Homeಕರ್ನಾಟಕಹಾಸನ: ಹೊಯ್ಸಳ ಸಾಹಿತ್ಯೋತ್ಸವ ಪ್ರವೇಶಕ್ಕೆ 250 ರೂ. ಶುಲ್ಕ; ತೀರಿಹೋಗಿರುವ ರಂಗಕರ್ಮಿ ವಿಶೇಷ ಅತಿಥಿ!

ಹಾಸನ: ಹೊಯ್ಸಳ ಸಾಹಿತ್ಯೋತ್ಸವ ಪ್ರವೇಶಕ್ಕೆ 250 ರೂ. ಶುಲ್ಕ; ತೀರಿಹೋಗಿರುವ ರಂಗಕರ್ಮಿ ವಿಶೇಷ ಅತಿಥಿ!

‘ಹೊಯ್ಸಳ ಸಾಹಿತ್ಯೋತ್ಸವ’ ಎಂದು ಹೆಸರಿರುವ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲೆಯವರಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ ಎಂಬ ಆರೋಪ ಬಂದಿದೆ. ‘ಶುದ್ಧ ಸಾಹಿತ್ಯ’ದ ಕಮಟು ಕೂಡ ಬರಲಾರಂಭಿಸಿದೆ.

- Advertisement -
- Advertisement -

ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಕ್ಟೋಬರ್‌ 22, 23ರಂದು ಹಾಸನದಲ್ಲಿ ಆಯೋಜಿಸಲಾಗಿರುವ ‘ಹೊಯ್ಸಳ ಸಾಹಿತ್ಯೋತ್ಸವ’ ಪ್ರವೇಶಕ್ಕೆ 250 ರೂ. ಶುಲ್ಕವನ್ನು ವಿಧಿಸಲಾಗಿದೆ. ಜನಸಾಮಾನ್ಯರ ಪರವಾಗಿರಬೇಕಿದ್ದ ಕಸಾಪ, ಖಾಸಗಿ ಸಂಸ್ಥೆಯಂತೆ ಶುಲ್ಕ ವಿಧಿಸಿದೆ ಎಂಬ ಟೀಕೆಗಳು ಬಂದಿವೆ. ಜೊತೆಗೆ ಸ್ಥಳೀಯ ಪ್ರಾತಿನಿಧ್ಯವನ್ನು ಕಡೆಗಣಿಸಿ ಕಾರ್ಯಕ್ರಮ ಆಯೋಜಿಸಿರುವ ಕುರಿತು ಆಕ್ಷೇಪಗಳು ವ್ಯಕ್ತವಾಗುತ್ತಿವೆ.

ಶುಲ್ಕ ವಿಧಿಸಿರುವುದಷ್ಟೇ ಅಲ್ಲದೇ ತೀರಿ ಹೋಗಿರುವ ರಂಗಕರ್ಮಿ, ಮೈಸೂರು ರಂಗಾಯಣದ ಮಾಜಿ ನಿರ್ದೇಶಕರಾದ ಲಿಂಗದೇವರು ಹಳೆಮನೆಯವರ ಹೆಸರನ್ನೂ ವಿಶೇಷ ಆಹ್ವಾನಿತರ ಪಟ್ಟಿಯಲ್ಲಿ ಸೇರಿಸಲಾಗಿದೆ. ವಾಟ್ಸ್‌ಅಪ್‌ನಲ್ಲಿ ಹರಿದಾಡಿರುವ ಸಂದೇಶಗಳಲ್ಲಿ ‘ಶುದ್ಧ ಸಾಹಿತ್ಯ’ ಎಂಬ ಪದವೂ ಸೇರಿರುವುದು ಗೊಂದಲ ಮೂಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾಹಿತ್ಯ ಪರಿಷತ್‌ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ, “ಹಾಸನ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನಪೀಠ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ವಹಿಸಲಿದ್ದಾರೆ. ಸಾಹಿತ್ಯಲೋಕದ ಪ್ರಮುಖ ಹಿರಿಯ, ಕಿರಿಯ ದಿಗ್ಗಜ ಕವಿಗಳು, ಸಾಹಿತಿಗಳು, ವಿಮರ್ಶಕರು ಹಾಗೂ ವಿದ್ವಾಂಸರು ಈ ಸಾಹಿತ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಐತಿಹಾಸಿಕವಾದ ಸಾಹಿತ್ಯೋತ್ಸವಕ್ಕೆ ಕೇವಲ 500 ಜನರಿಗೆ ಮಾತ್ರ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಹಾಸನ ಜಿಲ್ಲೆಯ ಆಸಕ್ತ ಸಾಹಿತ್ಯ ಮನಸ್ಸುಗಳು ಕೆಳಗೆ ನೀಡಿರುವ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ದಿನಾಂಕ 15-10-2022 ರೊಳಗೆ ನೋಂದಣಿಯಾಗಬಹುದು” ಎಂದು ಕೆಲವರು ಸಂಪರ್ಕ ಸಂಖ್ಯೆಯನ್ನು ನೀಡಲಾಗಿದೆ.

