Homeಕರ್ನಾಟಕಹಾಸನ : ಏಳರಲ್ಲಿ ನಾಲ್ಕು ಜೆಡಿಎಸ್ ಎರಡು ಬಿಜೆಪಿ ಒಂದು ಕಾಂಗ್ರೆಸ್

ಹಾಸನ : ಏಳರಲ್ಲಿ ನಾಲ್ಕು ಜೆಡಿಎಸ್ ಎರಡು ಬಿಜೆಪಿ ಒಂದು ಕಾಂಗ್ರೆಸ್

- Advertisement -
- Advertisement -

ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ 4ರಲ್ಲಿ ಜೆಡಿಎಸ್, 2 ಬಿಜೆಪಿ ಮತ್ತು ಕಾಂಗ್ರೆಸ್‌ ಒಂದು ಸ್ಥಾನ ಪಡೆದುಕೊಂಡಿದೆ. ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ವಿಧಾನಸಭಾ ಚುನಾವನಾ ಕ್ಷೇತ್ರದಲ್ಲಿ ಜೆಡಿಎಸ್ ನ ಸ್ವರೂಪ್ ಪ್ರಕಾಶ್ 8 ಸಾವಿರ ಮತಗಳಿಂದ ಪ್ರೀತಮ್‌ಗೌಡ ವಿರುದ್ದ ಗೆಲುವು‌ ಸಾಧಿಸಿದ್ದಾರೆ.

ಹಾಸನ ಜಿಲ್ಲೆಯ ಕ್ಷೇತ್ರವಾರು ವಿವರ:

1) ಹಾಸನ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,23,021, ಪುರುಷ ಮತದಾರರು: 1,10,153, ಮಹಿಳಾ ಮತದಾರರು: 1,12,857.

2018ರ ವಿಜೇತರು: ಪ್ರೀತಂ ಗೌಡ (ಬಿಜೆಪಿ),

2023 ರ ಅಭ್ಯರ್ಥಿಗಳು;
ಸ್ವರೂಪ್ ಪ್ರಕಾಶ್ – ಜೆಡಿಎಸ್ – 85176
ಪ್ರೀತಂಗೌಡ – ಬಿಜೆಪಿ – 77322
ಕಾಂಗ್ರೆಸ್ – ಬನವಾಸೆ ರಂಗಸ್ವಾಮಿ 4305
ಆಪ್ – ಅಗಿಲೆ ಯೋಗೇಶ್ 1301

ಗೆಲುವಿನ ಅಂತರ – 7854

2) ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವಿವರ

ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ 5 ಬಾರಿ ಜೆಡಿಎಸ್ ಗೆದ್ದಿದ್ದರೆ, ಕಾಂಗ್ರೆಸ್ 4 ಬಾರಿ ಗೆದ್ದಿದೆ. ಈ  ಹಿಂದೆ ಶ್ರೀಕಂಠಯ್ಯನವರ ಕಾಲದಲ್ಲಿ ಕ್ಷೇತ್ರದಲ್ಲಿ ಹಿಡಿತ ಕಾಂಗ್ರೆಸ್ ಹಿಡಿತ ಸಾಧಿಸಿತ್ತು. ಆದರೆ ನಂತರದಲ್ಲಿ ಜೆಡಿಎಸ್ ಸತತವಾಗಿ ಗೆಲುವಿನಿಂದ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು. ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಸಿ.ಎನ್ ಬಾಲಕೃಷ್ಣ 50ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿಯೂ ಜೆಡಿಎಸ್‌ನ ಸಿ.ಎನ್ ಬಾಲಕೃಷ್ಣ ಕಾಂಗ್ರೆಸ್ ಅಭ್ಯರ್ಥಿ ಎಂ.ಎ.ಗೋಪಾಲಸ್ವಾಮಿ ವಿರುದ್ದ ಗೆಲುವು ಸಾಧಿಸಿದ್ದಾರೆ.

ಒಟ್ಟು ಮತದಾರರು: 2,03,026, ಪುರುಷ ಮತದಾರರು: 1,00,604, ಮಹಿಳಾ ಮತದಾರರು: 1,02,419.

