Homeರಾಷ್ಟ್ರೀಯಮುಸ್ಲಿಮರ ವಿರುದ್ದ ದ್ವೇಷ ಭಾಷಣ: ಕೇರಳದ ಮಾಜಿ ಶಾಸಕನ ಬಂಧನ, ಜಾಮೀನು

ಮುಸ್ಲಿಮರ ವಿರುದ್ದ ದ್ವೇಷ ಭಾಷಣ: ಕೇರಳದ ಮಾಜಿ ಶಾಸಕನ ಬಂಧನ, ಜಾಮೀನು

- Advertisement -
- Advertisement -

ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಕೇರಳದ ಹಿರಿಯ ರಾಜಕಾರಣಿ, ಮಾಜಿ ಶಾಸಕ ಪಿ.ಸಿ. ಜಾರ್ಜ್ ಅವರನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಇದರ ನಂತರ ಅವರಿಗೆ ತಿರುವನಂತಪುರಂನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಿದೆ.

ಪಿಸಿ ಜಾರ್ಜ್ ಅವರನ್ನು ಪೊಲೀಸರು ಅವರ ನಿವಾಸದಿಂದ ರಸ್ತೆ ಮಾರ್ಗವಾಗಿ ತಿರುವನಂತಪುರಕ್ಕೆ ಕರೆತಂದು ಅವರನ್ನು ಔಪಚಾರಿಕವಾಗಿ ಬಂಧನವನ್ನು ದಾಖಲಿಸಿದ್ದಾರೆ. ನಂತರ ಅವರನ್ನು ಡ್ಯೂಟಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಅವರು ಅವರಿಗೆ ಜಾಮೀನು ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಾಮೀನು ಮಂಜೂರು ಆದ ನಂತರ, ನ್ಯಾಯಾಲಯದ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿದ ಪಿ.ಸಿ. ಜಾರ್ಜ್, “ತನಿಖೆಯಲ್ಲಿ ಮಧ್ಯಪ್ರವೇಶಿಸದಂತೆ, ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಅಥವಾ ಯಾವುದೇ ದ್ವೇಷದ ಭಾಷಣಗಳನ್ನು ಮಾಡದಂತೆ ಅಥವಾ ಯಾವುದೇ ವಿವಾದಗಳಲ್ಲಿ ಭಾಗಿಯಾಗದಂತೆ ಮ್ಯಾಜಿಸ್ಟ್ರೇಟ್ ಆದೇಶ ನೀಡಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ: ಹಿಮಾಚಲ ಸರ್ಕಾರಕ್ಕೆ ತರಾಟೆ, ಉತ್ತರಾಖಂಡ್‌ಗೆ ಖಡಕ್‌ ಎಚ್ಚರಿಕೆ ನೀಡಿದ ಸುಪ್ರೀಂಕೋರ್ಟ್‌

ಕೊಟ್ಟಾಯಂ ಜಿಲ್ಲೆಯ ಎರಟ್ಟುಪೆಟ್ಟಾದಲ್ಲಿರುವ ಅವರ ನಿವಾಸದಿಂದ ಮುಂಜಾನೆ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಯಿತು. ನಂತರ ಅವರ ವೈಯಕ್ತಿಕ ವಾಹನದಲ್ಲಿ ತಿರುವನಂತಪುರಂ ಎ.ಆರ್. ಕ್ಯಾಂಪ್‌ಗೆ ರಸ್ತೆಯ ಮೂಲಕ ಕರೆದೊಯ್ದು, ಅಲ್ಲಿ IPC ಯ ಸೆಕ್ಷನ್ 153A ಅಡಿ (ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಅಪರಾಧ) ಯಲ್ಲಿ ಅವರ ಬಂಧನವನ್ನು ಔಪಚಾರಿಕವಾಗಿ ದಾಖಲಿಸಲಾಗಿದೆ.

