Homeಕರ್ನಾಟಕದ್ವೇಷಕ್ಕೆ ಜನರನ್ನ ದೇವರ ಬಳಿ ಕರೆದೊಯ್ಯಲು ಸಾಧ್ಯವಿಲ್ಲ - ಪ್ರಿಯಾಂಕ್ ಖರ್ಗೆ

ದ್ವೇಷಕ್ಕೆ ಜನರನ್ನ ದೇವರ ಬಳಿ ಕರೆದೊಯ್ಯಲು ಸಾಧ್ಯವಿಲ್ಲ – ಪ್ರಿಯಾಂಕ್ ಖರ್ಗೆ

- Advertisement -
- Advertisement -

ದ್ವೇಷಕ್ಕೆ ಜನರನ್ನ ದೇವರ ಬಳಿ ಕರೆದೊಯ್ಯಲು ಸಾಧ್ಯವಿಲ್ಲಾ. ಆದರೆ ಪ್ರೀತಿ ಹಾಗೂ ಕಾಂಗ್ರೆಸ್ ನ “ಶಕ್ತಿ” ಜನರನ್ನ ತಮ್ಮ ಪೂಜ್ಯ ಸ್ಥಳಗಳಿಗೆ ಮತ್ತಷ್ಟು ಹತ್ತಿರ ಮಾಡಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.

ನೂತನ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯಿಂದಾಗಿ ಬಹಳಷ್ಟು ಮಹಿಳೆಯರು ತಮ್ಮಿಷ್ಟದ ಪೂಜ್ಯ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಮುಖ್ಯವಾಗಿ ಧರ್ಮಸ್ಥಳ, ಮಲೈ ಮಹದೇಶ್ವರ ಬೆಟ್ಟಗಳಿಗೆ ಹೆಚ್ಚಿನ ಸಂಖ್ಯೆಯ ಮಹಿಳೆಯರು ಹರಿದುಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆಯರವರು, “ಹಿಂದುತ್ವ ಜನರನ್ನ ಧರ್ಮದ ದಾರಿಯಲ್ಲಿ ಸಾಗಿಸುವ ಬದಲಿಗೆ ಸಮಾಜವನ್ನು ಇಬ್ಬಾಗಿಸುವ ದ್ವೇಷ ಹಾಗೂ ಅಸೂಯೆಯ ಕೂಪಕ್ಕೆ ತಳ್ಳಿತ್ತು. ಆದರೆ ನಮ್ಮ ಶಕ್ತಿ ಯೋಜನೆ ಜನರನ್ನು ತಮ್ಮ ಪೂಜ್ಯ ಸ್ಥಳಗಳಿಗೆ ಮತ್ತಷ್ಟು ಹತ್ತಿರ ಮಾಡಿದೆ” ಎಂದಿದ್ದಾರೆ.

“ಶಕ್ತಿ ಯೋಜನೆಯಿಂದಾಗಿ ದೇವಸ್ಥಾನ ಹಾಗೂ ಪೂಜಾ ಕೇಂದ್ರಗಳಿಗೆ ಬರುವ ಭಕ್ತರ ಸಂಖ್ಯೆ ದ್ವಿಗುಣವಾಗಿದೆ. ಜನರ ಅಂತರಾಳದಲ್ಲಿ ಪೂಜಿಸುವ, ಪ್ರೀತಿಸುವ ಭಾವನೆಯನ್ನು ಸಬಲಗೊಳಿಸಲಾಗಿದೆ. ಇದರಿಂದ ರಾಜ್ಯದ ಎಲ್ಲಾ ದೇವಸ್ಥಾನಗಳ ಸುತ್ತಲಿನ ಸಾವಿರಾರು ಸಣ್ಣ ವ್ಯಾಪಾರಿಗಳಿಗೆ ನೇರ ಅನುಕೂಲ ಸಿಗಲಿದ್ದು, ಅಲ್ಲಿನ ಆರ್ಥಿಕ ಪ್ರಗತಿಯ ವೇಗ ಕೂಡ ದ್ವಿಗುಣಗೊಳ್ಳಲಿದೆ. ದ್ವೇಷ ಕೇಂದ್ರಿತ ಅಧರ್ಮವನ್ನು ಸೋಲಿಸಿ, ಪ್ರೀತಿ ಹಾಗೂ ಸಹಬಾಳ್ವೆ ಕೇಂದ್ರಿತ ಧರ್ಮವನ್ನು ಗೆಲ್ಲಿಸಲು ನಾವು ‘ಶಕ್ತಿ’ಯುತ ಹೆಜ್ಜೆ ಇಟ್ಟಿದ್ದೇವೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

