Homeಕರ್ನಾಟಕದ್ವೇಷ ಪ್ರಚೋದನೆ; ಕನ್ನಡ ಸುದ್ದಿವಾಹಿನಿಗಳ ವಿರುದ್ಧ 17 ದೂರು ನೀಡಿದರೂ ಪೊಲೀಸರಿಂದ ಸಿಗದ ಪ್ರತಿಕ್ರಿಯೆ- ಸಿಎಎಚ್‌ಎಸ್‌

ದ್ವೇಷ ಪ್ರಚೋದನೆ; ಕನ್ನಡ ಸುದ್ದಿವಾಹಿನಿಗಳ ವಿರುದ್ಧ 17 ದೂರು ನೀಡಿದರೂ ಪೊಲೀಸರಿಂದ ಸಿಗದ ಪ್ರತಿಕ್ರಿಯೆ- ಸಿಎಎಚ್‌ಎಸ್‌

- Advertisement -
- Advertisement -

ಹೋರಾಟಗಾರರ ಗುಂಪಾದ ಕ್ಯಾಂಪೇನ್ ಎಗೇನ್‌ಸ್ಟ್‌‌ ಹೇಟ್ ಸ್ಪೀಚ್ (ದ್ವೇಷ ಭಾಷಣ ವಿರುದ್ಧ ಅಭಿಯಾನ/ಸಿಎಎಚ್‌ಎಸ್) ದ್ವೇಷ ಪ್ರಚೋದಿತ ವರದಿಗಳನ್ನು ಖಂಡಿಸಿ ಒಂದು ವರ್ಷದ ಅವಧಿಯಲ್ಲಿ ಕನ್ನಡ ಸುದ್ದಿ ವಾಹಿನಿಗಳ ವಿರುದ್ಧ 17 ದೂರುಗಳನ್ನು ನೀಡಿದ್ದು, ಇದರಲ್ಲಿ ಯಾವುದನ್ನೂ ಪೊಲೀಸರು ಸ್ವೀಕರಿಸಿಲ್ಲ ಎಂದು ಗುಂಪಿನ ಸದಸ್ಯರು ಹೇಳಿರುವುದಾಗಿ ‘ದಿ ನ್ಯೂಸ್ ಮಿನಿಟ್’ ವರದಿ ಮಾಡಿದೆ.

