Homeಕರ್ನಾಟಕಮಂಗಳೂರು: ಮುಸ್ಲಿಮರ ನರಮೇಧಕ್ಕೆ ಪ್ರಚೋದಿಸಿದ ಬ್ಯಾಂಕ್ ಅಧಿಕಾರಿ- ಕ್ರಮಕ್ಕೆ ಮುಂದಾದ ಬ್ಯಾಂಕ್ ಆಡಳಿತ

ಮಂಗಳೂರು: ಮುಸ್ಲಿಮರ ನರಮೇಧಕ್ಕೆ ಪ್ರಚೋದಿಸಿದ ಬ್ಯಾಂಕ್ ಅಧಿಕಾರಿ- ಕ್ರಮಕ್ಕೆ ಮುಂದಾದ ಬ್ಯಾಂಕ್ ಆಡಳಿತ

- Advertisement -
- Advertisement -

ದಕ್ಷಿಣ ಕನ್ನಡದಲ್ಲಿ ಮುಸ್ಲಿಮರನ್ನು ಸಾಮೂಹಿಕವಾಗಿ ಹತ್ಯೆ ಮಾಡಲು ಫೇಸ್‌ಬುಕ್ ಪೋಸ್ಟ್ ಮೂಲಕ ಕರೆ ಕೊಟ್ಟಿದ್ದ ಫೆಡರಲ್ ಬ್ಯಾಂಕಿನ ವ್ಯವಹಾರಿಕ ಮುಖ್ಯಸ್ಥನೆನ್ನಲಾದ ವಿಷ್ಣಪ್ರಸಾದ್ ನಿಡ್ಡಾಜೆ ವಿರುದ್ಧ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿದೆ. ಇದೇ ವೇಲೆಯಲ್ಲಿ ಪ್ರಕರಣದ ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಫೆಡರಲ್ ಬ್ಯಾಂಕ್ ತಿಳಿಸಿದೆ.

ತಾನು ಫೆಡರಲ್ ಬ್ಯಾಂಕಿನ ಅಧಿಕಾರಿಯೆಂದು ತನ್ನ ಫೇಸ್ ಬುಕ್ ಪ್ರೋಫೈಲ್‌ನಲ್ಲಿ ಹೇಳಿಕೊಂಡಿರುವ ವಿಷ್ಣುಪ್ರಸಾದ್ ಎಂಬುವವರು ವಿಟ್ಲದ ಬಳಿಯ ಸಾಲೆತ್ತೂರಿನಲ್ಲಿ ಮುಸ್ಲಿಮ್ ಮದುಮಗನೊಬ್ಬ ಕೊರಗರ ಆರಾದ್ಯ ದೈವ ಕೊರಗಜ್ಜನ ಅಣಕಿಸುವ ವೇಷ ತೊಟ್ಟಿದ್ದನೆಂಬ ಆರೋಪಕ್ಕೆ ಸಂಬಂಧಿಸಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ. ಇದರ ವಿರುದ್ದ ನೆಟ್ಟಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಟ್ವಿಟರ್ ಬಳಕೆದಾರರೊಬ್ಬರು ಫೆಡರಲ್ ಬ್ಯಾಂಕ್‌ನ್ನು ತರಾಟೆಗೆ ತೆಗೆದುಕೊಂಡಿದ್ದರು. ಅಲ್ಲದೆ ಆರೋಪಿ ವಿರುದ್ದ ಪಿಎಫ್‌ಐ ಸಂಘಟನೆಯು ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಿತ್ತು.

