Homeರಾಷ್ಟ್ರೀಯಮುಸ್ಲಿಮರ ವಿರುದ್ದ ದ್ವೇಷ ಭಾಷಣ: ಕೇರಳದ ಮಾಜಿ ಶಾಸಕನ ಬಂಧನ, ಜಾಮೀನು

ಮುಸ್ಲಿಮರ ವಿರುದ್ದ ದ್ವೇಷ ಭಾಷಣ: ಕೇರಳದ ಮಾಜಿ ಶಾಸಕನ ಬಂಧನ, ಜಾಮೀನು

- Advertisement -
- Advertisement -

ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಕೇರಳದ ಹಿರಿಯ ರಾಜಕಾರಣಿ, ಮಾಜಿ ಶಾಸಕ ಪಿ.ಸಿ. ಜಾರ್ಜ್ ಅವರನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಇದರ ನಂತರ ಅವರಿಗೆ ತಿರುವನಂತಪುರಂನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಿದೆ.

ಪಿಸಿ ಜಾರ್ಜ್ ಅವರನ್ನು ಪೊಲೀಸರು ಅವರ ನಿವಾಸದಿಂದ ರಸ್ತೆ ಮಾರ್ಗವಾಗಿ ತಿರುವನಂತಪುರಕ್ಕೆ ಕರೆತಂದು ಅವರನ್ನು ಔಪಚಾರಿಕವಾಗಿ ಬಂಧನವನ್ನು ದಾಖಲಿಸಿದ್ದಾರೆ. ನಂತರ ಅವರನ್ನು ಡ್ಯೂಟಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಅವರು ಅವರಿಗೆ ಜಾಮೀನು ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಾಮೀನು ಮಂಜೂರು ಆದ ನಂತರ, ನ್ಯಾಯಾಲಯದ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿದ ಪಿ.ಸಿ. ಜಾರ್ಜ್, “ತನಿಖೆಯಲ್ಲಿ ಮಧ್ಯಪ್ರವೇಶಿಸದಂತೆ, ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಅಥವಾ ಯಾವುದೇ ದ್ವೇಷದ ಭಾಷಣಗಳನ್ನು ಮಾಡದಂತೆ ಅಥವಾ ಯಾವುದೇ ವಿವಾದಗಳಲ್ಲಿ ಭಾಗಿಯಾಗದಂತೆ ಮ್ಯಾಜಿಸ್ಟ್ರೇಟ್ ಆದೇಶ ನೀಡಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ: ಹಿಮಾಚಲ ಸರ್ಕಾರಕ್ಕೆ ತರಾಟೆ, ಉತ್ತರಾಖಂಡ್‌ಗೆ ಖಡಕ್‌ ಎಚ್ಚರಿಕೆ ನೀಡಿದ ಸುಪ್ರೀಂಕೋರ್ಟ್‌

ಕೊಟ್ಟಾಯಂ ಜಿಲ್ಲೆಯ ಎರಟ್ಟುಪೆಟ್ಟಾದಲ್ಲಿರುವ ಅವರ ನಿವಾಸದಿಂದ ಮುಂಜಾನೆ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಯಿತು. ನಂತರ ಅವರ ವೈಯಕ್ತಿಕ ವಾಹನದಲ್ಲಿ ತಿರುವನಂತಪುರಂ ಎ.ಆರ್. ಕ್ಯಾಂಪ್‌ಗೆ ರಸ್ತೆಯ ಮೂಲಕ ಕರೆದೊಯ್ದು, ಅಲ್ಲಿ IPC ಯ ಸೆಕ್ಷನ್ 153A ಅಡಿ (ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಅಪರಾಧ) ಯಲ್ಲಿ ಅವರ ಬಂಧನವನ್ನು ಔಪಚಾರಿಕವಾಗಿ ದಾಖಲಿಸಲಾಗಿದೆ.

