Homeಕರ್ನಾಟಕಹಾಸನ : ಏಳರಲ್ಲಿ ನಾಲ್ಕು ಜೆಡಿಎಸ್ ಎರಡು ಬಿಜೆಪಿ ಒಂದು ಕಾಂಗ್ರೆಸ್

ಹಾಸನ : ಏಳರಲ್ಲಿ ನಾಲ್ಕು ಜೆಡಿಎಸ್ ಎರಡು ಬಿಜೆಪಿ ಒಂದು ಕಾಂಗ್ರೆಸ್

- Advertisement -
- Advertisement -

ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ 4ರಲ್ಲಿ ಜೆಡಿಎಸ್, 2 ಬಿಜೆಪಿ ಮತ್ತು ಕಾಂಗ್ರೆಸ್‌ ಒಂದು ಸ್ಥಾನ ಪಡೆದುಕೊಂಡಿದೆ. ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ವಿಧಾನಸಭಾ ಚುನಾವನಾ ಕ್ಷೇತ್ರದಲ್ಲಿ ಜೆಡಿಎಸ್ ನ ಸ್ವರೂಪ್ ಪ್ರಕಾಶ್ 8 ಸಾವಿರ ಮತಗಳಿಂದ ಪ್ರೀತಮ್‌ಗೌಡ ವಿರುದ್ದ ಗೆಲುವು‌ ಸಾಧಿಸಿದ್ದಾರೆ.

ಹಾಸನ ಜಿಲ್ಲೆಯ ಕ್ಷೇತ್ರವಾರು ವಿವರ:

1) ಹಾಸನ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,23,021, ಪುರುಷ ಮತದಾರರು: 1,10,153, ಮಹಿಳಾ ಮತದಾರರು: 1,12,857.

2018ರ ವಿಜೇತರು: ಪ್ರೀತಂ ಗೌಡ (ಬಿಜೆಪಿ),

2023 ರ ಅಭ್ಯರ್ಥಿಗಳು;
ಸ್ವರೂಪ್ ಪ್ರಕಾಶ್ – ಜೆಡಿಎಸ್ – 85176
ಪ್ರೀತಂಗೌಡ – ಬಿಜೆಪಿ – 77322
ಕಾಂಗ್ರೆಸ್ – ಬನವಾಸೆ ರಂಗಸ್ವಾಮಿ 4305
ಆಪ್ – ಅಗಿಲೆ ಯೋಗೇಶ್ 1301

ಗೆಲುವಿನ ಅಂತರ – 7854

2) ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವಿವರ

ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ 5 ಬಾರಿ ಜೆಡಿಎಸ್ ಗೆದ್ದಿದ್ದರೆ, ಕಾಂಗ್ರೆಸ್ 4 ಬಾರಿ ಗೆದ್ದಿದೆ. ಈ  ಹಿಂದೆ ಶ್ರೀಕಂಠಯ್ಯನವರ ಕಾಲದಲ್ಲಿ ಕ್ಷೇತ್ರದಲ್ಲಿ ಹಿಡಿತ ಕಾಂಗ್ರೆಸ್ ಹಿಡಿತ ಸಾಧಿಸಿತ್ತು. ಆದರೆ ನಂತರದಲ್ಲಿ ಜೆಡಿಎಸ್ ಸತತವಾಗಿ ಗೆಲುವಿನಿಂದ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು. ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಸಿ.ಎನ್ ಬಾಲಕೃಷ್ಣ 50ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿಯೂ ಜೆಡಿಎಸ್‌ನ ಸಿ.ಎನ್ ಬಾಲಕೃಷ್ಣ ಕಾಂಗ್ರೆಸ್ ಅಭ್ಯರ್ಥಿ ಎಂ.ಎ.ಗೋಪಾಲಸ್ವಾಮಿ ವಿರುದ್ದ ಗೆಲುವು ಸಾಧಿಸಿದ್ದಾರೆ.

ಒಟ್ಟು ಮತದಾರರು: 2,03,026, ಪುರುಷ ಮತದಾರರು: 1,00,604, ಮಹಿಳಾ ಮತದಾರರು: 1,02,419.

