Homeಮುಖಪುಟಎನ್‌ಡಿಎ ತೊರೆದ ಅಕಾಲಿ ದಳದ ಬಿಕ್ರಂ ಸಿಂಗ್ ಅವರ Z-ಪ್ಲಸ್ ಭದ್ರತೆ ಹಿಂಪಡೆದ ಕೇಂದ್ರ!

ಎನ್‌ಡಿಎ ತೊರೆದ ಅಕಾಲಿ ದಳದ ಬಿಕ್ರಂ ಸಿಂಗ್ ಅವರ Z-ಪ್ಲಸ್ ಭದ್ರತೆ ಹಿಂಪಡೆದ ಕೇಂದ್ರ!

ಅಕಾಲಿ ದಳ ಪಕ್ಷವು ರೈತರೊಂದಿಗೆ ದೃಢವಾಗಿ ನಿಂತಿದೆ ಎಂಬ ಕಾರಣಕ್ಕೆ ಮಜಿತಿಯಾ ಅವರ ಭದ್ರತಾ ರಕ್ಷಣೆಯನ್ನು ಹಿಂಪಡೆಯಲಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಚೀಮಾ ಆರೋಪಿಸಿದ್ದಾರೆ.

- Advertisement -
- Advertisement -

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಪಂಜಾಬ್‌ನ ಮಾಜಿ ಸಚಿವ ಬಿಕ್ರಂ ಸಿಂಗ್ ಮಜಿತಿಯಾ ಅವರಿಗೆ ನೀಡಲಾಗಿದ್ದ Z-ಪ್ಲಸ್ ಭದ್ರತಾ ಪಡೆಯನ್ನು ಹಿಂತೆಗೆದುಕೊಂಡಿದೆ ಎಂದು ಶಿರೋಮಣಿ ಅಕಾಲಿ ದಳ ಆರೋಪಿಸಿದ್ದು, ವಾಗ್ದಾಳಿ ನಡೆಸಿದೆ.

ಮಾಜಿ ಸಚಿವ ಮತ್ತು ಅಕಾಲಿ ದಳದ ಹಿರಿಯ ನಾಯಕ ಬಿಕ್ರಮ್ ಸಿಂಗ್ ಮಜಿತಿಯಾ ಅವರಿಗೆ ನೀಡಿದ್ದ Z-ಪ್ಲಸ್ ಭದ್ರತೆಯನ್ನು ಹಿಂಪಡೆದಿದ್ದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಮತ್ತು ರಾಜಕೀಯ ಪ್ರೇರಿತವಾದ ಈ ನಿರ್ಧಾರವನ್ನು ಅಕಾಲಿ ದಳವು ಖಂಡಿಸುತ್ತದೆ ಎಂದು ಪಕ್ಷದ ವಕ್ತಾರ ದಲ್ಜಿತ್ ಸಿಂಗ್ ಚೀಮಾ ಹೇಳಿದ್ದಾರೆ.

ಇದನ್ನೂ ಓದಿ: ಕಾಯ್ದೆ ವಿರೋಧಿ ಮೋದಿ ಸರ್ಕಾರದ ಕಾಯ್ದೆ ತಿದ್ದುಪಡಿಗಳು!

ಕೇಂದ್ರದ ಕೃಷಿ ಕಾನೂನುಗಳ ಪರವಾಗಿ ಮತ್ತು ಜಮ್ಮು-ಕಾಶ್ಮೀರದಲ್ಲಿ ಪಂಜಾಬಿ ಭಾಷೆಗೆ ಅಧಿಕೃತ ಸ್ಥಾನಮಾನವನ್ನು ನಿರಾಕರಿಸಿರುವುದರ ವಿರುದ್ಧ ಹಾಗೂ ಅಕಾಲಿ ದಳ ಪಕ್ಷವು ರೈತರೊಂದಿಗೆ ದೃಢವಾಗಿ ನಿಂತಿದೆ ಎಂಬ ಕಾರಣಕ್ಕೆ ಹಿರಿಯ ನಾಯಕ ಮಜಿತಿಯಾ ಅವರ ಭದ್ರತಾ ರಕ್ಷಣೆಯನ್ನು ಹಿಂಪಡೆಯಲಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಚೀಮಾ ಆರೋಪಿಸಿದ್ದಾರೆ.

