Homeಕರ್ನಾಟಕಹಾಸನ : ಏಳರಲ್ಲಿ ನಾಲ್ಕು ಜೆಡಿಎಸ್ ಎರಡು ಬಿಜೆಪಿ ಒಂದು ಕಾಂಗ್ರೆಸ್

ಹಾಸನ : ಏಳರಲ್ಲಿ ನಾಲ್ಕು ಜೆಡಿಎಸ್ ಎರಡು ಬಿಜೆಪಿ ಒಂದು ಕಾಂಗ್ರೆಸ್

- Advertisement -
- Advertisement -

ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ 4ರಲ್ಲಿ ಜೆಡಿಎಸ್, 2 ಬಿಜೆಪಿ ಮತ್ತು ಕಾಂಗ್ರೆಸ್‌ ಒಂದು ಸ್ಥಾನ ಪಡೆದುಕೊಂಡಿದೆ. ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ವಿಧಾನಸಭಾ ಚುನಾವನಾ ಕ್ಷೇತ್ರದಲ್ಲಿ ಜೆಡಿಎಸ್ ನ ಸ್ವರೂಪ್ ಪ್ರಕಾಶ್ 8 ಸಾವಿರ ಮತಗಳಿಂದ ಪ್ರೀತಮ್‌ಗೌಡ ವಿರುದ್ದ ಗೆಲುವು‌ ಸಾಧಿಸಿದ್ದಾರೆ.

ಹಾಸನ ಜಿಲ್ಲೆಯ ಕ್ಷೇತ್ರವಾರು ವಿವರ:

1) ಹಾಸನ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,23,021, ಪುರುಷ ಮತದಾರರು: 1,10,153, ಮಹಿಳಾ ಮತದಾರರು: 1,12,857.

2018ರ ವಿಜೇತರು: ಪ್ರೀತಂ ಗೌಡ (ಬಿಜೆಪಿ),

2023 ರ ಅಭ್ಯರ್ಥಿಗಳು;
ಸ್ವರೂಪ್ ಪ್ರಕಾಶ್ – ಜೆಡಿಎಸ್ – 85176
ಪ್ರೀತಂಗೌಡ – ಬಿಜೆಪಿ – 77322
ಕಾಂಗ್ರೆಸ್ – ಬನವಾಸೆ ರಂಗಸ್ವಾಮಿ 4305
ಆಪ್ – ಅಗಿಲೆ ಯೋಗೇಶ್ 1301

ಗೆಲುವಿನ ಅಂತರ – 7854

2) ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವಿವರ

ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ 5 ಬಾರಿ ಜೆಡಿಎಸ್ ಗೆದ್ದಿದ್ದರೆ, ಕಾಂಗ್ರೆಸ್ 4 ಬಾರಿ ಗೆದ್ದಿದೆ. ಈ  ಹಿಂದೆ ಶ್ರೀಕಂಠಯ್ಯನವರ ಕಾಲದಲ್ಲಿ ಕ್ಷೇತ್ರದಲ್ಲಿ ಹಿಡಿತ ಕಾಂಗ್ರೆಸ್ ಹಿಡಿತ ಸಾಧಿಸಿತ್ತು. ಆದರೆ ನಂತರದಲ್ಲಿ ಜೆಡಿಎಸ್ ಸತತವಾಗಿ ಗೆಲುವಿನಿಂದ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು. ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಸಿ.ಎನ್ ಬಾಲಕೃಷ್ಣ 50ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿಯೂ ಜೆಡಿಎಸ್‌ನ ಸಿ.ಎನ್ ಬಾಲಕೃಷ್ಣ ಕಾಂಗ್ರೆಸ್ ಅಭ್ಯರ್ಥಿ ಎಂ.ಎ.ಗೋಪಾಲಸ್ವಾಮಿ ವಿರುದ್ದ ಗೆಲುವು ಸಾಧಿಸಿದ್ದಾರೆ.

ಒಟ್ಟು ಮತದಾರರು: 2,03,026, ಪುರುಷ ಮತದಾರರು: 1,00,604, ಮಹಿಳಾ ಮತದಾರರು: 1,02,419.

