Homeಮುಖಪುಟಎನ್‌ಡಿಎ ತೊರೆದ ಅಕಾಲಿ ದಳದ ಬಿಕ್ರಂ ಸಿಂಗ್ ಅವರ Z-ಪ್ಲಸ್ ಭದ್ರತೆ ಹಿಂಪಡೆದ ಕೇಂದ್ರ!

ಎನ್‌ಡಿಎ ತೊರೆದ ಅಕಾಲಿ ದಳದ ಬಿಕ್ರಂ ಸಿಂಗ್ ಅವರ Z-ಪ್ಲಸ್ ಭದ್ರತೆ ಹಿಂಪಡೆದ ಕೇಂದ್ರ!

ಅಕಾಲಿ ದಳ ಪಕ್ಷವು ರೈತರೊಂದಿಗೆ ದೃಢವಾಗಿ ನಿಂತಿದೆ ಎಂಬ ಕಾರಣಕ್ಕೆ ಮಜಿತಿಯಾ ಅವರ ಭದ್ರತಾ ರಕ್ಷಣೆಯನ್ನು ಹಿಂಪಡೆಯಲಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಚೀಮಾ ಆರೋಪಿಸಿದ್ದಾರೆ.

- Advertisement -
- Advertisement -

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಪಂಜಾಬ್‌ನ ಮಾಜಿ ಸಚಿವ ಬಿಕ್ರಂ ಸಿಂಗ್ ಮಜಿತಿಯಾ ಅವರಿಗೆ ನೀಡಲಾಗಿದ್ದ Z-ಪ್ಲಸ್ ಭದ್ರತಾ ಪಡೆಯನ್ನು ಹಿಂತೆಗೆದುಕೊಂಡಿದೆ ಎಂದು ಶಿರೋಮಣಿ ಅಕಾಲಿ ದಳ ಆರೋಪಿಸಿದ್ದು, ವಾಗ್ದಾಳಿ ನಡೆಸಿದೆ.

ಮಾಜಿ ಸಚಿವ ಮತ್ತು ಅಕಾಲಿ ದಳದ ಹಿರಿಯ ನಾಯಕ ಬಿಕ್ರಮ್ ಸಿಂಗ್ ಮಜಿತಿಯಾ ಅವರಿಗೆ ನೀಡಿದ್ದ Z-ಪ್ಲಸ್ ಭದ್ರತೆಯನ್ನು ಹಿಂಪಡೆದಿದ್ದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಮತ್ತು ರಾಜಕೀಯ ಪ್ರೇರಿತವಾದ ಈ ನಿರ್ಧಾರವನ್ನು ಅಕಾಲಿ ದಳವು ಖಂಡಿಸುತ್ತದೆ ಎಂದು ಪಕ್ಷದ ವಕ್ತಾರ ದಲ್ಜಿತ್ ಸಿಂಗ್ ಚೀಮಾ ಹೇಳಿದ್ದಾರೆ.

ಇದನ್ನೂ ಓದಿ: ಕಾಯ್ದೆ ವಿರೋಧಿ ಮೋದಿ ಸರ್ಕಾರದ ಕಾಯ್ದೆ ತಿದ್ದುಪಡಿಗಳು!

ಕೇಂದ್ರದ ಕೃಷಿ ಕಾನೂನುಗಳ ಪರವಾಗಿ ಮತ್ತು ಜಮ್ಮು-ಕಾಶ್ಮೀರದಲ್ಲಿ ಪಂಜಾಬಿ ಭಾಷೆಗೆ ಅಧಿಕೃತ ಸ್ಥಾನಮಾನವನ್ನು ನಿರಾಕರಿಸಿರುವುದರ ವಿರುದ್ಧ ಹಾಗೂ ಅಕಾಲಿ ದಳ ಪಕ್ಷವು ರೈತರೊಂದಿಗೆ ದೃಢವಾಗಿ ನಿಂತಿದೆ ಎಂಬ ಕಾರಣಕ್ಕೆ ಹಿರಿಯ ನಾಯಕ ಮಜಿತಿಯಾ ಅವರ ಭದ್ರತಾ ರಕ್ಷಣೆಯನ್ನು ಹಿಂಪಡೆಯಲಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಚೀಮಾ ಆರೋಪಿಸಿದ್ದಾರೆ.

