Homeಮುಖಪುಟಮಹಾತ್ಮ ಗಾಂಧಿ ವಿರುದ್ಧ ದ್ವೇಷ ಭಾಷಣ: ಯತಿ ನರಸಿಂಗಾನಂದ ಮೇಲೆ ಎಫ್‌ಐಆರ್‌

ಮಹಾತ್ಮ ಗಾಂಧಿ ವಿರುದ್ಧ ದ್ವೇಷ ಭಾಷಣ: ಯತಿ ನರಸಿಂಗಾನಂದ ಮೇಲೆ ಎಫ್‌ಐಆರ್‌

- Advertisement -
- Advertisement -

ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿಯಾಗಿ ದಾಸ್ನಾ ದೇವಿ ದೇವಸ್ಥಾನದ ಅರ್ಚಕ, ದ್ವೇಷ ಭಾಷಣಗಳಿಗೆ ಹೆಸರಾದ ಮಹಂತ ಯತಿ ನರಸಿಂಗಾನಂದ ಸರಸ್ವತಿ ಮಾತನಾಡಿರುವ ವಿಡಿಯೊ ಟ್ವಿಟರ್‌ನಲ್ಲಿ ವೈರಲ್‌ ಆಗಿದ್ದು, ಉತ್ತರ ಪ್ರದೇಶದ ಗಾಜಿಯಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬುಧವಾರ ರಾತ್ರಿ ವೈರಲ್ ಆಗಿರುವ 2.20 ನಿಮಿಷಗಳ ವೀಡಿಯೊದಲ್ಲಿ, ಯತಿ ನರಸಿಂಗಾನಂದ ಸರಸ್ವತಿ ಅವರು, “ಮಹಾತ್ಮ ಗಾಂಧಿ ಭಾರತೀಯ ಮುಸ್ಲಿಮರಿಗೆ ಹಕ್ಕುಗಳನ್ನು ನೀಡಿದರು. ಗಾಂಧಿ ಕಾರಣದಿಂದಾಗಿ 100 ಕೋಟಿ ಹಿಂದೂ ಸಮುದಾಯಕ್ಕೆ ತಮ್ಮದೇ ಆದ ಒಂದು ಇಂಚು ಭೂಮಿ ಇಲ್ಲ” ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಹಾತ್ಮ ಗಾಂಧಿಯವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಪೊಲೀಸರು ಗುರುತಿಸಿದ್ದಾರೆ. ಯತಿ ನರಸಿಂಗಾನಂದರ ಹೇಳಿಕೆಗಳು ಕಾನೂನು ಮತ್ತು ಸುವ್ಯವಸ್ಥೆಗೆ ಅಡ್ಡಿಪಡಿಸುವ ಪರಿಸ್ಥಿತಿಗೆ ಕಾರಣವಾಗಬಹುದು ಎಂದು ಮುಸ್ಸೂರಿ ಪೊಲೀಸ್ ಠಾಣೆಯ ಠಾಣಾಧಿಕಾರಿ ತಿಳಿಸಿದ್ದಾರೆ.

ಮುಸ್ಸೂರಿ ಪೊಲೀಸ್ ಠಾಣೆಯಲ್ಲಿ ನರಸಿಂಗಾನಂದ ಸರಸ್ವತಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505(2) (ವರ್ಗಗಳ ನಡುವೆ ದ್ವೇಷ ಉತ್ತೇಜಿಸುವ ಹೇಳಿಕೆಗಳು), 153ಬಿ (ರಾಷ್ಟ್ರೀಯ ಏಕೀಕರಣಕ್ಕೆ ಹಾನಿಯುಂಟುಮಾಡುವ ಆರೋಪ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

“ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯತಿ ನರಸಿಂಗಾನಂದ ದ್ವೇಷ ಭಾಷಣ ಮಾಡುವುದು ಇದೇ ಮೊದಲೇನಲ್ಲ. ಮುಸ್ಲಿಮರ ನರಮೇಧಕ್ಕೆ ಕರೆ ನೀಡಿರುವ ಕುಖ್ಯಾತ ಇವರ ಮೇಲಿದೆ.

