Homeಮುಖಪುಟದ್ವೇಷ ಭಾಷಣ | ಅಸ್ಸಾಂ ಸಿಎಂ ಹಿಮಂತ ವಿರುದ್ಧ ಇಂಡಿಯಾ ಒಕ್ಕೂಟ ದೂರು

ದ್ವೇಷ ಭಾಷಣ | ಅಸ್ಸಾಂ ಸಿಎಂ ಹಿಮಂತ ವಿರುದ್ಧ ಇಂಡಿಯಾ ಒಕ್ಕೂಟ ದೂರು

- Advertisement -
- Advertisement -

ಜಾರ್ಖಂಡ್‌ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ “ಕೋಮು ಉದ್ವಿಗ್ನ ಮತ್ತು ವಿಭಜಕ” ಹೇಳಿಕೆಗಳನ್ನು ನೀಡಿದ್ದಾರೆ ಎಂದು ಅರೋಪಿಸಿ ಅಸ್ಸಾಂ ಮುಖ್ಯಮಂತ್ರಿ, ಬಿಜೆಪಿ ನಾಯಕ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಇಂಡಿಯಾ ಒಕ್ಕೂಟ ಶನಿವಾರ ಚುನಾವಣಾ ಆಯೋಗಕ್ಕೆ ಔಪಚಾರಿಕ ದೂರು ದಾಖಲಿಸಿದೆ ಎಂದು ಎಎನ್‌ಐ ವರದಿ ಮಾಡಿದೆ. ದ್ವೇಷ ಭಾಷಣ

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ-ಲೆನಿನಿಸ್ಟ್), ಕಾಂಗ್ರೆಸ್ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪ್ರತಿನಿಧಿಗಳು ಭಾರತೀಯ ಚುನಾವಣಾ ಆಯೋಗ ಮತ್ತು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದ್ದಾರೆ. ದ್ವೇಷ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನವೆಂಬರ್ 13 ಮತ್ತು 20 ರಂದು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುವ ಉದ್ದೇಶದಿಂದ ಹಿಮಂತ ಶರ್ಮಾ ಅವರು ಭಾಷಣ ಮಾಡಿದ್ದಾರೆ ಎಂದು ಇಂಡಿಯಾ ಒಕ್ಕೂಟದ ನಾಯಕರು ಆರೋಪಿಸಿದ್ದಾರೆ.

ನವೆಂಬರ್ 1 ರಂದು ಶರತ್‌ನಲ್ಲಿ ಮಾಡಿದ ಭಾಷಣದಲ್ಲಿ ಅವರು, “ಮುಸ್ಲಿಮರು ಪ್ರಧಾನವಾಗಿ ಒಂದೇ ಪಕ್ಷಕ್ಕೆ ಮತ ಹಾಕುತ್ತಾರೆ, ಆದರೆ ಹಿಂದೂ ಮತಗಳು ವಿಭಜನೆಯಾಗುತ್ತವೆ” ಎಂದು ಶರ್ಮಾ ಹೇಳಿಕೊಂಡಿದ್ದಾರೆ. ಹೇಮಂತ್ ಸೊರೆನ್ ನೇತೃತ್ವದ ರಾಜ್ಯ ಸರ್ಕಾರವು ‘ವಿಶೇಷ ಸಮುದಾಯ’ದ ಮತಕ್ಕಾಗಿ ‘ಒಳನುಸುಳುಕೋರರನ್ನು ಆಹ್ವಾನಿಸುತ್ತದೆ’ ಎಂದು ಅವರು ಆರೋಪಿಸಿದ್ದರು.

ಹಿಮಂತ ಅವರು ನೀಡಿದ ಈ ಭಾಷಣವು ಅವರು ಮತ್ತು ಅವರ ಪಕ್ಷವಾದ ಬಿಜೆಪಿಯಿಂದ ಪ್ರಚಾರ ಮಾಡುತ್ತಿರುವ ವಿಭಜಕ ರಾಜಕೀಯಕ್ಕೆ ಉದಾಹರಣೆಯಾಗಿದೆ ಎಂದು ಇಂಡಿಯಾ ಒಕ್ಕೂಟ ನಾಯಕರು ಹೇಳಿದ್ದಾರೆ.

