Homeಮುಖಪುಟದ್ವೇಷ ಭಾಷಣ: ಕ್ರಿಮಿನಲ್ ಕಾನೂನಿನ ಬದಲಾವಣೆ ಈಗಿನ ತುರ್ತ: ತಜ್ಞರ ಸಮಿತಿ

ದ್ವೇಷ ಭಾಷಣ: ಕ್ರಿಮಿನಲ್ ಕಾನೂನಿನ ಬದಲಾವಣೆ ಈಗಿನ ತುರ್ತ: ತಜ್ಞರ ಸಮಿತಿ

- Advertisement -
- Advertisement -

ದ್ವೇಷ ಭಾಷಣ ನಿಯಂತ್ರಣದ ಕಾನೂನಿಗೆ ಬದಲಾವಣೆಯ ಅಗತ್ಯತೆ ಈಗಿನ ತುರ್ತು ಎಂದು, ಮೂರು ವರ್ಷಗಳ ಹಿಂದೆ ಐಪಿಸಿ, ಸಿಆರ್‌ಪಿಸಿ, ಮಾಹಿತಿ ತಂತ್ರಜ್ಞಾನ ಕಾಯ್ದೆಯಲ್ಲಿನ ಕೆಲವು ಬದಲಾವಣೆಗಳ ಕುರಿತು ಮತ್ತು ದ್ವೇಷದ ಭಾಷಣದ ಕುರಿತ ವಿಶಾಲವಾದ ವ್ಯಾಖ್ಯಾನಕ್ಕೆ ನಿಯೋಜಿಸಿದ್ದ ತಜ್ಞರ ಸಮಿತಿಯ ಸದಸ್ಯರೊಬ್ಬರು ಹೇಳಿದ್ದಾರೆ.

“ಅನೇಕ ವಿಷಯಗಳಲ್ಲಿ ಕ್ರಿಮಿನಲ್ ಕಾನೂನನ್ನು ಬದಲಾಯಿಸುವ ತುರ್ತು ಇದೆ. ಆದರೆ ಅದು ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ. ದ್ವೇಷದ ಭಾಷಣವನ್ನು ನಿಯಂತ್ರಿಸುವುದು ಈ ಸಮಯದ ಅಗತ್ಯವಾಗಿರುವುದರಿಂದ, ನಾವು ನೀಡಿದ ಸಲಹೆಗಳನ್ನು ವ್ಯಾಪಕ ಸಮಾಲೋಚನೆಗಾಗಿ ಇಡಬೇಕು. ನಾವೇನೂ ಬುದ್ಧಿವಂತಿಕೆಯ ಮಾಲೀಕರಲ್ಲ. ಆದರೆ ನಾವು ನೀಡಿದ ಸಲಹೆಗಳನ್ನು ಗಮನಿಸಬೇಕು” ಎಂದು ನಿವೃತ್ತ ಐಪಿಎಸ್ ಅಧಿಕಾರಿ ಮತ್ತು ಟಿ ಕೆ ವಿಶ್ವನಾಥನ್ ಸಮಿತಿಯ ಸದಸ್ಯ ನವನೀತ್ ವಾಸನ್ ಹೇಳಿದ್ದಾರೆ.

ಕಳೆದ ವರ್ಷ ಆಗಸ್ಟ್ ನಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ಸುಧಾರಣೆಗೊಳಿಸುವುದಕ್ಕೆ ಕರೆ ನೀಡಿದ್ದರು. ನಾಲ್ಕು ಪ್ರಮುಖ ಅಪರಾಧ ನ್ಯಾಯ ಕಾನೂನುಗಳಲ್ಲಿ ಅಗತ್ಯವಿರುವ ಬದಲಾವಣೆಗಳ ಬಗ್ಗೆ ರಾಜ್ಯಗಳ ಅಭಿಪ್ರಾಯಗಳನ್ನು ಕೋರಿದ್ದರು.

ಭಾರತೀಯ ದಂಡ ಸಂಹಿತೆ (ಐಪಿಸಿ), ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ), ಶಸ್ತ್ರಾಸ್ತ್ರ ಕಾಯ್ದೆ ಮತ್ತು ನಾರ್ಕೋಟಿಕ್ಸ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಕಾಯ್ದೆ (ಎನ್‌ಡಿಪಿಎಸ್)ಗಳ ಮೇಲೆ ಈ ಪ್ರಕ್ರಿಯೆ ನಡೆಯುತ್ತಿದೆ.