ರಾಜ್ಯ ಪೊಲೀಸ್ ಮುಖ್ಯಸ್ಥ ಅನಿಲ್ ಕಾಂತ್ ಅವರ ನಿರ್ದೇಶನದ ಮೇರೆಗೆ ತಿರುವನಂತಪುರಂ ಫೋರ್ಟ್ ಪೊಲೀಸ್ ಠಾಣೆಯ ಅಧಿಕಾರಿಗಳು ಪಿಸಿ ಜಾರ್ಜ್ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಶನಿವಾರ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಆವರನ್ನು ಕಸ್ಟಡಿಗೆ ತೆಗೆದುಕೊಂಡಾಗಿನಿಂದ ಆತನ ಬಂಧನ ದಾಖಲಾಗುವವರೆಗೆ ತಿರುವನಂತಪುರದ ರಸ್ತೆಯ ವಿವಿಧ ಸ್ಥಳಗಳಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ಶುಭಾಶಯಗಳನ್ನು ಮತ್ತು ಬೆಂಬಲವನ್ನು ನೀಡಿದ್ದಾರೆ.

ಈ ಮಧ್ಯೆ ಎ.ಆರ್. ಕ್ಯಾಂಪ್‌ ಹೊರಗೆ ಡಿವೈಎಫ್‌ಐ ಕಾರ್ಯಕರ್ತರು ಕಪ್ಪು ಬಾವುಟವನ್ನು ಬೀಸಿ, ಪಿ.ಸಿ. ಜಾರ್ಜ್ ಅವರಿಗೆ ಧಿಕ್ಕಾರ ಕೂಗಿದ್ದು, ಆರೋಪಿ ಪಿಸಿ ಜಾರ್ಜ್ ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಕೊಳೆತ ಮೊಟ್ಟೆಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಅವರನ್ನು ಭೇಟಿ ಮಾಡಲು ಬಂದ ವಿದೇಶಾಂಗ ವ್ಯವಹಾರಗಳ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ. ಮುರಳೀಧರನ್ ಅವರಿಗೆ ಎಆರ್ ಕ್ಯಾಂಪ್ ಪ್ರವೇಶಿಸಲು ಅನುಮತಿ ನಿರಾಕರಿಸಲಾಗಿದೆ.

ಇದನ್ನೂ ಓದಿ: ಹಿಂದೂ ರಾಷ್ಟ್ರಕ್ಕಾಗಿ ಕೊಲೆ ಮಾಡಲು ಪ್ರಚೋದಿಸಿದ್ದು ದ್ವೇಷ ಭಾಷಣವಲ್ಲ ಎಂದ ದೆಹಲಿ ಪೊಲೀಸರು; ಸುಪ್ರೀಂ ಆಕ್ಷೇಪ

ಏಪ್ರಿಲ್ 29 ರಂದು ತಿರುವನಂತಪುರಂನ ಅನಂತಪುರಿ ಹಿಂದೂ ಮಹಾ ಸಮ್ಮೇಳನದಲ್ಲಿ ಮುಸ್ಲಿಮರ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ಪಿ.ಸಿ ಜಾರ್ಜ್ ವಿರುದ್ಧ ಹಲವು ಸಂಘಟನೆಗಳು ದೂರು ದಾಖಲಿಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದವು.

ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪಿ.ಸಿ. ಜಾರ್ಜ್, “ಮುಸ್ಲಿಮರು ನಡೆಸುತ್ತಿರುವ ರೆಸ್ಟೋರೆಂಟ್‌ಗಳಿಗೆ ಹೋಗಬಾರದು. ಅವರು ದೇಶದ ಮೇಲೆ ಹಿಡಿತ ಸಾಧಿಸುವ ಉದ್ದೇಶದಿಂದ ಚಹಾದಲ್ಲಿ ಸಂತಾನಹರಣ ಆಗುವ ದ್ರವವನ್ನು ಅದರಲ್ಲಿ ಬಳಸುತ್ತಾರೆ” ಎಂದು ಹೇಳಿದ್ದರು.

33 ವರ್ಷಗಳ ಕಾಲ ರಾಜ್ಯ ವಿಧಾನಸಭೆಯಲ್ಲಿ ಪೂಂಜಾರ್ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಜಾರ್ಜ್ ಅವರು ಮುಸ್ಲಿಮರು ನಡೆಸುತ್ತಿರುವ ವ್ಯವಹಾರಗಳನ್ನು ಬಹಿಷ್ಕರಿಸುವಂತೆ ಮುಸ್ಲಿಮೇತರರನ್ನು ಅಂದಿನ ಭಾಷಣದಲ್ಲಿ ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....