Homeಕರ್ನಾಟಕದ್ವೇಷ ಪ್ರಚೋದನೆ; ಕನ್ನಡ ಸುದ್ದಿವಾಹಿನಿಗಳ ವಿರುದ್ಧ 17 ದೂರು ನೀಡಿದರೂ ಪೊಲೀಸರಿಂದ ಸಿಗದ ಪ್ರತಿಕ್ರಿಯೆ- ಸಿಎಎಚ್‌ಎಸ್‌

ದ್ವೇಷ ಪ್ರಚೋದನೆ; ಕನ್ನಡ ಸುದ್ದಿವಾಹಿನಿಗಳ ವಿರುದ್ಧ 17 ದೂರು ನೀಡಿದರೂ ಪೊಲೀಸರಿಂದ ಸಿಗದ ಪ್ರತಿಕ್ರಿಯೆ- ಸಿಎಎಚ್‌ಎಸ್‌

- Advertisement -
- Advertisement -

ಹೋರಾಟಗಾರರ ಗುಂಪಾದ ಕ್ಯಾಂಪೇನ್ ಎಗೇನ್‌ಸ್ಟ್‌‌ ಹೇಟ್ ಸ್ಪೀಚ್ (ದ್ವೇಷ ಭಾಷಣ ವಿರುದ್ಧ ಅಭಿಯಾನ/ಸಿಎಎಚ್‌ಎಸ್) ದ್ವೇಷ ಪ್ರಚೋದಿತ ವರದಿಗಳನ್ನು ಖಂಡಿಸಿ ಒಂದು ವರ್ಷದ ಅವಧಿಯಲ್ಲಿ ಕನ್ನಡ ಸುದ್ದಿ ವಾಹಿನಿಗಳ ವಿರುದ್ಧ 17 ದೂರುಗಳನ್ನು ನೀಡಿದ್ದು, ಇದರಲ್ಲಿ ಯಾವುದನ್ನೂ ಪೊಲೀಸರು ಸ್ವೀಕರಿಸಿಲ್ಲ ಎಂದು ಗುಂಪಿನ ಸದಸ್ಯರು ಹೇಳಿರುವುದಾಗಿ ‘ದಿ ನ್ಯೂಸ್ ಮಿನಿಟ್’ ವರದಿ ಮಾಡಿದೆ.