2023ರ ಅಭ್ಯರ್ಥಿಗಳು:

ಜೆಡಿಎಸ್ – ಸಿ.ಎನ್.ಬಾಲಕೃಷ್ಣ – 85668
ಕಾಂಗ್ರೆಸ್ – ಎಂ.ಎ.ಗೋಪಾಲಸ್ವಾಮಿ – 79023
ಬಿಜೆಪಿ – ಚಿದಾನಂದ್ – 5648

ಗೆಲುವಿನ ಅಂತರ – 6645

3) ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ವಿವರ

ಒಳಗೂ ಹೊಳೆ ಹೊರಗೂ ಹೊಳೆ ಎಂಬ ಮಾತು ಹೊಳೆನರಸೀಪುರಕ್ಕೆ ಅನ್ವರ್ಥದಂತಿದೆ. ಜೆಡಿಎಸ್‌ನ ಭದ್ರಕೋಟೆ ಎಂದು ಹೆಸರಾಗಿರುವ ಹೊಳೆನರಸೀಪುರದಲ್ಲಿ ಈ ಬಾರಿಯ 2023ರ ವಿಧಾನಸಭಾ ಚುನಾವಣೆಯಲ್ಲಿ ಹೊಳೆಸರಸೀಪುರ ಕ್ಷೇತ್ರದ ಜನ ಹೆಚ್‌.ಡಿ.ರೇವಣ್ಣ ಅವರಿಗೆ ಒಳೇಟು ನೀಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಮತ್ತೊಮ್ಮೆ ಹೆಚ್‌.ಡಿ.ರೇವಣ್ಣ ಶ್ರೇಯಸ್‌ ಪಾಟೇಲ್ ವಿರುದ್ದ ಗೆಲುವಿನ ನಗೆ ಬೀರಿದ್ದಾರೆ.

ಒಟ್ಟು ಮತದಾರರು: 2,18,097, ಪುರುಷ ಮತದಾರರು: 1,09,187, ಮಹಿಳಾ ಮತದಾರರು: 1,08,900.

2018ರ ವಿಜೇತರು: ಎಚ್‌.ಡಿ. ರೇವಣ್ಣ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಜೆಡಿಎಸ್ – ಹೆಚ್.ಡಿ.ರೇವಣ್ಣ – 86401
ಕಾಂಗ್ರೆಸ್ – ಶ್ರೇಯಸ್ ಪಟೇಲ್ – 83747
ಬಿಜೆಪಿ – ದೇವರಾಜೇಗೌಡ – 4666

ಗೆಲುವಿನ ಅಂತರ – 2654

4) ಅರಕಲಗೂಡು ವಿಧಾನಸಭಾ ಕ್ಷೇತ್ರದ ವಿವರ

ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಬದಲಾದ ಚುನಾವಣಾ ಕಣದಲ್ಲಿ ಜೆಡಿಎಸ್‌ ನ ರಾಮಸ್ವಾಮಿ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರಿದ ಬಳಿಕ, ವಿರೋಧಿ ಪಾಳೆಯದಲ್ಲಿದ್ದ ಎ.ಮಂಜು ಬಿಜೆಪಿ ತೊರೆದು ಮತ್ತೆ ಜೆಡಿಎಸ್ ಸೇರಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿ 2023ರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಮತ್ತೆ ಅರಕಲಗೂಡು ಕ್ಷೇತ್ರದ ಮತದಾರರು ಮತ್ತೆ ಜೆಡಿಎಸ್‌ನ ಕೈ ಹಿಡಿದಿದ್ದಾರೆ.

ಒಟ್ಟು ಮತದಾರರು: 2,25,746, ಪುರುಷ ಮತದಾರರು: 1,15,558, ಮಹಿಳಾ ಮತದಾರರು: 1,10,185.

2018ರ ವಿಜೇತರು: ಎ.ಟಿ. ರಾಮಸ್ವಾಮಿ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಜೆಡಿಎಸ್ – ಎ.ಮಂಜು – 67499
ಪಕ್ಷೇತರ – ಕೃಷ್ಣೇಗೌಡ – 48620
ಕಾಂಗ್ರೆಸ್ – ಶ್ರೀಧರ್ ಗೌಡ – 33084
ಬಿಜೆಪಿ – ಯೋಗಾರಮೇಶ್ – 18477

ಗೆಲುವಿನ ಅಂತರ – 18,879

5) ಸಕಲೇಶಪುರ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,03,631, ಪುರುಷ ಮತದಾರರು: 1,01,582, ಮಹಿಳಾ ಮತದಾರರು: 1,02,044.

