Homeಮುಖಪುಟಎನ್‌ಡಿಎ ತೊರೆದ ಅಕಾಲಿ ದಳದ ಬಿಕ್ರಂ ಸಿಂಗ್ ಅವರ Z-ಪ್ಲಸ್ ಭದ್ರತೆ ಹಿಂಪಡೆದ ಕೇಂದ್ರ!

ಎನ್‌ಡಿಎ ತೊರೆದ ಅಕಾಲಿ ದಳದ ಬಿಕ್ರಂ ಸಿಂಗ್ ಅವರ Z-ಪ್ಲಸ್ ಭದ್ರತೆ ಹಿಂಪಡೆದ ಕೇಂದ್ರ!

ಅಕಾಲಿ ದಳ ಪಕ್ಷವು ರೈತರೊಂದಿಗೆ ದೃಢವಾಗಿ ನಿಂತಿದೆ ಎಂಬ ಕಾರಣಕ್ಕೆ ಮಜಿತಿಯಾ ಅವರ ಭದ್ರತಾ ರಕ್ಷಣೆಯನ್ನು ಹಿಂಪಡೆಯಲಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಚೀಮಾ ಆರೋಪಿಸಿದ್ದಾರೆ.

- Advertisement -
- Advertisement -

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಪಂಜಾಬ್‌ನ ಮಾಜಿ ಸಚಿವ ಬಿಕ್ರಂ ಸಿಂಗ್ ಮಜಿತಿಯಾ ಅವರಿಗೆ ನೀಡಲಾಗಿದ್ದ Z-ಪ್ಲಸ್ ಭದ್ರತಾ ಪಡೆಯನ್ನು ಹಿಂತೆಗೆದುಕೊಂಡಿದೆ ಎಂದು ಶಿರೋಮಣಿ ಅಕಾಲಿ ದಳ ಆರೋಪಿಸಿದ್ದು, ವಾಗ್ದಾಳಿ ನಡೆಸಿದೆ.

ಮಾಜಿ ಸಚಿವ ಮತ್ತು ಅಕಾಲಿ ದಳದ ಹಿರಿಯ ನಾಯಕ ಬಿಕ್ರಮ್ ಸಿಂಗ್ ಮಜಿತಿಯಾ ಅವರಿಗೆ ನೀಡಿದ್ದ Z-ಪ್ಲಸ್ ಭದ್ರತೆಯನ್ನು ಹಿಂಪಡೆದಿದ್ದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಮತ್ತು ರಾಜಕೀಯ ಪ್ರೇರಿತವಾದ ಈ ನಿರ್ಧಾರವನ್ನು ಅಕಾಲಿ ದಳವು ಖಂಡಿಸುತ್ತದೆ ಎಂದು ಪಕ್ಷದ ವಕ್ತಾರ ದಲ್ಜಿತ್ ಸಿಂಗ್ ಚೀಮಾ ಹೇಳಿದ್ದಾರೆ.

ಇದನ್ನೂ ಓದಿ: ಕಾಯ್ದೆ ವಿರೋಧಿ ಮೋದಿ ಸರ್ಕಾರದ ಕಾಯ್ದೆ ತಿದ್ದುಪಡಿಗಳು!

ಕೇಂದ್ರದ ಕೃಷಿ ಕಾನೂನುಗಳ ಪರವಾಗಿ ಮತ್ತು ಜಮ್ಮು-ಕಾಶ್ಮೀರದಲ್ಲಿ ಪಂಜಾಬಿ ಭಾಷೆಗೆ ಅಧಿಕೃತ ಸ್ಥಾನಮಾನವನ್ನು ನಿರಾಕರಿಸಿರುವುದರ ವಿರುದ್ಧ ಹಾಗೂ ಅಕಾಲಿ ದಳ ಪಕ್ಷವು ರೈತರೊಂದಿಗೆ ದೃಢವಾಗಿ ನಿಂತಿದೆ ಎಂಬ ಕಾರಣಕ್ಕೆ ಹಿರಿಯ ನಾಯಕ ಮಜಿತಿಯಾ ಅವರ ಭದ್ರತಾ ರಕ್ಷಣೆಯನ್ನು ಹಿಂಪಡೆಯಲಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಚೀಮಾ ಆರೋಪಿಸಿದ್ದಾರೆ.

