Homeಕರ್ನಾಟಕದ್ವೇಷ ಪ್ರಚೋದನೆ; ಕನ್ನಡ ಸುದ್ದಿವಾಹಿನಿಗಳ ವಿರುದ್ಧ 17 ದೂರು ನೀಡಿದರೂ ಪೊಲೀಸರಿಂದ ಸಿಗದ ಪ್ರತಿಕ್ರಿಯೆ- ಸಿಎಎಚ್‌ಎಸ್‌

ದ್ವೇಷ ಪ್ರಚೋದನೆ; ಕನ್ನಡ ಸುದ್ದಿವಾಹಿನಿಗಳ ವಿರುದ್ಧ 17 ದೂರು ನೀಡಿದರೂ ಪೊಲೀಸರಿಂದ ಸಿಗದ ಪ್ರತಿಕ್ರಿಯೆ- ಸಿಎಎಚ್‌ಎಸ್‌

- Advertisement -
- Advertisement -

ಹೋರಾಟಗಾರರ ಗುಂಪಾದ ಕ್ಯಾಂಪೇನ್ ಎಗೇನ್‌ಸ್ಟ್‌‌ ಹೇಟ್ ಸ್ಪೀಚ್ (ದ್ವೇಷ ಭಾಷಣ ವಿರುದ್ಧ ಅಭಿಯಾನ/ಸಿಎಎಚ್‌ಎಸ್) ದ್ವೇಷ ಪ್ರಚೋದಿತ ವರದಿಗಳನ್ನು ಖಂಡಿಸಿ ಒಂದು ವರ್ಷದ ಅವಧಿಯಲ್ಲಿ ಕನ್ನಡ ಸುದ್ದಿ ವಾಹಿನಿಗಳ ವಿರುದ್ಧ 17 ದೂರುಗಳನ್ನು ನೀಡಿದ್ದು, ಇದರಲ್ಲಿ ಯಾವುದನ್ನೂ ಪೊಲೀಸರು ಸ್ವೀಕರಿಸಿಲ್ಲ ಎಂದು ಗುಂಪಿನ ಸದಸ್ಯರು ಹೇಳಿರುವುದಾಗಿ ‘ದಿ ನ್ಯೂಸ್ ಮಿನಿಟ್’ ವರದಿ ಮಾಡಿದೆ.

