Homeಕರ್ನಾಟಕಹಾಸನ: ಹೊಯ್ಸಳ ಸಾಹಿತ್ಯೋತ್ಸವ ಪ್ರವೇಶಕ್ಕೆ 250 ರೂ. ಶುಲ್ಕ; ತೀರಿಹೋಗಿರುವ ರಂಗಕರ್ಮಿ ವಿಶೇಷ ಅತಿಥಿ!

ಹಾಸನ: ಹೊಯ್ಸಳ ಸಾಹಿತ್ಯೋತ್ಸವ ಪ್ರವೇಶಕ್ಕೆ 250 ರೂ. ಶುಲ್ಕ; ತೀರಿಹೋಗಿರುವ ರಂಗಕರ್ಮಿ ವಿಶೇಷ ಅತಿಥಿ!

‘ಹೊಯ್ಸಳ ಸಾಹಿತ್ಯೋತ್ಸವ’ ಎಂದು ಹೆಸರಿರುವ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲೆಯವರಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ ಎಂಬ ಆರೋಪ ಬಂದಿದೆ. ‘ಶುದ್ಧ ಸಾಹಿತ್ಯ’ದ ಕಮಟು ಕೂಡ ಬರಲಾರಂಭಿಸಿದೆ.

- Advertisement -
- Advertisement -

ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಕ್ಟೋಬರ್‌ 22, 23ರಂದು ಹಾಸನದಲ್ಲಿ ಆಯೋಜಿಸಲಾಗಿರುವ ‘ಹೊಯ್ಸಳ ಸಾಹಿತ್ಯೋತ್ಸವ’ ಪ್ರವೇಶಕ್ಕೆ 250 ರೂ. ಶುಲ್ಕವನ್ನು ವಿಧಿಸಲಾಗಿದೆ. ಜನಸಾಮಾನ್ಯರ ಪರವಾಗಿರಬೇಕಿದ್ದ ಕಸಾಪ, ಖಾಸಗಿ ಸಂಸ್ಥೆಯಂತೆ ಶುಲ್ಕ ವಿಧಿಸಿದೆ ಎಂಬ ಟೀಕೆಗಳು ಬಂದಿವೆ. ಜೊತೆಗೆ ಸ್ಥಳೀಯ ಪ್ರಾತಿನಿಧ್ಯವನ್ನು ಕಡೆಗಣಿಸಿ ಕಾರ್ಯಕ್ರಮ ಆಯೋಜಿಸಿರುವ ಕುರಿತು ಆಕ್ಷೇಪಗಳು ವ್ಯಕ್ತವಾಗುತ್ತಿವೆ.

ಶುಲ್ಕ ವಿಧಿಸಿರುವುದಷ್ಟೇ ಅಲ್ಲದೇ ತೀರಿ ಹೋಗಿರುವ ರಂಗಕರ್ಮಿ, ಮೈಸೂರು ರಂಗಾಯಣದ ಮಾಜಿ ನಿರ್ದೇಶಕರಾದ ಲಿಂಗದೇವರು ಹಳೆಮನೆಯವರ ಹೆಸರನ್ನೂ ವಿಶೇಷ ಆಹ್ವಾನಿತರ ಪಟ್ಟಿಯಲ್ಲಿ ಸೇರಿಸಲಾಗಿದೆ. ವಾಟ್ಸ್‌ಅಪ್‌ನಲ್ಲಿ ಹರಿದಾಡಿರುವ ಸಂದೇಶಗಳಲ್ಲಿ ‘ಶುದ್ಧ ಸಾಹಿತ್ಯ’ ಎಂಬ ಪದವೂ ಸೇರಿರುವುದು ಗೊಂದಲ ಮೂಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾಹಿತ್ಯ ಪರಿಷತ್‌ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ, “ಹಾಸನ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನಪೀಠ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ವಹಿಸಲಿದ್ದಾರೆ. ಸಾಹಿತ್ಯಲೋಕದ ಪ್ರಮುಖ ಹಿರಿಯ, ಕಿರಿಯ ದಿಗ್ಗಜ ಕವಿಗಳು, ಸಾಹಿತಿಗಳು, ವಿಮರ್ಶಕರು ಹಾಗೂ ವಿದ್ವಾಂಸರು ಈ ಸಾಹಿತ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಐತಿಹಾಸಿಕವಾದ ಸಾಹಿತ್ಯೋತ್ಸವಕ್ಕೆ ಕೇವಲ 500 ಜನರಿಗೆ ಮಾತ್ರ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಹಾಸನ ಜಿಲ್ಲೆಯ ಆಸಕ್ತ ಸಾಹಿತ್ಯ ಮನಸ್ಸುಗಳು ಕೆಳಗೆ ನೀಡಿರುವ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ದಿನಾಂಕ 15-10-2022 ರೊಳಗೆ ನೋಂದಣಿಯಾಗಬಹುದು” ಎಂದು ಕೆಲವರು ಸಂಪರ್ಕ ಸಂಖ್ಯೆಯನ್ನು ನೀಡಲಾಗಿದೆ.

