Homeಕರ್ನಾಟಕದ್ವೇಷ ಪ್ರಚೋದನೆ; ಕನ್ನಡ ಸುದ್ದಿವಾಹಿನಿಗಳ ವಿರುದ್ಧ 17 ದೂರು ನೀಡಿದರೂ ಪೊಲೀಸರಿಂದ ಸಿಗದ ಪ್ರತಿಕ್ರಿಯೆ- ಸಿಎಎಚ್‌ಎಸ್‌

ದ್ವೇಷ ಪ್ರಚೋದನೆ; ಕನ್ನಡ ಸುದ್ದಿವಾಹಿನಿಗಳ ವಿರುದ್ಧ 17 ದೂರು ನೀಡಿದರೂ ಪೊಲೀಸರಿಂದ ಸಿಗದ ಪ್ರತಿಕ್ರಿಯೆ- ಸಿಎಎಚ್‌ಎಸ್‌

- Advertisement -
- Advertisement -

ಹೋರಾಟಗಾರರ ಗುಂಪಾದ ಕ್ಯಾಂಪೇನ್ ಎಗೇನ್‌ಸ್ಟ್‌‌ ಹೇಟ್ ಸ್ಪೀಚ್ (ದ್ವೇಷ ಭಾಷಣ ವಿರುದ್ಧ ಅಭಿಯಾನ/ಸಿಎಎಚ್‌ಎಸ್) ದ್ವೇಷ ಪ್ರಚೋದಿತ ವರದಿಗಳನ್ನು ಖಂಡಿಸಿ ಒಂದು ವರ್ಷದ ಅವಧಿಯಲ್ಲಿ ಕನ್ನಡ ಸುದ್ದಿ ವಾಹಿನಿಗಳ ವಿರುದ್ಧ 17 ದೂರುಗಳನ್ನು ನೀಡಿದ್ದು, ಇದರಲ್ಲಿ ಯಾವುದನ್ನೂ ಪೊಲೀಸರು ಸ್ವೀಕರಿಸಿಲ್ಲ ಎಂದು ಗುಂಪಿನ ಸದಸ್ಯರು ಹೇಳಿರುವುದಾಗಿ ‘ದಿ ನ್ಯೂಸ್ ಮಿನಿಟ್’ ವರದಿ ಮಾಡಿದೆ.