ನಮ್ಮದು ಕೃಷ್ಣನ ತತ್ವ, ಶಿಶುಪಾಲನ ನೂರು ಪೆಟ್ಟುಗಳನ್ನು ಸಹಿಸೋದು, ನೂರೊಂದನೆ ಪೆಟ್ಟಿಗೆ ಢಿಮ್… ಬಾಂಧವರ ಸಾವಿರ ಪೆಟ್ಟು ಸಹಿಸೋದು, ನಂತರ ಗೋಧ್ರಾ ತರದ ಒಂದು ಪೆಟ್ಟಿನಲ್ಲಿ 20 ವರ್ಷ ಗಪ್ ಚುಪ್… ಗುಜರಾತಿನ ಕೊನೆಯ ಕೋಮುಗಲಭೆ ಯಾವಾಗ ಎಲ್ಲಿ ಹೇಗೆ ನಡೆಯಿತು ಅನ್ನೂದನ್ನ ಸ್ವಲ್ಪ ಯೋಚಿಸಿ ನೋಡಿದರೆ ಇದು ಅರ್ಥವಾದೀತು… ಬಹುಶಃ ವಿಟ್ಲ, ಮಂಗಳೂರು ಕಡೆ ಇನ್ನೂ ಅವುಗಳ ಕೌಂಟ್ ಪೂರ್ತಿ ಆಗಿಲ್ಲ ಅನ್ಸುತ್ತೆ… ಬಂದೂ ಬಂದೂ ಕೆಣಕುತ್ತಿವೆ… ಎಂದು ಹಿಂಸಾತ್ಮಕ ಬರಹ ವಿಷ್ಣುಪ್ರಸಾದ್ ತನ್ನ ಫೇಸ್‌ಬುಕ್ ಖಾತೆಯಲ್ಲಿ ಹಾಕಿಕೊಂಡಿದ್ದ. ಮತ್ತೊಂದು ಪೋಸ್ಟ್‌ನಲ್ಲಿ-ಕೊರಗಜ್ಜನ ವೇಷ ಹಾಕಿದ್ದಾನೆಂದು ಆರೋಪಿಸಲಾಗಿರುವ ಮುಸ್ಲಿಮರ ಮದುಮಗನ ಮನೆ, ಕಾರು, ಅಂಗಡಿ ಧ್ವಂಸ ಮಾಡಬೇಕೆಂಬರ್ಥದಲ್ಲಿ ಬರೆದಿದ್ದ. ಈಗ ವಿಷ್ಣುಪ್ರಸಾದ್ ಫೇಸ್‌ಬುಕ್ ಖಾತೆ ಡಿಲೀಟ್ ಆಗಿದೆ.

ಇದೆಲ್ಲವನ್ನು ಜಾಲತಾಣಿಗರು ಟ್ವೀಟ್ ಮೂಲಕ ಫೆಡರಲ್ ಬ್ಯಾಂಕ್ ಗಮನಕ್ಕೆ ತಂದಿದ್ದರು. ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮುಜುಗರಕ್ಕೀಡಾಗಿದ್ದ ಫೆಡರಲ್ ಬ್ಯಾಂಕ್ ಆಡಳಿತಗಾರರು ಪ್ರತಿಕಿಯಿಸುವುದು ಅನಿವಾರ್ಯವಾಯಿತು. ಒಂದು ಜವಾಬ್ದಾರಿಯುತ ಸಂಸ್ಥೆಯಾಗಿ ನಮ್ಮ ಉದ್ಯೋಗಿಗಳ ಕಡೆಯಿಂದ ಯಾವುದೆ ಅಸಭ್ಯ, ಅನಪೇಕ್ಷಿತ ಅಥವಾ ಹಿಂಸಾತ್ಮಕ, ಪ್ರಶ್ನಾತ್ಮಕ ಕೃತ್ಯಗಳನ್ನು ಎಂದಿಗೂ ಪ್ರೋತ್ಸಾಹಿಸುವುದಿಲ್ಲ. ಅಂತಹ ವರ್ತನೆಯನ್ನು ಸಂಸ್ಥೆ ಎಂದು ಸಹಿಸುವುದಿಲ್ಲ. ಇಂತಹ ಯಾವುದೇ ಪ್ರಚೋದನೆಗೂ ಸಂಸ್ಥೆಗೂ ಸಂಬಂಧವಿಲ್ಲ. ಈ ಕುರಿತು ಸೂಕ್ತ ಕ್ರಮಕ್ಕಾಗಿ ವಿಚಾರಣೆ ಪ್ರಾರಂಭಿಸಲಾಗಿದೆ ಎಂದು ಫೆಡರಲ್ ಬ್ಯಾಂಕ್ ಹೇಳಿದೆ.


ಇದನ್ನೂ ಓದಿ: ಕ್ಷಮೆ ಕೇಳಿದರೂ ಮುಗಿಯದ ಕೊರಗಜ್ಜ ಪ್ರಕರಣ: ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....