ಬಿಜೆಪಿಯ ಆಜ್ಞೆಯ ಮೇರೆಗೆ ಫೇಸ್‌ಬುಕ್ ತನ್ನ ಕೆಲಸವನ್ನು ಕುಶಲತೆಯಿಂದ ನಿರ್ವಹಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದ ನಂತರ, 2017 ರಲ್ಲಿ ವಿವರವಾದ ವರದಿಯನ್ನು ಸಿದ್ಧಪಡಿಸಿದ ತಜ್ಞರ ಸಮಿತಿಯ ಸದಸ್ಯರನ್ನು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಸಂಪರ್ಕಿಸಿತ್ತು.

ಮಾಹಿತಿ ತಂತ್ರಜ್ಞಾನ ಕಾಯ್ದೆಯ ವಿವಾದಾತ್ಮಕ ಸೆಕ್ಷನ್ 66 ಎ ಅನ್ನು ಸುಪ್ರೀಂ ಕೋರ್ಟ್ 2015 ರಲ್ಲಿ ತಡೆದ ನಂತರ ಮಾಜಿ ಕಾನೂನು ಕಾರ್ಯದರ್ಶಿ ಮತ್ತು ಲೋಕಸಭಾ ಪ್ರಧಾನ ಕಾರ್ಯದರ್ಶಿ ಟಿ.ಕೆ.ವಿಶ್ವನಾಥನ್ ನೇತೃತ್ವದ ತಜ್ಞರ ಸಮಿತಿಯನ್ನು ಕೇಂದ್ರ ರಚಿಸಿತು.

ಇದು 2017 ರಲ್ಲಿ ಸಲ್ಲಿಸಿದ ತನ್ನ ವರದಿಯಲ್ಲಿ, ದ್ವೇಷ ಮತ್ತು ಪ್ರಚೋದನೆಯನ್ನು ಹರಡಲು ದ್ವೇಷದ ಭಾಷಣ ಮತ್ತು ಸೈಬರ್‌ಪೇಸ್‌ನ ಬಳಕೆಯ ಪ್ರಕರಣಗಳನ್ನು ಎದುರಿಸಲು ಕಠಿಣ ನಿಬಂಧನೆಗಳನ್ನು ಪರಿಚಯಿಸಲು ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು ಐಟಿ ಕಾಯ್ದೆಯನ್ನು ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಶಿಫಾರಸು ಮಾಡಿತ್ತು.

ಡಿಜಿಟಲ್ ತಂತ್ರಜ್ಞಾನದಿಂದ ಒದಗಿಸಲಾದ ಅವಕಾಶಗಳು ಅಗಾಧವಾಗಿದ್ದರೂ, ಸಾರ್ವಜನಿಕ ಸುವ್ಯವಸ್ಥೆ ಮತ್ತು ರಾಷ್ಟ್ರೀಯ ಭದ್ರತೆಗೆ ಬೆದರಿಕೆಗಳು ನೈಜವಾಗಿವೆ. ಡಿಜಿಟಲ್ ವೇದಿಕೆಯ ಮೂಲಕ ಪ್ರಚಾರ ಮಾಡುವ ಹಾನಿಕಾರಕ ವಿಷಯಗಳಿಗೆ ಮತ್ತು ಇದು ದ್ವೇಷವನ್ನು ಸೃಷ್ಟಿಸುವ ಕಾರಣಕ್ಕೆ ಸರ್ಕಾರಗಳು ಮೂಕ ಪ್ರೇಕ್ಷಕನಂತಿರಲು ಸಾಧ್ಯವಿಲ್ಲ ಎಂದು ವರದಿ ಹೇಳಿದೆ.

ಅಪರಾಧ ನ್ಯಾಯ ವ್ಯವಸ್ಥೆಯ ಸಮಗ್ರ ಪುನರುಜ್ಜೀವನದಿಂದ ಮಾತ್ರ ದ್ವೇಷ ಭಾಷಣವನ್ನು ಪರಿಶೀಲಿಸುವ ಕ್ರಮಗಳನ್ನು ಒದಗಿಸಬಹುದು ಎಂದು ಸಮಿತಿಯ ಮತ್ತೊಬ್ಬ ಸದಸ್ಯರಾದ ಡಾ ಎಸ್ ಶಿವಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಕ್ರಿಮಿನಲ್ ಕಾನೂನುಗಳನ್ನು ಬದಲಿಸಲು ಕೇಂದ್ರ ಸಮಿತಿ; ಅಬ್ಜೆಕ್ಶನ್, ಮೈ ಲಾರ್ಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...