ಬೆಂಗಳೂರಿನಲ್ಲಿ ವೈಯಕ್ತಿಕ ವೈಷಮ್ಯದ ಕಾರಣ ನಡೆದ ಅಪರಾಧ ಕೃತ್ಯದ ವರದಿಯನ್ನು ತಿರುಚಿದ ಸಂಬಂಧ ಕನ್ನಡ ಸುದ್ದಿ ವಾಹಿನಿ ಪಬ್ಲಿಕ್ ಟಿವಿ ವಿರುದ್ಧ ಇತ್ತೀಚೆಗೆ ದೂರು ನೀಡಲಾಗಿದೆ. ಮೇ 9 ರಂದು ಪ್ರಸಾರವಾದ ಕಾರ್ಯಕ್ರಮದಲ್ಲಿ ‘ದೇವಾಲಯಗಳ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲು ಯೋಜಿಸಿದ ದುಷ್ಕರ್ಮಿಗಳು ಬಂಧನಕ್ಕೊಳಗಾಗಿದ್ದಾರೆ’ ಎಂದು ಸುದ್ದಿ ಪ್ರಕಟಿಸಲಾಯಿತು. ಹಿಂದೂಗಳನ್ನು ಗುರಿಯಾಗಿಸಿ ಕೃತ್ಯ ಎಸಗಲು ಯೋಜಿಸಲಾಗಿತ್ತು ಎಂದು ಯಾವುದೇ ಅಧಿಕೃತತೆ ಇಲ್ಲದೆ ಪಬ್ಲಿಕ್ ಟಿವಿ ವರದಿ ಬಿತ್ತರಿಸಿದೆ ಎಂದು ಸಿಎಎಚ್‌ಎಸ್ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ಪೊಲೀಸ್ ಕಮಿಷನರ್ ಸಿ.ಎಚ್.ಪ್ರತಾಪ್ ರೆಡ್ಡಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ಅವರ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ. ಹಿಂದೂಗಳು ಮತ್ತು ಆರ್‌ಎಸ್‌ಎಸ್ ಮೇಲೆ ಹಲ್ಲೆ ನಡೆಸಲು ಸಂಚು ಎಂದು ಸುಳ್ಳು ಮತ್ತು ಆಧಾರರಹಿತ ಹೇಳಿಕೆಗಳನ್ನು ನೀಡಲಾಗಿದೆ ಎಂದು ಸಿಎಎಚ್‌ಎಸ್‌ ದೂರಿದೆ. ಆಜಾನ್, ಹಿಜಾಬ್ ವಿವಾದ, ಹುಬ್ಬಳ್ಳಿ, ಶಿವಮೊಗ್ಗ, ಪಾದರಾಯನಪುರ, ಕೆ.ಜಿ.ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಕೋಮು ಉದ್ವಿಗ್ನತೆಗೆ ಜೊತೆಗೆ ಈ ಅಪರಾಧ ಕೃತ್ಯವನ್ನು ನಿರೂಪಕ ವೈಯಕ್ತಿಕ ಕಾರಣಗಳಿಂದಾಗಿ ತಳುಕು ಹಾಕಿದ್ದಾನೆ ಎಂದು ತನಿಖಾಧಿಕಾರಿ ಹೇಳಿರುವುದಾಗಿ ವರದಿಯಾಗಿದೆ.

“ತಮ್ಮ ಸಿದ್ಧಾಂತದ ಕಾರಣದಿಂದಾಗಿ ಅವರು ‘ಕೊಲೆಯ ಮನಸ್ಥಿತಿ’ ಹೊಂದಿದ್ದಾರೆ. ಅವರು ಉತ್ತರಪ್ರದೇಶದಲ್ಲಿ ಏನನ್ನೂ ಮಾಡಲು ಸಾಧ್ಯವಾಗದ ಕಾರಣ ಇಲ್ಲಿದ್ದಾರೆಯೇ ಎಂದು ನಿರೂಪಕ ಕೇಳುತ್ತಾನೆ. ಆತ ಸಮುದಾಯದ ಹೆಸರನ್ನು ಉಲ್ಲೇಖಿಸದಿದ್ದರೂ, ಪ್ರೇಕ್ಷಕರಿಗೆ ಇದು ಸ್ಪಷ್ಟವಾಗುತ್ತದೆ. ಆತ ಮುಸ್ಲಿಂ ಸಮುದಾಯವನ್ನು ಉಲ್ಲೇಖಿಸಿದ್ದಾನೆ. ಸಾರಾಯಿಪಾಳ್ಯದಲ್ಲಿರುವ ದೇವಸ್ಥಾನದ ಮೇಲೆ ದಾಳಿ ನಡೆಸಲು ಯೋಜಿಸಲಾಗಿದೆ ಎಂದು ಪಬ್ಲಿಕ್ ಟಿವಿ ಪ್ರತಿನಿಧಿ ಹೇಳಿದ್ದಾನೆ” ಎಂದು ಸಿಎಎಚ್‌ಎಸ್ ದೂರಿನಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿರಿ: ವೈಯಕ್ತಿಕ ದ್ವೇಷದ ಪ್ರಕರಣಕ್ಕೆ ಕೋಮು ಆಯಾಮ ನೀಡಿ ‘ಮುಸ್ಲಿಂ ದ್ವೇಷ’ ಹರಡಿದ ದಿಗ್ವಿಜಯ & ಪಬ್ಲಿಕ್ ಟಿವಿ