ಬೆಂಗಳೂರಿನಲ್ಲಿ ವೈಯಕ್ತಿಕ ವೈಷಮ್ಯದ ಕಾರಣ ನಡೆದ ಅಪರಾಧ ಕೃತ್ಯದ ವರದಿಯನ್ನು ತಿರುಚಿದ ಸಂಬಂಧ ಕನ್ನಡ ಸುದ್ದಿ ವಾಹಿನಿ ಪಬ್ಲಿಕ್ ಟಿವಿ ವಿರುದ್ಧ ಇತ್ತೀಚೆಗೆ ದೂರು ನೀಡಲಾಗಿದೆ. ಮೇ 9 ರಂದು ಪ್ರಸಾರವಾದ ಕಾರ್ಯಕ್ರಮದಲ್ಲಿ ‘ದೇವಾಲಯಗಳ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲು ಯೋಜಿಸಿದ ದುಷ್ಕರ್ಮಿಗಳು ಬಂಧನಕ್ಕೊಳಗಾಗಿದ್ದಾರೆ’ ಎಂದು ಸುದ್ದಿ ಪ್ರಕಟಿಸಲಾಯಿತು. ಹಿಂದೂಗಳನ್ನು ಗುರಿಯಾಗಿಸಿ ಕೃತ್ಯ ಎಸಗಲು ಯೋಜಿಸಲಾಗಿತ್ತು ಎಂದು ಯಾವುದೇ ಅಧಿಕೃತತೆ ಇಲ್ಲದೆ ಪಬ್ಲಿಕ್ ಟಿವಿ ವರದಿ ಬಿತ್ತರಿಸಿದೆ ಎಂದು ಸಿಎಎಚ್‌ಎಸ್ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ಪೊಲೀಸ್ ಕಮಿಷನರ್ ಸಿ.ಎಚ್.ಪ್ರತಾಪ್ ರೆಡ್ಡಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ಅವರ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ. ಹಿಂದೂಗಳು ಮತ್ತು ಆರ್‌ಎಸ್‌ಎಸ್ ಮೇಲೆ ಹಲ್ಲೆ ನಡೆಸಲು ಸಂಚು ಎಂದು ಸುಳ್ಳು ಮತ್ತು ಆಧಾರರಹಿತ ಹೇಳಿಕೆಗಳನ್ನು ನೀಡಲಾಗಿದೆ ಎಂದು ಸಿಎಎಚ್‌ಎಸ್‌ ದೂರಿದೆ. ಆಜಾನ್, ಹಿಜಾಬ್ ವಿವಾದ, ಹುಬ್ಬಳ್ಳಿ, ಶಿವಮೊಗ್ಗ, ಪಾದರಾಯನಪುರ, ಕೆ.ಜಿ.ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಕೋಮು ಉದ್ವಿಗ್ನತೆಗೆ ಜೊತೆಗೆ ಈ ಅಪರಾಧ ಕೃತ್ಯವನ್ನು ನಿರೂಪಕ ವೈಯಕ್ತಿಕ ಕಾರಣಗಳಿಂದಾಗಿ ತಳುಕು ಹಾಕಿದ್ದಾನೆ ಎಂದು ತನಿಖಾಧಿಕಾರಿ ಹೇಳಿರುವುದಾಗಿ ವರದಿಯಾಗಿದೆ.

“ತಮ್ಮ ಸಿದ್ಧಾಂತದ ಕಾರಣದಿಂದಾಗಿ ಅವರು ‘ಕೊಲೆಯ ಮನಸ್ಥಿತಿ’ ಹೊಂದಿದ್ದಾರೆ. ಅವರು ಉತ್ತರಪ್ರದೇಶದಲ್ಲಿ ಏನನ್ನೂ ಮಾಡಲು ಸಾಧ್ಯವಾಗದ ಕಾರಣ ಇಲ್ಲಿದ್ದಾರೆಯೇ ಎಂದು ನಿರೂಪಕ ಕೇಳುತ್ತಾನೆ. ಆತ ಸಮುದಾಯದ ಹೆಸರನ್ನು ಉಲ್ಲೇಖಿಸದಿದ್ದರೂ, ಪ್ರೇಕ್ಷಕರಿಗೆ ಇದು ಸ್ಪಷ್ಟವಾಗುತ್ತದೆ. ಆತ ಮುಸ್ಲಿಂ ಸಮುದಾಯವನ್ನು ಉಲ್ಲೇಖಿಸಿದ್ದಾನೆ. ಸಾರಾಯಿಪಾಳ್ಯದಲ್ಲಿರುವ ದೇವಸ್ಥಾನದ ಮೇಲೆ ದಾಳಿ ನಡೆಸಲು ಯೋಜಿಸಲಾಗಿದೆ ಎಂದು ಪಬ್ಲಿಕ್ ಟಿವಿ ಪ್ರತಿನಿಧಿ ಹೇಳಿದ್ದಾನೆ” ಎಂದು ಸಿಎಎಚ್‌ಎಸ್ ದೂರಿನಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿರಿ: ವೈಯಕ್ತಿಕ ದ್ವೇಷದ ಪ್ರಕರಣಕ್ಕೆ ಕೋಮು ಆಯಾಮ ನೀಡಿ ‘ಮುಸ್ಲಿಂ ದ್ವೇಷ’ ಹರಡಿದ ದಿಗ್ವಿಜಯ & ಪಬ್ಲಿಕ್ ಟಿವಿ

