Homeಕರ್ನಾಟಕಹಾಸನ : ಏಳರಲ್ಲಿ ನಾಲ್ಕು ಜೆಡಿಎಸ್ ಎರಡು ಬಿಜೆಪಿ ಒಂದು ಕಾಂಗ್ರೆಸ್

ಹಾಸನ : ಏಳರಲ್ಲಿ ನಾಲ್ಕು ಜೆಡಿಎಸ್ ಎರಡು ಬಿಜೆಪಿ ಒಂದು ಕಾಂಗ್ರೆಸ್

- Advertisement -
- Advertisement -

ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ 4ರಲ್ಲಿ ಜೆಡಿಎಸ್, 2 ಬಿಜೆಪಿ ಮತ್ತು ಕಾಂಗ್ರೆಸ್‌ ಒಂದು ಸ್ಥಾನ ಪಡೆದುಕೊಂಡಿದೆ. ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ವಿಧಾನಸಭಾ ಚುನಾವನಾ ಕ್ಷೇತ್ರದಲ್ಲಿ ಜೆಡಿಎಸ್ ನ ಸ್ವರೂಪ್ ಪ್ರಕಾಶ್ 8 ಸಾವಿರ ಮತಗಳಿಂದ ಪ್ರೀತಮ್‌ಗೌಡ ವಿರುದ್ದ ಗೆಲುವು‌ ಸಾಧಿಸಿದ್ದಾರೆ.

ಹಾಸನ ಜಿಲ್ಲೆಯ ಕ್ಷೇತ್ರವಾರು ವಿವರ:

1) ಹಾಸನ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,23,021, ಪುರುಷ ಮತದಾರರು: 1,10,153, ಮಹಿಳಾ ಮತದಾರರು: 1,12,857.

2018ರ ವಿಜೇತರು: ಪ್ರೀತಂ ಗೌಡ (ಬಿಜೆಪಿ),

2023 ರ ಅಭ್ಯರ್ಥಿಗಳು;
ಸ್ವರೂಪ್ ಪ್ರಕಾಶ್ – ಜೆಡಿಎಸ್ – 85176
ಪ್ರೀತಂಗೌಡ – ಬಿಜೆಪಿ – 77322
ಕಾಂಗ್ರೆಸ್ – ಬನವಾಸೆ ರಂಗಸ್ವಾಮಿ 4305
ಆಪ್ – ಅಗಿಲೆ ಯೋಗೇಶ್ 1301

ಗೆಲುವಿನ ಅಂತರ – 7854

2) ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವಿವರ

ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ 5 ಬಾರಿ ಜೆಡಿಎಸ್ ಗೆದ್ದಿದ್ದರೆ, ಕಾಂಗ್ರೆಸ್ 4 ಬಾರಿ ಗೆದ್ದಿದೆ. ಈ  ಹಿಂದೆ ಶ್ರೀಕಂಠಯ್ಯನವರ ಕಾಲದಲ್ಲಿ ಕ್ಷೇತ್ರದಲ್ಲಿ ಹಿಡಿತ ಕಾಂಗ್ರೆಸ್ ಹಿಡಿತ ಸಾಧಿಸಿತ್ತು. ಆದರೆ ನಂತರದಲ್ಲಿ ಜೆಡಿಎಸ್ ಸತತವಾಗಿ ಗೆಲುವಿನಿಂದ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು. ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಸಿ.ಎನ್ ಬಾಲಕೃಷ್ಣ 50ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿಯೂ ಜೆಡಿಎಸ್‌ನ ಸಿ.ಎನ್ ಬಾಲಕೃಷ್ಣ ಕಾಂಗ್ರೆಸ್ ಅಭ್ಯರ್ಥಿ ಎಂ.ಎ.ಗೋಪಾಲಸ್ವಾಮಿ ವಿರುದ್ದ ಗೆಲುವು ಸಾಧಿಸಿದ್ದಾರೆ.

ಒಟ್ಟು ಮತದಾರರು: 2,03,026, ಪುರುಷ ಮತದಾರರು: 1,00,604, ಮಹಿಳಾ ಮತದಾರರು: 1,02,419.

