Homeಕರ್ನಾಟಕಹಾಸನ ಟಿಕೆಟ್ ಫೈಟ್: ಮನೆಹಾಳು ಶಕುನಿಗಳಿಂದಲೇ ಈ ಗೊಂದಲ ಎಂದ ಕುಮಾರಸ್ವಾಮಿ

ಹಾಸನ ಟಿಕೆಟ್ ಫೈಟ್: ಮನೆಹಾಳು ಶಕುನಿಗಳಿಂದಲೇ ಈ ಗೊಂದಲ ಎಂದ ಕುಮಾರಸ್ವಾಮಿ

- Advertisement -
- Advertisement -

ಹಾಸನ ಟಿಕೆಟ್ ವಿಚಾರದಲ್ಲಿ ಜೆಡಿಎಸ್​ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಒಂದು ಕಡೆ ಎಚ್‌ಡಿ ರೇವಣ್ಣ ಅವರು ಪತ್ನಿಗೆ ಟಿಕೆಟ್ ನೀಡದಿದ್ದರೆ ನನಗೂ ಟಿಕೆಟ್ ಬೇಡ ಎಂದು ಹೇಳುತ್ತಿದ್ದರೆ, ಇತ್ತ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಾಮಾನ್ಯ ಕಾರ್ಯಕರ್ತನಿಗೆ ಜೆಡಿಎಸ್ ಟಿಕೆಟ್ ನೀಡಲಾಗುತ್ತದೆ ಎಂಬ ಹೇಳಿಕೆಯನ್ನು ಪುನರುಚ್ಚಾರಿಸಿದ್ದಾರೆ.

ಈ ಬಗ್ಗೆ ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ”ಮನೆ ಹಾಳು ಮಾಡುವ ಶಕುನಿಗಳು ಹಾಸನದಲ್ಲಿ ಇದ್ದಾರೆ‌‌. ಕುರುಕ್ಷೇತ್ರದ ಯುದ್ದ ಶಕುನಿಯಿಂದಲೇ ಆಗಿದೆ, ಇಲ್ಲಿಯೂ ಶಕುನಿಗಳು ತಲೆ ಕೆಡಿಸುತ್ತಿದ್ದಾರೆ. ಶಕುನಿಗಳು ನನ್ನ ಕುಟುಂಬದಲ್ಲಿ ಇಲ್ಲ, ಹಾಸನದಲ್ಲಿ ಇದ್ದಾರೆ” ಎಂದು ಗರಂ ಆದರು.

ಹಾಸನ ಟಿಕೆಟ್ ವಿಚಾರವಾಗಿ ಸ್ಪಷ್ಟನೆ ನೀಡಿದ ಅವರು, ”ಶಕುನಿಗಳು ಬೆಳಗಿನಿಂದ ಸಂಜೆಯವರೆಗೆ ಮೈಂಡ್ ವಾಶ್ ಮಾಡುತ್ತಿದ್ದಾರೆ. ಬೇರೆ ಪಕ್ಷದವರು, ಬುದ್ಧಿ ಜೀವಿಗಳು ಮತ್ತು ಹಿತಶತ್ರುಗಳು ತಲೆ ಕೆಡೆಸಿದ್ದಾರೆ. ಹಾಸನದಲ್ಲಿ ಕಾರ್ಯಕರ್ತರಿಗೆ ಟಿಕೆಟ್ ಕೊಡಬೇಕೆಂದು ಹೇಳಿದ್ದೇನೆ, ಇದರಲ್ಲಿ ರಾಜಿ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿದಿದ್ದಾರೆ.

”ದೇವೇಗೌಡರಿಗೂ ಸಹ ರೇವಣ್ಣ ಅವರನ್ನು ಮನವೊಲಿಸುವ ಶಕ್ತಿ‌ ಇಲ್ಲ. ಕಳೆದ 15 ವರ್ಷದಿಂದ ಹಲವು‌ ವಿಷಯ ನುಂಗಿಕೊಂಡಿದ್ದೇನೆ, ಕೆಲವು ವಿಷಯಗಳನ್ನು ಹೇಳಿಕೊಳ್ಳಲು ಆಗೋದಿಲ್ಲ. ನನಗೆ ಆಗುತ್ತಿರುವ ಅನಾಹುತ ಗೊತ್ತಿದ್ದರೂ ಸಹ, ತಪ್ಪುಗಳು ಮಾಡದಿದ್ದರೂ ತಲೆ ಮೇಲೆ ಹೊತ್ತು ಕೊಳ್ಳಬೇಕಾಯಿತು. ಈಗಲೂ ಅದೇ ರೀತಿ ವಾತಾವರಣ ಸೃಷ್ಟಯಾಗಿದೆ” ಎಂದು ಕುಮಾರಸ್ವಾಮಿ ಭಾವುಕರಾದರು.

ಈ ವೇಳೆ, ‘ನಾನು ಜೆಡಿಎಸ್​ ಅಧ್ಯಕ್ಷನಾಗಿದ್ದ ವೇಳೆ 59 ಸೀಟ್ ಬಂದಿದೆ’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ಕೊಟ್ಟ ಎಚ್​ಡಿಕೆ, ”59 ಸೀಟ್ ಪಡೆಯಲು ಯಾರ ಕೊಡುಗೆ ಎಷ್ಟು ಎಂಬುದು ಗೊತ್ತು. ಈ ಬಾರಿ ಚುನಾವಣೆಯಲ್ಲಿ 59 ಸೀಟ್ ಕ್ರಾಸ್ ಮಾಡುತ್ತೇನೆ. ಒಬ್ಬನೇ ಹೋರಾಟ ಮಾಡಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕಿಂತ ಹೆಚ್ಚು ಗೆಲ್ಲುತ್ತೇನೆ” ಎಂದು ಸವಾಲು ಹಾಕಿದರು.