ಮುಖ್ಯವಾಗಿ ಸ್ಥಳೀಯರಲ್ಲದವರು ಸ್ವಾಗತ ಸಮಿತಿಯಲ್ಲಿದ್ದಾರೆ. ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಸಾಹಿತಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ, ಸಂಚಾಲಕರಾಗಿ ಕವಿ ಬಿ.ಆರ್.ಲಕ್ಷ್ಮಣರಾವ್, ಪತ್ರಕರ್ತ ಜೋಗಿ, ಕಾರ್ಯದರ್ಶಿಯಾಗಿ ಜಿಲ್ಲಾ ಕಸಾಪ ಅಧ್ಯಕ್ಷರಾದ ಡಾ.ಎಚ್.ಎಲ್.ಮಲ್ಲೇಶಗೌಡ ಇದ್ದಾರೆ.

‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ‘ಜೇನುಗಿರಿ’ ಪತ್ರಿಕೆ ಸಂಪಾದಕರಾದ ಚಲಂ ಹಾಡ್ಲಹಳ್ಳಿ, “ಹಾಸನ ಜಿಲ್ಲೆಯನ್ನು ಪ್ರತಿನಿಧಿಸುವಂತೆ ಪ್ರತಿವರ್ಷ ಹೊಯ್ಸಳ ಉತ್ಸವ ನಡೆಯುತ್ತಿತ್ತು. ಆದರೆ ಕೆಲವು ವರ್ಷಗಳಿಂದ ಈ ಕಾರ್ಯಕ್ರಮ ಆಯೋಜನೆಯಾಗಿಲ್ಲ. ಹೊಯ್ಸಳ ಸಾಹಿತ್ಯೋತ್ಸವವು ಹೊಯ್ಸಳ ಉತ್ಸವದ ನೆರಳಿನಂತೆ ಕಾಣುತ್ತಿದೆ. ಅಥವಾ ಹೊಯ್ಸಳ ಉತ್ಸವವನ್ನು ನಡೆಸದಿದ್ದರೂ ಆಗುತ್ತದೆ. ಇದನ್ನೇ ತೋರಿಸಿ ಸರ್ಕಾರ ನುಣುಚಿಕೊಳ್ಳಲೂ ಸಾಧ್ಯವಿದೆ. ಹೀಗಿರುವಾಗ ಸ್ಥಳೀಯರಿಗೆ ಅವಕಾಶ ನೀಡಬೇಕಿತ್ತು. ಸ್ವಾಗತ ಸಮಿತಿಯಲ್ಲೂ ಹೊರಗಿನವರೇ ಇದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