ಬೆಂಗಳೂರಿನಲ್ಲಿ ವೈಯಕ್ತಿಕ ವೈಷಮ್ಯದ ಕಾರಣ ನಡೆದ ಅಪರಾಧ ಕೃತ್ಯದ ವರದಿಯನ್ನು ತಿರುಚಿದ ಸಂಬಂಧ ಕನ್ನಡ ಸುದ್ದಿ ವಾಹಿನಿ ಪಬ್ಲಿಕ್ ಟಿವಿ ವಿರುದ್ಧ ಇತ್ತೀಚೆಗೆ ದೂರು ನೀಡಲಾಗಿದೆ. ಮೇ 9 ರಂದು ಪ್ರಸಾರವಾದ ಕಾರ್ಯಕ್ರಮದಲ್ಲಿ ‘ದೇವಾಲಯಗಳ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲು ಯೋಜಿಸಿದ ದುಷ್ಕರ್ಮಿಗಳು ಬಂಧನಕ್ಕೊಳಗಾಗಿದ್ದಾರೆ’ ಎಂದು ಸುದ್ದಿ ಪ್ರಕಟಿಸಲಾಯಿತು. ಹಿಂದೂಗಳನ್ನು ಗುರಿಯಾಗಿಸಿ ಕೃತ್ಯ ಎಸಗಲು ಯೋಜಿಸಲಾಗಿತ್ತು ಎಂದು ಯಾವುದೇ ಅಧಿಕೃತತೆ ಇಲ್ಲದೆ ಪಬ್ಲಿಕ್ ಟಿವಿ ವರದಿ ಬಿತ್ತರಿಸಿದೆ ಎಂದು ಸಿಎಎಚ್‌ಎಸ್ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ಪೊಲೀಸ್ ಕಮಿಷನರ್ ಸಿ.ಎಚ್.ಪ್ರತಾಪ್ ರೆಡ್ಡಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ಅವರ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ. ಹಿಂದೂಗಳು ಮತ್ತು ಆರ್‌ಎಸ್‌ಎಸ್ ಮೇಲೆ ಹಲ್ಲೆ ನಡೆಸಲು ಸಂಚು ಎಂದು ಸುಳ್ಳು ಮತ್ತು ಆಧಾರರಹಿತ ಹೇಳಿಕೆಗಳನ್ನು ನೀಡಲಾಗಿದೆ ಎಂದು ಸಿಎಎಚ್‌ಎಸ್‌ ದೂರಿದೆ. ಆಜಾನ್, ಹಿಜಾಬ್ ವಿವಾದ, ಹುಬ್ಬಳ್ಳಿ, ಶಿವಮೊಗ್ಗ, ಪಾದರಾಯನಪುರ, ಕೆ.ಜಿ.ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಕೋಮು ಉದ್ವಿಗ್ನತೆಗೆ ಜೊತೆಗೆ ಈ ಅಪರಾಧ ಕೃತ್ಯವನ್ನು ನಿರೂಪಕ ವೈಯಕ್ತಿಕ ಕಾರಣಗಳಿಂದಾಗಿ ತಳುಕು ಹಾಕಿದ್ದಾನೆ ಎಂದು ತನಿಖಾಧಿಕಾರಿ ಹೇಳಿರುವುದಾಗಿ ವರದಿಯಾಗಿದೆ.

“ತಮ್ಮ ಸಿದ್ಧಾಂತದ ಕಾರಣದಿಂದಾಗಿ ಅವರು ‘ಕೊಲೆಯ ಮನಸ್ಥಿತಿ’ ಹೊಂದಿದ್ದಾರೆ. ಅವರು ಉತ್ತರಪ್ರದೇಶದಲ್ಲಿ ಏನನ್ನೂ ಮಾಡಲು ಸಾಧ್ಯವಾಗದ ಕಾರಣ ಇಲ್ಲಿದ್ದಾರೆಯೇ ಎಂದು ನಿರೂಪಕ ಕೇಳುತ್ತಾನೆ. ಆತ ಸಮುದಾಯದ ಹೆಸರನ್ನು ಉಲ್ಲೇಖಿಸದಿದ್ದರೂ, ಪ್ರೇಕ್ಷಕರಿಗೆ ಇದು ಸ್ಪಷ್ಟವಾಗುತ್ತದೆ. ಆತ ಮುಸ್ಲಿಂ ಸಮುದಾಯವನ್ನು ಉಲ್ಲೇಖಿಸಿದ್ದಾನೆ. ಸಾರಾಯಿಪಾಳ್ಯದಲ್ಲಿರುವ ದೇವಸ್ಥಾನದ ಮೇಲೆ ದಾಳಿ ನಡೆಸಲು ಯೋಜಿಸಲಾಗಿದೆ ಎಂದು ಪಬ್ಲಿಕ್ ಟಿವಿ ಪ್ರತಿನಿಧಿ ಹೇಳಿದ್ದಾನೆ” ಎಂದು ಸಿಎಎಚ್‌ಎಸ್ ದೂರಿನಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿರಿ: ವೈಯಕ್ತಿಕ ದ್ವೇಷದ ಪ್ರಕರಣಕ್ಕೆ ಕೋಮು ಆಯಾಮ ನೀಡಿ ‘ಮುಸ್ಲಿಂ ದ್ವೇಷ’ ಹರಡಿದ ದಿಗ್ವಿಜಯ & ಪಬ್ಲಿಕ್ ಟಿವಿ

