Homeಕರ್ನಾಟಕಹಾಸನ ಜಿಲ್ಲೆಯ ಚುನಾವಣ ಕಣದಲ್ಲಿ ಯಾವ ಅಭ್ಯರ್ಥಿ ಮುನ್ನಡೆ

ಹಾಸನ ಜಿಲ್ಲೆಯ ಚುನಾವಣ ಕಣದಲ್ಲಿ ಯಾವ ಅಭ್ಯರ್ಥಿ ಮುನ್ನಡೆ

- Advertisement -
- Advertisement -
ಹಾಸನ ಜಿಲ್ಲೆಯಲ್ಲಿ ಒಟ್ಟು ಏಳು ವಿಧಾನಸಬಾ ಕ್ಷೇತ್ರಗಳ ಪೈಕಿ ಈ ಬಾರಿ ಹೆಚ್ಚು ಕುತೂಹಲ ಮೂಡಿಸಿರುವ ಕ್ಷೇತ್ರವೆಂದರೆ ಹಾಸನ ವಿಧಾನಸಭಾ ಕ್ಷೇತ್ರ. ಈ ಕ್ಷೇತ್ರದಲ್ಲಿ ಹಲವು ವರ್ಷಗಳಿಂದಲೂ ಜೆಡಿಎಸ್ ಪ್ರಭಲ್ಯವಿದ್ದರೂ ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರೀತಮ್ ಗೌಡ ಗೆದ್ದು ಬೀಗುವ ಮೂಲಕ ಜೆಡಿಎಸ್ ಓಟಕ್ಕೆ ಬ್ರೇಕ್ ಹಾಕಿದ್ದರು. ಈ ಬಾರಿಯ 2023ರ ವಿಧಾನಸಭಾ ಚುನಾವಣೆಯಲ್ಲಿ  ಜೆಡಿಎಸ್‌ನ ಸ್ವರೂಪ್ ಮತ್ತು ಬಿಜೆಪಿ ಅಭ್ಯರ್ಥಿಯಾಗಿದ್ದ ಪ್ರೀತಮ್‌ಗೌಡ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆದಿದ್ದು ಮತದಾರ ಯಾರ ಕೈ ಹಿಡಿದಿದ್ದಾನೆ ಎಂದು ನೋಡಬೇಕಿದೆ.
ಇನ್ನುಹಲವು ವರ್ಷಗಳಿಂದ ಹಾಸನ ಕ್ಷೇತ್ರ ಕಾಂಗ್ರೆಸ್ ಪಕ್ಷಕ್ಕೆ ಕಬ್ಬಿಣದ ಕಡಲೆಯೇ ಆಗಿಹೋಗಿದೆಈ ಬಾರಿ ಕೈ ಪಾಳಯದಿಂದ ಬಿ.ಕೆರಂಗಸ್ವಾಮಿ ಸ್ಪರ್ಧಿಸಿದ್ದಾರೆಕಳೆದ ಬಾರಿ ಗಳಿಸಿದ್ದ 3ನೇ ಸ್ಥಾನವನ್ನು ಕಾಂಗ್ರೆಸ್ ಅಭ್ಯರ್ಥಿ ಉತ್ತಮಪಡಿಸಿಕೊಳ್ಳುತ್ತಾರಾಗೆಲುವು ಪಡೆದು ದಿಗ್ಗಜರಿಗೆ ಶಾಕ್ ಕೊಡುತ್ತಾರಾ ಎಂಬುದು ಕೆಲವೇ ಕ್ಷಣಗಳಲ್ಲಿ ಗೊತ್ತಾಗುತ್ತದೆ.

ಹಾಸನ ಕ್ಷೇತ್ರದ ಹಿಂದಿನ ಚುನಾವಣಾ ಇತಿಹಾಸ ನೋಡುವುದಾದರೆ 1957ರಿಂದ ಈಚೆ 2018 ರವರೆಗೆ 14 ಚುನಾವಣೆಗಳು ಈ ಕ್ಷೇತ್ರದಲ್ಲಿ ನಡೆದಿವೆಜೆಡಿಎಸ್ ಹಾಗೂ ಅದಕ್ಕೂ ಹಿಂದಿನ ಜನತಾ ಪಕ್ಷ ಅತಿ ಹೆಚ್ಚು ಬಾರಿ ಗೆದ್ದಿವೆಕಾಂಗ್ರೆಸ್ ಬಾರಿ ಗೆದ್ದಿದೆಬಿಜೆಪಿ ಅಭ್ಯರ್ಥಿಗಳೂ ಎರಡು ಬಾರಿ ಗೆದ್ದಿದ್ದಾರೆ.

1) ಹಾಸನ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,23,021, ಪುರುಷ ಮತದಾರರು: 1,10,153, ಮಹಿಳಾ ಮತದಾರರು: 1,12,857.

2018ರ ವಿಜೇತರು: ಪ್ರೀತಂ ಗೌಡ (ಬಿಜೆಪಿ),

2023 ರ ಅಭ್ಯರ್ಥಿಗಳು;
ಸ್ವರೂಪ್‌ ಪ್ರಕಾಶ್‌ (ಜೆಡಿಎಸ್‌), ಮುನ್ನಡೆ
ಪ್ರೀತಂ ಗೌಡ (ಬಿಜೆಪಿ), ಹಿನ್ನಡೆ
ಬನವಾಸೆ ರಂಗಸ್ವಾಮಿ (ಕಾಂಗ್ರೆಸ್‌) ಮೂರನೆ ಸ್ಥಾನ

2) ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,03,026, ಪುರುಷ ಮತದಾರರು: 1,00,604, ಮಹಿಳಾ ಮತದಾರರು: 1,02,419.

