Homeಕರ್ನಾಟಕಹಾಸನ : ಏಳರಲ್ಲಿ ನಾಲ್ಕು ಜೆಡಿಎಸ್ ಎರಡು ಬಿಜೆಪಿ ಒಂದು ಕಾಂಗ್ರೆಸ್

ಹಾಸನ : ಏಳರಲ್ಲಿ ನಾಲ್ಕು ಜೆಡಿಎಸ್ ಎರಡು ಬಿಜೆಪಿ ಒಂದು ಕಾಂಗ್ರೆಸ್

- Advertisement -
- Advertisement -

ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ 4ರಲ್ಲಿ ಜೆಡಿಎಸ್, 2 ಬಿಜೆಪಿ ಮತ್ತು ಕಾಂಗ್ರೆಸ್‌ ಒಂದು ಸ್ಥಾನ ಪಡೆದುಕೊಂಡಿದೆ. ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ವಿಧಾನಸಭಾ ಚುನಾವನಾ ಕ್ಷೇತ್ರದಲ್ಲಿ ಜೆಡಿಎಸ್ ನ ಸ್ವರೂಪ್ ಪ್ರಕಾಶ್ 8 ಸಾವಿರ ಮತಗಳಿಂದ ಪ್ರೀತಮ್‌ಗೌಡ ವಿರುದ್ದ ಗೆಲುವು‌ ಸಾಧಿಸಿದ್ದಾರೆ.

ಹಾಸನ ಜಿಲ್ಲೆಯ ಕ್ಷೇತ್ರವಾರು ವಿವರ:

1) ಹಾಸನ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,23,021, ಪುರುಷ ಮತದಾರರು: 1,10,153, ಮಹಿಳಾ ಮತದಾರರು: 1,12,857.

2018ರ ವಿಜೇತರು: ಪ್ರೀತಂ ಗೌಡ (ಬಿಜೆಪಿ),

2023 ರ ಅಭ್ಯರ್ಥಿಗಳು;
ಸ್ವರೂಪ್ ಪ್ರಕಾಶ್ – ಜೆಡಿಎಸ್ – 85176
ಪ್ರೀತಂಗೌಡ – ಬಿಜೆಪಿ – 77322
ಕಾಂಗ್ರೆಸ್ – ಬನವಾಸೆ ರಂಗಸ್ವಾಮಿ 4305
ಆಪ್ – ಅಗಿಲೆ ಯೋಗೇಶ್ 1301

ಗೆಲುವಿನ ಅಂತರ – 7854

2) ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವಿವರ

ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ 5 ಬಾರಿ ಜೆಡಿಎಸ್ ಗೆದ್ದಿದ್ದರೆ, ಕಾಂಗ್ರೆಸ್ 4 ಬಾರಿ ಗೆದ್ದಿದೆ. ಈ  ಹಿಂದೆ ಶ್ರೀಕಂಠಯ್ಯನವರ ಕಾಲದಲ್ಲಿ ಕ್ಷೇತ್ರದಲ್ಲಿ ಹಿಡಿತ ಕಾಂಗ್ರೆಸ್ ಹಿಡಿತ ಸಾಧಿಸಿತ್ತು. ಆದರೆ ನಂತರದಲ್ಲಿ ಜೆಡಿಎಸ್ ಸತತವಾಗಿ ಗೆಲುವಿನಿಂದ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು. ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಸಿ.ಎನ್ ಬಾಲಕೃಷ್ಣ 50ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿಯೂ ಜೆಡಿಎಸ್‌ನ ಸಿ.ಎನ್ ಬಾಲಕೃಷ್ಣ ಕಾಂಗ್ರೆಸ್ ಅಭ್ಯರ್ಥಿ ಎಂ.ಎ.ಗೋಪಾಲಸ್ವಾಮಿ ವಿರುದ್ದ ಗೆಲುವು ಸಾಧಿಸಿದ್ದಾರೆ.

ಒಟ್ಟು ಮತದಾರರು: 2,03,026, ಪುರುಷ ಮತದಾರರು: 1,00,604, ಮಹಿಳಾ ಮತದಾರರು: 1,02,419.