“ದಾಳಿಗಳನ್ನು ಯೋಜಿಸಲಾಗಿದೆ ಎನ್ನುವ ವರದಿಗಾರನು ತನ್ನ ಹೇಳಿಕೆಗೆ ಒಂದೇ ಒಂದು ಪೊಲೀಸ್ ಮೂಲವನ್ನು ಉಲ್ಲೇಖಿಸುವುದಿಲ್ಲ. ಬದಲಿಗೆ, ವೈಯಕ್ತಿಕ ದ್ವೇಷದ ಕಾರಣದಿಂದ ಮೂವರನ್ನು ಬಂಧಿಸಲಾಗಿದೆ ಎಂದು ಅವರು ಪೊಲೀಸ್ ಮೂಲಗಳನ್ನು ಹೇಳುತ್ತಿವೆ ಎನ್ನುತ್ತಾನೆ. ಪೊಲೀಸರಿಂದ ಸ್ಪಷ್ಟನೆಗಳು ದೊರೆತರೂ, ಹಿಂದೂಗಳ ವಿರುದ್ಧ ಪಿತೂರಿ ನಡೆದಿರುವುದಾಗಿ ಪ್ರತಿಪಾದಿಸಿ ವರದಿಗಳನ್ನು ಮಾಡಲಾಗಿದೆ” ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಪೊಲೀಸರ ಕಣ್ಣು ತಪ್ಪಿಸಿ” ಮಂಡ್ಯ ಮೂಲದ ವಿದ್ಯಾರ್ಥಿ ಮುಸ್ಕಾನ್ ಖಾನ್ ಸೌದಿ ಅರೇಬಿಯಾಕ್ಕೆ “ಉಗ್ರರನ್ನು ಭೇಟಿಯಾಗಲು” ಹೋಗಿರುವುದಾಗಿ ಕನ್ನಡ ಮಾಧ್ಯಮಗಳು ಸುಳ್ಳು ಸುದ್ದಿಗಳನ್ನು ಮಾಡಿವೆ. ಪರಿಶೀಲಿಸದೆ ಸುದ್ದಿ ಪ್ರಕಟಿಸಿದ ಪವರ್ ಟಿವಿ, ಪಬ್ಲಿಕ್ ಟಿವಿ, ನ್ಯೂಸ್ 18 ಕನ್ನಡ ಮತ್ತು ಏಷ್ಯಾನೆಟ್ ಸುವರ್ಣ ಸಂಪಾದಕರಿಗೆ ಸಿಎಎಚ್‌ಎಸ್ ದೂರು ಸಲ್ಲಿಸಿದೆ.

“ವಿದೇಶಕ್ಕೆ ಹಾರಿದ ವಿದ್ಯಾರ್ಥಿನಿ ಮುಷ್ಕಾನ್; ಉಗ್ರಗಾಮಿಗಳ ಭೇಟಿ ಸಂಚು ಇದೆಯಾ?” ಎಂದು ಪವರ್‌ ಟಿವಿ ವರದಿ ಬರೆದರೆ ಇತರ ಚಾನೆಲ್‌ಗಳು ಇದೇ ರೀತಿಯ ಹೇಳಿಕೆಗಳನ್ನು ನೀಡಿವೆ. ಬಲಪಂಥೀಯ ಪೋರ್ಟಲ್ OpIndia ಕೂಡ ಇದೇ ರೀತಿ ವರದಿ ಮಾಡಿದೆ. ಸೌದಿ ಅರೇಬಿಯಾಕ್ಕೆ ಮುಸ್ಕಾನ್ ಪ್ರವಾಸ ಮಾಡಿರುವ ಕುರಿತು ಆಗಿರುವ ಸುಳ್ಳು ಸುದ್ದಿಗಳಿಂದಾಗಿ ಆ ಹೆಣ್ಣು ಮಗಳಿಗೆ ಅಪಾಯ ಉಂಟಾಗಿದೆ. ಇಂತಹ ಬೇಜವಾಬ್ದಾರಿ ಮತ್ತು ದುರುದ್ದೇಶಪೂರಿತ ವರದಿಗಳಿಂದಾಗಿ ಮುಸ್ಕಾನ್‌ ಜೀವನ ಮತ್ತು ಸುರಕ್ಷತೆಗೆ, ಮುಸ್ಕಾನ್‌ ಕುಟುಂಬಕ್ಕೆ ಅಪಾಯ ಎದುರಾಗಿದೆ” ಎಂದು ತನ್ನ ದೂರಿನಲ್ಲಿ ಸಿಎಎಚ್‌ಎಸ್‌ ತಿಳಿಸಿದೆ.

