Homeಕರ್ನಾಟಕಹಾಸನ : ಏಳರಲ್ಲಿ ನಾಲ್ಕು ಜೆಡಿಎಸ್ ಎರಡು ಬಿಜೆಪಿ ಒಂದು ಕಾಂಗ್ರೆಸ್

ಹಾಸನ : ಏಳರಲ್ಲಿ ನಾಲ್ಕು ಜೆಡಿಎಸ್ ಎರಡು ಬಿಜೆಪಿ ಒಂದು ಕಾಂಗ್ರೆಸ್

- Advertisement -
- Advertisement -

ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ 4ರಲ್ಲಿ ಜೆಡಿಎಸ್, 2 ಬಿಜೆಪಿ ಮತ್ತು ಕಾಂಗ್ರೆಸ್‌ ಒಂದು ಸ್ಥಾನ ಪಡೆದುಕೊಂಡಿದೆ. ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ವಿಧಾನಸಭಾ ಚುನಾವನಾ ಕ್ಷೇತ್ರದಲ್ಲಿ ಜೆಡಿಎಸ್ ನ ಸ್ವರೂಪ್ ಪ್ರಕಾಶ್ 8 ಸಾವಿರ ಮತಗಳಿಂದ ಪ್ರೀತಮ್‌ಗೌಡ ವಿರುದ್ದ ಗೆಲುವು‌ ಸಾಧಿಸಿದ್ದಾರೆ.

ಹಾಸನ ಜಿಲ್ಲೆಯ ಕ್ಷೇತ್ರವಾರು ವಿವರ:

1) ಹಾಸನ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,23,021, ಪುರುಷ ಮತದಾರರು: 1,10,153, ಮಹಿಳಾ ಮತದಾರರು: 1,12,857.

2018ರ ವಿಜೇತರು: ಪ್ರೀತಂ ಗೌಡ (ಬಿಜೆಪಿ),

2023 ರ ಅಭ್ಯರ್ಥಿಗಳು;
ಸ್ವರೂಪ್ ಪ್ರಕಾಶ್ – ಜೆಡಿಎಸ್ – 85176
ಪ್ರೀತಂಗೌಡ – ಬಿಜೆಪಿ – 77322
ಕಾಂಗ್ರೆಸ್ – ಬನವಾಸೆ ರಂಗಸ್ವಾಮಿ 4305
ಆಪ್ – ಅಗಿಲೆ ಯೋಗೇಶ್ 1301

ಗೆಲುವಿನ ಅಂತರ – 7854

2) ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವಿವರ

ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ 5 ಬಾರಿ ಜೆಡಿಎಸ್ ಗೆದ್ದಿದ್ದರೆ, ಕಾಂಗ್ರೆಸ್ 4 ಬಾರಿ ಗೆದ್ದಿದೆ. ಈ  ಹಿಂದೆ ಶ್ರೀಕಂಠಯ್ಯನವರ ಕಾಲದಲ್ಲಿ ಕ್ಷೇತ್ರದಲ್ಲಿ ಹಿಡಿತ ಕಾಂಗ್ರೆಸ್ ಹಿಡಿತ ಸಾಧಿಸಿತ್ತು. ಆದರೆ ನಂತರದಲ್ಲಿ ಜೆಡಿಎಸ್ ಸತತವಾಗಿ ಗೆಲುವಿನಿಂದ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು. ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಸಿ.ಎನ್ ಬಾಲಕೃಷ್ಣ 50ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿಯೂ ಜೆಡಿಎಸ್‌ನ ಸಿ.ಎನ್ ಬಾಲಕೃಷ್ಣ ಕಾಂಗ್ರೆಸ್ ಅಭ್ಯರ್ಥಿ ಎಂ.ಎ.ಗೋಪಾಲಸ್ವಾಮಿ ವಿರುದ್ದ ಗೆಲುವು ಸಾಧಿಸಿದ್ದಾರೆ.

ಒಟ್ಟು ಮತದಾರರು: 2,03,026, ಪುರುಷ ಮತದಾರರು: 1,00,604, ಮಹಿಳಾ ಮತದಾರರು: 1,02,419.