ಮುಖ್ಯವಾಗಿ ಸ್ಥಳೀಯರಲ್ಲದವರು ಸ್ವಾಗತ ಸಮಿತಿಯಲ್ಲಿದ್ದಾರೆ. ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಸಾಹಿತಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ, ಸಂಚಾಲಕರಾಗಿ ಕವಿ ಬಿ.ಆರ್.ಲಕ್ಷ್ಮಣರಾವ್, ಪತ್ರಕರ್ತ ಜೋಗಿ, ಕಾರ್ಯದರ್ಶಿಯಾಗಿ ಜಿಲ್ಲಾ ಕಸಾಪ ಅಧ್ಯಕ್ಷರಾದ ಡಾ.ಎಚ್.ಎಲ್.ಮಲ್ಲೇಶಗೌಡ ಇದ್ದಾರೆ.

‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ‘ಜೇನುಗಿರಿ’ ಪತ್ರಿಕೆ ಸಂಪಾದಕರಾದ ಚಲಂ ಹಾಡ್ಲಹಳ್ಳಿ, “ಹಾಸನ ಜಿಲ್ಲೆಯನ್ನು ಪ್ರತಿನಿಧಿಸುವಂತೆ ಪ್ರತಿವರ್ಷ ಹೊಯ್ಸಳ ಉತ್ಸವ ನಡೆಯುತ್ತಿತ್ತು. ಆದರೆ ಕೆಲವು ವರ್ಷಗಳಿಂದ ಈ ಕಾರ್ಯಕ್ರಮ ಆಯೋಜನೆಯಾಗಿಲ್ಲ. ಹೊಯ್ಸಳ ಸಾಹಿತ್ಯೋತ್ಸವವು ಹೊಯ್ಸಳ ಉತ್ಸವದ ನೆರಳಿನಂತೆ ಕಾಣುತ್ತಿದೆ. ಅಥವಾ ಹೊಯ್ಸಳ ಉತ್ಸವವನ್ನು ನಡೆಸದಿದ್ದರೂ ಆಗುತ್ತದೆ. ಇದನ್ನೇ ತೋರಿಸಿ ಸರ್ಕಾರ ನುಣುಚಿಕೊಳ್ಳಲೂ ಸಾಧ್ಯವಿದೆ. ಹೀಗಿರುವಾಗ ಸ್ಥಳೀಯರಿಗೆ ಅವಕಾಶ ನೀಡಬೇಕಿತ್ತು. ಸ್ವಾಗತ ಸಮಿತಿಯಲ್ಲೂ ಹೊರಗಿನವರೇ ಇದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