“ದಾಳಿಗಳನ್ನು ಯೋಜಿಸಲಾಗಿದೆ ಎನ್ನುವ ವರದಿಗಾರನು ತನ್ನ ಹೇಳಿಕೆಗೆ ಒಂದೇ ಒಂದು ಪೊಲೀಸ್ ಮೂಲವನ್ನು ಉಲ್ಲೇಖಿಸುವುದಿಲ್ಲ. ಬದಲಿಗೆ, ವೈಯಕ್ತಿಕ ದ್ವೇಷದ ಕಾರಣದಿಂದ ಮೂವರನ್ನು ಬಂಧಿಸಲಾಗಿದೆ ಎಂದು ಅವರು ಪೊಲೀಸ್ ಮೂಲಗಳನ್ನು ಹೇಳುತ್ತಿವೆ ಎನ್ನುತ್ತಾನೆ. ಪೊಲೀಸರಿಂದ ಸ್ಪಷ್ಟನೆಗಳು ದೊರೆತರೂ, ಹಿಂದೂಗಳ ವಿರುದ್ಧ ಪಿತೂರಿ ನಡೆದಿರುವುದಾಗಿ ಪ್ರತಿಪಾದಿಸಿ ವರದಿಗಳನ್ನು ಮಾಡಲಾಗಿದೆ” ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಪೊಲೀಸರ ಕಣ್ಣು ತಪ್ಪಿಸಿ” ಮಂಡ್ಯ ಮೂಲದ ವಿದ್ಯಾರ್ಥಿ ಮುಸ್ಕಾನ್ ಖಾನ್ ಸೌದಿ ಅರೇಬಿಯಾಕ್ಕೆ “ಉಗ್ರರನ್ನು ಭೇಟಿಯಾಗಲು” ಹೋಗಿರುವುದಾಗಿ ಕನ್ನಡ ಮಾಧ್ಯಮಗಳು ಸುಳ್ಳು ಸುದ್ದಿಗಳನ್ನು ಮಾಡಿವೆ. ಪರಿಶೀಲಿಸದೆ ಸುದ್ದಿ ಪ್ರಕಟಿಸಿದ ಪವರ್ ಟಿವಿ, ಪಬ್ಲಿಕ್ ಟಿವಿ, ನ್ಯೂಸ್ 18 ಕನ್ನಡ ಮತ್ತು ಏಷ್ಯಾನೆಟ್ ಸುವರ್ಣ ಸಂಪಾದಕರಿಗೆ ಸಿಎಎಚ್‌ಎಸ್ ದೂರು ಸಲ್ಲಿಸಿದೆ.

“ವಿದೇಶಕ್ಕೆ ಹಾರಿದ ವಿದ್ಯಾರ್ಥಿನಿ ಮುಷ್ಕಾನ್; ಉಗ್ರಗಾಮಿಗಳ ಭೇಟಿ ಸಂಚು ಇದೆಯಾ?” ಎಂದು ಪವರ್‌ ಟಿವಿ ವರದಿ ಬರೆದರೆ ಇತರ ಚಾನೆಲ್‌ಗಳು ಇದೇ ರೀತಿಯ ಹೇಳಿಕೆಗಳನ್ನು ನೀಡಿವೆ. ಬಲಪಂಥೀಯ ಪೋರ್ಟಲ್ OpIndia ಕೂಡ ಇದೇ ರೀತಿ ವರದಿ ಮಾಡಿದೆ. ಸೌದಿ ಅರೇಬಿಯಾಕ್ಕೆ ಮುಸ್ಕಾನ್ ಪ್ರವಾಸ ಮಾಡಿರುವ ಕುರಿತು ಆಗಿರುವ ಸುಳ್ಳು ಸುದ್ದಿಗಳಿಂದಾಗಿ ಆ ಹೆಣ್ಣು ಮಗಳಿಗೆ ಅಪಾಯ ಉಂಟಾಗಿದೆ. ಇಂತಹ ಬೇಜವಾಬ್ದಾರಿ ಮತ್ತು ದುರುದ್ದೇಶಪೂರಿತ ವರದಿಗಳಿಂದಾಗಿ ಮುಸ್ಕಾನ್‌ ಜೀವನ ಮತ್ತು ಸುರಕ್ಷತೆಗೆ, ಮುಸ್ಕಾನ್‌ ಕುಟುಂಬಕ್ಕೆ ಅಪಾಯ ಎದುರಾಗಿದೆ” ಎಂದು ತನ್ನ ದೂರಿನಲ್ಲಿ ಸಿಎಎಚ್‌ಎಸ್‌ ತಿಳಿಸಿದೆ.

