ರೊಳಗೆ ನೋಂದಣಿಯಾಗಬಹುದು” ಎಂದು ಕೆಲವರು ಸಂಪರ್ಕ ಸಂಖ್ಯೆಯನ್ನು ನೀಡಲಾಗಿದೆ.

ಮುಖ್ಯವಾಗಿ ಸ್ಥಳೀಯರಲ್ಲದವರು ಸ್ವಾಗತ ಸಮಿತಿಯಲ್ಲಿದ್ದಾರೆ. ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಸಾಹಿತಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ, ಸಂಚಾಲಕರಾಗಿ ಕವಿ ಬಿ.ಆರ್.ಲಕ್ಷ್ಮಣರಾವ್, ಪತ್ರಕರ್ತ ಜೋಗಿ, ಕಾರ್ಯದರ್ಶಿಯಾಗಿ ಜಿಲ್ಲಾ ಕಸಾಪ ಅಧ್ಯಕ್ಷರಾದ ಡಾ.ಎಚ್.ಎಲ್.ಮಲ್ಲೇಶಗೌಡ ಇದ್ದಾರೆ.

‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ‘ಜೇನುಗಿರಿ’ ಪತ್ರಿಕೆ ಸಂಪಾದಕರಾದ ಚಲಂ ಹಾಡ್ಲಹಳ್ಳಿ, “ಹಾಸನ ಜಿಲ್ಲೆಯನ್ನು ಪ್ರತಿನಿಧಿಸುವಂತೆ ಪ್ರತಿವರ್ಷ ಹೊಯ್ಸಳ ಉತ್ಸವ ನಡೆಯುತ್ತಿತ್ತು. ಆದರೆ ಕೆಲವು ವರ್ಷಗಳಿಂದ ಈ ಕಾರ್ಯಕ್ರಮ ಆಯೋಜನೆಯಾಗಿಲ್ಲ. ಹೊಯ್ಸಳ ಸಾಹಿತ್ಯೋತ್ಸವವು ಹೊಯ್ಸಳ ಉತ್ಸವದ ನೆರಳಿನಂತೆ ಕಾಣುತ್ತಿದೆ. ಅಥವಾ ಹೊಯ್ಸಳ ಉತ್ಸವವನ್ನು ನಡೆಸದಿದ್ದರೂ ಆಗುತ್ತದೆ. ಇದನ್ನೇ ತೋರಿಸಿ ಸರ್ಕಾರ ನುಣುಚಿಕೊಳ್ಳಲೂ ಸಾಧ್ಯವಿದೆ. ಹೀಗಿರುವಾಗ ಸ್ಥಳೀಯರಿಗೆ ಅವಕಾಶ ನೀಡಬೇಕಿತ್ತು. ಸ್ವಾಗತ ಸಮಿತಿಯಲ್ಲೂ ಹೊರಗಿನವರೇ ಇದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

“ಹೊಯ್ಸಳ ಎಂಬುದೇ ಒಂದು ಪ್ರಾದೇಶಿಕತೆಯನ್ನು ಬಿಂಬಿಸುತ್ತದೆ. ಕರಾವಳಿ ಉತ್ಸವ, ಹಂಪಿ ಉತ್ಸವ, ಹೊಯ್ಸಳ ಉತ್ಸವ- ಇವುಗಳಿಗೆಲ್ಲ ವ್ಯತ್ಯಾಸಗಳಿರುತ್ತವೆ. ಈ ನಿಟ್ಟಿನಲ್ಲಿ ಪ್ರಾತಿನಿಧಿಕತೆಯ ಪ್ರಶ್ನೆ ಬರುತ್ತದೆ. ಎಚ್.ಎಸ್.ವೆಂಕಟೇಶಮೂರ್ತಿ, ಬಿ.ಆರ್‌.ಲಕ್ಷ್ಮಣರಾವ್, ಜೋಗಿ ಇವರೆಲ್ಲ ಹಾಸನವನ್ನು ಹೇಗೆ ಪ್ರತಿನಿಧಿಸಬಲ್ಲರು? ಅತಿಥಿಗಳಾಗಿ ಬಂದಿದ್ದರೆ ಪ್ರಶ್ನೆ ಉದ್ಭವಿಸುತ್ತಿರಲಿಲ್ಲ. ಕಾರ್ಯಕ್ರಮ ಹೇಗಿರಬೇಕೆಂದು ನಿರ್ಧರಿಸುವವರೇ ಹೊರಗಿನವರಾಗಿರುವುದು ಎಷ್ಟು ಸರಿ? ಸಕಲೇಶಪುರ ಭಾಗದ ಕಾಡಿನ ಸಮಸ್ಯೆ ಇವರಿಗೆ ಗೊತ್ತಿದೆಯೇ? ಚನ್ನರಾಯಪಟ್ಟಣ ಭಾಗದ ತೆಂಗಿನ ಸಮಸ್ಯೆ ಗೊತ್ತಿದೆಯೇ? ಅರಕಲಗೂಡು ಭಾಗದ ತಂಬಾಕಿನ ಸಮಸ್ಯೆ ಗೊತ್ತಿದೆಯೇ? ಈ ಅಂಶಗಳನ್ನು ತಿರಸ್ಕರಿಸಿ ‘ಇದು ಶುದ್ಧಸಾಹಿತ್ಯ ಸಮ್ಮೇಳನ’ ಎಂದು ಕರೆಯುತ್ತಿದ್ದಾರೆಂದು ತಿಳಿದುಬಂದಿದೆ” ಎಂದು ವಿಷಾದಿಸಿದರು.

