Homeಕರ್ನಾಟಕಹಾಸನ ಟಿಕೆಟ್ ಫೈಟ್: ಮನೆಹಾಳು ಶಕುನಿಗಳಿಂದಲೇ ಈ ಗೊಂದಲ ಎಂದ ಕುಮಾರಸ್ವಾಮಿ

ಹಾಸನ ಟಿಕೆಟ್ ಫೈಟ್: ಮನೆಹಾಳು ಶಕುನಿಗಳಿಂದಲೇ ಈ ಗೊಂದಲ ಎಂದ ಕುಮಾರಸ್ವಾಮಿ

- Advertisement -
- Advertisement -

ಹಾಸನ ಟಿಕೆಟ್ ವಿಚಾರದಲ್ಲಿ ಜೆಡಿಎಸ್​ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಒಂದು ಕಡೆ ಎಚ್‌ಡಿ ರೇವಣ್ಣ ಅವರು ಪತ್ನಿಗೆ ಟಿಕೆಟ್ ನೀಡದಿದ್ದರೆ ನನಗೂ ಟಿಕೆಟ್ ಬೇಡ ಎಂದು ಹೇಳುತ್ತಿದ್ದರೆ, ಇತ್ತ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಾಮಾನ್ಯ ಕಾರ್ಯಕರ್ತನಿಗೆ ಜೆಡಿಎಸ್ ಟಿಕೆಟ್ ನೀಡಲಾಗುತ್ತದೆ ಎಂಬ ಹೇಳಿಕೆಯನ್ನು ಪುನರುಚ್ಚಾರಿಸಿದ್ದಾರೆ.

ಈ ಬಗ್ಗೆ ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ”ಮನೆ ಹಾಳು ಮಾಡುವ ಶಕುನಿಗಳು ಹಾಸನದಲ್ಲಿ ಇದ್ದಾರೆ‌‌. ಕುರುಕ್ಷೇತ್ರದ ಯುದ್ದ ಶಕುನಿಯಿಂದಲೇ ಆಗಿದೆ, ಇಲ್ಲಿಯೂ ಶಕುನಿಗಳು ತಲೆ ಕೆಡಿಸುತ್ತಿದ್ದಾರೆ. ಶಕುನಿಗಳು ನನ್ನ ಕುಟುಂಬದಲ್ಲಿ ಇಲ್ಲ, ಹಾಸನದಲ್ಲಿ ಇದ್ದಾರೆ” ಎಂದು ಗರಂ ಆದರು.

ಹಾಸನ ಟಿಕೆಟ್ ವಿಚಾರವಾಗಿ ಸ್ಪಷ್ಟನೆ ನೀಡಿದ ಅವರು, ”ಶಕುನಿಗಳು ಬೆಳಗಿನಿಂದ ಸಂಜೆಯವರೆಗೆ ಮೈಂಡ್ ವಾಶ್ ಮಾಡುತ್ತಿದ್ದಾರೆ. ಬೇರೆ ಪಕ್ಷದವರು, ಬುದ್ಧಿ ಜೀವಿಗಳು ಮತ್ತು ಹಿತಶತ್ರುಗಳು ತಲೆ ಕೆಡೆಸಿದ್ದಾರೆ. ಹಾಸನದಲ್ಲಿ ಕಾರ್ಯಕರ್ತರಿಗೆ ಟಿಕೆಟ್ ಕೊಡಬೇಕೆಂದು ಹೇಳಿದ್ದೇನೆ, ಇದರಲ್ಲಿ ರಾಜಿ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿದಿದ್ದಾರೆ.

”ದೇವೇಗೌಡರಿಗೂ ಸಹ ರೇವಣ್ಣ ಅವರನ್ನು ಮನವೊಲಿಸುವ ಶಕ್ತಿ‌ ಇಲ್ಲ. ಕಳೆದ 15 ವರ್ಷದಿಂದ ಹಲವು‌ ವಿಷಯ ನುಂಗಿಕೊಂಡಿದ್ದೇನೆ, ಕೆಲವು ವಿಷಯಗಳನ್ನು ಹೇಳಿಕೊಳ್ಳಲು ಆಗೋದಿಲ್ಲ. ನನಗೆ ಆಗುತ್ತಿರುವ ಅನಾಹುತ ಗೊತ್ತಿದ್ದರೂ ಸಹ, ತಪ್ಪುಗಳು ಮಾಡದಿದ್ದರೂ ತಲೆ ಮೇಲೆ ಹೊತ್ತು ಕೊಳ್ಳಬೇಕಾಯಿತು. ಈಗಲೂ ಅದೇ ರೀತಿ ವಾತಾವರಣ ಸೃಷ್ಟಯಾಗಿದೆ” ಎಂದು ಕುಮಾರಸ್ವಾಮಿ ಭಾವುಕರಾದರು.

ಈ ವೇಳೆ, ‘ನಾನು ಜೆಡಿಎಸ್​ ಅಧ್ಯಕ್ಷನಾಗಿದ್ದ ವೇಳೆ 59 ಸೀಟ್ ಬಂದಿದೆ’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ಕೊಟ್ಟ ಎಚ್​ಡಿಕೆ, ”59 ಸೀಟ್ ಪಡೆಯಲು ಯಾರ ಕೊಡುಗೆ ಎಷ್ಟು ಎಂಬುದು ಗೊತ್ತು. ಈ ಬಾರಿ ಚುನಾವಣೆಯಲ್ಲಿ 59 ಸೀಟ್ ಕ್ರಾಸ್ ಮಾಡುತ್ತೇನೆ. ಒಬ್ಬನೇ ಹೋರಾಟ ಮಾಡಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕಿಂತ ಹೆಚ್ಚು ಗೆಲ್ಲುತ್ತೇನೆ” ಎಂದು ಸವಾಲು ಹಾಕಿದರು.

