Homeಮುಖಪುಟಮಹಾತ್ಮ ಗಾಂಧಿ ವಿರುದ್ಧ ದ್ವೇಷ ಭಾಷಣ: ಯತಿ ನರಸಿಂಗಾನಂದ ಮೇಲೆ ಎಫ್‌ಐಆರ್‌

ಮಹಾತ್ಮ ಗಾಂಧಿ ವಿರುದ್ಧ ದ್ವೇಷ ಭಾಷಣ: ಯತಿ ನರಸಿಂಗಾನಂದ ಮೇಲೆ ಎಫ್‌ಐಆರ್‌

- Advertisement -
- Advertisement -

ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿಯಾಗಿ ದಾಸ್ನಾ ದೇವಿ ದೇವಸ್ಥಾನದ ಅರ್ಚಕ, ದ್ವೇಷ ಭಾಷಣಗಳಿಗೆ ಹೆಸರಾದ ಮಹಂತ ಯತಿ ನರಸಿಂಗಾನಂದ ಸರಸ್ವತಿ ಮಾತನಾಡಿರುವ ವಿಡಿಯೊ ಟ್ವಿಟರ್‌ನಲ್ಲಿ ವೈರಲ್‌ ಆಗಿದ್ದು, ಉತ್ತರ ಪ್ರದೇಶದ ಗಾಜಿಯಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬುಧವಾರ ರಾತ್ರಿ ವೈರಲ್ ಆಗಿರುವ 2.20 ನಿಮಿಷಗಳ ವೀಡಿಯೊದಲ್ಲಿ, ಯತಿ ನರಸಿಂಗಾನಂದ ಸರಸ್ವತಿ ಅವರು, “ಮಹಾತ್ಮ ಗಾಂಧಿ ಭಾರತೀಯ ಮುಸ್ಲಿಮರಿಗೆ ಹಕ್ಕುಗಳನ್ನು ನೀಡಿದರು. ಗಾಂಧಿ ಕಾರಣದಿಂದಾಗಿ 100 ಕೋಟಿ ಹಿಂದೂ ಸಮುದಾಯಕ್ಕೆ ತಮ್ಮದೇ ಆದ ಒಂದು ಇಂಚು ಭೂಮಿ ಇಲ್ಲ” ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಹಾತ್ಮ ಗಾಂಧಿಯವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಪೊಲೀಸರು ಗುರುತಿಸಿದ್ದಾರೆ. ಯತಿ ನರಸಿಂಗಾನಂದರ ಹೇಳಿಕೆಗಳು ಕಾನೂನು ಮತ್ತು ಸುವ್ಯವಸ್ಥೆಗೆ ಅಡ್ಡಿಪಡಿಸುವ ಪರಿಸ್ಥಿತಿಗೆ ಕಾರಣವಾಗಬಹುದು ಎಂದು ಮುಸ್ಸೂರಿ ಪೊಲೀಸ್ ಠಾಣೆಯ ಠಾಣಾಧಿಕಾರಿ ತಿಳಿಸಿದ್ದಾರೆ.

ಮುಸ್ಸೂರಿ ಪೊಲೀಸ್ ಠಾಣೆಯಲ್ಲಿ ನರಸಿಂಗಾನಂದ ಸರಸ್ವತಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505(2) (ವರ್ಗಗಳ ನಡುವೆ ದ್ವೇಷ ಉತ್ತೇಜಿಸುವ ಹೇಳಿಕೆಗಳು), 153ಬಿ (ರಾಷ್ಟ್ರೀಯ ಏಕೀಕರಣಕ್ಕೆ ಹಾನಿಯುಂಟುಮಾಡುವ ಆರೋಪ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

“ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯತಿ ನರಸಿಂಗಾನಂದ ದ್ವೇಷ ಭಾಷಣ ಮಾಡುವುದು ಇದೇ ಮೊದಲೇನಲ್ಲ. ಮುಸ್ಲಿಮರ ನರಮೇಧಕ್ಕೆ ಕರೆ ನೀಡಿರುವ ಕುಖ್ಯಾತ ಇವರ ಮೇಲಿದೆ.

