Homeಮುಖಪುಟದ್ವೇಷ ಭಾಷಣ ಆರೋಪ: ನ್ಯಾಯಾಧೀಶ ಯಾದವ್ ವಿರುದ್ಧ ಕ್ರಮಕ್ಕೆ ವಿಳಂಬ ಖಂಡಿಸಿದ ವಕೀಲರ ಗುಂಪು

ದ್ವೇಷ ಭಾಷಣ ಆರೋಪ: ನ್ಯಾಯಾಧೀಶ ಯಾದವ್ ವಿರುದ್ಧ ಕ್ರಮಕ್ಕೆ ವಿಳಂಬ ಖಂಡಿಸಿದ ವಕೀಲರ ಗುಂಪು

- Advertisement -
- Advertisement -

ನವದೆಹಲಿ: 2024ರ ಡಿಸೆಂಬರ್ ನಲ್ಲಿ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರ ವಿರುದ್ಧ ಆಂತರಿಕ ತನಿಖೆಯನ್ನು ಪ್ರಾರಂಭಿಸದ ಸುಪ್ರೀಂ ಕೋರ್ಟ್ ನಿರ್ಧಾರದ ಬಗ್ಗೆ ಅಖಿಲ ಭಾರತ ನ್ಯಾಯವಾದಿಗಳ ಸಂಘ (ಎಐಎಲ್‌ಎಜೆ) ಕಳವಳ ವ್ಯಕ್ತಪಡಿಸಿದೆ.

ರಾಜ್ಯಸಭಾ ಸಚಿವಾಲಯವು ಈ ವಿಷಯದಲ್ಲಿ ವಿಶೇಷ ನ್ಯಾಯವ್ಯಾಪ್ತಿಯನ್ನು ಪ್ರತಿಪಾದಿಸಿ ನ್ಯಾಯಮೂರ್ತಿ ಯಾದವ್ ವಿರುದ್ಧದ ತನಿಖೆಯನ್ನು ಸುಪ್ರೀಂ ಕೋರ್ಟ್ ಸ್ಥಗಿತಗೊಳಿಸಿದೆ ಎಂದು ವರದಿಗಳು ಸೂಚಿಸಿದ ನಂತರ   ಅಖಿಲ ಭಾರತ ನ್ಯಾಯವಾದಿಗಳ ಸಂಘ (ಎಐಎಲ್‌ಎಜೆ) ಶುಕ್ರವಾರದಂದು ಖಂಡಿಸಿವೆ.

ದ್ವೇಷ ಭಾಷಣವು ಭ್ರಾತೃತ್ವದ ವಿರುದ್ಧವಾಗಿದೆ ಮತ್ತು ನ್ಯಾಯಾಂಗವು ತನ್ನ ಶ್ರೇಣಿಯೊಳಗೆ ಅದನ್ನು ಸಹಿಸಬಾರದು ಎಂದು ಎಐಎಲ್‌ಎಜೆ ಹೇಳಿಕೆಯಲ್ಲಿ ಹೇಳಲಾಗಿದೆ.

ನ್ಯಾಯಾಲಯದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ “ಏಕರೂಪ ನಾಗರಿಕ ಸಂಹಿತೆಯ ಸಾಂವಿಧಾನಿಕ ಅಗತ್ಯ”ದ ಕುರಿತು ಮಾತನಾಡಿದ ನ್ಯಾಯಮೂರ್ತಿ ಯಾದವ್, ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ ಆರೋಪ ಹೊರಿಸಲಾಗಿತ್ತು. ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರಿಗೆ ಕ್ಷಮೆಯಾಚಿಸಲು ಸೂಚಿಸಿದೆ ಎಂದು ವರದಿಯಾಗಿದೆ. ಆದರೆ ಅವರು ಕ್ಷಮೆಯಾಚನೆಗೆ ನಿರಾಕರಿಸಿದ್ದಾರೆ ಮತ್ತು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರರಿಂದ ರಾಜಕೀಯ ಬೆಂಬಲ ಇದೆ ಹೇಳಿಕೆಯಲ್ಲಿ ಆರೋಪಿಸಲಾಗಿದೆ.

