Homeಕರ್ನಾಟಕಹಾಸನ : ಏಳರಲ್ಲಿ ನಾಲ್ಕು ಜೆಡಿಎಸ್ ಎರಡು ಬಿಜೆಪಿ ಒಂದು ಕಾಂಗ್ರೆಸ್

ಹಾಸನ : ಏಳರಲ್ಲಿ ನಾಲ್ಕು ಜೆಡಿಎಸ್ ಎರಡು ಬಿಜೆಪಿ ಒಂದು ಕಾಂಗ್ರೆಸ್

- Advertisement -
- Advertisement -

ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ 4ರಲ್ಲಿ ಜೆಡಿಎಸ್, 2 ಬಿಜೆಪಿ ಮತ್ತು ಕಾಂಗ್ರೆಸ್‌ ಒಂದು ಸ್ಥಾನ ಪಡೆದುಕೊಂಡಿದೆ. ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ವಿಧಾನಸಭಾ ಚುನಾವನಾ ಕ್ಷೇತ್ರದಲ್ಲಿ ಜೆಡಿಎಸ್ ನ ಸ್ವರೂಪ್ ಪ್ರಕಾಶ್ 8 ಸಾವಿರ ಮತಗಳಿಂದ ಪ್ರೀತಮ್‌ಗೌಡ ವಿರುದ್ದ ಗೆಲುವು‌ ಸಾಧಿಸಿದ್ದಾರೆ.

ಹಾಸನ ಜಿಲ್ಲೆಯ ಕ್ಷೇತ್ರವಾರು ವಿವರ:

1) ಹಾಸನ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,23,021, ಪುರುಷ ಮತದಾರರು: 1,10,153, ಮಹಿಳಾ ಮತದಾರರು: 1,12,857.

2018ರ ವಿಜೇತರು: ಪ್ರೀತಂ ಗೌಡ (ಬಿಜೆಪಿ),

2023 ರ ಅಭ್ಯರ್ಥಿಗಳು;
ಸ್ವರೂಪ್ ಪ್ರಕಾಶ್ – ಜೆಡಿಎಸ್ – 85176
ಪ್ರೀತಂಗೌಡ – ಬಿಜೆಪಿ – 77322
ಕಾಂಗ್ರೆಸ್ – ಬನವಾಸೆ ರಂಗಸ್ವಾಮಿ 4305
ಆಪ್ – ಅಗಿಲೆ ಯೋಗೇಶ್ 1301

ಗೆಲುವಿನ ಅಂತರ – 7854

2) ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವಿವರ

ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ 5 ಬಾರಿ ಜೆಡಿಎಸ್ ಗೆದ್ದಿದ್ದರೆ, ಕಾಂಗ್ರೆಸ್ 4 ಬಾರಿ ಗೆದ್ದಿದೆ. ಈ  ಹಿಂದೆ ಶ್ರೀಕಂಠಯ್ಯನವರ ಕಾಲದಲ್ಲಿ ಕ್ಷೇತ್ರದಲ್ಲಿ ಹಿಡಿತ ಕಾಂಗ್ರೆಸ್ ಹಿಡಿತ ಸಾಧಿಸಿತ್ತು. ಆದರೆ ನಂತರದಲ್ಲಿ ಜೆಡಿಎಸ್ ಸತತವಾಗಿ ಗೆಲುವಿನಿಂದ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು. ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಸಿ.ಎನ್ ಬಾಲಕೃಷ್ಣ 50ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿಯೂ ಜೆಡಿಎಸ್‌ನ ಸಿ.ಎನ್ ಬಾಲಕೃಷ್ಣ ಕಾಂಗ್ರೆಸ್ ಅಭ್ಯರ್ಥಿ ಎಂ.ಎ.ಗೋಪಾಲಸ್ವಾಮಿ ವಿರುದ್ದ ಗೆಲುವು ಸಾಧಿಸಿದ್ದಾರೆ.

ಒಟ್ಟು ಮತದಾರರು: 2,03,026, ಪುರುಷ ಮತದಾರರು: 1,00,604, ಮಹಿಳಾ ಮತದಾರರು: 1,02,419.