2023ರ ಅಭ್ಯರ್ಥಿಗಳು:

ಜೆಡಿಎಸ್ – ಸಿ.ಎನ್.ಬಾಲಕೃಷ್ಣ – 85668
ಕಾಂಗ್ರೆಸ್ – ಎಂ.ಎ.ಗೋಪಾಲಸ್ವಾಮಿ – 79023
ಬಿಜೆಪಿ – ಚಿದಾನಂದ್ – 5648

ಗೆಲುವಿನ ಅಂತರ – 6645

3) ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ವಿವರ

ಒಳಗೂ ಹೊಳೆ ಹೊರಗೂ ಹೊಳೆ ಎಂಬ ಮಾತು ಹೊಳೆನರಸೀಪುರಕ್ಕೆ ಅನ್ವರ್ಥದಂತಿದೆ. ಜೆಡಿಎಸ್‌ನ ಭದ್ರಕೋಟೆ ಎಂದು ಹೆಸರಾಗಿರುವ ಹೊಳೆನರಸೀಪುರದಲ್ಲಿ ಈ ಬಾರಿಯ 2023ರ ವಿಧಾನಸಭಾ ಚುನಾವಣೆಯಲ್ಲಿ ಹೊಳೆಸರಸೀಪುರ ಕ್ಷೇತ್ರದ ಜನ ಹೆಚ್‌.ಡಿ.ರೇವಣ್ಣ ಅವರಿಗೆ ಒಳೇಟು ನೀಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಮತ್ತೊಮ್ಮೆ ಹೆಚ್‌.ಡಿ.ರೇವಣ್ಣ ಶ್ರೇಯಸ್‌ ಪಾಟೇಲ್ ವಿರುದ್ದ ಗೆಲುವಿನ ನಗೆ ಬೀರಿದ್ದಾರೆ.

ಒಟ್ಟು ಮತದಾರರು: 2,18,097, ಪುರುಷ ಮತದಾರರು: 1,09,187, ಮಹಿಳಾ ಮತದಾರರು: 1,08,900.

2018ರ ವಿಜೇತರು: ಎಚ್‌.ಡಿ. ರೇವಣ್ಣ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಜೆಡಿಎಸ್ – ಹೆಚ್.ಡಿ.ರೇವಣ್ಣ – 86401
ಕಾಂಗ್ರೆಸ್ – ಶ್ರೇಯಸ್ ಪಟೇಲ್ – 83747
ಬಿಜೆಪಿ – ದೇವರಾಜೇಗೌಡ – 4666

ಗೆಲುವಿನ ಅಂತರ – 2654

4) ಅರಕಲಗೂಡು ವಿಧಾನಸಭಾ ಕ್ಷೇತ್ರದ ವಿವರ

ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಬದಲಾದ ಚುನಾವಣಾ ಕಣದಲ್ಲಿ ಜೆಡಿಎಸ್‌ ನ ರಾಮಸ್ವಾಮಿ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರಿದ ಬಳಿಕ, ವಿರೋಧಿ ಪಾಳೆಯದಲ್ಲಿದ್ದ ಎ.ಮಂಜು ಬಿಜೆಪಿ ತೊರೆದು ಮತ್ತೆ ಜೆಡಿಎಸ್ ಸೇರಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿ 2023ರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಮತ್ತೆ ಅರಕಲಗೂಡು ಕ್ಷೇತ್ರದ ಮತದಾರರು ಮತ್ತೆ ಜೆಡಿಎಸ್‌ನ ಕೈ ಹಿಡಿದಿದ್ದಾರೆ.

ಒಟ್ಟು ಮತದಾರರು: 2,25,746, ಪುರುಷ ಮತದಾರರು: 1,15,558, ಮಹಿಳಾ ಮತದಾರರು: 1,10,185.

2018ರ ವಿಜೇತರು: ಎ.ಟಿ. ರಾಮಸ್ವಾಮಿ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಜೆಡಿಎಸ್ – ಎ.ಮಂಜು – 67499
ಪಕ್ಷೇತರ – ಕೃಷ್ಣೇಗೌಡ – 48620
ಕಾಂಗ್ರೆಸ್ – ಶ್ರೀಧರ್ ಗೌಡ – 33084
ಬಿಜೆಪಿ – ಯೋಗಾರಮೇಶ್ – 18477

ಗೆಲುವಿನ ಅಂತರ – 18,879

5) ಸಕಲೇಶಪುರ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,03,631, ಪುರುಷ ಮತದಾರರು: 1,01,582, ಮಹಿಳಾ ಮತದಾರರು: 1,02,044.