ರಾಜ್ಯ ಪೊಲೀಸ್ ಮುಖ್ಯಸ್ಥ ಅನಿಲ್ ಕಾಂತ್ ಅವರ ನಿರ್ದೇಶನದ ಮೇರೆಗೆ ತಿರುವನಂತಪುರಂ ಫೋರ್ಟ್ ಪೊಲೀಸ್ ಠಾಣೆಯ ಅಧಿಕಾರಿಗಳು ಪಿಸಿ ಜಾರ್ಜ್ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಶನಿವಾರ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಆವರನ್ನು ಕಸ್ಟಡಿಗೆ ತೆಗೆದುಕೊಂಡಾಗಿನಿಂದ ಆತನ ಬಂಧನ ದಾಖಲಾಗುವವರೆಗೆ ತಿರುವನಂತಪುರದ ರಸ್ತೆಯ ವಿವಿಧ ಸ್ಥಳಗಳಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ಶುಭಾಶಯಗಳನ್ನು ಮತ್ತು ಬೆಂಬಲವನ್ನು ನೀಡಿದ್ದಾರೆ.

ಈ ಮಧ್ಯೆ ಎ.ಆರ್. ಕ್ಯಾಂಪ್‌ ಹೊರಗೆ ಡಿವೈಎಫ್‌ಐ ಕಾರ್ಯಕರ್ತರು ಕಪ್ಪು ಬಾವುಟವನ್ನು ಬೀಸಿ, ಪಿ.ಸಿ. ಜಾರ್ಜ್ ಅವರಿಗೆ ಧಿಕ್ಕಾರ ಕೂಗಿದ್ದು, ಆರೋಪಿ ಪಿಸಿ ಜಾರ್ಜ್ ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಕೊಳೆತ ಮೊಟ್ಟೆಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಅವರನ್ನು ಭೇಟಿ ಮಾಡಲು ಬಂದ ವಿದೇಶಾಂಗ ವ್ಯವಹಾರಗಳ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ. ಮುರಳೀಧರನ್ ಅವರಿಗೆ ಎಆರ್ ಕ್ಯಾಂಪ್ ಪ್ರವೇಶಿಸಲು ಅನುಮತಿ ನಿರಾಕರಿಸಲಾಗಿದೆ.

ಇದನ್ನೂ ಓದಿ: ಹಿಂದೂ ರಾಷ್ಟ್ರಕ್ಕಾಗಿ ಕೊಲೆ ಮಾಡಲು ಪ್ರಚೋದಿಸಿದ್ದು ದ್ವೇಷ ಭಾಷಣವಲ್ಲ ಎಂದ ದೆಹಲಿ ಪೊಲೀಸರು; ಸುಪ್ರೀಂ ಆಕ್ಷೇಪ

ಏಪ್ರಿಲ್ 29 ರಂದು ತಿರುವನಂತಪುರಂನ ಅನಂತಪುರಿ ಹಿಂದೂ ಮಹಾ ಸಮ್ಮೇಳನದಲ್ಲಿ ಮುಸ್ಲಿಮರ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ಪಿ.ಸಿ ಜಾರ್ಜ್ ವಿರುದ್ಧ ಹಲವು ಸಂಘಟನೆಗಳು ದೂರು ದಾಖಲಿಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದವು.

ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪಿ.ಸಿ. ಜಾರ್ಜ್, “ಮುಸ್ಲಿಮರು ನಡೆಸುತ್ತಿರುವ ರೆಸ್ಟೋರೆಂಟ್‌ಗಳಿಗೆ ಹೋಗಬಾರದು. ಅವರು ದೇಶದ ಮೇಲೆ ಹಿಡಿತ ಸಾಧಿಸುವ ಉದ್ದೇಶದಿಂದ ಚಹಾದಲ್ಲಿ ಸಂತಾನಹರಣ ಆಗುವ ದ್ರವವನ್ನು ಅದರಲ್ಲಿ ಬಳಸುತ್ತಾರೆ” ಎಂದು ಹೇಳಿದ್ದರು.

33 ವರ್ಷಗಳ ಕಾಲ ರಾಜ್ಯ ವಿಧಾನಸಭೆಯಲ್ಲಿ ಪೂಂಜಾರ್ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಜಾರ್ಜ್ ಅವರು ಮುಸ್ಲಿಮರು ನಡೆಸುತ್ತಿರುವ ವ್ಯವಹಾರಗಳನ್ನು ಬಹಿಷ್ಕರಿಸುವಂತೆ ಮುಸ್ಲಿಮೇತರರನ್ನು ಅಂದಿನ ಭಾಷಣದಲ್ಲಿ ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...