“ಭಾರತಕ್ಕೆ ಮುಸ್ಲಿಂ ವ್ಯಕ್ತಿ ಪ್ರಧಾನಿಯಾದರೆ ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳಬೇಕು. ಭಾರತಕ್ಕೆ ಮುಸ್ಲಿಂ ಪ್ರಧಾನಿ ಸಿಕ್ಕರೆ ಶೇಕಡಾ 40ರಷ್ಟು ಹಿಂದೂಗಳು ಸಾಯುತ್ತಾರೆ” ಎಂದು ನರಸಿಂಗಾನಂದ ಪ್ರಚೋದಿಸಿದ್ದರು.

2021ರಲ್ಲಿ ಹರಿದ್ವಾರದ ಸಮಾವೇಶದಲ್ಲಿ ಮುಸ್ಲಿಮರ ನರಮೇಧಕ್ಕೆ ಪ್ರಚೋದಿಸಿದ್ದ ನರಸಿಂಗಾನಂದ ವಿರುದ್ಧ ಪ್ರಕರಣ ದಾಖಲಾಗಿತ್ತು. ಫೆಬ್ರವರಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಇದೇ ರೀತಿಯ ಹೇಳಿಕೆ ನೀಡಿದ್ದರು.

ದ್ವೇಷ ಭಾಷಣ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡುತ್ತಾ ನರಸಿಂಗಾನಂದ, “ನಮಗೆ ಭಾರತದ ಸುಪ್ರೀಂ ಕೋರ್ಟ್ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಈ ದೇಶದ 100 ಕೋಟಿ ಹಿಂದೂಗಳನ್ನು ಸಂವಿಧಾನ ಕೊಲ್ಲುತ್ತಿದೆ. ಈ ಸಂವಿಧಾನವನ್ನು ನಂಬಿದವರನ್ನು ಕೊಲ್ಲಲಾಗುತ್ತದೆ. ಈ ವ್ಯವಸ್ಥೆಯನ್ನು ನಂಬುವವರು, ಈ ರಾಜಕಾರಣಿಗಳು, ಸುಪ್ರೀಂ ಕೋರ್ಟ್ ಮತ್ತು ಸೈನ್ಯದಲ್ಲಿರುವವರು ಎಲ್ಲರೂ ನಾಯಿಯಂತೆ ಸಾಯುತ್ತಾರೆ” ಎಂದು ಮತ್ತೊಮ್ಮೆ ಪ್ರಚೋದನೆ ನೀಡಿದ್ದರು. ಸಂವಿಧಾನ ಮತ್ತು ಸುಪ್ರೀಂ ಕೋರ್ಟ್‌ ವಿರುದ್ಧ ನಾಲಗೆ ಹರಿಬಿಟ್ಟಿದ್ದರು.

ಇದನ್ನೂ ಓದಿರಿ: ಪಂಜಾಬ್‌: ಉದ್ಯಾನದಲ್ಲಿದ್ದ ಗಾಂಧಿ ಪ್ರತಿಮೆ ಧ್ವಂಸ

ಯತಿ ನರಸಿಂಗಾನಂದರ ದ್ವೇಷ ಭಾಷಣಗಳನ್ನು ಹೊರಗೆ ತಂದು ಸರ್ಕಾರದ ಮೇಲೆ ಒತ್ತಡ ಸೃಷ್ಟಿ ಮಾಡುವಲ್ಲಿ ಆಲ್ಟ್‌ ನ್ಯೂಸ್‌ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್‌‌ ಬಹುಮುಖ್ಯ ಪಾತ್ರ ವಹಿಸಿದ್ದಾರೆ. ಹೀಗಾಗಿ ಯತಿ ನರಸಿಂಗಾನಂದ ಅವರು ಜುಬೇರ್‌ ವಿರುದ್ಧ ಮೊದಲಿನಿಂದಲೂ ದ್ವೇಷ ಕಾರುತ್ತಲೇ ಬಂದಿದ್ದಾರೆ.

ಜುಬೇರ್‌ ವಿರುದ್ಧ ಹಲವು ಪ್ರಕರಣಗಳನ್ನು ದಾಖಲಿಸಿರುವ ಪೊಲೀಸರು, ತನಿಖೆ ನಡೆಸುತ್ತಲೇ ಇದ್ದಾರೆ. ದ್ವೇಷ ಭಾಷಣಗಳನ್ನು ಹೊರಗೆ ಎಳೆಯುತ್ತಿದ್ದ ಜುಬೇರ್‌ ಅವರನ್ನೇ ಈಗ ವ್ಯವಸ್ಥೆ ಇಕ್ಕಟ್ಟಿಗೆ ಸಿಲುಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...