ಬೆಂಗಳೂರಿನಲ್ಲಿ ವೈಯಕ್ತಿಕ ವೈಷಮ್ಯದ ಕಾರಣ ನಡೆದ ಅಪರಾಧ ಕೃತ್ಯದ ವರದಿಯನ್ನು ತಿರುಚಿದ ಸಂಬಂಧ ಕನ್ನಡ ಸುದ್ದಿ ವಾಹಿನಿ ಪಬ್ಲಿಕ್ ಟಿವಿ ವಿರುದ್ಧ ಇತ್ತೀಚೆಗೆ ದೂರು ನೀಡಲಾಗಿದೆ. ಮೇ 9 ರಂದು ಪ್ರಸಾರವಾದ ಕಾರ್ಯಕ್ರಮದಲ್ಲಿ ‘ದೇವಾಲಯಗಳ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲು ಯೋಜಿಸಿದ ದುಷ್ಕರ್ಮಿಗಳು ಬಂಧನಕ್ಕೊಳಗಾಗಿದ್ದಾರೆ’ ಎಂದು ಸುದ್ದಿ ಪ್ರಕಟಿಸಲಾಯಿತು. ಹಿಂದೂಗಳನ್ನು ಗುರಿಯಾಗಿಸಿ ಕೃತ್ಯ ಎಸಗಲು ಯೋಜಿಸಲಾಗಿತ್ತು ಎಂದು ಯಾವುದೇ ಅಧಿಕೃತತೆ ಇಲ್ಲದೆ ಪಬ್ಲಿಕ್ ಟಿವಿ ವರದಿ ಬಿತ್ತರಿಸಿದೆ ಎಂದು ಸಿಎಎಚ್‌ಎಸ್ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ಪೊಲೀಸ್ ಕಮಿಷನರ್ ಸಿ.ಎಚ್.ಪ್ರತಾಪ್ ರೆಡ್ಡಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ಅವರ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ. ಹಿಂದೂಗಳು ಮತ್ತು ಆರ್‌ಎಸ್‌ಎಸ್ ಮೇಲೆ ಹಲ್ಲೆ ನಡೆಸಲು ಸಂಚು ಎಂದು ಸುಳ್ಳು ಮತ್ತು ಆಧಾರರಹಿತ ಹೇಳಿಕೆಗಳನ್ನು ನೀಡಲಾಗಿದೆ ಎಂದು ಸಿಎಎಚ್‌ಎಸ್‌ ದೂರಿದೆ. ಆಜಾನ್, ಹಿಜಾಬ್ ವಿವಾದ, ಹುಬ್ಬಳ್ಳಿ, ಶಿವಮೊಗ್ಗ, ಪಾದರಾಯನಪುರ, ಕೆ.ಜಿ.ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಕೋಮು ಉದ್ವಿಗ್ನತೆಗೆ ಜೊತೆಗೆ ಈ ಅಪರಾಧ ಕೃತ್ಯವನ್ನು ನಿರೂಪಕ ವೈಯಕ್ತಿಕ ಕಾರಣಗಳಿಂದಾಗಿ ತಳುಕು ಹಾಕಿದ್ದಾನೆ ಎಂದು ತನಿಖಾಧಿಕಾರಿ ಹೇಳಿರುವುದಾಗಿ ವರದಿಯಾಗಿದೆ.

“ತಮ್ಮ ಸಿದ್ಧಾಂತದ ಕಾರಣದಿಂದಾಗಿ ಅವರು ‘ಕೊಲೆಯ ಮನಸ್ಥಿತಿ’ ಹೊಂದಿದ್ದಾರೆ. ಅವರು ಉತ್ತರಪ್ರದೇಶದಲ್ಲಿ ಏನನ್ನೂ ಮಾಡಲು ಸಾಧ್ಯವಾಗದ ಕಾರಣ ಇಲ್ಲಿದ್ದಾರೆಯೇ ಎಂದು ನಿರೂಪಕ ಕೇಳುತ್ತಾನೆ. ಆತ ಸಮುದಾಯದ ಹೆಸರನ್ನು ಉಲ್ಲೇಖಿಸದಿದ್ದರೂ, ಪ್ರೇಕ್ಷಕರಿಗೆ ಇದು ಸ್ಪಷ್ಟವಾಗುತ್ತದೆ. ಆತ ಮುಸ್ಲಿಂ ಸಮುದಾಯವನ್ನು ಉಲ್ಲೇಖಿಸಿದ್ದಾನೆ. ಸಾರಾಯಿಪಾಳ್ಯದಲ್ಲಿರುವ ದೇವಸ್ಥಾನದ ಮೇಲೆ ದಾಳಿ ನಡೆಸಲು ಯೋಜಿಸಲಾಗಿದೆ ಎಂದು ಪಬ್ಲಿಕ್ ಟಿವಿ ಪ್ರತಿನಿಧಿ ಹೇಳಿದ್ದಾನೆ” ಎಂದು ಸಿಎಎಚ್‌ಎಸ್ ದೂರಿನಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿರಿ: ವೈಯಕ್ತಿಕ ದ್ವೇಷದ ಪ್ರಕರಣಕ್ಕೆ ಕೋಮು ಆಯಾಮ ನೀಡಿ ‘ಮುಸ್ಲಿಂ ದ್ವೇಷ’ ಹರಡಿದ ದಿಗ್ವಿಜಯ & ಪಬ್ಲಿಕ್ ಟಿವಿ