ಇದನ್ನೂ ಓದಿರಿ: ‘ಮುಸ್ಕಾನ್‌‌’ ಬಗ್ಗೆ ಸುಳ್ಳು ಹಬ್ಬಿಸುತ್ತಿರುವ ಕನ್ನಡ ಮಾಧ್ಯಮಗಳು: ಬೇಸರ ವ್ಯಕ್ತಪಡಿಸಿದ ಪೊಲೀಸರು

ವೈಯಕ್ತಿಕ ಕಾರಣಕ್ಕಾಗಿ ಮುಸ್ಕಾನ್ ಸೌದಿ ಅರೇಬಿಯಾಕ್ಕೆ ಭೇಟಿ ನೀಡಿದ್ದು, ಇದಕ್ಕೆ ಪೊಲೀಸರ ಅನುಮತಿ ಅಗತ್ಯವಿಲ್ಲ ಎಂದು ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್ ತಿಳಿಸಿದ್ದಾರೆ. ಮುಸ್ಕಾನ್ ಮತ್ತು ಆಕೆಯ ಕುಟುಂಬದ ವಿರುದ್ಧ ಯಾವುದೇ ದೂರು ದಾಖಲಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಉಮ್ರಾ ಯಾತ್ರೆಗಾಗಿ ಮುಸ್ಕಾನ್ ಸೌದಿ ಅರೇಬಿಯಾದಲ್ಲಿದ್ದರು ಎಂದು ಆಲ್ಟ್ ನ್ಯೂಸ್ ವರದಿ ಮಾಡಿದೆ.

ದ್ವೇಷ ಭಾಷಣ ಬೇಡ ಅಥವಾ ದ್ವೇಷ ಭಾಷಣದ ವಿರುದ್ಧ ಅಭಿಯಾನವನ್ನು ಏಪ್ರಿಲ್ 2020ರಲ್ಲಿ ಪ್ರಾರಂಭಿಸಲಾಯಿತು. ಅಂದಿನಿಂದ ಕನ್ನಡ ಸುದ್ದಿ ವಾಹಿನಿಗಳಲ್ಲಿ ಮತಾಂಧತೆ ಮತ್ತು ಕೋಮು ಸಮಸ್ಯೆಗಳ ಸಮಸ್ಯಾತ್ಮಕ ಪ್ರಸಾರದ ನಿದರ್ಶನಗಳ ವಿರುದ್ಧ ಗುಂಪು ನಿರಂತರವಾಗಿ ಧ್ವನಿ ಎತ್ತುತ್ತಿದೆ. 2021 ರಲ್ಲಿ, CAHS ಕನ್ನಡ ಸುದ್ದಿ ವಾಹಿನಿಗಳ ವಿರುದ್ಧ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ 17 ದೂರುಗಳನ್ನು ದಾಖಲಿಸಿದೆ. ಆದರೆ ಯಾವುದನ್ನೂ ಸ್ವೀಕರಿಸಲಾಗಿಲ್ಲ ಎಂದು ‘ನ್ಯೂಸ್‌ ಮಿನಿಟ್’ ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...