“ಹೊಯ್ಸಳ ಎಂಬುದೇ ಒಂದು ಪ್ರಾದೇಶಿಕತೆಯನ್ನು ಬಿಂಬಿಸುತ್ತದೆ. ಕರಾವಳಿ ಉತ್ಸವ, ಹಂಪಿ ಉತ್ಸವ, ಹೊಯ್ಸಳ ಉತ್ಸವ- ಇವುಗಳಿಗೆಲ್ಲ ವ್ಯತ್ಯಾಸಗಳಿರುತ್ತವೆ. ಈ ನಿಟ್ಟಿನಲ್ಲಿ ಪ್ರಾತಿನಿಧಿಕತೆಯ ಪ್ರಶ್ನೆ ಬರುತ್ತದೆ. ಎಚ್.ಎಸ್.ವೆಂಕಟೇಶಮೂರ್ತಿ, ಬಿ.ಆರ್‌.ಲಕ್ಷ್ಮಣರಾವ್, ಜೋಗಿ ಇವರೆಲ್ಲ ಹಾಸನವನ್ನು ಹೇಗೆ ಪ್ರತಿನಿಧಿಸಬಲ್ಲರು? ಅತಿಥಿಗಳಾಗಿ ಬಂದಿದ್ದರೆ ಪ್ರಶ್ನೆ ಉದ್ಭವಿಸುತ್ತಿರಲಿಲ್ಲ. ಕಾರ್ಯಕ್ರಮ ಹೇಗಿರಬೇಕೆಂದು ನಿರ್ಧರಿಸುವವರೇ ಹೊರಗಿನವರಾಗಿರುವುದು ಎಷ್ಟು ಸರಿ? ಸಕಲೇಶಪುರ ಭಾಗದ ಕಾಡಿನ ಸಮಸ್ಯೆ ಇವರಿಗೆ ಗೊತ್ತಿದೆಯೇ? ಚನ್ನರಾಯಪಟ್ಟಣ ಭಾಗದ ತೆಂಗಿನ ಸಮಸ್ಯೆ ಗೊತ್ತಿದೆಯೇ? ಅರಕಲಗೂಡು ಭಾಗದ ತಂಬಾಕಿನ ಸಮಸ್ಯೆ ಗೊತ್ತಿದೆಯೇ? ಈ ಅಂಶಗಳನ್ನು ತಿರಸ್ಕರಿಸಿ ‘ಇದು ಶುದ್ಧಸಾಹಿತ್ಯ ಸಮ್ಮೇಳನ’ ಎಂದು ಕರೆಯುತ್ತಿದ್ದಾರೆಂದು ತಿಳಿದುಬಂದಿದೆ” ಎಂದು ವಿಷಾದಿಸಿದರು.

“ಹಾಸನ ಜಿಲ್ಲಾ ಕಸಾಪವು ಖಾಸಗಿ ಸಂಸ್ಥೆಯಂತೆ ವರ್ತಿಸುತ್ತಿದೆ” ಎಂದು ಸ್ಥಳೀಯ ನಿವಾಸಿ, ಲೇಖಕ ಕೊಟ್ರೇಶ್ ತಂಬ್ರಳ್ಳಿ ಆಕ್ಷೇಪ ವ್ಯಕ್ತಪಡಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. “ಕನ್ನಡ ಸಾಹಿತ್ಯ ಪರಿಷತ್ತನ್ನು ಹುಟ್ಟುಹಾಕಿದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರಿಗೆ ಅನೇಕ ಕನಸುಗಳಿದ್ಧವು. ಶ್ರೀಸಾಮಾನ್ಯನೂ ಸಾಹಿತ್ಯ ಕೈಂಕರ್ಯದಲ್ಲಿ ಭಾಗವಹಿಸಬೇಕು ಎಂಬ ಆಶಯ ಇತ್ತು. ಜಿಲ್ಲಾ ಮತ್ತು ತಾಲೂಕು ಘಟಕಗಳು ಇರುವುದೇ ಸ್ಥಳೀಯವಾಗಿಯೂ ಕೂಡ ಪರಿಷತ್ತು ಕಾರ್ಯೋನ್ಮುಖವಾಗಿ ಇರಬೇಕೆಂದು. ಹೊಯ್ಸಳ ಸಾಹಿತ್ಯೋತ್ಸವದಲ್ಲಿ ಹಾಸನದ ಕವಿ, ಲೇಖಕ, ಕಲಾವಿದರಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಕ್ಕಿಲ್ಲ” ಎಂದು ಆರೋಪಿಸಿದ್ದಾರೆ.

“ಕಾರ್ಯಕ್ರಮದಲ್ಲಿ ಭಾಗವಹಿಸಲು ಕಡ್ಡಾಯವಾಗಿ ನೋಂದಣಿಯಾಗಿರಬೇಕೆಂದು ಸೂಚಿಸಲಾಗಿದೆ. 250 ರೂಪಾಯಿ ಶುಲ್ಕವನ್ನು ವಿಧಿಸಲಾಗಿದೆ. ಹಾಗಾದರೆ ಖಾಸಗಿ ಸಂಸ್ಥೆಗಳಿಗೂ ಕನ್ನಡ ನಾಡಿನ ಜನರ ಧ್ವನಿಯಾಗಿರುವ ಪರಿಷತ್ತಿಗೂ ಏನು ವ್ಯತ್ಯಾಸ? ನೋಂದಣಿ ಮಾಡಿಕೊಳ್ಳುವುದು ಸರಿ. ಆದರೆ 500-550 ಜನರ ಮಿತಿ ಏತಕ್ಕೆ?” ಎಂದು ಪ್ರಶ್ನಿಸಿದ್ದಾರೆ.

