Homeಮುಖಪುಟದ್ವೇಷ ಭಾಷಣ: ದೂರು ಇರದಿದ್ದರೂ ಪ್ರಕರಣ ದಾಖಲಿಸಿ- ಸುಪ್ರೀಂಕೋರ್ಟ್

ದ್ವೇಷ ಭಾಷಣ: ದೂರು ಇರದಿದ್ದರೂ ಪ್ರಕರಣ ದಾಖಲಿಸಿ- ಸುಪ್ರೀಂಕೋರ್ಟ್

- Advertisement -
- Advertisement -

ದ್ವೇಷದ ಭಾಷಣಗಳು ದೇಶದ ಜಾತ್ಯತೀತ ರಚನೆಯ ಮೇಲೆ ಪರಿಣಾಮ ಬೀರುವ ಗಂಭೀರ ಅಪರಾಧ ಎಂದು ಬಣ್ಣಿಸಿರುವ ಸುಪ್ರೀಂ ಕೋರ್ಟ್, ಯಾವುದೇ ದೂರು ದಾಖಲಾಗದಿದ್ದರೂ ಅಂತಹ ಅಪರಾಧಗಳಲ್ಲಿ ಪ್ರಕರಣಗಳನ್ನು ದಾಖಲಿಸುವಂತೆ ರಾಜ್ಯಗಳಿಗೆ ನಿರ್ದೇಶನ ನೀಡಿದೆ.

ದ್ವೇಷ ಭಾಷಣದ ವಿಚಾರವಾಗಿ ಕ್ರಮ ಕೈಗೊಳ್ಳುವಲ್ಲಿ ರಾಜ್ಯಗಳು ನಿಷ್ಕ್ರಿಯತೆ ತೋರಿರುವ ಪ್ರಕರಣಗಳ ವಿಚಾರಣೆ ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್ ಈ ಅಭಿಪ್ರಾಯವನ್ನು ತಾಳಿದೆ. “ಇಂತಹ ಪ್ರಕರಣಗಳನ್ನು ದಾಖಲಿಸಲು ವಿಳಂಬ ಮಾಡಿದರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುವುದು” ಎಂದು ಎಚ್ಚರಿಕೆಯನ್ನೂ ನೀಡಿದೆ.

ನ್ಯಾಯಮೂರ್ತಿಗಳಾದ ಕೆ.ಎಂ ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು ಕಳೆದ ತಿಂಗಳು ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡಿತ್ತು. “ಸರ್ಕಾರ ಶಕ್ತಿಹೀನವಾಗಿದೆ, ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ದ್ವೇಷದ ಭಾಷಣಗಳಾಗುತ್ತಿವೆ. ರಾಜಕೀಯ ಮತ್ತು ಧರ್ಮವನ್ನು ಪ್ರತ್ಯೇಕಿಸಿದ ಕ್ಷಣ ಇದು ನಿಲ್ಲುತ್ತದೆ” ಎಂದು ನ್ಯಾಯಮೂರ್ತಿಗಳು ಹೇಳಿದ್ದರು.

ದ್ವೇಷದ ಭಾಷಣಗಳು, ಹಿಂಸಾಚಾರದ ಘಟನೆಗಳು, ವಿಶೇಷವಾಗಿ ಅಲ್ಪಸಂಖ್ಯಾತರಲ್ಲಿ ಆತಂಕವನ್ನು ಹೆಚ್ಚಿಸುವ ವಿದ್ಯಮಾನಗಳ ನಡುವೆ ಸುಪ್ರೀಂಕೋರ್ಟ್ ಈ ಮಹತ್ವದ ಅಭಿಪ್ರಾಯ ತಾಳಿದೆ.

ನ್ಯಾಯಪೀಠವು ಕಳೆದ ತಿಂಗಳು, “ಹೆಚ್ಚು ಅಗತ್ಯವಿರುವಾಗ ಕಾರ್ಯನಿರ್ವಹಿಸಲು ಸರ್ಕಾರ ಅಸಮರ್ಥತೆ ತೋರಿಸುತ್ತಿದೆ” ಎಂದು ಟೀಕಿಸಿತ್ತು. “ರಾಜಕೀಯ ಮತ್ತು ಧರ್ಮವನ್ನು ಪ್ರತ್ಯೇಕಿಸಿದರೆ ಇದು ನಿಲ್ಲುತ್ತದೆ” ಎಂದು ತಿಳಿಸಿತ್ತು.

ಇದನ್ನೂ ಓದಿರಿ: ಸುಪ್ರೀಂ ಕೋರ್ಟ್‌ ನೋಟಿಸ್‌ ನಂತರ ಬಿಜೆಪಿ ಸಂಸದ ಸಿಂಗ್ ವಿರುದ್ಧ FIR: ಕ್ರೀಡಾಪಟುಗಳ ಹೋರಾಟಕ್ಕೆ ಮೊದಲ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...