Homeಚಳವಳಿದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಐಐಎಂ ವಿದ್ಯಾರ್ಥಿಗಳು, ಅಧ್ಯಾಪಕರ...

ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಐಐಎಂ ವಿದ್ಯಾರ್ಥಿಗಳು, ಅಧ್ಯಾಪಕರ ಪತ್ರ

- Advertisement -
- Advertisement -

ದೇಶದಲ್ಲಿ ನಡೆಯುತ್ತಿರುವ ದ್ವೇಷದ ಭಾಷಣ ಮತ್ತು ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಗುಂಪು ಬಹಿರಂಗ ಪತ್ರ ಬರೆದಿದೆ.

ದ್ವೇಷದ ಭಾಷಣ ಮತ್ತು ಜಾತಿ ಆಧಾರಿತ ಹಿಂಸಾಚಾರ ವಿಷಯಗಳ ಬಗ್ಗೆ ಪ್ರಧಾನಿ ಮೌನವಾಗಿರುವುದು ದ್ವೇಷ ತುಂಬಿದ ಧ್ವನಿಗಳಿಗೆ ಧೈರ್ಯ ತುಂಬುತ್ತಿದೆ ಎಂದು ವಿದ್ಯಾರ್ಥಿಗಳು, ಅಧ್ಯಾಪಕರು ಪತ್ರದಲ್ಲಿ ಹೇಳಿದ್ದಾರೆ.

ಈ ಬಹಿರಂಗ ಪತ್ರಕ್ಕೆ ಐಐಎಂ-ಅಹಮದಾಬಾದ್ ಮತ್ತು ಐಐಎಂ-ಬೆಂಗಳೂರಿನ 13 ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಸೇರಿದಂತೆ 183 ಮಂದಿ ಸಹಿ ಮಾಡಿದ್ದಾರೆ.

ಇತ್ತೀಚಿಗೆ ಉತ್ತರಾಖಂಡದ ಹರಿದ್ವಾರದ ಧರ್ಮ ಸಂಸದ್ ಕಾರ್ಯಕ್ರಮದ ವೇಳೆ ನಡೆದ ದ್ವೇಷ ಭಾಷಣಗಳ ಹಿನ್ನೆಲೆಯಲ್ಲಿ ಪತ್ರ ಬರೆಯಲಾಗಿದೆ. ಹರಿದ್ವಾರದಲ್ಲಿ ನಡೆದ ಕಾರ್ಯಕ್ರಮದ ವೇಳೆ ಕೆಲವು ಹಿಂದೂ ಧಾರ್ಮಿಕ ಮುಖಂಡರು ಮುಸ್ಲಿಮರ ವಿರುದ್ಧ ಶಸ್ತ್ರಾಸ್ತ್ರಗಳನ್ನು ತೆಗೆದುಕೊಳ್ಳುವಂತೆ ಜನರನ್ನು ಒತ್ತಾಯಿಸಿದ್ದರು. ಜೊತೆಗೆ ಮುಸ್ಲೀಮರ ನರಮೇಧಕ್ಕೆ ಕರೆ ನೀಡಿದ್ದರು.

ಇದನ್ನೂ ಓದಿ: ಹರಿದ್ವಾರ ’ಧರ್ಮ ಸಂಸದ್’ ದ್ವೇಷ ಭಾಷಣ: ತನಿಖೆ ನಡೆಸಲು ಎಸ್‌ಐಟಿ ರಚನೆ

“ಧರ್ಮ, ಜಾತಿ ಗುರುತುಗಳ ಆಧಾರದ ಮೇಲೆ ಸಮುದಾಯಗಳ ವಿರುದ್ಧ ದ್ವೇಷದ ಭಾಷಣಗಳು ಮತ್ತು ಹಿಂಸಾಚಾರಕ್ಕೆ ಕರೆ ನೀಡುವುದು ಸ್ವೀಕಾರಾರ್ಹವಲ್ಲ. ಭಾರತೀಯ ಸಂವಿಧಾನವು ಗೌರವಯುತವಾಗಿ ಧರ್ಮವನ್ನು ಆಚರಿಸುವ ಹಕ್ಕನ್ನು ನೀಡಿದ್ದರೂ ಸಹ ದೇಶದಲ್ಲಿ ಭಯದ ವಾತಾವರಣ ಇದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

