Homeಮುಖಪುಟಎನ್‌ಡಿಎ ತೊರೆದ ಅಕಾಲಿ ದಳದ ಬಿಕ್ರಂ ಸಿಂಗ್ ಅವರ Z-ಪ್ಲಸ್ ಭದ್ರತೆ ಹಿಂಪಡೆದ ಕೇಂದ್ರ!

ಎನ್‌ಡಿಎ ತೊರೆದ ಅಕಾಲಿ ದಳದ ಬಿಕ್ರಂ ಸಿಂಗ್ ಅವರ Z-ಪ್ಲಸ್ ಭದ್ರತೆ ಹಿಂಪಡೆದ ಕೇಂದ್ರ!

ಅಕಾಲಿ ದಳ ಪಕ್ಷವು ರೈತರೊಂದಿಗೆ ದೃಢವಾಗಿ ನಿಂತಿದೆ ಎಂಬ ಕಾರಣಕ್ಕೆ ಮಜಿತಿಯಾ ಅವರ ಭದ್ರತಾ ರಕ್ಷಣೆಯನ್ನು ಹಿಂಪಡೆಯಲಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಚೀಮಾ ಆರೋಪಿಸಿದ್ದಾರೆ.

- Advertisement -
- Advertisement -

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಪಂಜಾಬ್‌ನ ಮಾಜಿ ಸಚಿವ ಬಿಕ್ರಂ ಸಿಂಗ್ ಮಜಿತಿಯಾ ಅವರಿಗೆ ನೀಡಲಾಗಿದ್ದ Z-ಪ್ಲಸ್ ಭದ್ರತಾ ಪಡೆಯನ್ನು ಹಿಂತೆಗೆದುಕೊಂಡಿದೆ ಎಂದು ಶಿರೋಮಣಿ ಅಕಾಲಿ ದಳ ಆರೋಪಿಸಿದ್ದು, ವಾಗ್ದಾಳಿ ನಡೆಸಿದೆ.

ಮಾಜಿ ಸಚಿವ ಮತ್ತು ಅಕಾಲಿ ದಳದ ಹಿರಿಯ ನಾಯಕ ಬಿಕ್ರಮ್ ಸಿಂಗ್ ಮಜಿತಿಯಾ ಅವರಿಗೆ ನೀಡಿದ್ದ Z-ಪ್ಲಸ್ ಭದ್ರತೆಯನ್ನು ಹಿಂಪಡೆದಿದ್ದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಮತ್ತು ರಾಜಕೀಯ ಪ್ರೇರಿತವಾದ ಈ ನಿರ್ಧಾರವನ್ನು ಅಕಾಲಿ ದಳವು ಖಂಡಿಸುತ್ತದೆ ಎಂದು ಪಕ್ಷದ ವಕ್ತಾರ ದಲ್ಜಿತ್ ಸಿಂಗ್ ಚೀಮಾ ಹೇಳಿದ್ದಾರೆ.

ಇದನ್ನೂ ಓದಿ: ಕಾಯ್ದೆ ವಿರೋಧಿ ಮೋದಿ ಸರ್ಕಾರದ ಕಾಯ್ದೆ ತಿದ್ದುಪಡಿಗಳು!

ಕೇಂದ್ರದ ಕೃಷಿ ಕಾನೂನುಗಳ ಪರವಾಗಿ ಮತ್ತು ಜಮ್ಮು-ಕಾಶ್ಮೀರದಲ್ಲಿ ಪಂಜಾಬಿ ಭಾಷೆಗೆ ಅಧಿಕೃತ ಸ್ಥಾನಮಾನವನ್ನು ನಿರಾಕರಿಸಿರುವುದರ ವಿರುದ್ಧ ಹಾಗೂ ಅಕಾಲಿ ದಳ ಪಕ್ಷವು ರೈತರೊಂದಿಗೆ ದೃಢವಾಗಿ ನಿಂತಿದೆ ಎಂಬ ಕಾರಣಕ್ಕೆ ಹಿರಿಯ ನಾಯಕ ಮಜಿತಿಯಾ ಅವರ ಭದ್ರತಾ ರಕ್ಷಣೆಯನ್ನು ಹಿಂಪಡೆಯಲಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಚೀಮಾ ಆರೋಪಿಸಿದ್ದಾರೆ.