“ದಾಳಿಗಳನ್ನು ಯೋಜಿಸಲಾಗಿದೆ ಎನ್ನುವ ವರದಿಗಾರನು ತನ್ನ ಹೇಳಿಕೆಗೆ ಒಂದೇ ಒಂದು ಪೊಲೀಸ್ ಮೂಲವನ್ನು ಉಲ್ಲೇಖಿಸುವುದಿಲ್ಲ. ಬದಲಿಗೆ, ವೈಯಕ್ತಿಕ ದ್ವೇಷದ ಕಾರಣದಿಂದ ಮೂವರನ್ನು ಬಂಧಿಸಲಾಗಿದೆ ಎಂದು ಅವರು ಪೊಲೀಸ್ ಮೂಲಗಳನ್ನು ಹೇಳುತ್ತಿವೆ ಎನ್ನುತ್ತಾನೆ. ಪೊಲೀಸರಿಂದ ಸ್ಪಷ್ಟನೆಗಳು ದೊರೆತರೂ, ಹಿಂದೂಗಳ ವಿರುದ್ಧ ಪಿತೂರಿ ನಡೆದಿರುವುದಾಗಿ ಪ್ರತಿಪಾದಿಸಿ ವರದಿಗಳನ್ನು ಮಾಡಲಾಗಿದೆ” ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಪೊಲೀಸರ ಕಣ್ಣು ತಪ್ಪಿಸಿ” ಮಂಡ್ಯ ಮೂಲದ ವಿದ್ಯಾರ್ಥಿ ಮುಸ್ಕಾನ್ ಖಾನ್ ಸೌದಿ ಅರೇಬಿಯಾಕ್ಕೆ “ಉಗ್ರರನ್ನು ಭೇಟಿಯಾಗಲು” ಹೋಗಿರುವುದಾಗಿ ಕನ್ನಡ ಮಾಧ್ಯಮಗಳು ಸುಳ್ಳು ಸುದ್ದಿಗಳನ್ನು ಮಾಡಿವೆ. ಪರಿಶೀಲಿಸದೆ ಸುದ್ದಿ ಪ್ರಕಟಿಸಿದ ಪವರ್ ಟಿವಿ, ಪಬ್ಲಿಕ್ ಟಿವಿ, ನ್ಯೂಸ್ 18 ಕನ್ನಡ ಮತ್ತು ಏಷ್ಯಾನೆಟ್ ಸುವರ್ಣ ಸಂಪಾದಕರಿಗೆ ಸಿಎಎಚ್‌ಎಸ್ ದೂರು ಸಲ್ಲಿಸಿದೆ.

“ವಿದೇಶಕ್ಕೆ ಹಾರಿದ ವಿದ್ಯಾರ್ಥಿನಿ ಮುಷ್ಕಾನ್; ಉಗ್ರಗಾಮಿಗಳ ಭೇಟಿ ಸಂಚು ಇದೆಯಾ?” ಎಂದು ಪವರ್‌ ಟಿವಿ ವರದಿ ಬರೆದರೆ ಇತರ ಚಾನೆಲ್‌ಗಳು ಇದೇ ರೀತಿಯ ಹೇಳಿಕೆಗಳನ್ನು ನೀಡಿವೆ. ಬಲಪಂಥೀಯ ಪೋರ್ಟಲ್ OpIndia ಕೂಡ ಇದೇ ರೀತಿ ವರದಿ ಮಾಡಿದೆ. ಸೌದಿ ಅರೇಬಿಯಾಕ್ಕೆ ಮುಸ್ಕಾನ್ ಪ್ರವಾಸ ಮಾಡಿರುವ ಕುರಿತು ಆಗಿರುವ ಸುಳ್ಳು ಸುದ್ದಿಗಳಿಂದಾಗಿ ಆ ಹೆಣ್ಣು ಮಗಳಿಗೆ ಅಪಾಯ ಉಂಟಾಗಿದೆ. ಇಂತಹ ಬೇಜವಾಬ್ದಾರಿ ಮತ್ತು ದುರುದ್ದೇಶಪೂರಿತ ವರದಿಗಳಿಂದಾಗಿ ಮುಸ್ಕಾನ್‌ ಜೀವನ ಮತ್ತು ಸುರಕ್ಷತೆಗೆ, ಮುಸ್ಕಾನ್‌ ಕುಟುಂಬಕ್ಕೆ ಅಪಾಯ ಎದುರಾಗಿದೆ” ಎಂದು ತನ್ನ ದೂರಿನಲ್ಲಿ ಸಿಎಎಚ್‌ಎಸ್‌ ತಿಳಿಸಿದೆ.