“ನಮ್ಮ ದೇಶದಲ್ಲಿ ಈಗ ಭಯದ ವಾತಾವರಣವಿದೆ. ಇತ್ತೀಚಿನ ದಿನಗಳಲ್ಲಿ ಚರ್ಚ್‌ಗಳು ಸೇರಿದಂತೆ ಪೂಜಾ ಸ್ಥಳಗಳನ್ನು ಧ್ವಂಸ ಮಾಡಲಾಗುತ್ತಿದೆ. ಮುಸ್ಲಿಂ ಸಹೋದರ ಸಹೋದರಿಯರ ವಿರುದ್ಧ ಶಸ್ತ್ರಾಸ್ತ್ರಗಳನ್ನು ತೆಗೆದುಕೊಳ್ಳುವಂತೆ ಕರೆ ನೀಡಲಾಗುತ್ತಿದೆ. ಇದೆಲ್ಲವನ್ನೂ ಯಾವುದೇ ಭಯವಿಲ್ಲದೆ, ನಿರ್ಭಯದಿಂದ ಮಾಡಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಐವರು ಪ್ರಾಧ್ಯಾಪಕರು ಈ ಪತ್ರವನ್ನು ರಚಿಸಿದ್ದಾರೆ. ಐಐಎಂನ ಅಧ್ಯಾಪಕ ಪ್ರತೀಕ್ ರಾಜ್ (ಸಹಾಯಕ ಪ್ರಾಧ್ಯಾಪಕ ಸ್ಟ್ರಾಟಜಿ), ದೀಪಕ್ ಮಾಲ್ಘಾನ್ (ಸಹ ಪ್ರಾಧ್ಯಾಪಕರು, ಸಾರ್ವಜನಿಕ ನೀತಿ), ದಾಲ್ಹಿಯಾ ಮಣಿ (ಸಹ ಪ್ರಾಧ್ಯಾಪಕರು, ‌ಉದ್ಯಮಶೀಲತೆ), ರಾಜಲಕ್ಷ್ಮಿ ವಿ ಮೂರ್ತಿ (ಸಹ ಪ್ರಾಧ್ಯಾಪಕರು, ಡಿಸಿಷನ್ ಸೈನ್ಸ್), ಹೇಮಾ ಸ್ವಾಮಿನಾಥನ್ (ಸಹ ಪ್ರಾಧ್ಯಾಪಕರು, ಸಾರ್ವಜನಿಕ ನೀತಿ) ಇವರ ಜೊತೆಗೆ ಪ್ರಮುಖ ಪರಿಸರ ಅರ್ಥಶಾಸ್ತ್ರಜ್ಞರಾದ ಮಾಲ್ಘಾನ್ ಕೂಡ ಸೇರಿದ್ದಾರೆ.

ಹರಿದ್ವಾರದಲ್ಲಿ ನಡೆದ ‘ಧರ್ಮ ಸಂಸದ್’ ವೇಳೆ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಪ್ರಕರಣದ ತನಿಖೆಗೆ ಐವರು ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ.


ಇದನ್ನೂ ಓದಿ: ಹರಿದ್ವಾರದ ದ್ವೇಷ ಭಾಷಣಗಳ ವಿರುದ್ಧ ಸ್ವಯಂಪ್ರೇರಿತ ಕ್ರಮಕ್ಕಾಗಿ ಸುಪ್ರೀಂಕೋರ್ಟ್‌ಗೆ ಪತ್ರ ಬರೆದ 76 ಖ್ಯಾತ ವಕೀಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Sariyada krama kai golla beku inta Desha Drohi savvi Danakke bele illa evaga jatty Darma anta muslim krichan anta martiddare Narendra modi Desha vannu marta eddane sarkara yechet koldeku intavaru Desha Drohi

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...