“ಸಂಸತ್ತಿನಲ್ಲಿ ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ನಮ್ಮ ಪಕ್ಷವು ಮತ ಚಲಾಯಿಸಿತ್ತು. ಈ ಭಾಗವಾಗಿಯೇ ಕೇಂದ್ರ ಕ್ಯಾಬಿನೆಟ್ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು ತ್ಯಜಿಸಿದ್ದೆವು” ಎಂದು ಹೇಳಿದರು.

ಇದನ್ನೂ ಓದಿ: ಕೃಷಿ ಮಸೂದೆಯನ್ನು ವಿರೋಧಿಸಿ ರಾಜಿನಾಮೆ ನೀಡಿದ ಕೇಂದ್ರ ಸಚಿವೆ!

ಇಂತಹ ರಾಜಕಾರಣವು ರಾಜ್ಯದಲ್ಲಿ ಅಶಾಂತಿಯನ್ನು ಸೃಷ್ಟಿಸುತ್ತದೆ ಎಂದು ಹೇಳಿದ ಚೀಮಾ, “ಹಿರಿಯ ಎಡಪಂಥೀಯ ನಾಯಕ ಮತ್ತು ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಬಲ್ವಿಂದರ್ ಸಿಂಗ್ ಅವರ ಭದ್ರತಾ ಪಡೆಯನ್ನು ಹಿಂತೆಗೆದುಕೊಂಡ ನಂತರ ಇತ್ತೀಚೆಗೆ ತಾರ್ನ್‌ ತರಣ್‌ನಲ್ಲಿ ಅವರನ್ನು ಹೇಗೆ ಹತ್ಯೆ ಮಾಡಲಾಯಿತು ಎಂಬುದನ್ನು ನಾವು ಈಗಾಗಲೇ ನೋಡಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ಎನ್‌ಡಿಎ ಮೈತ್ರಿಕೂಟ ತೊರೆದ ಪಂಜಾಬ್‌ನ ಅಕಾಲಿ ದಳ!

“ಸರ್ಕಾರದ ಗುಣಗಾನ ಮಾಡುವ ಜನರಿಗೆ ಅಪೇಕ್ಷೆ ಮತ್ತು ಮನೋಭಾವದ ಮೇಲೆ ಭದ್ರತೆಯನ್ನು ನೀಡಬಾರದು. ಕೃಷಿ ಸಮುದಾಯವನ್ನು ಬೆಂಬಲಿಸುವ ಸಲುವಾಗಿ ಅಕಾಲಿದಳ ಕೇಂದ್ರದ ವಿರುದ್ಧ ದನಿಯೆತ್ತಿದ್ದಕ್ಕೆ ಇದ್ದಕ್ಕಿದ್ದಂತೆ ಮಜಿತಿಯಾ ಅವರ ಭದ್ರತಾ ಪಡೆಯನ್ನು ಹಿಂಪಡೆಯಲಾಗಿದೆ. ಈ ಕ್ರಮ ಯಾವ ಆಧಾರದ ಮೇಲೆ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವಾಲಯ ವಿವರಿಸುತ್ತದೆಯೇ?” ಎಂದು ಅವರು ಪ್ರಶ್ನಿಸಿದರು.

ಮಜಿತಿಯಾ ಅವರನ್ನು ಪಾಕಿಸ್ತಾನ ಮೂಲದ ಭಯೋತ್ಪಾದಕರು ಗುರಿಯಾಗಿಸಿಕೊಂಡಿದ್ದು, ಇವರನ್ನು ಕೊಲೆ ಮಾಡುವುದಾಗಿ ಬಹಿರಂಗ ಬೆದರಿಕೆ ಹಾಕಿದ್ದಾರೆ. ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕೂಡ ಇತ್ತೀಚೆಗೆ ಪಂಜಾಬ್‌ನಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಾಗುತ್ತಿದೆ ಎಂದಿದ್ದರು.

ಹಾಗಾಗಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶಗೊಂಡಿರುವ ಅಕಾಲಿದಳ ತೀವ್ರ ವಾಗ್ದಾಲಿ ನಡೆಸಿದೆ.


ಇದನ್ನೂ ಓದಿ: ಕೃಷಿ ಮಸೂದೆ: ಪಂಜಾಬ್‌ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಪ್ ಶಾಸಕರ ಅಹೋರಾತ್ರಿ ಪ್ರತಿಭಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...