2023ರ ಅಭ್ಯರ್ಥಿಗಳು:

ಜೆಡಿಎಸ್ – ಸಿ.ಎನ್.ಬಾಲಕೃಷ್ಣ – 85668
ಕಾಂಗ್ರೆಸ್ – ಎಂ.ಎ.ಗೋಪಾಲಸ್ವಾಮಿ – 79023
ಬಿಜೆಪಿ – ಚಿದಾನಂದ್ – 5648

ಗೆಲುವಿನ ಅಂತರ – 6645

3) ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ವಿವರ

ಒಳಗೂ ಹೊಳೆ ಹೊರಗೂ ಹೊಳೆ ಎಂಬ ಮಾತು ಹೊಳೆನರಸೀಪುರಕ್ಕೆ ಅನ್ವರ್ಥದಂತಿದೆ. ಜೆಡಿಎಸ್‌ನ ಭದ್ರಕೋಟೆ ಎಂದು ಹೆಸರಾಗಿರುವ ಹೊಳೆನರಸೀಪುರದಲ್ಲಿ ಈ ಬಾರಿಯ 2023ರ ವಿಧಾನಸಭಾ ಚುನಾವಣೆಯಲ್ಲಿ ಹೊಳೆಸರಸೀಪುರ ಕ್ಷೇತ್ರದ ಜನ ಹೆಚ್‌.ಡಿ.ರೇವಣ್ಣ ಅವರಿಗೆ ಒಳೇಟು ನೀಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಮತ್ತೊಮ್ಮೆ ಹೆಚ್‌.ಡಿ.ರೇವಣ್ಣ ಶ್ರೇಯಸ್‌ ಪಾಟೇಲ್ ವಿರುದ್ದ ಗೆಲುವಿನ ನಗೆ ಬೀರಿದ್ದಾರೆ.

ಒಟ್ಟು ಮತದಾರರು: 2,18,097, ಪುರುಷ ಮತದಾರರು: 1,09,187, ಮಹಿಳಾ ಮತದಾರರು: 1,08,900.

2018ರ ವಿಜೇತರು: ಎಚ್‌.ಡಿ. ರೇವಣ್ಣ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಜೆಡಿಎಸ್ – ಹೆಚ್.ಡಿ.ರೇವಣ್ಣ – 86401
ಕಾಂಗ್ರೆಸ್ – ಶ್ರೇಯಸ್ ಪಟೇಲ್ – 83747
ಬಿಜೆಪಿ – ದೇವರಾಜೇಗೌಡ – 4666

ಗೆಲುವಿನ ಅಂತರ – 2654

4) ಅರಕಲಗೂಡು ವಿಧಾನಸಭಾ ಕ್ಷೇತ್ರದ ವಿವರ

ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಬದಲಾದ ಚುನಾವಣಾ ಕಣದಲ್ಲಿ ಜೆಡಿಎಸ್‌ ನ ರಾಮಸ್ವಾಮಿ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರಿದ ಬಳಿಕ, ವಿರೋಧಿ ಪಾಳೆಯದಲ್ಲಿದ್ದ ಎ.ಮಂಜು ಬಿಜೆಪಿ ತೊರೆದು ಮತ್ತೆ ಜೆಡಿಎಸ್ ಸೇರಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿ 2023ರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಮತ್ತೆ ಅರಕಲಗೂಡು ಕ್ಷೇತ್ರದ ಮತದಾರರು ಮತ್ತೆ ಜೆಡಿಎಸ್‌ನ ಕೈ ಹಿಡಿದಿದ್ದಾರೆ.

ಒಟ್ಟು ಮತದಾರರು: 2,25,746, ಪುರುಷ ಮತದಾರರು: 1,15,558, ಮಹಿಳಾ ಮತದಾರರು: 1,10,185.

2018ರ ವಿಜೇತರು: ಎ.ಟಿ. ರಾಮಸ್ವಾಮಿ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಜೆಡಿಎಸ್ – ಎ.ಮಂಜು – 67499
ಪಕ್ಷೇತರ – ಕೃಷ್ಣೇಗೌಡ – 48620
ಕಾಂಗ್ರೆಸ್ – ಶ್ರೀಧರ್ ಗೌಡ – 33084
ಬಿಜೆಪಿ – ಯೋಗಾರಮೇಶ್ – 18477

ಗೆಲುವಿನ ಅಂತರ – 18,879

5) ಸಕಲೇಶಪುರ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,03,631, ಪುರುಷ ಮತದಾರರು: 1,01,582, ಮಹಿಳಾ ಮತದಾರರು: 1,02,044.