“ದಾಳಿಗಳನ್ನು ಯೋಜಿಸಲಾಗಿದೆ ಎನ್ನುವ ವರದಿಗಾರನು ತನ್ನ ಹೇಳಿಕೆಗೆ ಒಂದೇ ಒಂದು ಪೊಲೀಸ್ ಮೂಲವನ್ನು ಉಲ್ಲೇಖಿಸುವುದಿಲ್ಲ. ಬದಲಿಗೆ, ವೈಯಕ್ತಿಕ ದ್ವೇಷದ ಕಾರಣದಿಂದ ಮೂವರನ್ನು ಬಂಧಿಸಲಾಗಿದೆ ಎಂದು ಅವರು ಪೊಲೀಸ್ ಮೂಲಗಳನ್ನು ಹೇಳುತ್ತಿವೆ ಎನ್ನುತ್ತಾನೆ. ಪೊಲೀಸರಿಂದ ಸ್ಪಷ್ಟನೆಗಳು ದೊರೆತರೂ, ಹಿಂದೂಗಳ ವಿರುದ್ಧ ಪಿತೂರಿ ನಡೆದಿರುವುದಾಗಿ ಪ್ರತಿಪಾದಿಸಿ ವರದಿಗಳನ್ನು ಮಾಡಲಾಗಿದೆ” ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಪೊಲೀಸರ ಕಣ್ಣು ತಪ್ಪಿಸಿ” ಮಂಡ್ಯ ಮೂಲದ ವಿದ್ಯಾರ್ಥಿ ಮುಸ್ಕಾನ್ ಖಾನ್ ಸೌದಿ ಅರೇಬಿಯಾಕ್ಕೆ “ಉಗ್ರರನ್ನು ಭೇಟಿಯಾಗಲು” ಹೋಗಿರುವುದಾಗಿ ಕನ್ನಡ ಮಾಧ್ಯಮಗಳು ಸುಳ್ಳು ಸುದ್ದಿಗಳನ್ನು ಮಾಡಿವೆ. ಪರಿಶೀಲಿಸದೆ ಸುದ್ದಿ ಪ್ರಕಟಿಸಿದ ಪವರ್ ಟಿವಿ, ಪಬ್ಲಿಕ್ ಟಿವಿ, ನ್ಯೂಸ್ 18 ಕನ್ನಡ ಮತ್ತು ಏಷ್ಯಾನೆಟ್ ಸುವರ್ಣ ಸಂಪಾದಕರಿಗೆ ಸಿಎಎಚ್‌ಎಸ್ ದೂರು ಸಲ್ಲಿಸಿದೆ.

“ವಿದೇಶಕ್ಕೆ ಹಾರಿದ ವಿದ್ಯಾರ್ಥಿನಿ ಮುಷ್ಕಾನ್; ಉಗ್ರಗಾಮಿಗಳ ಭೇಟಿ ಸಂಚು ಇದೆಯಾ?” ಎಂದು ಪವರ್‌ ಟಿವಿ ವರದಿ ಬರೆದರೆ ಇತರ ಚಾನೆಲ್‌ಗಳು ಇದೇ ರೀತಿಯ ಹೇಳಿಕೆಗಳನ್ನು ನೀಡಿವೆ. ಬಲಪಂಥೀಯ ಪೋರ್ಟಲ್ OpIndia ಕೂಡ ಇದೇ ರೀತಿ ವರದಿ ಮಾಡಿದೆ. ಸೌದಿ ಅರೇಬಿಯಾಕ್ಕೆ ಮುಸ್ಕಾನ್ ಪ್ರವಾಸ ಮಾಡಿರುವ ಕುರಿತು ಆಗಿರುವ ಸುಳ್ಳು ಸುದ್ದಿಗಳಿಂದಾಗಿ ಆ ಹೆಣ್ಣು ಮಗಳಿಗೆ ಅಪಾಯ ಉಂಟಾಗಿದೆ. ಇಂತಹ ಬೇಜವಾಬ್ದಾರಿ ಮತ್ತು ದುರುದ್ದೇಶಪೂರಿತ ವರದಿಗಳಿಂದಾಗಿ ಮುಸ್ಕಾನ್‌ ಜೀವನ ಮತ್ತು ಸುರಕ್ಷತೆಗೆ, ಮುಸ್ಕಾನ್‌ ಕುಟುಂಬಕ್ಕೆ ಅಪಾಯ ಎದುರಾಗಿದೆ” ಎಂದು ತನ್ನ ದೂರಿನಲ್ಲಿ ಸಿಎಎಚ್‌ಎಸ್‌ ತಿಳಿಸಿದೆ.

