Homeಕರ್ನಾಟಕಹಾಸನ : ಏಳರಲ್ಲಿ ನಾಲ್ಕು ಜೆಡಿಎಸ್ ಎರಡು ಬಿಜೆಪಿ ಒಂದು ಕಾಂಗ್ರೆಸ್

ಹಾಸನ : ಏಳರಲ್ಲಿ ನಾಲ್ಕು ಜೆಡಿಎಸ್ ಎರಡು ಬಿಜೆಪಿ ಒಂದು ಕಾಂಗ್ರೆಸ್

- Advertisement -
- Advertisement -

ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ 4ರಲ್ಲಿ ಜೆಡಿಎಸ್, 2 ಬಿಜೆಪಿ ಮತ್ತು ಕಾಂಗ್ರೆಸ್‌ ಒಂದು ಸ್ಥಾನ ಪಡೆದುಕೊಂಡಿದೆ. ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ವಿಧಾನಸಭಾ ಚುನಾವನಾ ಕ್ಷೇತ್ರದಲ್ಲಿ ಜೆಡಿಎಸ್ ನ ಸ್ವರೂಪ್ ಪ್ರಕಾಶ್ 8 ಸಾವಿರ ಮತಗಳಿಂದ ಪ್ರೀತಮ್‌ಗೌಡ ವಿರುದ್ದ ಗೆಲುವು‌ ಸಾಧಿಸಿದ್ದಾರೆ.

ಹಾಸನ ಜಿಲ್ಲೆಯ ಕ್ಷೇತ್ರವಾರು ವಿವರ:

1) ಹಾಸನ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,23,021, ಪುರುಷ ಮತದಾರರು: 1,10,153, ಮಹಿಳಾ ಮತದಾರರು: 1,12,857.

2018ರ ವಿಜೇತರು: ಪ್ರೀತಂ ಗೌಡ (ಬಿಜೆಪಿ),

2023 ರ ಅಭ್ಯರ್ಥಿಗಳು;
ಸ್ವರೂಪ್ ಪ್ರಕಾಶ್ – ಜೆಡಿಎಸ್ – 85176
ಪ್ರೀತಂಗೌಡ – ಬಿಜೆಪಿ – 77322
ಕಾಂಗ್ರೆಸ್ – ಬನವಾಸೆ ರಂಗಸ್ವಾಮಿ 4305
ಆಪ್ – ಅಗಿಲೆ ಯೋಗೇಶ್ 1301

ಗೆಲುವಿನ ಅಂತರ – 7854

2) ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವಿವರ

ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ 5 ಬಾರಿ ಜೆಡಿಎಸ್ ಗೆದ್ದಿದ್ದರೆ, ಕಾಂಗ್ರೆಸ್ 4 ಬಾರಿ ಗೆದ್ದಿದೆ. ಈ  ಹಿಂದೆ ಶ್ರೀಕಂಠಯ್ಯನವರ ಕಾಲದಲ್ಲಿ ಕ್ಷೇತ್ರದಲ್ಲಿ ಹಿಡಿತ ಕಾಂಗ್ರೆಸ್ ಹಿಡಿತ ಸಾಧಿಸಿತ್ತು. ಆದರೆ ನಂತರದಲ್ಲಿ ಜೆಡಿಎಸ್ ಸತತವಾಗಿ ಗೆಲುವಿನಿಂದ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು. ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಸಿ.ಎನ್ ಬಾಲಕೃಷ್ಣ 50ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿಯೂ ಜೆಡಿಎಸ್‌ನ ಸಿ.ಎನ್ ಬಾಲಕೃಷ್ಣ ಕಾಂಗ್ರೆಸ್ ಅಭ್ಯರ್ಥಿ ಎಂ.ಎ.ಗೋಪಾಲಸ್ವಾಮಿ ವಿರುದ್ದ ಗೆಲುವು ಸಾಧಿಸಿದ್ದಾರೆ.

ಒಟ್ಟು ಮತದಾರರು: 2,03,026, ಪುರುಷ ಮತದಾರರು: 1,00,604, ಮಹಿಳಾ ಮತದಾರರು: 1,02,419.