“ಹೊಯ್ಸಳ ಎಂಬುದೇ ಒಂದು ಪ್ರಾದೇಶಿಕತೆಯನ್ನು ಬಿಂಬಿಸುತ್ತದೆ. ಕರಾವಳಿ ಉತ್ಸವ, ಹಂಪಿ ಉತ್ಸವ, ಹೊಯ್ಸಳ ಉತ್ಸವ- ಇವುಗಳಿಗೆಲ್ಲ ವ್ಯತ್ಯಾಸಗಳಿರುತ್ತವೆ. ಈ ನಿಟ್ಟಿನಲ್ಲಿ ಪ್ರಾತಿನಿಧಿಕತೆಯ ಪ್ರಶ್ನೆ ಬರುತ್ತದೆ. ಎಚ್.ಎಸ್.ವೆಂಕಟೇಶಮೂರ್ತಿ, ಬಿ.ಆರ್‌.ಲಕ್ಷ್ಮಣರಾವ್, ಜೋಗಿ ಇವರೆಲ್ಲ ಹಾಸನವನ್ನು ಹೇಗೆ ಪ್ರತಿನಿಧಿಸಬಲ್ಲರು? ಅತಿಥಿಗಳಾಗಿ ಬಂದಿದ್ದರೆ ಪ್ರಶ್ನೆ ಉದ್ಭವಿಸುತ್ತಿರಲಿಲ್ಲ. ಕಾರ್ಯಕ್ರಮ ಹೇಗಿರಬೇಕೆಂದು ನಿರ್ಧರಿಸುವವರೇ ಹೊರಗಿನವರಾಗಿರುವುದು ಎಷ್ಟು ಸರಿ? ಸಕಲೇಶಪುರ ಭಾಗದ ಕಾಡಿನ ಸಮಸ್ಯೆ ಇವರಿಗೆ ಗೊತ್ತಿದೆಯೇ? ಚನ್ನರಾಯಪಟ್ಟಣ ಭಾಗದ ತೆಂಗಿನ ಸಮಸ್ಯೆ ಗೊತ್ತಿದೆಯೇ? ಅರಕಲಗೂಡು ಭಾಗದ ತಂಬಾಕಿನ ಸಮಸ್ಯೆ ಗೊತ್ತಿದೆಯೇ? ಈ ಅಂಶಗಳನ್ನು ತಿರಸ್ಕರಿಸಿ ‘ಇದು ಶುದ್ಧಸಾಹಿತ್ಯ ಸಮ್ಮೇಳನ’ ಎಂದು ಕರೆಯುತ್ತಿದ್ದಾರೆಂದು ತಿಳಿದುಬಂದಿದೆ” ಎಂದು ವಿಷಾದಿಸಿದರು.

“ಹಾಸನ ಜಿಲ್ಲಾ ಕಸಾಪವು ಖಾಸಗಿ ಸಂಸ್ಥೆಯಂತೆ ವರ್ತಿಸುತ್ತಿದೆ” ಎಂದು ಸ್ಥಳೀಯ ನಿವಾಸಿ, ಲೇಖಕ ಕೊಟ್ರೇಶ್ ತಂಬ್ರಳ್ಳಿ ಆಕ್ಷೇಪ ವ್ಯಕ್ತಪಡಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. “ಕನ್ನಡ ಸಾಹಿತ್ಯ ಪರಿಷತ್ತನ್ನು ಹುಟ್ಟುಹಾಕಿದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರಿಗೆ ಅನೇಕ ಕನಸುಗಳಿದ್ಧವು. ಶ್ರೀಸಾಮಾನ್ಯನೂ ಸಾಹಿತ್ಯ ಕೈಂಕರ್ಯದಲ್ಲಿ ಭಾಗವಹಿಸಬೇಕು ಎಂಬ ಆಶಯ ಇತ್ತು. ಜಿಲ್ಲಾ ಮತ್ತು ತಾಲೂಕು ಘಟಕಗಳು ಇರುವುದೇ ಸ್ಥಳೀಯವಾಗಿಯೂ ಕೂಡ ಪರಿಷತ್ತು ಕಾರ್ಯೋನ್ಮುಖವಾಗಿ ಇರಬೇಕೆಂದು. ಹೊಯ್ಸಳ ಸಾಹಿತ್ಯೋತ್ಸವದಲ್ಲಿ ಹಾಸನದ ಕವಿ, ಲೇಖಕ, ಕಲಾವಿದರಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಕ್ಕಿಲ್ಲ” ಎಂದು ಆರೋಪಿಸಿದ್ದಾರೆ.

“ಕಾರ್ಯಕ್ರಮದಲ್ಲಿ ಭಾಗವಹಿಸಲು ಕಡ್ಡಾಯವಾಗಿ ನೋಂದಣಿಯಾಗಿರಬೇಕೆಂದು ಸೂಚಿಸಲಾಗಿದೆ. 250 ರೂಪಾಯಿ ಶುಲ್ಕವನ್ನು ವಿಧಿಸಲಾಗಿದೆ. ಹಾಗಾದರೆ ಖಾಸಗಿ ಸಂಸ್ಥೆಗಳಿಗೂ ಕನ್ನಡ ನಾಡಿನ ಜನರ ಧ್ವನಿಯಾಗಿರುವ ಪರಿಷತ್ತಿಗೂ ಏನು ವ್ಯತ್ಯಾಸ? ನೋಂದಣಿ ಮಾಡಿಕೊಳ್ಳುವುದು ಸರಿ. ಆದರೆ 500-550 ಜನರ ಮಿತಿ ಏತಕ್ಕೆ?” ಎಂದು ಪ್ರಶ್ನಿಸಿದ್ದಾರೆ.