2024ರ  ಡಿಸೆಂಬರ್ 13ರಂದು ಸಲ್ಲಿಸಲಾದ ದೋಷಾರೋಪಣೆ ಪ್ರಸ್ತಾವನೆಯನ್ನು ಅಂಗೀಕರಿಸದಿದ್ದಕ್ಕಾಗಿ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ಅವರನ್ನು ಎಐಎಲ್‌ಎಜೆ ಟೀಕಿಸಿದೆ ಮತ್ತು ಸಂಸತ್ತು ನ್ಯಾಯಾಧೀಶರನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿದೆ. ಆಂತರಿಕ ನ್ಯಾಯಾಂಗ ತನಿಖಾ ಪ್ರಕ್ರಿಯೆಯು ದೋಷಾರೋಪಣೆಗಿಂತ ಭಿನ್ನವಾಗಿದೆ ಮತ್ತು ಸ್ವತಂತ್ರವಾಗಿ ಮುಂದುವರಿಯಬೇಕಿತ್ತು ಎಂದು ಎಐಎಲ್‌ಎಜೆ ವಾದಿಸಿದೆ.

ಇದು ಕೇವಲ ವಿಳಂಬದ ಪ್ರಶ್ನೆಯಲ್ಲ, ಆದರೆ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರನ್ನು ರಕ್ಷಿಸುವ ಕ್ರಿಯೆಯಾಗಿದೆ ಎಂದು ಸಂಘವು ಹೇಳಿಕೆಯಲ್ಲಿ ತಿಳಿಸಿದೆ. ಈ ವಿಳಂಬವು ವಿಭಜಕ ಮನಸ್ಥಿತಿ ಹೊಂದಿರುವ ಇತರ ನ್ಯಾಯಾಧೀಶರನ್ನು ಇದೇ ರೀತಿ ವರ್ತಿಸಲು ಪ್ರೇರೇಪಿಸಬಹುದು ಎಂದು ಸಂಘವು ಹೇಳಿಕೆಯಲ್ಲಿ ತಿಳಿಸಿದೆ.

ಈ ಬಿಕ್ಕಟ್ಟನ್ನು “ಪ್ರಜ್ಞಾಪೂರ್ವಕವಾದುದ್ದು” ಎಂದು ಕರೆದ ಎಐಎಲ್‌ಎಜೆ, ತನಿಖೆ ಮುಗಿಯುವವರೆಗೆ ನ್ಯಾಯಮೂರ್ತಿ ಯಾದವ್ ಅವರ ನ್ಯಾಯಾಂಗ ಮತ್ತು ಆಡಳಿತಾತ್ಮಕ ಜವಾಬ್ದಾರಿಗಳನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದೆ. ನ್ಯಾಯಾಧೀಶರಿಂದ ಬೇಷರತ್ತಾದ ಸಾರ್ವಜನಿಕ ಕ್ಷಮೆಯಾಚನೆಗಾಗಿ ಸಂಘವು ತನ್ನ ಕರೆಯನ್ನು ಹೇಳಿಕೆಯಲ್ಲಿ ಪುನರುಚ್ಚರಿಸಿದೆ.

ನ್ಯಾಯಾಂಗದ ಸ್ವಾತಂತ್ರ್ಯ ಮತ್ತು ಅದರ ನಿಷ್ಪಕ್ಷಪಾತತೆಯ ಬಗ್ಗೆ ಸಾರ್ವಜನಿಕ ನಂಬಿಕೆ ಅಪಾಯದಲ್ಲಿದೆ ಎಂದು ಸಂಘವು ಎಚ್ಚರಿಸಿದೆ.

ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ: ಏಳು ಮಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...