ಇದನ್ನೂ ಓದಿ: ಕೆಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

ಪತ್ನಿ ಭವಾನಿಗೆ ಹಾಸನ ಟಿಕೆಟ್ ನೀಡಬೇಕು- ರೇವಣ್ಣ ಪಟ್ಟು

ಇತ್ತೀಚೆಗೆ ಎಚ್.ಡಿ. ರೇವಣ್ಣ ಅವರು ತಮ್ಮ ಆಪ್ತರೊಡನೆ ಸಮಾಲೋಚನೆ ಮಾಡುವ ವೇಳೆ, ಹಾಸನ ಟಿಕೆಟ್ ಗೊಂದಲ ಕಗ್ಗಂಟಾಗಿರುವ ಬಗ್ಗೆ ತೀವ್ರ ಬೇಸರ ಪಟ್ಟುಕೊಂಡಿದ್ದಾರೆ. ಹಾಸನದಲ್ಲಿ ಭವಾನಿಯವರಿಗೆ ಟಿಕೆಟ್ ಕೊಡಬೇಕು ಎಂದು ನಾನು ಪಟ್ಟು ಹಿಡಿದು ಕೇಳುವಂಥ ಪರಿಸ್ಥಿತಿ ಬಂದೊಂದಗಿದೆ. ಒಂದು ವೇಳೆ, ಹಾಸನದಲ್ಲಿ ಭವಾನಿಯವರಿಗೆ ಟಿಕೆಟ್ ನೀಡದೇ ಹೋದರೆ, ನನಗೂ ಟಿಕೆಟ್ ಬೇಡ. ನಾನೂ ಸಹ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.

”ಹಾಸನ ಕ್ಷೇತ್ರದಲ್ಲಿ ಬಿಜೆಪಿಯನ್ನು ಎದುರಿಸಲು ಪ್ರಬಲ ಅಭ್ಯರ್ಥಿ ಅಗತ್ಯ. ಸಾಮಾನ್ಯ ಕಾರ್ಯಕರ್ತರನ್ನು ಕಣಕ್ಕಿಳಿ ಸಿದರೆ ಗೆಲುವು ಸಾಧ್ಯವಿಲ್ಲ. ಮತ್ತೆ ಕ್ಷೇತ್ರ ಕೈತಪ್ಪಿದರೆ, ಕಾರ್ಯಕರ್ತರು ಅನಾಥಪ್ರಜ್ಞೆ ಅನುಭವಿಸಬೇಕಾಗುತ್ತದೆ. ಈ ಬಾರಿ ಏನಾದರೂ ಆಗಲಿ, ಪಕ್ಷ ಗೆಲ್ಲಬೇಕು” ಎಂದು ಮುಖಂಡರು ಪ್ರತಿಪಾದಿಸಿದ್ದಾರೆ.

”ಕ್ಷೇತ್ರವನ್ನು ಉಳಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಹೊಳೆನರಸೀಪುರದಲ್ಲಿ ಗೆದ್ದು ಏನು ಮಾಡುವುದು? ನನಗೂ ಅಲ್ಲಿನ ಟಿಕೆಟ್ ಬೇಡ. ಈ ಬಗ್ಗೆ ದೇವೇಗೌಡರಿಗೆ ಸಂದೇಶ ರವಾನಿಸುವೆ”  ಎಂದು ಮುಖಂಡರಿಗೆ ರೇವಣ್ಣ ತಿಳಿಸಿದ್ದಾರೆ.

”ಹಿರಿಯ ಸಹೋದರ ಬಾಲಕೃಷ್ಣೇ ಗೌಡ ಸೇರಿದಂತೆ ದೇವೇಗೌಡರ ಆಪ್ತರ ಮೂಲಕ ಈ ಸಂದೇಶವನ್ನು ದೇವೇಗೌಡರಿಗೆ ರವಾನಿಸಿದ್ದರು.”

ಈ ಕುರಿತು ದೇವೇಗೌಡರೂ ರೇವಣ್ಣ ಜೊತೆಗೆ ಚರ್ಚಿಸಿದ್ದು, ಗೊಂದಲಕ್ಕೆ ಅವಕಾಶ ವಿಲ್ಲದಂತೆ ಚರ್ಚಿಸಿ ತೀರ್ಮಾನಿಸಲಾಗುವುದು. ಆತುರದ ನಿರ್ಧಾರ ಕೈಗೊಳ್ಳ ಬಾರದೆಂದು ತಾಕೀತು ಮಾಡಿದ್ದರು.

ಭವಾನಿ ಅವರು ಪಟ್ಟು ಸಡಿಲಿಸುತ್ತಿಲ್ಲ. ಪುತ್ರರು ಕೂಡ ತಾಯಿಯನ್ನು ಹಾಸನದಿಂದ ಕಣಕ್ಕಿಳಿಸಲೇಬೇಕೆಂದು ಹಟ ತೊಟ್ಟಿದ್ದಾರೆ. ಇದೇ ಹಿನ್ನೆಲೆಯಲ್ಲಿ ಕೊನೆಯ ಅಸ್ತ್ರವಾಗಿ ”ನನಗೆ ಹೊಳೆನರಸೀಪುರ ಟಿಕೆಟ್‌ ಬೇಡ” ಎಂಬ ದಾಳವನ್ನು ರೇವಣ್ಣ ಉರುಳಿಸಿದ್ದರು ಎಂದು ಹೇಳಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...