2018ರ ವಿಜೇತರು: ಎಚ್.ಕೆ. ಕುಮಾರಸ್ವಾಮಿ (ಜೆಡಿಎಸ್‌),

2023 ರ ಅಭ್ಯರ್ಥಿಗಳು:

ಬಿಜೆಪಿ – ಸಿಮೆಂಟ್ ಮಂಜು – 58604
ಜೆಡಿಎಸ್ – ಹೆಚ್.ಕೆ.ಕುಮಾರಸ್ವಾಮಿ – 56548
ಕಾಂಗ್ರೆಸ್ – ಮುರುಳಿಮೋಹನ್ – 42811

ಗೆಲುವಿನ ಅಂತರ – 2056

6) ಅರಸೀಕೆರೆ ವಿಧಾನಸಭಾ ಕ್ಷೇತ್ರದ ವಿವರ

ಅರಸೀಕೆರೆ ಕ್ಷೇತ್ರದಲ್ಲಿ ಶಿಲಿಂಗೇಗೌಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಬಿಗ್ ಶಾಕ್ ನೀಡಿದ್ದರು, ಕ್ಷೇತ್ರದಲ್ಲಿ ಬಿಗಿ ಹಿಡಿತ ಹೊಂದಿದ್ದ ಶಿವಲಿಂಗೇಗೌಡ 2023ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಟಿಕೆಟ್ ವಂಚಿತ ಅಭ್ಯರ್ಥಿ ಸಂತೋಷ್ ಅವರಿಗೆ ಜೆಡಿಎಸ್ ಟಿಕೆಟ್ ನೀಡಿತ್ತು, ಆದರೆ ಸಂತೋಷ್ ಸೋಲು ಕಂಡಿದ್ದಾರೆ.

ಒಟ್ಟು ಮತದಾರರು: 2,14,020, ಪುರುಷ ಮತದಾರರು: 1,06,476, ಮಹಿಳಾ ಮತದಾರರು: 1,07,540.

2018ರ ವಿಜೇತರು: ಕೆ.ಎಂ. ಶಿವಲಿಂಗೇಗೌಡ (ಜೆಡಿಎಸ್‌);

2023 ರ ಅಭ್ಯರ್ಥಿಗಳು:

ಕಾಂಗ್ರೆಸ್ – ಕೆ.ಎಂ.ಶಿವಲಿಂಗೌಡ – 97099
ಜೆಡಿಎಸ್ – ಎನ್.ಆರ್.ಸಂತೋಷ್ – 77006
ಬಿಜೆಪಿ – ಜಿವಿಟಿ ಬಸವರಾಜ್ – 6456

ಗೆಲುವಿನ ಅಂತರ – 20093

7) ಬೇಲೂರು ವಿಧಾನಸಭಾ ಕ್ಷೇತ್ರದ ವಿವರ

ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಹೆಚ್‌.ಕೆ. ಸುರೇಶ್ ಅವರು ಗೆಲ್ಲುವ ಮೂಲಕ ಬಿಜೆಪಿಯ ಕಮಲವನ್ನು ಹರಳುವಂತೆ ಮಾಡಿದ್ದಾರೆ. ಕಳೆದ ಬಾರಿ ಜೆಡಿಎಸ್‌ನಿಂದ ಗೆದ್ದಿದ್ದ ಲಿಂಗೇಶ್ ಸೋಲನಪ್ಪಿದ್ದಾರೆ.

ಒಟ್ಟು ಮತದಾರರು: 1,96,053, ಪುರುಷ ಮತದಾರರು: 98,719, ಮಹಿಳಾ ಮತದಾರರು: 97,330.

2018ರ ವಿಜೇತರು: ಕೆ.ಎಸ್‌.ಲಿಂಗೇಶ್‌ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಬಿಜೆಪಿ – ಹೆಚ್.ಕೆ.ಸುರೇಶ್ – 63571
ಕಾಂಗ್ರೆಸ್ – ಬಿ.ಶಿವರಾಮ್ – 55835
ಜೆಡಿಎಸ್ – ಕೆ.ಎಸ್.ಲಿಂಗೇಶ್ – 38,893

ಗೆಲುವಿನ ಅಂತರ – 7736


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...