Homeಮುಖಪುಟದ್ವೇಷ ಭಾಷಣ | ಅಸ್ಸಾಂ ಸಿಎಂ ಹಿಮಂತ ವಿರುದ್ಧ ಇಂಡಿಯಾ ಒಕ್ಕೂಟ ದೂರು

ದ್ವೇಷ ಭಾಷಣ | ಅಸ್ಸಾಂ ಸಿಎಂ ಹಿಮಂತ ವಿರುದ್ಧ ಇಂಡಿಯಾ ಒಕ್ಕೂಟ ದೂರು

- Advertisement -
- Advertisement -

ಜಾರ್ಖಂಡ್‌ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ “ಕೋಮು ಉದ್ವಿಗ್ನ ಮತ್ತು ವಿಭಜಕ” ಹೇಳಿಕೆಗಳನ್ನು ನೀಡಿದ್ದಾರೆ ಎಂದು ಅರೋಪಿಸಿ ಅಸ್ಸಾಂ ಮುಖ್ಯಮಂತ್ರಿ, ಬಿಜೆಪಿ ನಾಯಕ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಇಂಡಿಯಾ ಒಕ್ಕೂಟ ಶನಿವಾರ ಚುನಾವಣಾ ಆಯೋಗಕ್ಕೆ ಔಪಚಾರಿಕ ದೂರು ದಾಖಲಿಸಿದೆ ಎಂದು ಎಎನ್‌ಐ ವರದಿ ಮಾಡಿದೆ. ದ್ವೇಷ ಭಾಷಣ

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ-ಲೆನಿನಿಸ್ಟ್), ಕಾಂಗ್ರೆಸ್ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪ್ರತಿನಿಧಿಗಳು ಭಾರತೀಯ ಚುನಾವಣಾ ಆಯೋಗ ಮತ್ತು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದ್ದಾರೆ. ದ್ವೇಷ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನವೆಂಬರ್ 13 ಮತ್ತು 20 ರಂದು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುವ ಉದ್ದೇಶದಿಂದ ಹಿಮಂತ ಶರ್ಮಾ ಅವರು ಭಾಷಣ ಮಾಡಿದ್ದಾರೆ ಎಂದು ಇಂಡಿಯಾ ಒಕ್ಕೂಟದ ನಾಯಕರು ಆರೋಪಿಸಿದ್ದಾರೆ.

ನವೆಂಬರ್ 1 ರಂದು ಶರತ್‌ನಲ್ಲಿ ಮಾಡಿದ ಭಾಷಣದಲ್ಲಿ ಅವರು, “ಮುಸ್ಲಿಮರು ಪ್ರಧಾನವಾಗಿ ಒಂದೇ ಪಕ್ಷಕ್ಕೆ ಮತ ಹಾಕುತ್ತಾರೆ, ಆದರೆ ಹಿಂದೂ ಮತಗಳು ವಿಭಜನೆಯಾಗುತ್ತವೆ” ಎಂದು ಶರ್ಮಾ ಹೇಳಿಕೊಂಡಿದ್ದಾರೆ. ಹೇಮಂತ್ ಸೊರೆನ್ ನೇತೃತ್ವದ ರಾಜ್ಯ ಸರ್ಕಾರವು ‘ವಿಶೇಷ ಸಮುದಾಯ’ದ ಮತಕ್ಕಾಗಿ ‘ಒಳನುಸುಳುಕೋರರನ್ನು ಆಹ್ವಾನಿಸುತ್ತದೆ’ ಎಂದು ಅವರು ಆರೋಪಿಸಿದ್ದರು.

ಹಿಮಂತ ಅವರು ನೀಡಿದ ಈ ಭಾಷಣವು ಅವರು ಮತ್ತು ಅವರ ಪಕ್ಷವಾದ ಬಿಜೆಪಿಯಿಂದ ಪ್ರಚಾರ ಮಾಡುತ್ತಿರುವ ವಿಭಜಕ ರಾಜಕೀಯಕ್ಕೆ ಉದಾಹರಣೆಯಾಗಿದೆ ಎಂದು ಇಂಡಿಯಾ ಒಕ್ಕೂಟ ನಾಯಕರು ಹೇಳಿದ್ದಾರೆ.