ಇದನ್ನೂ ಓದಿರಿ: ‘ಮುಸ್ಕಾನ್‌‌’ ಬಗ್ಗೆ ಸುಳ್ಳು ಹಬ್ಬಿಸುತ್ತಿರುವ ಕನ್ನಡ ಮಾಧ್ಯಮಗಳು: ಬೇಸರ ವ್ಯಕ್ತಪಡಿಸಿದ ಪೊಲೀಸರು

ವೈಯಕ್ತಿಕ ಕಾರಣಕ್ಕಾಗಿ ಮುಸ್ಕಾನ್ ಸೌದಿ ಅರೇಬಿಯಾಕ್ಕೆ ಭೇಟಿ ನೀಡಿದ್ದು, ಇದಕ್ಕೆ ಪೊಲೀಸರ ಅನುಮತಿ ಅಗತ್ಯವಿಲ್ಲ ಎಂದು ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್ ತಿಳಿಸಿದ್ದಾರೆ. ಮುಸ್ಕಾನ್ ಮತ್ತು ಆಕೆಯ ಕುಟುಂಬದ ವಿರುದ್ಧ ಯಾವುದೇ ದೂರು ದಾಖಲಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಉಮ್ರಾ ಯಾತ್ರೆಗಾಗಿ ಮುಸ್ಕಾನ್ ಸೌದಿ ಅರೇಬಿಯಾದಲ್ಲಿದ್ದರು ಎಂದು ಆಲ್ಟ್ ನ್ಯೂಸ್ ವರದಿ ಮಾಡಿದೆ.

ದ್ವೇಷ ಭಾಷಣ ಬೇಡ ಅಥವಾ ದ್ವೇಷ ಭಾಷಣದ ವಿರುದ್ಧ ಅಭಿಯಾನವನ್ನು ಏಪ್ರಿಲ್ 2020ರಲ್ಲಿ ಪ್ರಾರಂಭಿಸಲಾಯಿತು. ಅಂದಿನಿಂದ ಕನ್ನಡ ಸುದ್ದಿ ವಾಹಿನಿಗಳಲ್ಲಿ ಮತಾಂಧತೆ ಮತ್ತು ಕೋಮು ಸಮಸ್ಯೆಗಳ ಸಮಸ್ಯಾತ್ಮಕ ಪ್ರಸಾರದ ನಿದರ್ಶನಗಳ ವಿರುದ್ಧ ಗುಂಪು ನಿರಂತರವಾಗಿ ಧ್ವನಿ ಎತ್ತುತ್ತಿದೆ. 2021 ರಲ್ಲಿ, CAHS ಕನ್ನಡ ಸುದ್ದಿ ವಾಹಿನಿಗಳ ವಿರುದ್ಧ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ 17 ದೂರುಗಳನ್ನು ದಾಖಲಿಸಿದೆ. ಆದರೆ ಯಾವುದನ್ನೂ ಸ್ವೀಕರಿಸಲಾಗಿಲ್ಲ ಎಂದು ‘ನ್ಯೂಸ್‌ ಮಿನಿಟ್’ ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...