“ಹಾಸನ ಜಿಲ್ಲಾ ಕಸಾಪವು ಖಾಸಗಿ ಸಂಸ್ಥೆಯಂತೆ ವರ್ತಿಸುತ್ತಿದೆ” ಎಂದು ಸ್ಥಳೀಯ ನಿವಾಸಿ, ಲೇಖಕ ಕೊಟ್ರೇಶ್ ತಂಬ್ರಳ್ಳಿ ಆಕ್ಷೇಪ ವ್ಯಕ್ತಪಡಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. “ಕನ್ನಡ ಸಾಹಿತ್ಯ ಪರಿಷತ್ತನ್ನು ಹುಟ್ಟುಹಾಕಿದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರಿಗೆ ಅನೇಕ ಕನಸುಗಳಿದ್ಧವು. ಶ್ರೀಸಾಮಾನ್ಯನೂ ಸಾಹಿತ್ಯ ಕೈಂಕರ್ಯದಲ್ಲಿ ಭಾಗವಹಿಸಬೇಕು ಎಂಬ ಆಶಯ ಇತ್ತು. ಜಿಲ್ಲಾ ಮತ್ತು ತಾಲೂಕು ಘಟಕಗಳು ಇರುವುದೇ ಸ್ಥಳೀಯವಾಗಿಯೂ ಕೂಡ ಪರಿಷತ್ತು ಕಾರ್ಯೋನ್ಮುಖವಾಗಿ ಇರಬೇಕೆಂದು. ಹೊಯ್ಸಳ ಸಾಹಿತ್ಯೋತ್ಸವದಲ್ಲಿ ಹಾಸನದ ಕವಿ, ಲೇಖಕ, ಕಲಾವಿದರಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಕ್ಕಿಲ್ಲ” ಎಂದು ಆರೋಪಿಸಿದ್ದಾರೆ.

“ಕಾರ್ಯಕ್ರಮದಲ್ಲಿ ಭಾಗವಹಿಸಲು ಕಡ್ಡಾಯವಾಗಿ ನೋಂದಣಿಯಾಗಿರಬೇಕೆಂದು ಸೂಚಿಸಲಾಗಿದೆ. 250 ರೂಪಾಯಿ ಶುಲ್ಕವನ್ನು ವಿಧಿಸಲಾಗಿದೆ. ಹಾಗಾದರೆ ಖಾಸಗಿ ಸಂಸ್ಥೆಗಳಿಗೂ ಕನ್ನಡ ನಾಡಿನ ಜನರ ಧ್ವನಿಯಾಗಿರುವ ಪರಿಷತ್ತಿಗೂ ಏನು ವ್ಯತ್ಯಾಸ? ನೋಂದಣಿ ಮಾಡಿಕೊಳ್ಳುವುದು ಸರಿ. ಆದರೆ 500-550 ಜನರ ಮಿತಿ ಏತಕ್ಕೆ?” ಎಂದು ಪ್ರಶ್ನಿಸಿದ್ದಾರೆ.