“ಒಳನುಸುಳುವವರು” ಎಂಬಂತಹ ಪದಗಳನ್ನು ಬಳಸುವ ಮೂಲಕ ಅವರು “ದ್ವೇಷ ಮತ್ತು ಅಸಮಾಧಾನದ ಜ್ವಾಲೆಯನ್ನು ಹುಟ್ಟುಹಾಕುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ. ಹಿಮಂತ ಶರ್ಮಾ ಅವರು ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರನ್ನು ಗುರಿಯಾಗಿಸಿಕೊಂಡ ಸಂದರ್ಶನವನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

24 ಗಂಟೆಯೊಳಗೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ಇಂಡಿಯಾ ಒಕ್ಕೂಟ ಎಚ್ಚರಿಸಿದೆ.

“ಅವರು ಉದ್ದೇಶಪೂರ್ವಕವಾಗಿ ಇಡೀ ಧಾರ್ಮಿಕ ಅಲ್ಪಸಂಖ್ಯಾತರನ್ನು ಒಂದೇ ದೃಷ್ಟಿಕೋನದಲ್ಲಿ ಚಿತ್ರಿಸುತ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಸಾಮಾಜಿಕ ವಿಭಜನೆಗಳನ್ನು ಬಳಸಿಕೊಳ್ಳುವ ಉದ್ದೇಶದಿಂದ ‘ಅಲ್ಪಸಂಖ್ಯಾತರನ್ನು’ ಒಳನುಸುಳುವವರು ಎಂದು ಬ್ರಾಂಡ್ ಮಾಡುತ್ತಿದ್ದಾರೆ. ಇಂತಹ ಭಾಷಣವು ಕೋಮು ಉದ್ವಿಗ್ನತೆಯನ್ನು ಉಲ್ಬಣಗೊಳಿಸುತ್ತದೆ ಮತ್ತು ಚುನಾವಣಾ ಲಾಭಕ್ಕಾಗಿ ಜಾರ್ಖಂಡ್‌ನ ಸಾಮಾಜಿಕ ರಚನೆಯನ್ನು ಮುರಿಯುವ ಅಪಾಯವನ್ನು ಸೃಷ್ಟಿ ಮಾಡುತ್ತಿದ್ದಾರೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಜಾರ್ಖಂಡ್‌ನ ಹೇಮಂತ್ ಸೊರೆನ್ ಸರ್ಕಾರವು ಬಾಂಗ್ಲಾದೇಶಿ ನುಸುಳುಕೋರರನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿರುವ ಹಿಮಂತಾ ಶರ್ಮಾ ಅವರ ಧ್ವನಿಮುದ್ರಣಗಳನ್ನು ಇಂಡಿಯಾ ಒಕ್ಕೂಟ ದೂರಿನೊಂದಿಗೆ ಸಲ್ಲಿಸಿದೆ.

“ಈ ಅಪಾಯಕಾರಿ ತಂತ್ರವು ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ದುರ್ಬಲಗೊಳಿಸುವುದು ಮಾತ್ರವಲ್ಲದೆ ನಮ್ಮ ಸಂವಿಧಾನದ ಮೂಲಭೂತ ರಚನೆಯನ್ನು ಉಲ್ಲಂಘಿಸುತ್ತದೆ. ದ್ವೇಷ ಭಾಷಣದ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ವಿವಿಧ ನ್ಯಾಯಾಂಗ ಹೇಳಿಕೆಗಳನ್ನು ಮತ್ತು ತೀರ್ಪುಗಳ ವಿರುದ್ಧ ಅವರ ಈ ಹೇಳಿಕೆ ಇವೆ” ಎಂದು ಇಂಡಿಯಾ ನಾಯಕರು ಹೇಳಿದ್ದಾರೆ.

ಇದನ್ನೂ ಓದಿ: ಬಡತನ | ಬ್ಯಾಂಕ್ ಸಾಲ ತೀರಿಸಲು ಮಗುವನ್ನೆ ₹9000ಕ್ಕೆ ಮಾರಾಟ!

ಬಡತನ | ಬ್ಯಾಂಕ್ ಸಾಲ ತೀರಿಸಲು ಮಗುವನ್ನೆ ₹9000ಕ್ಕೆ ಮಾರಾಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...