ಇದನ್ನೂ ಓದಿ: ಕೆಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

ಪತ್ನಿ ಭವಾನಿಗೆ ಹಾಸನ ಟಿಕೆಟ್ ನೀಡಬೇಕು- ರೇವಣ್ಣ ಪಟ್ಟು

ಇತ್ತೀಚೆಗೆ ಎಚ್.ಡಿ. ರೇವಣ್ಣ ಅವರು ತಮ್ಮ ಆಪ್ತರೊಡನೆ ಸಮಾಲೋಚನೆ ಮಾಡುವ ವೇಳೆ, ಹಾಸನ ಟಿಕೆಟ್ ಗೊಂದಲ ಕಗ್ಗಂಟಾಗಿರುವ ಬಗ್ಗೆ ತೀವ್ರ ಬೇಸರ ಪಟ್ಟುಕೊಂಡಿದ್ದಾರೆ. ಹಾಸನದಲ್ಲಿ ಭವಾನಿಯವರಿಗೆ ಟಿಕೆಟ್ ಕೊಡಬೇಕು ಎಂದು ನಾನು ಪಟ್ಟು ಹಿಡಿದು ಕೇಳುವಂಥ ಪರಿಸ್ಥಿತಿ ಬಂದೊಂದಗಿದೆ. ಒಂದು ವೇಳೆ, ಹಾಸನದಲ್ಲಿ ಭವಾನಿಯವರಿಗೆ ಟಿಕೆಟ್ ನೀಡದೇ ಹೋದರೆ, ನನಗೂ ಟಿಕೆಟ್ ಬೇಡ. ನಾನೂ ಸಹ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.

”ಹಾಸನ ಕ್ಷೇತ್ರದಲ್ಲಿ ಬಿಜೆಪಿಯನ್ನು ಎದುರಿಸಲು ಪ್ರಬಲ ಅಭ್ಯರ್ಥಿ ಅಗತ್ಯ. ಸಾಮಾನ್ಯ ಕಾರ್ಯಕರ್ತರನ್ನು ಕಣಕ್ಕಿಳಿ ಸಿದರೆ ಗೆಲುವು ಸಾಧ್ಯವಿಲ್ಲ. ಮತ್ತೆ ಕ್ಷೇತ್ರ ಕೈತಪ್ಪಿದರೆ, ಕಾರ್ಯಕರ್ತರು ಅನಾಥಪ್ರಜ್ಞೆ ಅನುಭವಿಸಬೇಕಾಗುತ್ತದೆ. ಈ ಬಾರಿ ಏನಾದರೂ ಆಗಲಿ, ಪಕ್ಷ ಗೆಲ್ಲಬೇಕು” ಎಂದು ಮುಖಂಡರು ಪ್ರತಿಪಾದಿಸಿದ್ದಾರೆ.

”ಕ್ಷೇತ್ರವನ್ನು ಉಳಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಹೊಳೆನರಸೀಪುರದಲ್ಲಿ ಗೆದ್ದು ಏನು ಮಾಡುವುದು? ನನಗೂ ಅಲ್ಲಿನ ಟಿಕೆಟ್ ಬೇಡ. ಈ ಬಗ್ಗೆ ದೇವೇಗೌಡರಿಗೆ ಸಂದೇಶ ರವಾನಿಸುವೆ”  ಎಂದು ಮುಖಂಡರಿಗೆ ರೇವಣ್ಣ ತಿಳಿಸಿದ್ದಾರೆ.

”ಹಿರಿಯ ಸಹೋದರ ಬಾಲಕೃಷ್ಣೇ ಗೌಡ ಸೇರಿದಂತೆ ದೇವೇಗೌಡರ ಆಪ್ತರ ಮೂಲಕ ಈ ಸಂದೇಶವನ್ನು ದೇವೇಗೌಡರಿಗೆ ರವಾನಿಸಿದ್ದರು.”

ಈ ಕುರಿತು ದೇವೇಗೌಡರೂ ರೇವಣ್ಣ ಜೊತೆಗೆ ಚರ್ಚಿಸಿದ್ದು, ಗೊಂದಲಕ್ಕೆ ಅವಕಾಶ ವಿಲ್ಲದಂತೆ ಚರ್ಚಿಸಿ ತೀರ್ಮಾನಿಸಲಾಗುವುದು. ಆತುರದ ನಿರ್ಧಾರ ಕೈಗೊಳ್ಳ ಬಾರದೆಂದು ತಾಕೀತು ಮಾಡಿದ್ದರು.

ಭವಾನಿ ಅವರು ಪಟ್ಟು ಸಡಿಲಿಸುತ್ತಿಲ್ಲ. ಪುತ್ರರು ಕೂಡ ತಾಯಿಯನ್ನು ಹಾಸನದಿಂದ ಕಣಕ್ಕಿಳಿಸಲೇಬೇಕೆಂದು ಹಟ ತೊಟ್ಟಿದ್ದಾರೆ. ಇದೇ ಹಿನ್ನೆಲೆಯಲ್ಲಿ ಕೊನೆಯ ಅಸ್ತ್ರವಾಗಿ ”ನನಗೆ ಹೊಳೆನರಸೀಪುರ ಟಿಕೆಟ್‌ ಬೇಡ” ಎಂಬ ದಾಳವನ್ನು ರೇವಣ್ಣ ಉರುಳಿಸಿದ್ದರು ಎಂದು ಹೇಳಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...