ಇದನ್ನೂ ಓದಿರಿ: ‘ಮುಸ್ಕಾನ್‌‌’ ಬಗ್ಗೆ ಸುಳ್ಳು ಹಬ್ಬಿಸುತ್ತಿರುವ ಕನ್ನಡ ಮಾಧ್ಯಮಗಳು: ಬೇಸರ ವ್ಯಕ್ತಪಡಿಸಿದ ಪೊಲೀಸರು

ವೈಯಕ್ತಿಕ ಕಾರಣಕ್ಕಾಗಿ ಮುಸ್ಕಾನ್ ಸೌದಿ ಅರೇಬಿಯಾಕ್ಕೆ ಭೇಟಿ ನೀಡಿದ್ದು, ಇದಕ್ಕೆ ಪೊಲೀಸರ ಅನುಮತಿ ಅಗತ್ಯವಿಲ್ಲ ಎಂದು ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್ ತಿಳಿಸಿದ್ದಾರೆ. ಮುಸ್ಕಾನ್ ಮತ್ತು ಆಕೆಯ ಕುಟುಂಬದ ವಿರುದ್ಧ ಯಾವುದೇ ದೂರು ದಾಖಲಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಉಮ್ರಾ ಯಾತ್ರೆಗಾಗಿ ಮುಸ್ಕಾನ್ ಸೌದಿ ಅರೇಬಿಯಾದಲ್ಲಿದ್ದರು ಎಂದು ಆಲ್ಟ್ ನ್ಯೂಸ್ ವರದಿ ಮಾಡಿದೆ.

ದ್ವೇಷ ಭಾಷಣ ಬೇಡ ಅಥವಾ ದ್ವೇಷ ಭಾಷಣದ ವಿರುದ್ಧ ಅಭಿಯಾನವನ್ನು ಏಪ್ರಿಲ್ 2020ರಲ್ಲಿ ಪ್ರಾರಂಭಿಸಲಾಯಿತು. ಅಂದಿನಿಂದ ಕನ್ನಡ ಸುದ್ದಿ ವಾಹಿನಿಗಳಲ್ಲಿ ಮತಾಂಧತೆ ಮತ್ತು ಕೋಮು ಸಮಸ್ಯೆಗಳ ಸಮಸ್ಯಾತ್ಮಕ ಪ್ರಸಾರದ ನಿದರ್ಶನಗಳ ವಿರುದ್ಧ ಗುಂಪು ನಿರಂತರವಾಗಿ ಧ್ವನಿ ಎತ್ತುತ್ತಿದೆ. 2021 ರಲ್ಲಿ, CAHS ಕನ್ನಡ ಸುದ್ದಿ ವಾಹಿನಿಗಳ ವಿರುದ್ಧ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ 17 ದೂರುಗಳನ್ನು ದಾಖಲಿಸಿದೆ. ಆದರೆ ಯಾವುದನ್ನೂ ಸ್ವೀಕರಿಸಲಾಗಿಲ್ಲ ಎಂದು ‘ನ್ಯೂಸ್‌ ಮಿನಿಟ್’ ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...