Homeಕರ್ನಾಟಕಹಾಸನ ಜಿಲ್ಲೆಯ ಚುನಾವಣ ಕಣದಲ್ಲಿ ಯಾವ ಅಭ್ಯರ್ಥಿ ಮುನ್ನಡೆ

ಹಾಸನ ಜಿಲ್ಲೆಯ ಚುನಾವಣ ಕಣದಲ್ಲಿ ಯಾವ ಅಭ್ಯರ್ಥಿ ಮುನ್ನಡೆ

- Advertisement -
- Advertisement -
ಹಾಸನ ಜಿಲ್ಲೆಯಲ್ಲಿ ಒಟ್ಟು ಏಳು ವಿಧಾನಸಬಾ ಕ್ಷೇತ್ರಗಳ ಪೈಕಿ ಈ ಬಾರಿ ಹೆಚ್ಚು ಕುತೂಹಲ ಮೂಡಿಸಿರುವ ಕ್ಷೇತ್ರವೆಂದರೆ ಹಾಸನ ವಿಧಾನಸಭಾ ಕ್ಷೇತ್ರ. ಈ ಕ್ಷೇತ್ರದಲ್ಲಿ ಹಲವು ವರ್ಷಗಳಿಂದಲೂ ಜೆಡಿಎಸ್ ಪ್ರಭಲ್ಯವಿದ್ದರೂ ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರೀತಮ್ ಗೌಡ ಗೆದ್ದು ಬೀಗುವ ಮೂಲಕ ಜೆಡಿಎಸ್ ಓಟಕ್ಕೆ ಬ್ರೇಕ್ ಹಾಕಿದ್ದರು. ಈ ಬಾರಿಯ 2023ರ ವಿಧಾನಸಭಾ ಚುನಾವಣೆಯಲ್ಲಿ  ಜೆಡಿಎಸ್‌ನ ಸ್ವರೂಪ್ ಮತ್ತು ಬಿಜೆಪಿ ಅಭ್ಯರ್ಥಿಯಾಗಿದ್ದ ಪ್ರೀತಮ್‌ಗೌಡ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆದಿದ್ದು ಮತದಾರ ಯಾರ ಕೈ ಹಿಡಿದಿದ್ದಾನೆ ಎಂದು ನೋಡಬೇಕಿದೆ.
ಇನ್ನುಹಲವು ವರ್ಷಗಳಿಂದ ಹಾಸನ ಕ್ಷೇತ್ರ ಕಾಂಗ್ರೆಸ್ ಪಕ್ಷಕ್ಕೆ ಕಬ್ಬಿಣದ ಕಡಲೆಯೇ ಆಗಿಹೋಗಿದೆಈ ಬಾರಿ ಕೈ ಪಾಳಯದಿಂದ ಬಿ.ಕೆರಂಗಸ್ವಾಮಿ ಸ್ಪರ್ಧಿಸಿದ್ದಾರೆಕಳೆದ ಬಾರಿ ಗಳಿಸಿದ್ದ 3ನೇ ಸ್ಥಾನವನ್ನು ಕಾಂಗ್ರೆಸ್ ಅಭ್ಯರ್ಥಿ ಉತ್ತಮಪಡಿಸಿಕೊಳ್ಳುತ್ತಾರಾಗೆಲುವು ಪಡೆದು ದಿಗ್ಗಜರಿಗೆ ಶಾಕ್ ಕೊಡುತ್ತಾರಾ ಎಂಬುದು ಕೆಲವೇ ಕ್ಷಣಗಳಲ್ಲಿ ಗೊತ್ತಾಗುತ್ತದೆ.

ಹಾಸನ ಕ್ಷೇತ್ರದ ಹಿಂದಿನ ಚುನಾವಣಾ ಇತಿಹಾಸ ನೋಡುವುದಾದರೆ 1957ರಿಂದ ಈಚೆ 2018 ರವರೆಗೆ 14 ಚುನಾವಣೆಗಳು ಈ ಕ್ಷೇತ್ರದಲ್ಲಿ ನಡೆದಿವೆಜೆಡಿಎಸ್ ಹಾಗೂ ಅದಕ್ಕೂ ಹಿಂದಿನ ಜನತಾ ಪಕ್ಷ ಅತಿ ಹೆಚ್ಚು ಬಾರಿ ಗೆದ್ದಿವೆಕಾಂಗ್ರೆಸ್ ಬಾರಿ ಗೆದ್ದಿದೆಬಿಜೆಪಿ ಅಭ್ಯರ್ಥಿಗಳೂ ಎರಡು ಬಾರಿ ಗೆದ್ದಿದ್ದಾರೆ.

1) ಹಾಸನ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,23,021, ಪುರುಷ ಮತದಾರರು: 1,10,153, ಮಹಿಳಾ ಮತದಾರರು: 1,12,857.

2018ರ ವಿಜೇತರು: ಪ್ರೀತಂ ಗೌಡ (ಬಿಜೆಪಿ),

2023 ರ ಅಭ್ಯರ್ಥಿಗಳು;
ಸ್ವರೂಪ್‌ ಪ್ರಕಾಶ್‌ (ಜೆಡಿಎಸ್‌), ಮುನ್ನಡೆ
ಪ್ರೀತಂ ಗೌಡ (ಬಿಜೆಪಿ), ಹಿನ್ನಡೆ
ಬನವಾಸೆ ರಂಗಸ್ವಾಮಿ (ಕಾಂಗ್ರೆಸ್‌) ಮೂರನೆ ಸ್ಥಾನ

2) ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,03,026, ಪುರುಷ ಮತದಾರರು: 1,00,604, ಮಹಿಳಾ ಮತದಾರರು: 1,02,419.

