ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧದ ದ್ವೇಷ ಭಾಷಣ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ (ಎಸ್ಪಿ) ನಾಯಕ ಅಜಂ ಖಾನ್ ಅವರನ್ನು ರಾಜ್ಯದ ರಾಂಪುರದ ನ್ಯಾಯಾಲಯ ದೋಷಿ ಎಂದು ಗುರುವಾರ ಘೋಷಿಸಿದೆ.
2019 ರಲ್ಲಿ ಅವರ ವಿರುದ್ಧ ದ್ವೇಷ ಭಾಷಣ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾಣೆ ನಡೆಸಿದ ನ್ಯಾಯಾಲಯ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದು, ಅಜಂ ಖಾನ್ ಮತ್ತು ಇತರ ಇಬ್ಬರು ಆರೋಪಿಗಳಿಗೆ 2 ಸಾವಿರ ದಂಡದೊಂದಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಉತ್ತರ ಪ್ರದೇಶ ಸಿಎಂ ಮತ್ತು ಆಗಿನ ರಾಂಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಂಜನೇಯ ಕುಮಾರ್ ಸಿಂಗ್ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ 2019 ರ ಏಪ್ರಿಲ್ನಲ್ಲಿ ರಾಮ್ಪುರದಲ್ಲಿ ಅಝಂ ಖಾನ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ತೆಲಂಗಾಣ: ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಯತ್ನ; ಕೇಂದ್ರ ಸಚಿವರ ಆಪ್ತ ಸೇರಿದಂತೆ ಮೂವರ ಬಂಧನ
ಭೂಕಬಳಿಕೆ ಪ್ರಕರಣದಲ್ಲಿ ಆಜಂ ಖಾನ್ ಹಲವು ತಿಂಗಳುಗಳ ಕಾಲ ಜೈಲಿನಲ್ಲಿದ್ದರು. ನಂತರ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿ, ಜಾಮೀನಿಗಾಗಿ ಆರೋಪಿಗಳಿಗೆ “ತೀವ್ರ ಷರತ್ತುಗಳನ್ನು” ವಿಧಿಸಿದ್ದಕ್ಕಾಗಿ ಉಚ್ಚ ನ್ಯಾಯಾಲಯಗಳನ್ನು ಟೀಕಿಸಿತ್ತು.