2023ರ ಅಭ್ಯರ್ಥಿಗಳು:

ಜೆಡಿಎಸ್ – ಸಿ.ಎನ್.ಬಾಲಕೃಷ್ಣ – 85668
ಕಾಂಗ್ರೆಸ್ – ಎಂ.ಎ.ಗೋಪಾಲಸ್ವಾಮಿ – 79023
ಬಿಜೆಪಿ – ಚಿದಾನಂದ್ – 5648

ಗೆಲುವಿನ ಅಂತರ – 6645

3) ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ವಿವರ

ಒಳಗೂ ಹೊಳೆ ಹೊರಗೂ ಹೊಳೆ ಎಂಬ ಮಾತು ಹೊಳೆನರಸೀಪುರಕ್ಕೆ ಅನ್ವರ್ಥದಂತಿದೆ. ಜೆಡಿಎಸ್‌ನ ಭದ್ರಕೋಟೆ ಎಂದು ಹೆಸರಾಗಿರುವ ಹೊಳೆನರಸೀಪುರದಲ್ಲಿ ಈ ಬಾರಿಯ 2023ರ ವಿಧಾನಸಭಾ ಚುನಾವಣೆಯಲ್ಲಿ ಹೊಳೆಸರಸೀಪುರ ಕ್ಷೇತ್ರದ ಜನ ಹೆಚ್‌.ಡಿ.ರೇವಣ್ಣ ಅವರಿಗೆ ಒಳೇಟು ನೀಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಮತ್ತೊಮ್ಮೆ ಹೆಚ್‌.ಡಿ.ರೇವಣ್ಣ ಶ್ರೇಯಸ್‌ ಪಾಟೇಲ್ ವಿರುದ್ದ ಗೆಲುವಿನ ನಗೆ ಬೀರಿದ್ದಾರೆ.

ಒಟ್ಟು ಮತದಾರರು: 2,18,097, ಪುರುಷ ಮತದಾರರು: 1,09,187, ಮಹಿಳಾ ಮತದಾರರು: 1,08,900.

2018ರ ವಿಜೇತರು: ಎಚ್‌.ಡಿ. ರೇವಣ್ಣ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಜೆಡಿಎಸ್ – ಹೆಚ್.ಡಿ.ರೇವಣ್ಣ – 86401
ಕಾಂಗ್ರೆಸ್ – ಶ್ರೇಯಸ್ ಪಟೇಲ್ – 83747
ಬಿಜೆಪಿ – ದೇವರಾಜೇಗೌಡ – 4666

ಗೆಲುವಿನ ಅಂತರ – 2654

4) ಅರಕಲಗೂಡು ವಿಧಾನಸಭಾ ಕ್ಷೇತ್ರದ ವಿವರ

ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಬದಲಾದ ಚುನಾವಣಾ ಕಣದಲ್ಲಿ ಜೆಡಿಎಸ್‌ ನ ರಾಮಸ್ವಾಮಿ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರಿದ ಬಳಿಕ, ವಿರೋಧಿ ಪಾಳೆಯದಲ್ಲಿದ್ದ ಎ.ಮಂಜು ಬಿಜೆಪಿ ತೊರೆದು ಮತ್ತೆ ಜೆಡಿಎಸ್ ಸೇರಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿ 2023ರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಮತ್ತೆ ಅರಕಲಗೂಡು ಕ್ಷೇತ್ರದ ಮತದಾರರು ಮತ್ತೆ ಜೆಡಿಎಸ್‌ನ ಕೈ ಹಿಡಿದಿದ್ದಾರೆ.

ಒಟ್ಟು ಮತದಾರರು: 2,25,746, ಪುರುಷ ಮತದಾರರು: 1,15,558, ಮಹಿಳಾ ಮತದಾರರು: 1,10,185.

2018ರ ವಿಜೇತರು: ಎ.ಟಿ. ರಾಮಸ್ವಾಮಿ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಜೆಡಿಎಸ್ – ಎ.ಮಂಜು – 67499
ಪಕ್ಷೇತರ – ಕೃಷ್ಣೇಗೌಡ – 48620
ಕಾಂಗ್ರೆಸ್ – ಶ್ರೀಧರ್ ಗೌಡ – 33084
ಬಿಜೆಪಿ – ಯೋಗಾರಮೇಶ್ – 18477

ಗೆಲುವಿನ ಅಂತರ – 18,879

5) ಸಕಲೇಶಪುರ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,03,631, ಪುರುಷ ಮತದಾರರು: 1,01,582, ಮಹಿಳಾ ಮತದಾರರು: 1,02,044.