2018ರ ವಿಜೇತರು: ಎಚ್.ಕೆ. ಕುಮಾರಸ್ವಾಮಿ (ಜೆಡಿಎಸ್‌),

2023 ರ ಅಭ್ಯರ್ಥಿಗಳು:

ಬಿಜೆಪಿ – ಸಿಮೆಂಟ್ ಮಂಜು – 58604
ಜೆಡಿಎಸ್ – ಹೆಚ್.ಕೆ.ಕುಮಾರಸ್ವಾಮಿ – 56548
ಕಾಂಗ್ರೆಸ್ – ಮುರುಳಿಮೋಹನ್ – 42811

ಗೆಲುವಿನ ಅಂತರ – 2056

6) ಅರಸೀಕೆರೆ ವಿಧಾನಸಭಾ ಕ್ಷೇತ್ರದ ವಿವರ

ಅರಸೀಕೆರೆ ಕ್ಷೇತ್ರದಲ್ಲಿ ಶಿಲಿಂಗೇಗೌಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಬಿಗ್ ಶಾಕ್ ನೀಡಿದ್ದರು, ಕ್ಷೇತ್ರದಲ್ಲಿ ಬಿಗಿ ಹಿಡಿತ ಹೊಂದಿದ್ದ ಶಿವಲಿಂಗೇಗೌಡ 2023ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಟಿಕೆಟ್ ವಂಚಿತ ಅಭ್ಯರ್ಥಿ ಸಂತೋಷ್ ಅವರಿಗೆ ಜೆಡಿಎಸ್ ಟಿಕೆಟ್ ನೀಡಿತ್ತು, ಆದರೆ ಸಂತೋಷ್ ಸೋಲು ಕಂಡಿದ್ದಾರೆ.

ಒಟ್ಟು ಮತದಾರರು: 2,14,020, ಪುರುಷ ಮತದಾರರು: 1,06,476, ಮಹಿಳಾ ಮತದಾರರು: 1,07,540.

2018ರ ವಿಜೇತರು: ಕೆ.ಎಂ. ಶಿವಲಿಂಗೇಗೌಡ (ಜೆಡಿಎಸ್‌);

2023 ರ ಅಭ್ಯರ್ಥಿಗಳು:

ಕಾಂಗ್ರೆಸ್ – ಕೆ.ಎಂ.ಶಿವಲಿಂಗೌಡ – 97099
ಜೆಡಿಎಸ್ – ಎನ್.ಆರ್.ಸಂತೋಷ್ – 77006
ಬಿಜೆಪಿ – ಜಿವಿಟಿ ಬಸವರಾಜ್ – 6456

ಗೆಲುವಿನ ಅಂತರ – 20093

7) ಬೇಲೂರು ವಿಧಾನಸಭಾ ಕ್ಷೇತ್ರದ ವಿವರ

ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಹೆಚ್‌.ಕೆ. ಸುರೇಶ್ ಅವರು ಗೆಲ್ಲುವ ಮೂಲಕ ಬಿಜೆಪಿಯ ಕಮಲವನ್ನು ಹರಳುವಂತೆ ಮಾಡಿದ್ದಾರೆ. ಕಳೆದ ಬಾರಿ ಜೆಡಿಎಸ್‌ನಿಂದ ಗೆದ್ದಿದ್ದ ಲಿಂಗೇಶ್ ಸೋಲನಪ್ಪಿದ್ದಾರೆ.

ಒಟ್ಟು ಮತದಾರರು: 1,96,053, ಪುರುಷ ಮತದಾರರು: 98,719, ಮಹಿಳಾ ಮತದಾರರು: 97,330.

2018ರ ವಿಜೇತರು: ಕೆ.ಎಸ್‌.ಲಿಂಗೇಶ್‌ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಬಿಜೆಪಿ – ಹೆಚ್.ಕೆ.ಸುರೇಶ್ – 63571
ಕಾಂಗ್ರೆಸ್ – ಬಿ.ಶಿವರಾಮ್ – 55835
ಜೆಡಿಎಸ್ – ಕೆ.ಎಸ್.ಲಿಂಗೇಶ್ – 38,893

ಗೆಲುವಿನ ಅಂತರ – 7736


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...