“ಸಂಸತ್ತಿನಲ್ಲಿ ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ನಮ್ಮ ಪಕ್ಷವು ಮತ ಚಲಾಯಿಸಿತ್ತು. ಈ ಭಾಗವಾಗಿಯೇ ಕೇಂದ್ರ ಕ್ಯಾಬಿನೆಟ್ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು ತ್ಯಜಿಸಿದ್ದೆವು” ಎಂದು ಹೇಳಿದರು.

ಇದನ್ನೂ ಓದಿ: ಕೃಷಿ ಮಸೂದೆಯನ್ನು ವಿರೋಧಿಸಿ ರಾಜಿನಾಮೆ ನೀಡಿದ ಕೇಂದ್ರ ಸಚಿವೆ!

ಇಂತಹ ರಾಜಕಾರಣವು ರಾಜ್ಯದಲ್ಲಿ ಅಶಾಂತಿಯನ್ನು ಸೃಷ್ಟಿಸುತ್ತದೆ ಎಂದು ಹೇಳಿದ ಚೀಮಾ, “ಹಿರಿಯ ಎಡಪಂಥೀಯ ನಾಯಕ ಮತ್ತು ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಬಲ್ವಿಂದರ್ ಸಿಂಗ್ ಅವರ ಭದ್ರತಾ ಪಡೆಯನ್ನು ಹಿಂತೆಗೆದುಕೊಂಡ ನಂತರ ಇತ್ತೀಚೆಗೆ ತಾರ್ನ್‌ ತರಣ್‌ನಲ್ಲಿ ಅವರನ್ನು ಹೇಗೆ ಹತ್ಯೆ ಮಾಡಲಾಯಿತು ಎಂಬುದನ್ನು ನಾವು ಈಗಾಗಲೇ ನೋಡಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ಎನ್‌ಡಿಎ ಮೈತ್ರಿಕೂಟ ತೊರೆದ ಪಂಜಾಬ್‌ನ ಅಕಾಲಿ ದಳ!

“ಸರ್ಕಾರದ ಗುಣಗಾನ ಮಾಡುವ ಜನರಿಗೆ ಅಪೇಕ್ಷೆ ಮತ್ತು ಮನೋಭಾವದ ಮೇಲೆ ಭದ್ರತೆಯನ್ನು ನೀಡಬಾರದು. ಕೃಷಿ ಸಮುದಾಯವನ್ನು ಬೆಂಬಲಿಸುವ ಸಲುವಾಗಿ ಅಕಾಲಿದಳ ಕೇಂದ್ರದ ವಿರುದ್ಧ ದನಿಯೆತ್ತಿದ್ದಕ್ಕೆ ಇದ್ದಕ್ಕಿದ್ದಂತೆ ಮಜಿತಿಯಾ ಅವರ ಭದ್ರತಾ ಪಡೆಯನ್ನು ಹಿಂಪಡೆಯಲಾಗಿದೆ. ಈ ಕ್ರಮ ಯಾವ ಆಧಾರದ ಮೇಲೆ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವಾಲಯ ವಿವರಿಸುತ್ತದೆಯೇ?” ಎಂದು ಅವರು ಪ್ರಶ್ನಿಸಿದರು.

ಮಜಿತಿಯಾ ಅವರನ್ನು ಪಾಕಿಸ್ತಾನ ಮೂಲದ ಭಯೋತ್ಪಾದಕರು ಗುರಿಯಾಗಿಸಿಕೊಂಡಿದ್ದು, ಇವರನ್ನು ಕೊಲೆ ಮಾಡುವುದಾಗಿ ಬಹಿರಂಗ ಬೆದರಿಕೆ ಹಾಕಿದ್ದಾರೆ. ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕೂಡ ಇತ್ತೀಚೆಗೆ ಪಂಜಾಬ್‌ನಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಾಗುತ್ತಿದೆ ಎಂದಿದ್ದರು.

ಹಾಗಾಗಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶಗೊಂಡಿರುವ ಅಕಾಲಿದಳ ತೀವ್ರ ವಾಗ್ದಾಲಿ ನಡೆಸಿದೆ.


ಇದನ್ನೂ ಓದಿ: ಕೃಷಿ ಮಸೂದೆ: ಪಂಜಾಬ್‌ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಪ್ ಶಾಸಕರ ಅಹೋರಾತ್ರಿ ಪ್ರತಿಭಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...