“ಶಕ್ತಿ ಯೋಜನೆ ಪ್ರಾರಂಭವಾದ ಈ ಒಂದು ವಾರದಲ್ಲಿ ಸುಮಾರು 3 ಕೋಟಿ ಮಹಿಳೆಯರು ಇದರ ಪ್ರಯೋಜನ ಪಡೆದಿದ್ದಾರೆ. ಆರಂಭದಲ್ಲಿ ಸಹಜವಾಗಿ ಹೆಚ್ಚಿನ ಜನ ಬರುತ್ತಿರುವುದರಿಂದ ನೂಕುನುಗ್ಗಲು ಉಂಟಾಗಿದೆ. ಆದರೆ ಕ್ರಮೇಣ ಅದು ಸಹಜ ಸ್ಥಿತಿಗೆ ಬರುತ್ತದೆ. ಏಕೆಂದರೆ ಜನ ಪದೇ ಪದೇ ಅದೇ ಸ್ಥಳಗಳಿಗೆ ಹೋಗಲು ಬಯಸುವುದಿಲ್ಲ. ಇನ್ನು ಶಕ್ತಿಯೋಜನೆಯನ್ನು 5 ವರ್ಷಗಳ ಕಾಲವೂ ಜಾರಿಗೊಳಿಸಲಾಗುವುದು” ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಮಹಿಳೆಯರಿಗೆ ಬಸ್‌ ಪ್ರಯಾಣ ಉಚಿತವಾದ ಹಿನ್ನೆಲೆಯಲ್ಲಿ ಅವರು ತಮ್ಮ ಬಿಡುವಿನ ವೇಳೆಯಲ್ಲಿ ತಮ್ಮಿಷ್ಟದ ಸ್ಥಳಗಳಿಗೆ ಹೋಗುತ್ತಿದ್ದಾರೆ. ಬಹುತೇಕರು ತಮ್ಮೊಂದಿಗೆ ತಮ್ಮ ಪತಿಯರನ್ನು ಕರೆದೊಯ್ಯುತ್ತಿದ್ದಾರೆ. ಹಾಗಾಗಿ ರಸ್ತೆ ಸಾರಿಗೆ ಇಲಾಖೆಗೂ ಲಾಭವಾಗುತ್ತಿದೆ ಎಂಬುದಾಗಿ ಮೂಲಗಳು ತಿಳಿಸಿವೆ. ಅಲ್ಲದೇ ಜನರ ಓಡಾಟ ಹೆಚ್ಚಾದಂತೆ ಹೋಟೆಲ್‌ಗಳು-ಅಂಗಡಿಗಳ ವ್ಯಾಪಾರ ವಹಿವಾಟು ಕೂಡ ಹೆಚ್ಚಾಗುತ್ತಿದೆ. ಇದು ಆರ್ಥಿಕತೆ ಬೆಳವಣಿಗೆಯ ದೃಷ್ಟಿಯಿಂದ ಒಳ್ಳೆಯದಾಗಲಿದೆ ಎಂಬ ಮಾತುಗಳು ಕೇಳಿಬಂದಿವೆ.

ಇದನ್ನೂ ಓದಿ: ಕಡುಬಡವರ ಬದುಕಲ್ಲಿ ಕೊಂಚ ಆಸರೆ ಗ್ಯಾರಂಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...