“ಸಂಸತ್ತಿನಲ್ಲಿ ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ನಮ್ಮ ಪಕ್ಷವು ಮತ ಚಲಾಯಿಸಿತ್ತು. ಈ ಭಾಗವಾಗಿಯೇ ಕೇಂದ್ರ ಕ್ಯಾಬಿನೆಟ್ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು ತ್ಯಜಿಸಿದ್ದೆವು” ಎಂದು ಹೇಳಿದರು.

ಇದನ್ನೂ ಓದಿ: ಕೃಷಿ ಮಸೂದೆಯನ್ನು ವಿರೋಧಿಸಿ ರಾಜಿನಾಮೆ ನೀಡಿದ ಕೇಂದ್ರ ಸಚಿವೆ!

ಇಂತಹ ರಾಜಕಾರಣವು ರಾಜ್ಯದಲ್ಲಿ ಅಶಾಂತಿಯನ್ನು ಸೃಷ್ಟಿಸುತ್ತದೆ ಎಂದು ಹೇಳಿದ ಚೀಮಾ, “ಹಿರಿಯ ಎಡಪಂಥೀಯ ನಾಯಕ ಮತ್ತು ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಬಲ್ವಿಂದರ್ ಸಿಂಗ್ ಅವರ ಭದ್ರತಾ ಪಡೆಯನ್ನು ಹಿಂತೆಗೆದುಕೊಂಡ ನಂತರ ಇತ್ತೀಚೆಗೆ ತಾರ್ನ್‌ ತರಣ್‌ನಲ್ಲಿ ಅವರನ್ನು ಹೇಗೆ ಹತ್ಯೆ ಮಾಡಲಾಯಿತು ಎಂಬುದನ್ನು ನಾವು ಈಗಾಗಲೇ ನೋಡಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ಎನ್‌ಡಿಎ ಮೈತ್ರಿಕೂಟ ತೊರೆದ ಪಂಜಾಬ್‌ನ ಅಕಾಲಿ ದಳ!

“ಸರ್ಕಾರದ ಗುಣಗಾನ ಮಾಡುವ ಜನರಿಗೆ ಅಪೇಕ್ಷೆ ಮತ್ತು ಮನೋಭಾವದ ಮೇಲೆ ಭದ್ರತೆಯನ್ನು ನೀಡಬಾರದು. ಕೃಷಿ ಸಮುದಾಯವನ್ನು ಬೆಂಬಲಿಸುವ ಸಲುವಾಗಿ ಅಕಾಲಿದಳ ಕೇಂದ್ರದ ವಿರುದ್ಧ ದನಿಯೆತ್ತಿದ್ದಕ್ಕೆ ಇದ್ದಕ್ಕಿದ್ದಂತೆ ಮಜಿತಿಯಾ ಅವರ ಭದ್ರತಾ ಪಡೆಯನ್ನು ಹಿಂಪಡೆಯಲಾಗಿದೆ. ಈ ಕ್ರಮ ಯಾವ ಆಧಾರದ ಮೇಲೆ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವಾಲಯ ವಿವರಿಸುತ್ತದೆಯೇ?” ಎಂದು ಅವರು ಪ್ರಶ್ನಿಸಿದರು.

ಮಜಿತಿಯಾ ಅವರನ್ನು ಪಾಕಿಸ್ತಾನ ಮೂಲದ ಭಯೋತ್ಪಾದಕರು ಗುರಿಯಾಗಿಸಿಕೊಂಡಿದ್ದು, ಇವರನ್ನು ಕೊಲೆ ಮಾಡುವುದಾಗಿ ಬಹಿರಂಗ ಬೆದರಿಕೆ ಹಾಕಿದ್ದಾರೆ. ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕೂಡ ಇತ್ತೀಚೆಗೆ ಪಂಜಾಬ್‌ನಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಾಗುತ್ತಿದೆ ಎಂದಿದ್ದರು.

ಹಾಗಾಗಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶಗೊಂಡಿರುವ ಅಕಾಲಿದಳ ತೀವ್ರ ವಾಗ್ದಾಲಿ ನಡೆಸಿದೆ.


ಇದನ್ನೂ ಓದಿ: ಕೃಷಿ ಮಸೂದೆ: ಪಂಜಾಬ್‌ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಪ್ ಶಾಸಕರ ಅಹೋರಾತ್ರಿ ಪ್ರತಿಭಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...