Homeಮುಖಪುಟಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ: ನೂಪುರ್ ಶರ್ಮಾ, ಪತ್ರಕರ್ತೆ ಸಬಾ ನಖ್ವಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ

ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ: ನೂಪುರ್ ಶರ್ಮಾ, ಪತ್ರಕರ್ತೆ ಸಬಾ ನಖ್ವಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ

- Advertisement -
- Advertisement -

ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ವಿವಾದ ಭಾರಿ ಆಕ್ರೋಶಕ್ಕೆ ಕಾರಣವಾಗಿರುವ ನಡುವೆ ದ್ವೇಷದ ಸಂದೇಶಗಳನ್ನು ಹರಡಿದ ಆರೋಪದಲ್ಲಿ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ, ಉಚ್ಛಾಟಿತ ನಾಯಕ ನವೀನ್ ಜಿಂದಾಲ್ ಮತ್ತು ಪತ್ರಕರ್ತೆ ಸಬಾ ನಖ್ವಿ ಏರಿದಂತೆ ಇತರರ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದ್ವೇಷದ ಸಂದೇಶಗಳನ್ನು ಹರಡುವ, ವಿವಿಧ ಗುಂಪುಗಳ ನಡುವೆ ಗಲಭೇಗೆ ಪ್ರಚೋದಿಸುವ ಮತ್ತು ಸಾರ್ವಜನಿಕ ನೆಮ್ಮದಿಗೆ ಹಾನಿಕಾರಕವಾದ ಸನ್ನಿವೇಶಗಳನ್ನು ಸೃಷ್ಟಿಸುತ್ತಿರುವ ಕೆಲವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಐಎಫ್‌ಎಸ್‌ಒ (Intelligence Fusion and Strategic Operation) ಘಟಕ ದಾಖಲಿಸಿದ ಎಫ್‌ಐಆರ್‌ನಲ್ಲಿ ದೆಹಲಿ ಬಿಜೆಪಿಯ ಮಾಧ್ಯಮ ಘಟಕದ ಉಚ್ಛಾಟಿತ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್, ಪೀಸ್ ಪಾರ್ಟಿಯ ಮುಖ್ಯ ವಕ್ತಾರ ಶಾದಾಬ್ ಚೌಹಾಣ್ ಸೇರಿದ್ದಾರೆ. ಪತ್ರಕರ್ತೆ ಸಬಾ ನಖ್ವಿ, ಹಿಂದೂ ಮಹಾಸಭಾದ ಪದಾಧಿಕಾರಿ ಪೂಜಾ ಶಕುನ್ ಪಾಂಡೆ, ರಾಜಸ್ಥಾನದ ಮೌಲಾನಾ ಮುಫ್ತಿ ನದೀಮ್, ಅಬ್ದುರ್ ರೆಹಮಾನ್, ಅನಿಲ್ ಕುಮಾರ್ ಮೀನಾ ಮತ್ತು ಗುಲ್ಜಾರ್ ಅನ್ಸಾರಿ ಹೆಸರಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ ಮಾಡಿದವನಿಂದ ಪಠ್ಯಪರಿಷ್ಕರಣೆ; ರೋಹಿತ್‌ ಚಕ್ರತೀರ್ಥರ ಹಳೆಯ ಪೋಸ್ಟ್‌ಗಳು ವೈರಲ್‌

ದೆಹಲಿ ಪೊಲೀಸರು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದು, ಒಂದು ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಮತ್ತು ಇನ್ನೊಂದು “ವಿವಾದಾತ್ಮಕ” ಹೇಳಿಕೆಗಳನ್ನು ನಿರಂತರವಾಗಿ ನೀಡುತ್ತಿರುವ ಆರೋಪ ಹೊತ್ತಿರುವವರ ವಿರುದ್ಧ.

ಸೈಬರ್‌ಸ್ಪೇಸ್‌ನಲ್ಲಿ ಅಶಾಂತಿಯನ್ನು ಸೃಷ್ಟಿಸುವ ಉದ್ದೇಶದಿಂದ ಸುಳ್ಳು ಮಾಹಿತಿಯನ್ನು ಪ್ರಚಾರ ಮಾಡುವಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳ ಪಾತ್ರವನ್ನು ಐಎಫ್‌ಎಸ್‌ಒ ಘಟಕವು ತನಿಖೆ ಮಾಡುತ್ತದೆ ಪೊಲೀಸ್ ಉಪ ಆಯುಕ್ತ (ಐಎಫ್‌ಎಸ್‌ಒ) ಕೆಪಿಎಸ್ ಎಂದು ಮಲ್ಹೋತ್ರಾ ಹೇಳಿದ್ದಾರೆ.

ಈ ನಡುವೆ ನೂಪುರ್ ಶರ್ಮಾ ಅವರ ಅವಹೇಳನಕಾರಿ ಹೇಳಿಕೆಯ ನಂತರ ಒಕ್ಕೂಟ ಸರ್ಕಾರವು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರಿ ಒತ್ತಡಕ್ಕೆ ಸಿಲುಕಿದೆ. ಇದರಿಂದ ಆಡಳಿತಾರೂಢ ಬಿಜೆಪಿ ತನ್ನ ಪಕ್ಷದ ವಕ್ತಾರರು ಮತ್ತು ಟಿವಿ ಚರ್ಚೆಗಳಲ್ಲಿ ಭಾಗವಹಿಸುವ ನಾಯಕರಿಗೆ ಹೊಸ ನಿಯಮಗಳನ್ನು ನಿಗದಿಪಡಿಸಿದೆ.


ಇದನ್ನೂ ಓದಿ: ಉತ್ತರ ಪ್ರದೇಶ: ಜಾಮಾ ಮಸೀದಿಗೆ ಭೇಟಿ ನೀಡದಂತೆ ಯತಿ ನರಸಿಂಗಾನಂದಗೆ ಜಿಲ್ಲಾಡಳಿತ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತುರ್ಕಿಗಳು ಹಿಂದೂ ದೇವರುಗಳ ಬಗ್ಗೆ ಅವಹೇಳನ ಮಾಡಿದಾಗ ಸತ್ತು ಬಿದ್ದಿದ್ದ ನಾಯಿಗಳು ಈಗ ಪೈಗಂಬರ್ ಬಗ್ಗೆ ಮಾತನಾಡಿದ್ದಕ್ಕೆ ಹೊಲಸು ತಿಂದ ಹಂದಿ ತರ ಹಾರಾಡ್ತಿವೆ .ಇದಕ್ಕೆ ಏನನ್ನಬೇಕು ಹೇಳಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...