2023ರ ಅಭ್ಯರ್ಥಿಗಳು:

ಜೆಡಿಎಸ್ – ಸಿ.ಎನ್.ಬಾಲಕೃಷ್ಣ – 85668
ಕಾಂಗ್ರೆಸ್ – ಎಂ.ಎ.ಗೋಪಾಲಸ್ವಾಮಿ – 79023
ಬಿಜೆಪಿ – ಚಿದಾನಂದ್ – 5648

ಗೆಲುವಿನ ಅಂತರ – 6645

3) ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ವಿವರ

ಒಳಗೂ ಹೊಳೆ ಹೊರಗೂ ಹೊಳೆ ಎಂಬ ಮಾತು ಹೊಳೆನರಸೀಪುರಕ್ಕೆ ಅನ್ವರ್ಥದಂತಿದೆ. ಜೆಡಿಎಸ್‌ನ ಭದ್ರಕೋಟೆ ಎಂದು ಹೆಸರಾಗಿರುವ ಹೊಳೆನರಸೀಪುರದಲ್ಲಿ ಈ ಬಾರಿಯ 2023ರ ವಿಧಾನಸಭಾ ಚುನಾವಣೆಯಲ್ಲಿ ಹೊಳೆಸರಸೀಪುರ ಕ್ಷೇತ್ರದ ಜನ ಹೆಚ್‌.ಡಿ.ರೇವಣ್ಣ ಅವರಿಗೆ ಒಳೇಟು ನೀಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಮತ್ತೊಮ್ಮೆ ಹೆಚ್‌.ಡಿ.ರೇವಣ್ಣ ಶ್ರೇಯಸ್‌ ಪಾಟೇಲ್ ವಿರುದ್ದ ಗೆಲುವಿನ ನಗೆ ಬೀರಿದ್ದಾರೆ.

ಒಟ್ಟು ಮತದಾರರು: 2,18,097, ಪುರುಷ ಮತದಾರರು: 1,09,187, ಮಹಿಳಾ ಮತದಾರರು: 1,08,900.

2018ರ ವಿಜೇತರು: ಎಚ್‌.ಡಿ. ರೇವಣ್ಣ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಜೆಡಿಎಸ್ – ಹೆಚ್.ಡಿ.ರೇವಣ್ಣ – 86401
ಕಾಂಗ್ರೆಸ್ – ಶ್ರೇಯಸ್ ಪಟೇಲ್ – 83747
ಬಿಜೆಪಿ – ದೇವರಾಜೇಗೌಡ – 4666

ಗೆಲುವಿನ ಅಂತರ – 2654

4) ಅರಕಲಗೂಡು ವಿಧಾನಸಭಾ ಕ್ಷೇತ್ರದ ವಿವರ

ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಬದಲಾದ ಚುನಾವಣಾ ಕಣದಲ್ಲಿ ಜೆಡಿಎಸ್‌ ನ ರಾಮಸ್ವಾಮಿ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರಿದ ಬಳಿಕ, ವಿರೋಧಿ ಪಾಳೆಯದಲ್ಲಿದ್ದ ಎ.ಮಂಜು ಬಿಜೆಪಿ ತೊರೆದು ಮತ್ತೆ ಜೆಡಿಎಸ್ ಸೇರಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿ 2023ರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಮತ್ತೆ ಅರಕಲಗೂಡು ಕ್ಷೇತ್ರದ ಮತದಾರರು ಮತ್ತೆ ಜೆಡಿಎಸ್‌ನ ಕೈ ಹಿಡಿದಿದ್ದಾರೆ.

ಒಟ್ಟು ಮತದಾರರು: 2,25,746, ಪುರುಷ ಮತದಾರರು: 1,15,558, ಮಹಿಳಾ ಮತದಾರರು: 1,10,185.

2018ರ ವಿಜೇತರು: ಎ.ಟಿ. ರಾಮಸ್ವಾಮಿ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಜೆಡಿಎಸ್ – ಎ.ಮಂಜು – 67499
ಪಕ್ಷೇತರ – ಕೃಷ್ಣೇಗೌಡ – 48620
ಕಾಂಗ್ರೆಸ್ – ಶ್ರೀಧರ್ ಗೌಡ – 33084
ಬಿಜೆಪಿ – ಯೋಗಾರಮೇಶ್ – 18477

ಗೆಲುವಿನ ಅಂತರ – 18,879

5) ಸಕಲೇಶಪುರ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,03,631, ಪುರುಷ ಮತದಾರರು: 1,01,582, ಮಹಿಳಾ ಮತದಾರರು: 1,02,044.