“ಈವೆಂಟ್ ಮ್ಯಾನ್ಮೇಜ್ಮೆಂಟ್‌ಗಳ ಕೈಯಲ್ಲಿ ಇವತ್ತು ಪರಿಷತ್ತು ಸಿಲುಕಿದೆ. ಜನಸಾಮಾನ್ಯರಿಂದ ದೂರ ಇರುವ ಸಾಹಿತ್ಯ ಪರಿಷತ್ತು ನಮ್ಮ ಜನಗಳಿಗೆ ಅವಶ್ಯ ಇದೆಯಾ?” ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲ್ಲ: ಜನಾಕ್ರೋಶದ ಬಳಿಕ ಹಿಂದೆ ಸರಿದ ಕಸಾಪ

ಈಗ ಉಂಟಾಗಿರುವ ಗೊಂದಲಗಳಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾ’ಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಕಸಾಪ ಅಧ್ಯಕ್ಷರಾದ ಡಾ.ಎಚ್‌.ಎಲ್.ಮಲ್ಲೇಶ್‌ಗೌಡ, “ಕಾರ್ಯಕ್ರಮದಲ್ಲಿ ಸುಮಾರು 750 ಜನರಿಗೆ ಅವಕಾಶ ಕಲ್ಪಿಸಲಾಗುತ್ತಿದೆ. 250 ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರವೇಶವಿರುತ್ತದೆ. ಆಸಕ್ತರು ಮಾತ್ರ ಪಾಲ್ಗೊಳ್ಳಲಿ ಎಂದು ನೋಂದಣಿ ಹಾಗೂ ಪ್ರವೇಶ ಶುಲ್ಕ ವಿಧಿಸಿದ್ದೇವೆ. ಕಾರ್ಯಕ್ರಮಕ್ಕೆ ಬಂದು ಮಧ್ಯೆದಲ್ಲೇ ಎದ್ದುಹೋಗುವವರು ಇರುತ್ತಾರೆ. ಇದನ್ನು ತಪ್ಪಿಸಲೆಂದು ಶುಲ್ಕ ವಿಧಿಸುತ್ತಿದ್ದೇವೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇಳೆಯೂ ಹೀಗೆಯೇ ನೋಂದಣಿ ನಡೆಯುತ್ತದೆ” ಎಂದು ಸಮರ್ಥಿಸಿಕೊಂಡರು.

“ಇದು ರಾಜ್ಯಮಟ್ಟದ ಕಾರ್ಯಕ್ರಮವಾಗಿದ್ದು, ಹೀಗಾಗಿ ಸ್ಥಳೀಯ ಸಾಹಿತಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಿಲ್ಲ. ಹೊಯ್ಸಳ ಸಾಹಿತ್ಯೋತ್ಸವವಲ್ಲದೆ ಜಿಲ್ಲಾ ಸಾಹಿತ್ಯ ಸಮ್ಮೇಳನವೂ ನಡೆಯಲಿದೆ. ಅಲ್ಲಿ ಸ್ಥಳೀಯರಿಗೆ ಅವಕಾಶಗಳನ್ನು ಕಲ್ಪಿಸಲಾಗುತ್ತದೆ” ಎಂದು ಸ್ಪಷ್ಟಪಡಿಸಿದರು.

“ಲಿಂಗದೇವರು ಹಳೆಮನೆಯವರ ಹೆಸರು ಕಣ್ತಪ್ಪಿನಿಂದ ಸೇರಿದೆ. ಚಲನಚಿತ್ರ ನಿರ್ದೇಶಕ ‘ಬಿ.ಎಸ್.ಲಿಂಗದೇವರು’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿ.ಎಸ್‌.ಲಿಂಗದೇವರು ಎಂಬುದು ‘ಲಿಂಗದೇವರು ಹಳೆಮನೆ’ ಎಂದಾಗಿದೆ. ಅಧಿಕೃತವಲ್ಲದ ಪಿಡಿಎಫ್‌ ಪ್ರತಿ ಹರಿದಾಡಿದೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಬಿ.ಎಸ್.ಲಿಂಗದೇವರು ಎಂದು ತಿದ್ದಲಾಗಿದೆ” ಎಂದು ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....