2018ರ ವಿಜೇತರು: ಸಿ.ಎನ್‌.ಬಾಲಕೃಷ್ಣ (ಜೆಡಿಎಸ್‌).

2023ರ ಅಭ್ಯರ್ಥಿಗಳು:
ಸಿ.ಎನ್‌.ಬಾಲಕೃಷ್ಣ (ಜೆಡಿಎಸ್‌), ಮುನ್ನಡೆ
ಎಂ.ಗೋಪಾಲಸ್ವಾಮಿ(ಕಾಂಗ್ರೆಸ್), ಹಿನ್ನಡೆ
ಚಿದಾನಂದ (ಬಿಜೆಪಿ), ಹಿನ್ನಡೆ

3) ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,18,097, ಪುರುಷ ಮತದಾರರು: 1,09,187, ಮಹಿಳಾ ಮತದಾರರು: 1,08,900.

2018ರ ವಿಜೇತರು: ಎಚ್‌.ಡಿ. ರೇವಣ್ಣ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಎಚ್‌.ಡಿ. ರೇವಣ್ಣ (ಜೆಡಿಎಸ್‌), ಮುನ್ನಡೆ
ಶ್ರೇಯಸ್‌ ಪಟೇಲ್‌ (ಕಾಂಗ್ರೆಸ್‌), ಹಿನ್ನಡೆ
ಜಿ. ದೇವರಾಜೇಗೌಡ (ಬಿಜೆಪಿ), ಹಿನ್ನಡೆ

4) ಅರಕಲಗೂಡು ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,25,746, ಪುರುಷ ಮತದಾರರು: 1,15,558, ಮಹಿಳಾ ಮತದಾರರು: 1,10,185.

2018ರ ವಿಜೇತರು: ಎ.ಟಿ. ರಾಮಸ್ವಾಮಿ (ಜೆಡಿಎಸ್‌),

2023 ರ ಅಭ್ಯರ್ಥಿಗಳು;
ಎ. ಮಂಜು (ಜೆಡಿಎಸ್‌), ಮುನ್ನಡೆ
ಯೋಗಾ ರಮೇಶ್‌ (ಬಿಜೆಪಿ), ಹಿನ್ನಡೆ
ಶ್ರೀಧರ್‌ ಗೌಡ (ಕಾಂಗ್ರೆಸ್‌), ಹಿನ್ನಡೆ
ಎಂ.ಟಿ. ಕೃಷ್ಣೇಗೌಡ (ಪಕ್ಷೇತರ), ಹಿನ್ನಡೆ

5) ಸಕಲೇಶಪುರ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,03,631, ಪುರುಷ ಮತದಾರರು: 1,01,582, ಮಹಿಳಾ ಮತದಾರರು: 1,02,044.

2018ರ ವಿಜೇತರು: ಎಚ್.ಕೆ. ಕುಮಾರಸ್ವಾಮಿ (ಜೆಡಿಎಸ್‌),

2023 ರ ಅಭ್ಯರ್ಥಿಗಳು:

ಎಸ್. ಮಂಜುನಾಥ (ಬಿಜೆಪಿ), ಮುನ್ನಡೆ
ಎಚ್‌.ಕೆ.ಕುಮಾರಸ್ವಾಮಿ (ಜೆಡಿಎಸ್‌), ಹಿನ್ನಡೆ
ಮುರುಳಿಮೋಹನ್‌ (ಕಾಂಗ್ರೆಸ್‌), ಹಿನ್ನಡೆ

6) ಅರಸೀಕೆರೆ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,14,020, ಪುರುಷ ಮತದಾರರು: 1,06,476, ಮಹಿಳಾ ಮತದಾರರು: 1,07,540.

2018ರ ವಿಜೇತರು: ಕೆ.ಎಂ. ಶಿವಲಿಂಗೇಗೌಡ (ಜೆಡಿಎಸ್‌);

2023 ರ ಅಭ್ಯರ್ಥಿಗಳು:
ಕೆ.ಎಂ.ಶಿವಲಿಂಗೇಗೌಡ (ಕಾಂಗ್ರೆಸ್‌), ಮುನ್ನಡೆ
ಎನ್‌.ಆರ್.ಸಂತೋಷ್‌ (ಜೆಡಿಎಸ್‌), ಹಿನ್ನಡೆ
ಜಿ.ವಿ.ಟಿ. ಬಸವರಾಜು (ಬಿಜೆಪಿ), ಹಿನ್ನಡೆ

7) ಬೇಲೂರು ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 1,96,053, ಪುರುಷ ಮತದಾರರು: 98,719, ಮಹಿಳಾ ಮತದಾರರು: 97,330.

2018ರ ವಿಜೇತರು: ಕೆ.ಎಸ್‌.ಲಿಂಗೇಶ್‌ (ಜೆಡಿಎಸ್‌),

2023 ರ ಅಭ್ಯರ್ಥಿಗಳು;
ಎಚ್‌.ಕೆ. ಸುರೇಶ್ (ಬಿಜೆಪಿ), ಮುನ್ನಡೆ
ಕೆ.ಎಸ್. ಲಿಂಗೇಶ್‌ (ಜೆಡಿಎಸ್‌), ಹಿನ್ನಡೆ
ಬಿ.ಶಿವರಾಂ (ಕಾಂಗ್ರೆಸ್‌), ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...