“ಭಾರತಕ್ಕೆ ಮುಸ್ಲಿಂ ವ್ಯಕ್ತಿ ಪ್ರಧಾನಿಯಾದರೆ ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳಬೇಕು. ಭಾರತಕ್ಕೆ ಮುಸ್ಲಿಂ ಪ್ರಧಾನಿ ಸಿಕ್ಕರೆ ಶೇಕಡಾ 40ರಷ್ಟು ಹಿಂದೂಗಳು ಸಾಯುತ್ತಾರೆ” ಎಂದು ನರಸಿಂಗಾನಂದ ಪ್ರಚೋದಿಸಿದ್ದರು.

2021ರಲ್ಲಿ ಹರಿದ್ವಾರದ ಸಮಾವೇಶದಲ್ಲಿ ಮುಸ್ಲಿಮರ ನರಮೇಧಕ್ಕೆ ಪ್ರಚೋದಿಸಿದ್ದ ನರಸಿಂಗಾನಂದ ವಿರುದ್ಧ ಪ್ರಕರಣ ದಾಖಲಾಗಿತ್ತು. ಫೆಬ್ರವರಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಇದೇ ರೀತಿಯ ಹೇಳಿಕೆ ನೀಡಿದ್ದರು.

ದ್ವೇಷ ಭಾಷಣ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡುತ್ತಾ ನರಸಿಂಗಾನಂದ, “ನಮಗೆ ಭಾರತದ ಸುಪ್ರೀಂ ಕೋರ್ಟ್ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಈ ದೇಶದ 100 ಕೋಟಿ ಹಿಂದೂಗಳನ್ನು ಸಂವಿಧಾನ ಕೊಲ್ಲುತ್ತಿದೆ. ಈ ಸಂವಿಧಾನವನ್ನು ನಂಬಿದವರನ್ನು ಕೊಲ್ಲಲಾಗುತ್ತದೆ. ಈ ವ್ಯವಸ್ಥೆಯನ್ನು ನಂಬುವವರು, ಈ ರಾಜಕಾರಣಿಗಳು, ಸುಪ್ರೀಂ ಕೋರ್ಟ್ ಮತ್ತು ಸೈನ್ಯದಲ್ಲಿರುವವರು ಎಲ್ಲರೂ ನಾಯಿಯಂತೆ ಸಾಯುತ್ತಾರೆ” ಎಂದು ಮತ್ತೊಮ್ಮೆ ಪ್ರಚೋದನೆ ನೀಡಿದ್ದರು. ಸಂವಿಧಾನ ಮತ್ತು ಸುಪ್ರೀಂ ಕೋರ್ಟ್‌ ವಿರುದ್ಧ ನಾಲಗೆ ಹರಿಬಿಟ್ಟಿದ್ದರು.

ಇದನ್ನೂ ಓದಿರಿ: ಪಂಜಾಬ್‌: ಉದ್ಯಾನದಲ್ಲಿದ್ದ ಗಾಂಧಿ ಪ್ರತಿಮೆ ಧ್ವಂಸ

ಯತಿ ನರಸಿಂಗಾನಂದರ ದ್ವೇಷ ಭಾಷಣಗಳನ್ನು ಹೊರಗೆ ತಂದು ಸರ್ಕಾರದ ಮೇಲೆ ಒತ್ತಡ ಸೃಷ್ಟಿ ಮಾಡುವಲ್ಲಿ ಆಲ್ಟ್‌ ನ್ಯೂಸ್‌ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್‌‌ ಬಹುಮುಖ್ಯ ಪಾತ್ರ ವಹಿಸಿದ್ದಾರೆ. ಹೀಗಾಗಿ ಯತಿ ನರಸಿಂಗಾನಂದ ಅವರು ಜುಬೇರ್‌ ವಿರುದ್ಧ ಮೊದಲಿನಿಂದಲೂ ದ್ವೇಷ ಕಾರುತ್ತಲೇ ಬಂದಿದ್ದಾರೆ.

ಜುಬೇರ್‌ ವಿರುದ್ಧ ಹಲವು ಪ್ರಕರಣಗಳನ್ನು ದಾಖಲಿಸಿರುವ ಪೊಲೀಸರು, ತನಿಖೆ ನಡೆಸುತ್ತಲೇ ಇದ್ದಾರೆ. ದ್ವೇಷ ಭಾಷಣಗಳನ್ನು ಹೊರಗೆ ಎಳೆಯುತ್ತಿದ್ದ ಜುಬೇರ್‌ ಅವರನ್ನೇ ಈಗ ವ್ಯವಸ್ಥೆ ಇಕ್ಕಟ್ಟಿಗೆ ಸಿಲುಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...