“ಸಂಸತ್ತಿನಲ್ಲಿ ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ನಮ್ಮ ಪಕ್ಷವು ಮತ ಚಲಾಯಿಸಿತ್ತು. ಈ ಭಾಗವಾಗಿಯೇ ಕೇಂದ್ರ ಕ್ಯಾಬಿನೆಟ್ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು ತ್ಯಜಿಸಿದ್ದೆವು” ಎಂದು ಹೇಳಿದರು.

ಇದನ್ನೂ ಓದಿ: ಕೃಷಿ ಮಸೂದೆಯನ್ನು ವಿರೋಧಿಸಿ ರಾಜಿನಾಮೆ ನೀಡಿದ ಕೇಂದ್ರ ಸಚಿವೆ!

ಇಂತಹ ರಾಜಕಾರಣವು ರಾಜ್ಯದಲ್ಲಿ ಅಶಾಂತಿಯನ್ನು ಸೃಷ್ಟಿಸುತ್ತದೆ ಎಂದು ಹೇಳಿದ ಚೀಮಾ, “ಹಿರಿಯ ಎಡಪಂಥೀಯ ನಾಯಕ ಮತ್ತು ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಬಲ್ವಿಂದರ್ ಸಿಂಗ್ ಅವರ ಭದ್ರತಾ ಪಡೆಯನ್ನು ಹಿಂತೆಗೆದುಕೊಂಡ ನಂತರ ಇತ್ತೀಚೆಗೆ ತಾರ್ನ್‌ ತರಣ್‌ನಲ್ಲಿ ಅವರನ್ನು ಹೇಗೆ ಹತ್ಯೆ ಮಾಡಲಾಯಿತು ಎಂಬುದನ್ನು ನಾವು ಈಗಾಗಲೇ ನೋಡಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ಎನ್‌ಡಿಎ ಮೈತ್ರಿಕೂಟ ತೊರೆದ ಪಂಜಾಬ್‌ನ ಅಕಾಲಿ ದಳ!

“ಸರ್ಕಾರದ ಗುಣಗಾನ ಮಾಡುವ ಜನರಿಗೆ ಅಪೇಕ್ಷೆ ಮತ್ತು ಮನೋಭಾವದ ಮೇಲೆ ಭದ್ರತೆಯನ್ನು ನೀಡಬಾರದು. ಕೃಷಿ ಸಮುದಾಯವನ್ನು ಬೆಂಬಲಿಸುವ ಸಲುವಾಗಿ ಅಕಾಲಿದಳ ಕೇಂದ್ರದ ವಿರುದ್ಧ ದನಿಯೆತ್ತಿದ್ದಕ್ಕೆ ಇದ್ದಕ್ಕಿದ್ದಂತೆ ಮಜಿತಿಯಾ ಅವರ ಭದ್ರತಾ ಪಡೆಯನ್ನು ಹಿಂಪಡೆಯಲಾಗಿದೆ. ಈ ಕ್ರಮ ಯಾವ ಆಧಾರದ ಮೇಲೆ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವಾಲಯ ವಿವರಿಸುತ್ತದೆಯೇ?” ಎಂದು ಅವರು ಪ್ರಶ್ನಿಸಿದರು.

ಮಜಿತಿಯಾ ಅವರನ್ನು ಪಾಕಿಸ್ತಾನ ಮೂಲದ ಭಯೋತ್ಪಾದಕರು ಗುರಿಯಾಗಿಸಿಕೊಂಡಿದ್ದು, ಇವರನ್ನು ಕೊಲೆ ಮಾಡುವುದಾಗಿ ಬಹಿರಂಗ ಬೆದರಿಕೆ ಹಾಕಿದ್ದಾರೆ. ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕೂಡ ಇತ್ತೀಚೆಗೆ ಪಂಜಾಬ್‌ನಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಾಗುತ್ತಿದೆ ಎಂದಿದ್ದರು.

ಹಾಗಾಗಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶಗೊಂಡಿರುವ ಅಕಾಲಿದಳ ತೀವ್ರ ವಾಗ್ದಾಲಿ ನಡೆಸಿದೆ.


ಇದನ್ನೂ ಓದಿ: ಕೃಷಿ ಮಸೂದೆ: ಪಂಜಾಬ್‌ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಪ್ ಶಾಸಕರ ಅಹೋರಾತ್ರಿ ಪ್ರತಿಭಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....