2018ರ ವಿಜೇತರು: ಸಿ.ಎನ್‌.ಬಾಲಕೃಷ್ಣ (ಜೆಡಿಎಸ್‌).

2023ರ ಅಭ್ಯರ್ಥಿಗಳು:
ಸಿ.ಎನ್‌.ಬಾಲಕೃಷ್ಣ (ಜೆಡಿಎಸ್‌), ಮುನ್ನಡೆ
ಎಂ.ಗೋಪಾಲಸ್ವಾಮಿ(ಕಾಂಗ್ರೆಸ್), ಹಿನ್ನಡೆ
ಚಿದಾನಂದ (ಬಿಜೆಪಿ), ಹಿನ್ನಡೆ

3) ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,18,097, ಪುರುಷ ಮತದಾರರು: 1,09,187, ಮಹಿಳಾ ಮತದಾರರು: 1,08,900.

2018ರ ವಿಜೇತರು: ಎಚ್‌.ಡಿ. ರೇವಣ್ಣ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಎಚ್‌.ಡಿ. ರೇವಣ್ಣ (ಜೆಡಿಎಸ್‌), ಮುನ್ನಡೆ
ಶ್ರೇಯಸ್‌ ಪಟೇಲ್‌ (ಕಾಂಗ್ರೆಸ್‌), ಹಿನ್ನಡೆ
ಜಿ. ದೇವರಾಜೇಗೌಡ (ಬಿಜೆಪಿ), ಹಿನ್ನಡೆ

4) ಅರಕಲಗೂಡು ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,25,746, ಪುರುಷ ಮತದಾರರು: 1,15,558, ಮಹಿಳಾ ಮತದಾರರು: 1,10,185.

2018ರ ವಿಜೇತರು: ಎ.ಟಿ. ರಾಮಸ್ವಾಮಿ (ಜೆಡಿಎಸ್‌),

2023 ರ ಅಭ್ಯರ್ಥಿಗಳು;
ಎ. ಮಂಜು (ಜೆಡಿಎಸ್‌), ಮುನ್ನಡೆ
ಯೋಗಾ ರಮೇಶ್‌ (ಬಿಜೆಪಿ), ಹಿನ್ನಡೆ
ಶ್ರೀಧರ್‌ ಗೌಡ (ಕಾಂಗ್ರೆಸ್‌), ಹಿನ್ನಡೆ
ಎಂ.ಟಿ. ಕೃಷ್ಣೇಗೌಡ (ಪಕ್ಷೇತರ), ಹಿನ್ನಡೆ

5) ಸಕಲೇಶಪುರ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,03,631, ಪುರುಷ ಮತದಾರರು: 1,01,582, ಮಹಿಳಾ ಮತದಾರರು: 1,02,044.

2018ರ ವಿಜೇತರು: ಎಚ್.ಕೆ. ಕುಮಾರಸ್ವಾಮಿ (ಜೆಡಿಎಸ್‌),

2023 ರ ಅಭ್ಯರ್ಥಿಗಳು:

ಎಸ್. ಮಂಜುನಾಥ (ಬಿಜೆಪಿ), ಮುನ್ನಡೆ
ಎಚ್‌.ಕೆ.ಕುಮಾರಸ್ವಾಮಿ (ಜೆಡಿಎಸ್‌), ಹಿನ್ನಡೆ
ಮುರುಳಿಮೋಹನ್‌ (ಕಾಂಗ್ರೆಸ್‌), ಹಿನ್ನಡೆ

6) ಅರಸೀಕೆರೆ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,14,020, ಪುರುಷ ಮತದಾರರು: 1,06,476, ಮಹಿಳಾ ಮತದಾರರು: 1,07,540.

2018ರ ವಿಜೇತರು: ಕೆ.ಎಂ. ಶಿವಲಿಂಗೇಗೌಡ (ಜೆಡಿಎಸ್‌);

2023 ರ ಅಭ್ಯರ್ಥಿಗಳು:
ಕೆ.ಎಂ.ಶಿವಲಿಂಗೇಗೌಡ (ಕಾಂಗ್ರೆಸ್‌), ಮುನ್ನಡೆ
ಎನ್‌.ಆರ್.ಸಂತೋಷ್‌ (ಜೆಡಿಎಸ್‌), ಹಿನ್ನಡೆ
ಜಿ.ವಿ.ಟಿ. ಬಸವರಾಜು (ಬಿಜೆಪಿ), ಹಿನ್ನಡೆ

7) ಬೇಲೂರು ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 1,96,053, ಪುರುಷ ಮತದಾರರು: 98,719, ಮಹಿಳಾ ಮತದಾರರು: 97,330.

2018ರ ವಿಜೇತರು: ಕೆ.ಎಸ್‌.ಲಿಂಗೇಶ್‌ (ಜೆಡಿಎಸ್‌),

2023 ರ ಅಭ್ಯರ್ಥಿಗಳು;
ಎಚ್‌.ಕೆ. ಸುರೇಶ್ (ಬಿಜೆಪಿ), ಮುನ್ನಡೆ
ಕೆ.ಎಸ್. ಲಿಂಗೇಶ್‌ (ಜೆಡಿಎಸ್‌), ಹಿನ್ನಡೆ
ಬಿ.ಶಿವರಾಂ (ಕಾಂಗ್ರೆಸ್‌), ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...