2023ರ ಅಭ್ಯರ್ಥಿಗಳು:

ಜೆಡಿಎಸ್ – ಸಿ.ಎನ್.ಬಾಲಕೃಷ್ಣ – 85668
ಕಾಂಗ್ರೆಸ್ – ಎಂ.ಎ.ಗೋಪಾಲಸ್ವಾಮಿ – 79023
ಬಿಜೆಪಿ – ಚಿದಾನಂದ್ – 5648

ಗೆಲುವಿನ ಅಂತರ – 6645

3) ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ವಿವರ

ಒಳಗೂ ಹೊಳೆ ಹೊರಗೂ ಹೊಳೆ ಎಂಬ ಮಾತು ಹೊಳೆನರಸೀಪುರಕ್ಕೆ ಅನ್ವರ್ಥದಂತಿದೆ. ಜೆಡಿಎಸ್‌ನ ಭದ್ರಕೋಟೆ ಎಂದು ಹೆಸರಾಗಿರುವ ಹೊಳೆನರಸೀಪುರದಲ್ಲಿ ಈ ಬಾರಿಯ 2023ರ ವಿಧಾನಸಭಾ ಚುನಾವಣೆಯಲ್ಲಿ ಹೊಳೆಸರಸೀಪುರ ಕ್ಷೇತ್ರದ ಜನ ಹೆಚ್‌.ಡಿ.ರೇವಣ್ಣ ಅವರಿಗೆ ಒಳೇಟು ನೀಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಮತ್ತೊಮ್ಮೆ ಹೆಚ್‌.ಡಿ.ರೇವಣ್ಣ ಶ್ರೇಯಸ್‌ ಪಾಟೇಲ್ ವಿರುದ್ದ ಗೆಲುವಿನ ನಗೆ ಬೀರಿದ್ದಾರೆ.

ಒಟ್ಟು ಮತದಾರರು: 2,18,097, ಪುರುಷ ಮತದಾರರು: 1,09,187, ಮಹಿಳಾ ಮತದಾರರು: 1,08,900.

2018ರ ವಿಜೇತರು: ಎಚ್‌.ಡಿ. ರೇವಣ್ಣ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಜೆಡಿಎಸ್ – ಹೆಚ್.ಡಿ.ರೇವಣ್ಣ – 86401
ಕಾಂಗ್ರೆಸ್ – ಶ್ರೇಯಸ್ ಪಟೇಲ್ – 83747
ಬಿಜೆಪಿ – ದೇವರಾಜೇಗೌಡ – 4666

ಗೆಲುವಿನ ಅಂತರ – 2654

4) ಅರಕಲಗೂಡು ವಿಧಾನಸಭಾ ಕ್ಷೇತ್ರದ ವಿವರ

ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಬದಲಾದ ಚುನಾವಣಾ ಕಣದಲ್ಲಿ ಜೆಡಿಎಸ್‌ ನ ರಾಮಸ್ವಾಮಿ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರಿದ ಬಳಿಕ, ವಿರೋಧಿ ಪಾಳೆಯದಲ್ಲಿದ್ದ ಎ.ಮಂಜು ಬಿಜೆಪಿ ತೊರೆದು ಮತ್ತೆ ಜೆಡಿಎಸ್ ಸೇರಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿ 2023ರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಮತ್ತೆ ಅರಕಲಗೂಡು ಕ್ಷೇತ್ರದ ಮತದಾರರು ಮತ್ತೆ ಜೆಡಿಎಸ್‌ನ ಕೈ ಹಿಡಿದಿದ್ದಾರೆ.

ಒಟ್ಟು ಮತದಾರರು: 2,25,746, ಪುರುಷ ಮತದಾರರು: 1,15,558, ಮಹಿಳಾ ಮತದಾರರು: 1,10,185.

2018ರ ವಿಜೇತರು: ಎ.ಟಿ. ರಾಮಸ್ವಾಮಿ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಜೆಡಿಎಸ್ – ಎ.ಮಂಜು – 67499
ಪಕ್ಷೇತರ – ಕೃಷ್ಣೇಗೌಡ – 48620
ಕಾಂಗ್ರೆಸ್ – ಶ್ರೀಧರ್ ಗೌಡ – 33084
ಬಿಜೆಪಿ – ಯೋಗಾರಮೇಶ್ – 18477

ಗೆಲುವಿನ ಅಂತರ – 18,879

5) ಸಕಲೇಶಪುರ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,03,631, ಪುರುಷ ಮತದಾರರು: 1,01,582, ಮಹಿಳಾ ಮತದಾರರು: 1,02,044.