ಇದನ್ನೂ ಓದಿರಿ: ‘ಮುಸ್ಕಾನ್‌‌’ ಬಗ್ಗೆ ಸುಳ್ಳು ಹಬ್ಬಿಸುತ್ತಿರುವ ಕನ್ನಡ ಮಾಧ್ಯಮಗಳು: ಬೇಸರ ವ್ಯಕ್ತಪಡಿಸಿದ ಪೊಲೀಸರು

ವೈಯಕ್ತಿಕ ಕಾರಣಕ್ಕಾಗಿ ಮುಸ್ಕಾನ್ ಸೌದಿ ಅರೇಬಿಯಾಕ್ಕೆ ಭೇಟಿ ನೀಡಿದ್ದು, ಇದಕ್ಕೆ ಪೊಲೀಸರ ಅನುಮತಿ ಅಗತ್ಯವಿಲ್ಲ ಎಂದು ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್ ತಿಳಿಸಿದ್ದಾರೆ. ಮುಸ್ಕಾನ್ ಮತ್ತು ಆಕೆಯ ಕುಟುಂಬದ ವಿರುದ್ಧ ಯಾವುದೇ ದೂರು ದಾಖಲಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಉಮ್ರಾ ಯಾತ್ರೆಗಾಗಿ ಮುಸ್ಕಾನ್ ಸೌದಿ ಅರೇಬಿಯಾದಲ್ಲಿದ್ದರು ಎಂದು ಆಲ್ಟ್ ನ್ಯೂಸ್ ವರದಿ ಮಾಡಿದೆ.

ದ್ವೇಷ ಭಾಷಣ ಬೇಡ ಅಥವಾ ದ್ವೇಷ ಭಾಷಣದ ವಿರುದ್ಧ ಅಭಿಯಾನವನ್ನು ಏಪ್ರಿಲ್ 2020ರಲ್ಲಿ ಪ್ರಾರಂಭಿಸಲಾಯಿತು. ಅಂದಿನಿಂದ ಕನ್ನಡ ಸುದ್ದಿ ವಾಹಿನಿಗಳಲ್ಲಿ ಮತಾಂಧತೆ ಮತ್ತು ಕೋಮು ಸಮಸ್ಯೆಗಳ ಸಮಸ್ಯಾತ್ಮಕ ಪ್ರಸಾರದ ನಿದರ್ಶನಗಳ ವಿರುದ್ಧ ಗುಂಪು ನಿರಂತರವಾಗಿ ಧ್ವನಿ ಎತ್ತುತ್ತಿದೆ. 2021 ರಲ್ಲಿ, CAHS ಕನ್ನಡ ಸುದ್ದಿ ವಾಹಿನಿಗಳ ವಿರುದ್ಧ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ 17 ದೂರುಗಳನ್ನು ದಾಖಲಿಸಿದೆ. ಆದರೆ ಯಾವುದನ್ನೂ ಸ್ವೀಕರಿಸಲಾಗಿಲ್ಲ ಎಂದು ‘ನ್ಯೂಸ್‌ ಮಿನಿಟ್’ ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...