2023ರ ಅಭ್ಯರ್ಥಿಗಳು:

ಜೆಡಿಎಸ್ – ಸಿ.ಎನ್.ಬಾಲಕೃಷ್ಣ – 85668
ಕಾಂಗ್ರೆಸ್ – ಎಂ.ಎ.ಗೋಪಾಲಸ್ವಾಮಿ – 79023
ಬಿಜೆಪಿ – ಚಿದಾನಂದ್ – 5648

ಗೆಲುವಿನ ಅಂತರ – 6645

3) ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ವಿವರ

ಒಳಗೂ ಹೊಳೆ ಹೊರಗೂ ಹೊಳೆ ಎಂಬ ಮಾತು ಹೊಳೆನರಸೀಪುರಕ್ಕೆ ಅನ್ವರ್ಥದಂತಿದೆ. ಜೆಡಿಎಸ್‌ನ ಭದ್ರಕೋಟೆ ಎಂದು ಹೆಸರಾಗಿರುವ ಹೊಳೆನರಸೀಪುರದಲ್ಲಿ ಈ ಬಾರಿಯ 2023ರ ವಿಧಾನಸಭಾ ಚುನಾವಣೆಯಲ್ಲಿ ಹೊಳೆಸರಸೀಪುರ ಕ್ಷೇತ್ರದ ಜನ ಹೆಚ್‌.ಡಿ.ರೇವಣ್ಣ ಅವರಿಗೆ ಒಳೇಟು ನೀಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಮತ್ತೊಮ್ಮೆ ಹೆಚ್‌.ಡಿ.ರೇವಣ್ಣ ಶ್ರೇಯಸ್‌ ಪಾಟೇಲ್ ವಿರುದ್ದ ಗೆಲುವಿನ ನಗೆ ಬೀರಿದ್ದಾರೆ.

ಒಟ್ಟು ಮತದಾರರು: 2,18,097, ಪುರುಷ ಮತದಾರರು: 1,09,187, ಮಹಿಳಾ ಮತದಾರರು: 1,08,900.

2018ರ ವಿಜೇತರು: ಎಚ್‌.ಡಿ. ರೇವಣ್ಣ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಜೆಡಿಎಸ್ – ಹೆಚ್.ಡಿ.ರೇವಣ್ಣ – 86401
ಕಾಂಗ್ರೆಸ್ – ಶ್ರೇಯಸ್ ಪಟೇಲ್ – 83747
ಬಿಜೆಪಿ – ದೇವರಾಜೇಗೌಡ – 4666

ಗೆಲುವಿನ ಅಂತರ – 2654

4) ಅರಕಲಗೂಡು ವಿಧಾನಸಭಾ ಕ್ಷೇತ್ರದ ವಿವರ

ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಬದಲಾದ ಚುನಾವಣಾ ಕಣದಲ್ಲಿ ಜೆಡಿಎಸ್‌ ನ ರಾಮಸ್ವಾಮಿ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರಿದ ಬಳಿಕ, ವಿರೋಧಿ ಪಾಳೆಯದಲ್ಲಿದ್ದ ಎ.ಮಂಜು ಬಿಜೆಪಿ ತೊರೆದು ಮತ್ತೆ ಜೆಡಿಎಸ್ ಸೇರಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿ 2023ರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಮತ್ತೆ ಅರಕಲಗೂಡು ಕ್ಷೇತ್ರದ ಮತದಾರರು ಮತ್ತೆ ಜೆಡಿಎಸ್‌ನ ಕೈ ಹಿಡಿದಿದ್ದಾರೆ.

ಒಟ್ಟು ಮತದಾರರು: 2,25,746, ಪುರುಷ ಮತದಾರರು: 1,15,558, ಮಹಿಳಾ ಮತದಾರರು: 1,10,185.

2018ರ ವಿಜೇತರು: ಎ.ಟಿ. ರಾಮಸ್ವಾಮಿ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಜೆಡಿಎಸ್ – ಎ.ಮಂಜು – 67499
ಪಕ್ಷೇತರ – ಕೃಷ್ಣೇಗೌಡ – 48620
ಕಾಂಗ್ರೆಸ್ – ಶ್ರೀಧರ್ ಗೌಡ – 33084
ಬಿಜೆಪಿ – ಯೋಗಾರಮೇಶ್ – 18477

ಗೆಲುವಿನ ಅಂತರ – 18,879

5) ಸಕಲೇಶಪುರ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,03,631, ಪುರುಷ ಮತದಾರರು: 1,01,582, ಮಹಿಳಾ ಮತದಾರರು: 1,02,044.