2018ರ ವಿಜೇತರು: ಎಚ್.ಕೆ. ಕುಮಾರಸ್ವಾಮಿ (ಜೆಡಿಎಸ್‌),

2023 ರ ಅಭ್ಯರ್ಥಿಗಳು:

ಬಿಜೆಪಿ – ಸಿಮೆಂಟ್ ಮಂಜು – 58604
ಜೆಡಿಎಸ್ – ಹೆಚ್.ಕೆ.ಕುಮಾರಸ್ವಾಮಿ – 56548
ಕಾಂಗ್ರೆಸ್ – ಮುರುಳಿಮೋಹನ್ – 42811

ಗೆಲುವಿನ ಅಂತರ – 2056

6) ಅರಸೀಕೆರೆ ವಿಧಾನಸಭಾ ಕ್ಷೇತ್ರದ ವಿವರ

ಅರಸೀಕೆರೆ ಕ್ಷೇತ್ರದಲ್ಲಿ ಶಿಲಿಂಗೇಗೌಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಬಿಗ್ ಶಾಕ್ ನೀಡಿದ್ದರು, ಕ್ಷೇತ್ರದಲ್ಲಿ ಬಿಗಿ ಹಿಡಿತ ಹೊಂದಿದ್ದ ಶಿವಲಿಂಗೇಗೌಡ 2023ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಟಿಕೆಟ್ ವಂಚಿತ ಅಭ್ಯರ್ಥಿ ಸಂತೋಷ್ ಅವರಿಗೆ ಜೆಡಿಎಸ್ ಟಿಕೆಟ್ ನೀಡಿತ್ತು, ಆದರೆ ಸಂತೋಷ್ ಸೋಲು ಕಂಡಿದ್ದಾರೆ.

ಒಟ್ಟು ಮತದಾರರು: 2,14,020, ಪುರುಷ ಮತದಾರರು: 1,06,476, ಮಹಿಳಾ ಮತದಾರರು: 1,07,540.

2018ರ ವಿಜೇತರು: ಕೆ.ಎಂ. ಶಿವಲಿಂಗೇಗೌಡ (ಜೆಡಿಎಸ್‌);

2023 ರ ಅಭ್ಯರ್ಥಿಗಳು:

ಕಾಂಗ್ರೆಸ್ – ಕೆ.ಎಂ.ಶಿವಲಿಂಗೌಡ – 97099
ಜೆಡಿಎಸ್ – ಎನ್.ಆರ್.ಸಂತೋಷ್ – 77006
ಬಿಜೆಪಿ – ಜಿವಿಟಿ ಬಸವರಾಜ್ – 6456

ಗೆಲುವಿನ ಅಂತರ – 20093

7) ಬೇಲೂರು ವಿಧಾನಸಭಾ ಕ್ಷೇತ್ರದ ವಿವರ

ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಹೆಚ್‌.ಕೆ. ಸುರೇಶ್ ಅವರು ಗೆಲ್ಲುವ ಮೂಲಕ ಬಿಜೆಪಿಯ ಕಮಲವನ್ನು ಹರಳುವಂತೆ ಮಾಡಿದ್ದಾರೆ. ಕಳೆದ ಬಾರಿ ಜೆಡಿಎಸ್‌ನಿಂದ ಗೆದ್ದಿದ್ದ ಲಿಂಗೇಶ್ ಸೋಲನಪ್ಪಿದ್ದಾರೆ.

ಒಟ್ಟು ಮತದಾರರು: 1,96,053, ಪುರುಷ ಮತದಾರರು: 98,719, ಮಹಿಳಾ ಮತದಾರರು: 97,330.

2018ರ ವಿಜೇತರು: ಕೆ.ಎಸ್‌.ಲಿಂಗೇಶ್‌ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಬಿಜೆಪಿ – ಹೆಚ್.ಕೆ.ಸುರೇಶ್ – 63571
ಕಾಂಗ್ರೆಸ್ – ಬಿ.ಶಿವರಾಮ್ – 55835
ಜೆಡಿಎಸ್ – ಕೆ.ಎಸ್.ಲಿಂಗೇಶ್ – 38,893

ಗೆಲುವಿನ ಅಂತರ – 7736


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...