2023ರ ಅಭ್ಯರ್ಥಿಗಳು:

ಜೆಡಿಎಸ್ – ಸಿ.ಎನ್.ಬಾಲಕೃಷ್ಣ – 85668
ಕಾಂಗ್ರೆಸ್ – ಎಂ.ಎ.ಗೋಪಾಲಸ್ವಾಮಿ – 79023
ಬಿಜೆಪಿ – ಚಿದಾನಂದ್ – 5648

ಗೆಲುವಿನ ಅಂತರ – 6645

3) ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ವಿವರ

ಒಳಗೂ ಹೊಳೆ ಹೊರಗೂ ಹೊಳೆ ಎಂಬ ಮಾತು ಹೊಳೆನರಸೀಪುರಕ್ಕೆ ಅನ್ವರ್ಥದಂತಿದೆ. ಜೆಡಿಎಸ್‌ನ ಭದ್ರಕೋಟೆ ಎಂದು ಹೆಸರಾಗಿರುವ ಹೊಳೆನರಸೀಪುರದಲ್ಲಿ ಈ ಬಾರಿಯ 2023ರ ವಿಧಾನಸಭಾ ಚುನಾವಣೆಯಲ್ಲಿ ಹೊಳೆಸರಸೀಪುರ ಕ್ಷೇತ್ರದ ಜನ ಹೆಚ್‌.ಡಿ.ರೇವಣ್ಣ ಅವರಿಗೆ ಒಳೇಟು ನೀಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಮತ್ತೊಮ್ಮೆ ಹೆಚ್‌.ಡಿ.ರೇವಣ್ಣ ಶ್ರೇಯಸ್‌ ಪಾಟೇಲ್ ವಿರುದ್ದ ಗೆಲುವಿನ ನಗೆ ಬೀರಿದ್ದಾರೆ.

ಒಟ್ಟು ಮತದಾರರು: 2,18,097, ಪುರುಷ ಮತದಾರರು: 1,09,187, ಮಹಿಳಾ ಮತದಾರರು: 1,08,900.

2018ರ ವಿಜೇತರು: ಎಚ್‌.ಡಿ. ರೇವಣ್ಣ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಜೆಡಿಎಸ್ – ಹೆಚ್.ಡಿ.ರೇವಣ್ಣ – 86401
ಕಾಂಗ್ರೆಸ್ – ಶ್ರೇಯಸ್ ಪಟೇಲ್ – 83747
ಬಿಜೆಪಿ – ದೇವರಾಜೇಗೌಡ – 4666

ಗೆಲುವಿನ ಅಂತರ – 2654

4) ಅರಕಲಗೂಡು ವಿಧಾನಸಭಾ ಕ್ಷೇತ್ರದ ವಿವರ

ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಬದಲಾದ ಚುನಾವಣಾ ಕಣದಲ್ಲಿ ಜೆಡಿಎಸ್‌ ನ ರಾಮಸ್ವಾಮಿ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರಿದ ಬಳಿಕ, ವಿರೋಧಿ ಪಾಳೆಯದಲ್ಲಿದ್ದ ಎ.ಮಂಜು ಬಿಜೆಪಿ ತೊರೆದು ಮತ್ತೆ ಜೆಡಿಎಸ್ ಸೇರಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿ 2023ರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಮತ್ತೆ ಅರಕಲಗೂಡು ಕ್ಷೇತ್ರದ ಮತದಾರರು ಮತ್ತೆ ಜೆಡಿಎಸ್‌ನ ಕೈ ಹಿಡಿದಿದ್ದಾರೆ.

ಒಟ್ಟು ಮತದಾರರು: 2,25,746, ಪುರುಷ ಮತದಾರರು: 1,15,558, ಮಹಿಳಾ ಮತದಾರರು: 1,10,185.

2018ರ ವಿಜೇತರು: ಎ.ಟಿ. ರಾಮಸ್ವಾಮಿ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಜೆಡಿಎಸ್ – ಎ.ಮಂಜು – 67499
ಪಕ್ಷೇತರ – ಕೃಷ್ಣೇಗೌಡ – 48620
ಕಾಂಗ್ರೆಸ್ – ಶ್ರೀಧರ್ ಗೌಡ – 33084
ಬಿಜೆಪಿ – ಯೋಗಾರಮೇಶ್ – 18477

ಗೆಲುವಿನ ಅಂತರ – 18,879

5) ಸಕಲೇಶಪುರ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,03,631, ಪುರುಷ ಮತದಾರರು: 1,01,582, ಮಹಿಳಾ ಮತದಾರರು: 1,02,044.