“ಈವೆಂಟ್ ಮ್ಯಾನ್ಮೇಜ್ಮೆಂಟ್‌ಗಳ ಕೈಯಲ್ಲಿ ಇವತ್ತು ಪರಿಷತ್ತು ಸಿಲುಕಿದೆ. ಜನಸಾಮಾನ್ಯರಿಂದ ದೂರ ಇರುವ ಸಾಹಿತ್ಯ ಪರಿಷತ್ತು ನಮ್ಮ ಜನಗಳಿಗೆ ಅವಶ್ಯ ಇದೆಯಾ?” ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲ್ಲ: ಜನಾಕ್ರೋಶದ ಬಳಿಕ ಹಿಂದೆ ಸರಿದ ಕಸಾಪ

ಈಗ ಉಂಟಾಗಿರುವ ಗೊಂದಲಗಳಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾ’ಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಕಸಾಪ ಅಧ್ಯಕ್ಷರಾದ ಡಾ.ಎಚ್‌.ಎಲ್.ಮಲ್ಲೇಶ್‌ಗೌಡ, “ಕಾರ್ಯಕ್ರಮದಲ್ಲಿ ಸುಮಾರು 750 ಜನರಿಗೆ ಅವಕಾಶ ಕಲ್ಪಿಸಲಾಗುತ್ತಿದೆ. 250 ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರವೇಶವಿರುತ್ತದೆ. ಆಸಕ್ತರು ಮಾತ್ರ ಪಾಲ್ಗೊಳ್ಳಲಿ ಎಂದು ನೋಂದಣಿ ಹಾಗೂ ಪ್ರವೇಶ ಶುಲ್ಕ ವಿಧಿಸಿದ್ದೇವೆ. ಕಾರ್ಯಕ್ರಮಕ್ಕೆ ಬಂದು ಮಧ್ಯೆದಲ್ಲೇ ಎದ್ದುಹೋಗುವವರು ಇರುತ್ತಾರೆ. ಇದನ್ನು ತಪ್ಪಿಸಲೆಂದು ಶುಲ್ಕ ವಿಧಿಸುತ್ತಿದ್ದೇವೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇಳೆಯೂ ಹೀಗೆಯೇ ನೋಂದಣಿ ನಡೆಯುತ್ತದೆ” ಎಂದು ಸಮರ್ಥಿಸಿಕೊಂಡರು.

“ಇದು ರಾಜ್ಯಮಟ್ಟದ ಕಾರ್ಯಕ್ರಮವಾಗಿದ್ದು, ಹೀಗಾಗಿ ಸ್ಥಳೀಯ ಸಾಹಿತಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಿಲ್ಲ. ಹೊಯ್ಸಳ ಸಾಹಿತ್ಯೋತ್ಸವವಲ್ಲದೆ ಜಿಲ್ಲಾ ಸಾಹಿತ್ಯ ಸಮ್ಮೇಳನವೂ ನಡೆಯಲಿದೆ. ಅಲ್ಲಿ ಸ್ಥಳೀಯರಿಗೆ ಅವಕಾಶಗಳನ್ನು ಕಲ್ಪಿಸಲಾಗುತ್ತದೆ” ಎಂದು ಸ್ಪಷ್ಟಪಡಿಸಿದರು.

“ಲಿಂಗದೇವರು ಹಳೆಮನೆಯವರ ಹೆಸರು ಕಣ್ತಪ್ಪಿನಿಂದ ಸೇರಿದೆ. ಚಲನಚಿತ್ರ ನಿರ್ದೇಶಕ ‘ಬಿ.ಎಸ್.ಲಿಂಗದೇವರು’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿ.ಎಸ್‌.ಲಿಂಗದೇವರು ಎಂಬುದು ‘ಲಿಂಗದೇವರು ಹಳೆಮನೆ’ ಎಂದಾಗಿದೆ. ಅಧಿಕೃತವಲ್ಲದ ಪಿಡಿಎಫ್‌ ಪ್ರತಿ ಹರಿದಾಡಿದೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಬಿ.ಎಸ್.ಲಿಂಗದೇವರು ಎಂದು ತಿದ್ದಲಾಗಿದೆ” ಎಂದು ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....