Homeಕರ್ನಾಟಕದ್ವೇಷ ವರದಿ: ವಿಜಯ ಕರ್ನಾಟಕ ಪತ್ರಿಕೆಯ ವಿರುದ್ಧ ಪಿಸಿಐ ವಾರೆಂಟ್

ದ್ವೇಷ ವರದಿ: ವಿಜಯ ಕರ್ನಾಟಕ ಪತ್ರಿಕೆಯ ವಿರುದ್ಧ ಪಿಸಿಐ ವಾರೆಂಟ್

- Advertisement -
- Advertisement -

ಸೂಕ್ತ ಆಧಾರವಿಲ್ಲದೆ ದ್ವೇಷ ಹುಟ್ಟಿಸುವ ವರದಿ ಪ್ರಕಟಿಸಿದ ಆರೋಪದ ಮೇಲೆ ವಿಜಯ ಕರ್ನಾಟಕ ದಿನಪತ್ರಿಕೆಯ ಸಂಪಾದಕರ ವಿರುದ್ಧ ಪಿಸಿಐ (ಪ್ರೆಸ್ ಕೌನ್ಸಿಲ್‌ ಆಫ್ ಇಂಡಿಯಾ) ಐದು ಸಾವಿರ ರೂಗಳ ಜಾಮೀನಿನ ವಾರೆಂಟ್ (ಬೇಯ್ಲಬಲ್ ವಾರೆಂಟ್) ಹೊರಡಿಸಲಾಗಿದೆ ಎಂದು ದ್ವೇಷದ ಮಾತುಗಳ ವಿರುದ್ಧ ಜನಾಂದೋಲನ ಹೇಳಿಕೆಯಲ್ಲಿ ತಿಳಿಸಿದೆ.

2020ರ ಮಾರ್ಚ್ 28ರಂದು “ಸತ್ತವರೆಲ್ಲ ಒಂದೇ ಸಮುದಾಯದವರು – ಈಗಲೂ ಪ್ರಾರ್ಥನೆಯ ಹೆಸರಿನಲ್ಲಿ ಗುಂಪು ಸೇರುವುದೇಕೆ” ಎಂಬ ಶೀರ್ಷಿಕೆಯಡಿಯಲ್ಲಿ ವಿಜಯ ಕರ್ನಾಟಕ ಪತ್ರಿಕೆ ವರದಿ ಪ್ರಕಟಿಸಿತ್ತು. ಯಾವುದೇ ಆಧಾರವಿಲ್ಲದೆ ಕೊರೊನಾ ಸೋಂಕು ಹರಡಲು ಮುಸ್ಲಿಂ ಸಮುದಾಯವೇ ಕಾರಣ ಎಂದು ವರದಿಯಲ್ಲಿ ನಿರೂಪಿಸಲಾಗಿತ್ತು. ಸಾಂಕ್ರಾಮಿಕ ಭಯದ ಸಮಯದಲ್ಲಿ ಇಂತಹ ವರದಿಗಳೇ ಸಮುದಾಯದ ಮೇಲೆ ದೌರ್ಜನ್ಯ ನಡೆಸಲು ಕಾರಣವಾಗಿವೆ ಎಂದು ಆರೋಪಿಸಿ ದ್ವೇಷದ ಮಾತುಗಳ ವಿರುದ್ಧ ಜನಾಂದೋಲನ ಪಿಸಿಐ ಬಳಿ ದೂರು ದಾಖಲಿಸಿತ್ತು.

ಪಿಸಿಐ ಮಾಧ್ಯಮಗಳನ್ನು ನಿಯಂತ್ರಿಸುವ ಕಾನೂನುಬದ್ಧ ಸಂಸ್ಥೆಯಾಗಿದೆ. ಅದರ “ನಾರ್ಮ್ಸ್ ಆಫ್ ಜರ್ನಲಿಸ್ಟಿಕ್ ಕಂಡ್ಕಕ್ಟ್ 2019” ಅನ್ನು ಮೇಲಿನ ವರದಿ ಉಲ್ಲಂಘಿಸಿದೆ ಎಂಬ ಆಧಾರದಲ್ಲಿ ನಡೆಸುತ್ತಿರುವ ವಿಚಾರಣೆಗೆ ಹಾಜರಾಗುವಂತೆ ವಿಜಯ ಕರ್ನಾಟಕ ಪತ್ರಿಕೆಗೆ ಎರಡು ಬಾರಿ ಸಮನ್ಸ್ ಹೊರಡಿಸಲಾಗಿತ್ತು. ಆದರೆ ಎರಡು ವಿಚಾರಣೆಗೆ ವಿಜಯ ಕರ್ನಾಟಕ ಪತ್ರಿಕೆಯ ವತಿಯಿಂದ ಯಾವುದೇ ಪ್ರತಿನಿಧಿಗಳು ಹಾಜರಾಗದ ಕಾರಣ ವಾರೆಂಟ್ ಹೊರಡಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಆಧಾರವಿಲ್ಲದ ವರದಿಗಳನ್ನು ಪ್ರಕಟಿಸುವ ಮೂಲಕ ದ್ವೇಷ ಉಂಟುಮಾಡುವುದಕ್ಕೆ ಪತ್ರಿಕೆ ಕಾರಣವಾಗಿದೆ. ಹಾಗಾಗಿ ವಿಚಾರಣೆ ನಡೆಸಿ ವಿಜಯ ಕರ್ನಾಟಕ ಪತ್ರಿಕೆಯ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಪತ್ರಿಕೆಯು ಬಹಿರಂಗ ಕ್ಷಮೆ ಕೇಳಬೇಕೆಂದು ನಾವು ಒತ್ತಾಯಿಸುತ್ತೇವೆ. ಅಲ್ಲದೇ ಪಿಸಿಐನಂತಹ ಸಂಸ್ಥೆಯ ವಿಚಾರಣೆಗೆ ಹಾಜರಾಗದೇ ಇರುವುದು ಪತ್ರಿಕೆಗೆ ಶೋಭೆ ತರುವುದಿಲ್ಲ. ಸ್ವತಃ ಕಾನೂನು ಉಲ್ಲಂಘಿಸುವ ಮೂಲಕ ಓದುಗರಿಗೆ ಅದು ಕೆಟ್ಟ ಸಂದೇಶವನ್ನು ನೀಡುತ್ತಿದೆ ಎಂದು ದ್ವೇಷದ ಮಾತುಗಳ ವಿರುದ್ಧ ಜನಾಂದೋಲನ ಅಸಮಾಧಾನ ವ್ಯಕ್ತಪಡಿಸಿದೆ.


ಇದನ್ನೂ ಓದಿ: ಹಿಂಸೆಯ ಮಾತುಗಳನ್ನಾಡಿದ ಹರಿಯಾಣ ಗೃಹ ಸಚಿವರ ವಿರುದ್ಧ ಕ್ರಮ ಕೈಗೊಳ್ಳಿ: ಬೆಂಗಳೂರಿನಲ್ಲಿ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...