“ಒಳನುಸುಳುವವರು” ಎಂಬಂತಹ ಪದಗಳನ್ನು ಬಳಸುವ ಮೂಲಕ ಅವರು “ದ್ವೇಷ ಮತ್ತು ಅಸಮಾಧಾನದ ಜ್ವಾಲೆಯನ್ನು ಹುಟ್ಟುಹಾಕುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ. ಹಿಮಂತ ಶರ್ಮಾ ಅವರು ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರನ್ನು ಗುರಿಯಾಗಿಸಿಕೊಂಡ ಸಂದರ್ಶನವನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

24 ಗಂಟೆಯೊಳಗೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ಇಂಡಿಯಾ ಒಕ್ಕೂಟ ಎಚ್ಚರಿಸಿದೆ.

“ಅವರು ಉದ್ದೇಶಪೂರ್ವಕವಾಗಿ ಇಡೀ ಧಾರ್ಮಿಕ ಅಲ್ಪಸಂಖ್ಯಾತರನ್ನು ಒಂದೇ ದೃಷ್ಟಿಕೋನದಲ್ಲಿ ಚಿತ್ರಿಸುತ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಸಾಮಾಜಿಕ ವಿಭಜನೆಗಳನ್ನು ಬಳಸಿಕೊಳ್ಳುವ ಉದ್ದೇಶದಿಂದ ‘ಅಲ್ಪಸಂಖ್ಯಾತರನ್ನು’ ಒಳನುಸುಳುವವರು ಎಂದು ಬ್ರಾಂಡ್ ಮಾಡುತ್ತಿದ್ದಾರೆ. ಇಂತಹ ಭಾಷಣವು ಕೋಮು ಉದ್ವಿಗ್ನತೆಯನ್ನು ಉಲ್ಬಣಗೊಳಿಸುತ್ತದೆ ಮತ್ತು ಚುನಾವಣಾ ಲಾಭಕ್ಕಾಗಿ ಜಾರ್ಖಂಡ್‌ನ ಸಾಮಾಜಿಕ ರಚನೆಯನ್ನು ಮುರಿಯುವ ಅಪಾಯವನ್ನು ಸೃಷ್ಟಿ ಮಾಡುತ್ತಿದ್ದಾರೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಜಾರ್ಖಂಡ್‌ನ ಹೇಮಂತ್ ಸೊರೆನ್ ಸರ್ಕಾರವು ಬಾಂಗ್ಲಾದೇಶಿ ನುಸುಳುಕೋರರನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿರುವ ಹಿಮಂತಾ ಶರ್ಮಾ ಅವರ ಧ್ವನಿಮುದ್ರಣಗಳನ್ನು ಇಂಡಿಯಾ ಒಕ್ಕೂಟ ದೂರಿನೊಂದಿಗೆ ಸಲ್ಲಿಸಿದೆ.

“ಈ ಅಪಾಯಕಾರಿ ತಂತ್ರವು ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ದುರ್ಬಲಗೊಳಿಸುವುದು ಮಾತ್ರವಲ್ಲದೆ ನಮ್ಮ ಸಂವಿಧಾನದ ಮೂಲಭೂತ ರಚನೆಯನ್ನು ಉಲ್ಲಂಘಿಸುತ್ತದೆ. ದ್ವೇಷ ಭಾಷಣದ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ವಿವಿಧ ನ್ಯಾಯಾಂಗ ಹೇಳಿಕೆಗಳನ್ನು ಮತ್ತು ತೀರ್ಪುಗಳ ವಿರುದ್ಧ ಅವರ ಈ ಹೇಳಿಕೆ ಇವೆ” ಎಂದು ಇಂಡಿಯಾ ನಾಯಕರು ಹೇಳಿದ್ದಾರೆ.

ಇದನ್ನೂ ಓದಿ: ಬಡತನ | ಬ್ಯಾಂಕ್ ಸಾಲ ತೀರಿಸಲು ಮಗುವನ್ನೆ ₹9000ಕ್ಕೆ ಮಾರಾಟ!

ಬಡತನ | ಬ್ಯಾಂಕ್ ಸಾಲ ತೀರಿಸಲು ಮಗುವನ್ನೆ ₹9000ಕ್ಕೆ ಮಾರಾಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...