“ಈವೆಂಟ್ ಮ್ಯಾನ್ಮೇಜ್ಮೆಂಟ್‌ಗಳ ಕೈಯಲ್ಲಿ ಇವತ್ತು ಪರಿಷತ್ತು ಸಿಲುಕಿದೆ. ಜನಸಾಮಾನ್ಯರಿಂದ ದೂರ ಇರುವ ಸಾಹಿತ್ಯ ಪರಿಷತ್ತು ನಮ್ಮ ಜನಗಳಿಗೆ ಅವಶ್ಯ ಇದೆಯಾ?” ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲ್ಲ: ಜನಾಕ್ರೋಶದ ಬಳಿಕ ಹಿಂದೆ ಸರಿದ ಕಸಾಪ

ಈಗ ಉಂಟಾಗಿರುವ ಗೊಂದಲಗಳಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾ’ಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಕಸಾಪ ಅಧ್ಯಕ್ಷರಾದ ಡಾ.ಎಚ್‌.ಎಲ್.ಮಲ್ಲೇಶ್‌ಗೌಡ, “ಕಾರ್ಯಕ್ರಮದಲ್ಲಿ ಸುಮಾರು 750 ಜನರಿಗೆ ಅವಕಾಶ ಕಲ್ಪಿಸಲಾಗುತ್ತಿದೆ. 250 ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರವೇಶವಿರುತ್ತದೆ. ಆಸಕ್ತರು ಮಾತ್ರ ಪಾಲ್ಗೊಳ್ಳಲಿ ಎಂದು ನೋಂದಣಿ ಹಾಗೂ ಪ್ರವೇಶ ಶುಲ್ಕ ವಿಧಿಸಿದ್ದೇವೆ. ಕಾರ್ಯಕ್ರಮಕ್ಕೆ ಬಂದು ಮಧ್ಯೆದಲ್ಲೇ ಎದ್ದುಹೋಗುವವರು ಇರುತ್ತಾರೆ. ಇದನ್ನು ತಪ್ಪಿಸಲೆಂದು ಶುಲ್ಕ ವಿಧಿಸುತ್ತಿದ್ದೇವೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇಳೆಯೂ ಹೀಗೆಯೇ ನೋಂದಣಿ ನಡೆಯುತ್ತದೆ” ಎಂದು ಸಮರ್ಥಿಸಿಕೊಂಡರು.

“ಇದು ರಾಜ್ಯಮಟ್ಟದ ಕಾರ್ಯಕ್ರಮವಾಗಿದ್ದು, ಹೀಗಾಗಿ ಸ್ಥಳೀಯ ಸಾಹಿತಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಿಲ್ಲ. ಹೊಯ್ಸಳ ಸಾಹಿತ್ಯೋತ್ಸವವಲ್ಲದೆ ಜಿಲ್ಲಾ ಸಾಹಿತ್ಯ ಸಮ್ಮೇಳನವೂ ನಡೆಯಲಿದೆ. ಅಲ್ಲಿ ಸ್ಥಳೀಯರಿಗೆ ಅವಕಾಶಗಳನ್ನು ಕಲ್ಪಿಸಲಾಗುತ್ತದೆ” ಎಂದು ಸ್ಪಷ್ಟಪಡಿಸಿದರು.

“ಲಿಂಗದೇವರು ಹಳೆಮನೆಯವರ ಹೆಸರು ಕಣ್ತಪ್ಪಿನಿಂದ ಸೇರಿದೆ. ಚಲನಚಿತ್ರ ನಿರ್ದೇಶಕ ‘ಬಿ.ಎಸ್.ಲಿಂಗದೇವರು’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿ.ಎಸ್‌.ಲಿಂಗದೇವರು ಎಂಬುದು ‘ಲಿಂಗದೇವರು ಹಳೆಮನೆ’ ಎಂದಾಗಿದೆ. ಅಧಿಕೃತವಲ್ಲದ ಪಿಡಿಎಫ್‌ ಪ್ರತಿ ಹರಿದಾಡಿದೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಬಿ.ಎಸ್.ಲಿಂಗದೇವರು ಎಂದು ತಿದ್ದಲಾಗಿದೆ” ಎಂದು ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...