2018ರ ವಿಜೇತರು: ಎಚ್.ಕೆ. ಕುಮಾರಸ್ವಾಮಿ (ಜೆಡಿಎಸ್‌),

2023 ರ ಅಭ್ಯರ್ಥಿಗಳು:

ಬಿಜೆಪಿ – ಸಿಮೆಂಟ್ ಮಂಜು – 58604
ಜೆಡಿಎಸ್ – ಹೆಚ್.ಕೆ.ಕುಮಾರಸ್ವಾಮಿ – 56548
ಕಾಂಗ್ರೆಸ್ – ಮುರುಳಿಮೋಹನ್ – 42811

ಗೆಲುವಿನ ಅಂತರ – 2056

6) ಅರಸೀಕೆರೆ ವಿಧಾನಸಭಾ ಕ್ಷೇತ್ರದ ವಿವರ

ಅರಸೀಕೆರೆ ಕ್ಷೇತ್ರದಲ್ಲಿ ಶಿಲಿಂಗೇಗೌಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಬಿಗ್ ಶಾಕ್ ನೀಡಿದ್ದರು, ಕ್ಷೇತ್ರದಲ್ಲಿ ಬಿಗಿ ಹಿಡಿತ ಹೊಂದಿದ್ದ ಶಿವಲಿಂಗೇಗೌಡ 2023ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಟಿಕೆಟ್ ವಂಚಿತ ಅಭ್ಯರ್ಥಿ ಸಂತೋಷ್ ಅವರಿಗೆ ಜೆಡಿಎಸ್ ಟಿಕೆಟ್ ನೀಡಿತ್ತು, ಆದರೆ ಸಂತೋಷ್ ಸೋಲು ಕಂಡಿದ್ದಾರೆ.

ಒಟ್ಟು ಮತದಾರರು: 2,14,020, ಪುರುಷ ಮತದಾರರು: 1,06,476, ಮಹಿಳಾ ಮತದಾರರು: 1,07,540.

2018ರ ವಿಜೇತರು: ಕೆ.ಎಂ. ಶಿವಲಿಂಗೇಗೌಡ (ಜೆಡಿಎಸ್‌);

2023 ರ ಅಭ್ಯರ್ಥಿಗಳು:

ಕಾಂಗ್ರೆಸ್ – ಕೆ.ಎಂ.ಶಿವಲಿಂಗೌಡ – 97099
ಜೆಡಿಎಸ್ – ಎನ್.ಆರ್.ಸಂತೋಷ್ – 77006
ಬಿಜೆಪಿ – ಜಿವಿಟಿ ಬಸವರಾಜ್ – 6456

ಗೆಲುವಿನ ಅಂತರ – 20093

7) ಬೇಲೂರು ವಿಧಾನಸಭಾ ಕ್ಷೇತ್ರದ ವಿವರ

ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಹೆಚ್‌.ಕೆ. ಸುರೇಶ್ ಅವರು ಗೆಲ್ಲುವ ಮೂಲಕ ಬಿಜೆಪಿಯ ಕಮಲವನ್ನು ಹರಳುವಂತೆ ಮಾಡಿದ್ದಾರೆ. ಕಳೆದ ಬಾರಿ ಜೆಡಿಎಸ್‌ನಿಂದ ಗೆದ್ದಿದ್ದ ಲಿಂಗೇಶ್ ಸೋಲನಪ್ಪಿದ್ದಾರೆ.

ಒಟ್ಟು ಮತದಾರರು: 1,96,053, ಪುರುಷ ಮತದಾರರು: 98,719, ಮಹಿಳಾ ಮತದಾರರು: 97,330.

2018ರ ವಿಜೇತರು: ಕೆ.ಎಸ್‌.ಲಿಂಗೇಶ್‌ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಬಿಜೆಪಿ – ಹೆಚ್.ಕೆ.ಸುರೇಶ್ – 63571
ಕಾಂಗ್ರೆಸ್ – ಬಿ.ಶಿವರಾಮ್ – 55835
ಜೆಡಿಎಸ್ – ಕೆ.ಎಸ್.ಲಿಂಗೇಶ್ – 38,893

ಗೆಲುವಿನ ಅಂತರ – 7736


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...