2018ರ ವಿಜೇತರು: ಎಚ್.ಕೆ. ಕುಮಾರಸ್ವಾಮಿ (ಜೆಡಿಎಸ್‌),

2023 ರ ಅಭ್ಯರ್ಥಿಗಳು:

ಬಿಜೆಪಿ – ಸಿಮೆಂಟ್ ಮಂಜು – 58604
ಜೆಡಿಎಸ್ – ಹೆಚ್.ಕೆ.ಕುಮಾರಸ್ವಾಮಿ – 56548
ಕಾಂಗ್ರೆಸ್ – ಮುರುಳಿಮೋಹನ್ – 42811

ಗೆಲುವಿನ ಅಂತರ – 2056

6) ಅರಸೀಕೆರೆ ವಿಧಾನಸಭಾ ಕ್ಷೇತ್ರದ ವಿವರ

ಅರಸೀಕೆರೆ ಕ್ಷೇತ್ರದಲ್ಲಿ ಶಿಲಿಂಗೇಗೌಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಬಿಗ್ ಶಾಕ್ ನೀಡಿದ್ದರು, ಕ್ಷೇತ್ರದಲ್ಲಿ ಬಿಗಿ ಹಿಡಿತ ಹೊಂದಿದ್ದ ಶಿವಲಿಂಗೇಗೌಡ 2023ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಟಿಕೆಟ್ ವಂಚಿತ ಅಭ್ಯರ್ಥಿ ಸಂತೋಷ್ ಅವರಿಗೆ ಜೆಡಿಎಸ್ ಟಿಕೆಟ್ ನೀಡಿತ್ತು, ಆದರೆ ಸಂತೋಷ್ ಸೋಲು ಕಂಡಿದ್ದಾರೆ.

ಒಟ್ಟು ಮತದಾರರು: 2,14,020, ಪುರುಷ ಮತದಾರರು: 1,06,476, ಮಹಿಳಾ ಮತದಾರರು: 1,07,540.

2018ರ ವಿಜೇತರು: ಕೆ.ಎಂ. ಶಿವಲಿಂಗೇಗೌಡ (ಜೆಡಿಎಸ್‌);

2023 ರ ಅಭ್ಯರ್ಥಿಗಳು:

ಕಾಂಗ್ರೆಸ್ – ಕೆ.ಎಂ.ಶಿವಲಿಂಗೌಡ – 97099
ಜೆಡಿಎಸ್ – ಎನ್.ಆರ್.ಸಂತೋಷ್ – 77006
ಬಿಜೆಪಿ – ಜಿವಿಟಿ ಬಸವರಾಜ್ – 6456

ಗೆಲುವಿನ ಅಂತರ – 20093

7) ಬೇಲೂರು ವಿಧಾನಸಭಾ ಕ್ಷೇತ್ರದ ವಿವರ

ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಹೆಚ್‌.ಕೆ. ಸುರೇಶ್ ಅವರು ಗೆಲ್ಲುವ ಮೂಲಕ ಬಿಜೆಪಿಯ ಕಮಲವನ್ನು ಹರಳುವಂತೆ ಮಾಡಿದ್ದಾರೆ. ಕಳೆದ ಬಾರಿ ಜೆಡಿಎಸ್‌ನಿಂದ ಗೆದ್ದಿದ್ದ ಲಿಂಗೇಶ್ ಸೋಲನಪ್ಪಿದ್ದಾರೆ.

ಒಟ್ಟು ಮತದಾರರು: 1,96,053, ಪುರುಷ ಮತದಾರರು: 98,719, ಮಹಿಳಾ ಮತದಾರರು: 97,330.

2018ರ ವಿಜೇತರು: ಕೆ.ಎಸ್‌.ಲಿಂಗೇಶ್‌ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಬಿಜೆಪಿ – ಹೆಚ್.ಕೆ.ಸುರೇಶ್ – 63571
ಕಾಂಗ್ರೆಸ್ – ಬಿ.ಶಿವರಾಮ್ – 55835
ಜೆಡಿಎಸ್ – ಕೆ.ಎಸ್.ಲಿಂಗೇಶ್ – 38,893

ಗೆಲುವಿನ ಅಂತರ – 7736


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...