2018ರ ವಿಜೇತರು: ಎಚ್.ಕೆ. ಕುಮಾರಸ್ವಾಮಿ (ಜೆಡಿಎಸ್‌),

2023 ರ ಅಭ್ಯರ್ಥಿಗಳು:

ಬಿಜೆಪಿ – ಸಿಮೆಂಟ್ ಮಂಜು – 58604
ಜೆಡಿಎಸ್ – ಹೆಚ್.ಕೆ.ಕುಮಾರಸ್ವಾಮಿ – 56548
ಕಾಂಗ್ರೆಸ್ – ಮುರುಳಿಮೋಹನ್ – 42811

ಗೆಲುವಿನ ಅಂತರ – 2056

6) ಅರಸೀಕೆರೆ ವಿಧಾನಸಭಾ ಕ್ಷೇತ್ರದ ವಿವರ

ಅರಸೀಕೆರೆ ಕ್ಷೇತ್ರದಲ್ಲಿ ಶಿಲಿಂಗೇಗೌಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಬಿಗ್ ಶಾಕ್ ನೀಡಿದ್ದರು, ಕ್ಷೇತ್ರದಲ್ಲಿ ಬಿಗಿ ಹಿಡಿತ ಹೊಂದಿದ್ದ ಶಿವಲಿಂಗೇಗೌಡ 2023ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಟಿಕೆಟ್ ವಂಚಿತ ಅಭ್ಯರ್ಥಿ ಸಂತೋಷ್ ಅವರಿಗೆ ಜೆಡಿಎಸ್ ಟಿಕೆಟ್ ನೀಡಿತ್ತು, ಆದರೆ ಸಂತೋಷ್ ಸೋಲು ಕಂಡಿದ್ದಾರೆ.

ಒಟ್ಟು ಮತದಾರರು: 2,14,020, ಪುರುಷ ಮತದಾರರು: 1,06,476, ಮಹಿಳಾ ಮತದಾರರು: 1,07,540.

2018ರ ವಿಜೇತರು: ಕೆ.ಎಂ. ಶಿವಲಿಂಗೇಗೌಡ (ಜೆಡಿಎಸ್‌);

2023 ರ ಅಭ್ಯರ್ಥಿಗಳು:

ಕಾಂಗ್ರೆಸ್ – ಕೆ.ಎಂ.ಶಿವಲಿಂಗೌಡ – 97099
ಜೆಡಿಎಸ್ – ಎನ್.ಆರ್.ಸಂತೋಷ್ – 77006
ಬಿಜೆಪಿ – ಜಿವಿಟಿ ಬಸವರಾಜ್ – 6456

ಗೆಲುವಿನ ಅಂತರ – 20093

7) ಬೇಲೂರು ವಿಧಾನಸಭಾ ಕ್ಷೇತ್ರದ ವಿವರ

ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಹೆಚ್‌.ಕೆ. ಸುರೇಶ್ ಅವರು ಗೆಲ್ಲುವ ಮೂಲಕ ಬಿಜೆಪಿಯ ಕಮಲವನ್ನು ಹರಳುವಂತೆ ಮಾಡಿದ್ದಾರೆ. ಕಳೆದ ಬಾರಿ ಜೆಡಿಎಸ್‌ನಿಂದ ಗೆದ್ದಿದ್ದ ಲಿಂಗೇಶ್ ಸೋಲನಪ್ಪಿದ್ದಾರೆ.

ಒಟ್ಟು ಮತದಾರರು: 1,96,053, ಪುರುಷ ಮತದಾರರು: 98,719, ಮಹಿಳಾ ಮತದಾರರು: 97,330.

2018ರ ವಿಜೇತರು: ಕೆ.ಎಸ್‌.ಲಿಂಗೇಶ್‌ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಬಿಜೆಪಿ – ಹೆಚ್.ಕೆ.ಸುರೇಶ್ – 63571
ಕಾಂಗ್ರೆಸ್ – ಬಿ.ಶಿವರಾಮ್ – 55835
ಜೆಡಿಎಸ್ – ಕೆ.ಎಸ್.ಲಿಂಗೇಶ್ – 38,893

ಗೆಲುವಿನ ಅಂತರ – 7736


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...