Homeಮುಖಪುಟಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ: ನೂಪುರ್ ಶರ್ಮಾ, ಪತ್ರಕರ್ತೆ ಸಬಾ ನಖ್ವಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ

ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ: ನೂಪುರ್ ಶರ್ಮಾ, ಪತ್ರಕರ್ತೆ ಸಬಾ ನಖ್ವಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ

- Advertisement -
- Advertisement -

ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ವಿವಾದ ಭಾರಿ ಆಕ್ರೋಶಕ್ಕೆ ಕಾರಣವಾಗಿರುವ ನಡುವೆ ದ್ವೇಷದ ಸಂದೇಶಗಳನ್ನು ಹರಡಿದ ಆರೋಪದಲ್ಲಿ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ, ಉಚ್ಛಾಟಿತ ನಾಯಕ ನವೀನ್ ಜಿಂದಾಲ್ ಮತ್ತು ಪತ್ರಕರ್ತೆ ಸಬಾ ನಖ್ವಿ ಏರಿದಂತೆ ಇತರರ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದ್ವೇಷದ ಸಂದೇಶಗಳನ್ನು ಹರಡುವ, ವಿವಿಧ ಗುಂಪುಗಳ ನಡುವೆ ಗಲಭೇಗೆ ಪ್ರಚೋದಿಸುವ ಮತ್ತು ಸಾರ್ವಜನಿಕ ನೆಮ್ಮದಿಗೆ ಹಾನಿಕಾರಕವಾದ ಸನ್ನಿವೇಶಗಳನ್ನು ಸೃಷ್ಟಿಸುತ್ತಿರುವ ಕೆಲವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಐಎಫ್‌ಎಸ್‌ಒ (Intelligence Fusion and Strategic Operation) ಘಟಕ ದಾಖಲಿಸಿದ ಎಫ್‌ಐಆರ್‌ನಲ್ಲಿ ದೆಹಲಿ ಬಿಜೆಪಿಯ ಮಾಧ್ಯಮ ಘಟಕದ ಉಚ್ಛಾಟಿತ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್, ಪೀಸ್ ಪಾರ್ಟಿಯ ಮುಖ್ಯ ವಕ್ತಾರ ಶಾದಾಬ್ ಚೌಹಾಣ್ ಸೇರಿದ್ದಾರೆ. ಪತ್ರಕರ್ತೆ ಸಬಾ ನಖ್ವಿ, ಹಿಂದೂ ಮಹಾಸಭಾದ ಪದಾಧಿಕಾರಿ ಪೂಜಾ ಶಕುನ್ ಪಾಂಡೆ, ರಾಜಸ್ಥಾನದ ಮೌಲಾನಾ ಮುಫ್ತಿ ನದೀಮ್, ಅಬ್ದುರ್ ರೆಹಮಾನ್, ಅನಿಲ್ ಕುಮಾರ್ ಮೀನಾ ಮತ್ತು ಗುಲ್ಜಾರ್ ಅನ್ಸಾರಿ ಹೆಸರಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ ಮಾಡಿದವನಿಂದ ಪಠ್ಯಪರಿಷ್ಕರಣೆ; ರೋಹಿತ್‌ ಚಕ್ರತೀರ್ಥರ ಹಳೆಯ ಪೋಸ್ಟ್‌ಗಳು ವೈರಲ್‌

ದೆಹಲಿ ಪೊಲೀಸರು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದು, ಒಂದು ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಮತ್ತು ಇನ್ನೊಂದು “ವಿವಾದಾತ್ಮಕ” ಹೇಳಿಕೆಗಳನ್ನು ನಿರಂತರವಾಗಿ ನೀಡುತ್ತಿರುವ ಆರೋಪ ಹೊತ್ತಿರುವವರ ವಿರುದ್ಧ.

ಸೈಬರ್‌ಸ್ಪೇಸ್‌ನಲ್ಲಿ ಅಶಾಂತಿಯನ್ನು ಸೃಷ್ಟಿಸುವ ಉದ್ದೇಶದಿಂದ ಸುಳ್ಳು ಮಾಹಿತಿಯನ್ನು ಪ್ರಚಾರ ಮಾಡುವಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳ ಪಾತ್ರವನ್ನು ಐಎಫ್‌ಎಸ್‌ಒ ಘಟಕವು ತನಿಖೆ ಮಾಡುತ್ತದೆ ಪೊಲೀಸ್ ಉಪ ಆಯುಕ್ತ (ಐಎಫ್‌ಎಸ್‌ಒ) ಕೆಪಿಎಸ್ ಎಂದು ಮಲ್ಹೋತ್ರಾ ಹೇಳಿದ್ದಾರೆ.

ಈ ನಡುವೆ ನೂಪುರ್ ಶರ್ಮಾ ಅವರ ಅವಹೇಳನಕಾರಿ ಹೇಳಿಕೆಯ ನಂತರ ಒಕ್ಕೂಟ ಸರ್ಕಾರವು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರಿ ಒತ್ತಡಕ್ಕೆ ಸಿಲುಕಿದೆ. ಇದರಿಂದ ಆಡಳಿತಾರೂಢ ಬಿಜೆಪಿ ತನ್ನ ಪಕ್ಷದ ವಕ್ತಾರರು ಮತ್ತು ಟಿವಿ ಚರ್ಚೆಗಳಲ್ಲಿ ಭಾಗವಹಿಸುವ ನಾಯಕರಿಗೆ ಹೊಸ ನಿಯಮಗಳನ್ನು ನಿಗದಿಪಡಿಸಿದೆ.


ಇದನ್ನೂ ಓದಿ: ಉತ್ತರ ಪ್ರದೇಶ: ಜಾಮಾ ಮಸೀದಿಗೆ ಭೇಟಿ ನೀಡದಂತೆ ಯತಿ ನರಸಿಂಗಾನಂದಗೆ ಜಿಲ್ಲಾಡಳಿತ ಸೂಚನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ತುರ್ಕಿಗಳು ಹಿಂದೂ ದೇವರುಗಳ ಬಗ್ಗೆ ಅವಹೇಳನ ಮಾಡಿದಾಗ ಸತ್ತು ಬಿದ್ದಿದ್ದ ನಾಯಿಗಳು ಈಗ ಪೈಗಂಬರ್ ಬಗ್ಗೆ ಮಾತನಾಡಿದ್ದಕ್ಕೆ ಹೊಲಸು ತಿಂದ ಹಂದಿ ತರ ಹಾರಾಡ್ತಿವೆ .ಇದಕ್ಕೆ ಏನನ್ನಬೇಕು ಹೇಳಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...