2018ರ ವಿಜೇತರು: ಎಚ್.ಕೆ. ಕುಮಾರಸ್ವಾಮಿ (ಜೆಡಿಎಸ್‌),

2023 ರ ಅಭ್ಯರ್ಥಿಗಳು:

ಬಿಜೆಪಿ – ಸಿಮೆಂಟ್ ಮಂಜು – 58604
ಜೆಡಿಎಸ್ – ಹೆಚ್.ಕೆ.ಕುಮಾರಸ್ವಾಮಿ – 56548
ಕಾಂಗ್ರೆಸ್ – ಮುರುಳಿಮೋಹನ್ – 42811

ಗೆಲುವಿನ ಅಂತರ – 2056

6) ಅರಸೀಕೆರೆ ವಿಧಾನಸಭಾ ಕ್ಷೇತ್ರದ ವಿವರ

ಅರಸೀಕೆರೆ ಕ್ಷೇತ್ರದಲ್ಲಿ ಶಿಲಿಂಗೇಗೌಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಬಿಗ್ ಶಾಕ್ ನೀಡಿದ್ದರು, ಕ್ಷೇತ್ರದಲ್ಲಿ ಬಿಗಿ ಹಿಡಿತ ಹೊಂದಿದ್ದ ಶಿವಲಿಂಗೇಗೌಡ 2023ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಟಿಕೆಟ್ ವಂಚಿತ ಅಭ್ಯರ್ಥಿ ಸಂತೋಷ್ ಅವರಿಗೆ ಜೆಡಿಎಸ್ ಟಿಕೆಟ್ ನೀಡಿತ್ತು, ಆದರೆ ಸಂತೋಷ್ ಸೋಲು ಕಂಡಿದ್ದಾರೆ.

ಒಟ್ಟು ಮತದಾರರು: 2,14,020, ಪುರುಷ ಮತದಾರರು: 1,06,476, ಮಹಿಳಾ ಮತದಾರರು: 1,07,540.

2018ರ ವಿಜೇತರು: ಕೆ.ಎಂ. ಶಿವಲಿಂಗೇಗೌಡ (ಜೆಡಿಎಸ್‌);

2023 ರ ಅಭ್ಯರ್ಥಿಗಳು:

ಕಾಂಗ್ರೆಸ್ – ಕೆ.ಎಂ.ಶಿವಲಿಂಗೌಡ – 97099
ಜೆಡಿಎಸ್ – ಎನ್.ಆರ್.ಸಂತೋಷ್ – 77006
ಬಿಜೆಪಿ – ಜಿವಿಟಿ ಬಸವರಾಜ್ – 6456

ಗೆಲುವಿನ ಅಂತರ – 20093

7) ಬೇಲೂರು ವಿಧಾನಸಭಾ ಕ್ಷೇತ್ರದ ವಿವರ

ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಹೆಚ್‌.ಕೆ. ಸುರೇಶ್ ಅವರು ಗೆಲ್ಲುವ ಮೂಲಕ ಬಿಜೆಪಿಯ ಕಮಲವನ್ನು ಹರಳುವಂತೆ ಮಾಡಿದ್ದಾರೆ. ಕಳೆದ ಬಾರಿ ಜೆಡಿಎಸ್‌ನಿಂದ ಗೆದ್ದಿದ್ದ ಲಿಂಗೇಶ್ ಸೋಲನಪ್ಪಿದ್ದಾರೆ.

ಒಟ್ಟು ಮತದಾರರು: 1,96,053, ಪುರುಷ ಮತದಾರರು: 98,719, ಮಹಿಳಾ ಮತದಾರರು: 97,330.

2018ರ ವಿಜೇತರು: ಕೆ.ಎಸ್‌.ಲಿಂಗೇಶ್‌ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಬಿಜೆಪಿ – ಹೆಚ್.ಕೆ.ಸುರೇಶ್ – 63571
ಕಾಂಗ್ರೆಸ್ – ಬಿ.ಶಿವರಾಮ್ – 55835
ಜೆಡಿಎಸ್ – ಕೆ.ಎಸ್.ಲಿಂಗೇಶ್ – 38,893

ಗೆಲುವಿನ ಅಂತರ – 7736


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...