2018ರ ವಿಜೇತರು: ಎಚ್.ಕೆ. ಕುಮಾರಸ್ವಾಮಿ (ಜೆಡಿಎಸ್‌),

2023 ರ ಅಭ್ಯರ್ಥಿಗಳು:

ಬಿಜೆಪಿ – ಸಿಮೆಂಟ್ ಮಂಜು – 58604
ಜೆಡಿಎಸ್ – ಹೆಚ್.ಕೆ.ಕುಮಾರಸ್ವಾಮಿ – 56548
ಕಾಂಗ್ರೆಸ್ – ಮುರುಳಿಮೋಹನ್ – 42811

ಗೆಲುವಿನ ಅಂತರ – 2056

6) ಅರಸೀಕೆರೆ ವಿಧಾನಸಭಾ ಕ್ಷೇತ್ರದ ವಿವರ

ಅರಸೀಕೆರೆ ಕ್ಷೇತ್ರದಲ್ಲಿ ಶಿಲಿಂಗೇಗೌಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಬಿಗ್ ಶಾಕ್ ನೀಡಿದ್ದರು, ಕ್ಷೇತ್ರದಲ್ಲಿ ಬಿಗಿ ಹಿಡಿತ ಹೊಂದಿದ್ದ ಶಿವಲಿಂಗೇಗೌಡ 2023ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಟಿಕೆಟ್ ವಂಚಿತ ಅಭ್ಯರ್ಥಿ ಸಂತೋಷ್ ಅವರಿಗೆ ಜೆಡಿಎಸ್ ಟಿಕೆಟ್ ನೀಡಿತ್ತು, ಆದರೆ ಸಂತೋಷ್ ಸೋಲು ಕಂಡಿದ್ದಾರೆ.

ಒಟ್ಟು ಮತದಾರರು: 2,14,020, ಪುರುಷ ಮತದಾರರು: 1,06,476, ಮಹಿಳಾ ಮತದಾರರು: 1,07,540.

2018ರ ವಿಜೇತರು: ಕೆ.ಎಂ. ಶಿವಲಿಂಗೇಗೌಡ (ಜೆಡಿಎಸ್‌);

2023 ರ ಅಭ್ಯರ್ಥಿಗಳು:

ಕಾಂಗ್ರೆಸ್ – ಕೆ.ಎಂ.ಶಿವಲಿಂಗೌಡ – 97099
ಜೆಡಿಎಸ್ – ಎನ್.ಆರ್.ಸಂತೋಷ್ – 77006
ಬಿಜೆಪಿ – ಜಿವಿಟಿ ಬಸವರಾಜ್ – 6456

ಗೆಲುವಿನ ಅಂತರ – 20093

7) ಬೇಲೂರು ವಿಧಾನಸಭಾ ಕ್ಷೇತ್ರದ ವಿವರ

ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಹೆಚ್‌.ಕೆ. ಸುರೇಶ್ ಅವರು ಗೆಲ್ಲುವ ಮೂಲಕ ಬಿಜೆಪಿಯ ಕಮಲವನ್ನು ಹರಳುವಂತೆ ಮಾಡಿದ್ದಾರೆ. ಕಳೆದ ಬಾರಿ ಜೆಡಿಎಸ್‌ನಿಂದ ಗೆದ್ದಿದ್ದ ಲಿಂಗೇಶ್ ಸೋಲನಪ್ಪಿದ್ದಾರೆ.

ಒಟ್ಟು ಮತದಾರರು: 1,96,053, ಪುರುಷ ಮತದಾರರು: 98,719, ಮಹಿಳಾ ಮತದಾರರು: 97,330.

2018ರ ವಿಜೇತರು: ಕೆ.ಎಸ್‌.ಲಿಂಗೇಶ್‌ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಬಿಜೆಪಿ – ಹೆಚ್.ಕೆ.ಸುರೇಶ್ – 63571
ಕಾಂಗ್ರೆಸ್ – ಬಿ.ಶಿವರಾಮ್ – 55835
ಜೆಡಿಎಸ್ – ಕೆ.ಎಸ್.ಲಿಂಗೇಶ್ – 38,893

ಗೆಲುವಿನ ಅಂತರ – 7736


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...