Homeಮುಖಪುಟದ್ವೇಷ ಭಾಷಣ: ಭೀಮಾ ಕೋರೆಗಾಂವ್ ಹಿಂಸಾಚಾರ ಆರೋಪಿ ಮಿಲಿಂದ್ ವಿರುದ್ಧ ಎಫ್ಐಆರ್

ದ್ವೇಷ ಭಾಷಣ: ಭೀಮಾ ಕೋರೆಗಾಂವ್ ಹಿಂಸಾಚಾರ ಆರೋಪಿ ಮಿಲಿಂದ್ ವಿರುದ್ಧ ಎಫ್ಐಆರ್

- Advertisement -
- Advertisement -

ಭೀಮಾ ಕೋರೆಗಾಂವ್ ಹಿಂಸಾಚಾರದ ಆರೋಪಿ, ಬಲಪಂಥೀಯ ನಾಯಕ ಮಿಲಿಂದ್ ಎಕ್ಬೋಟೆ, ಸ್ವಾಮಿ ಕಾಳಿಚರಣ್‌ ಮತ್ತು ಇತರ ನಾಲ್ವರ ವಿರುದ್ಧ ಕಾರ್ಯಕ್ರಮವೊಂದರಲ್ಲಿ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಪುಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜರಿಂದ ಮೊಘಲ್‌‌ ಸೇನಾಧಿಕಾರಿ ಅಫ್ಜಲ್‌‌ ಖಾನ್‌‌ ಹತ್ಯೆಯ ದಿನದ ಆಚರಣೆಗಾಗಿ ‘ಶಿವ ಪ್ರತಾಪ್ ದಿನ್’ ಎಂಬ ಕಾರ್ಯಕ್ರಮವನ್ನು ಮಹಾರಾಷ್ಟ್ರದ ಪುಣೆಯಲ್ಲಿ ಮಿಲಿಂದ್‌‌ ಏಕ್ಬೋಟೆ ನೇತೃತ್ವದ ‘ಸಮಸ್ತ್ ಹಿಂದೂ ಅಘಾಡಿ’ ಸಂಘಟನೆಯು ಡಿಸೆಂಬರ್ 19 ರಂದು ಆಯೋಜಿಸಿತ್ತು.

ಇದನ್ನೂ ಓದಿ:ಭೀಮಾ ಕೋರೆಗಾಂವ್‌: 8 ಹೋರಾಟಗಾರರಿಗೆ ಡೀಫಾಲ್ಟ್ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್

ಪೊಲೀಸರ ಪ್ರಕಾರ, ಈ ಕಾರ್ಯಕ್ರಮದಲ್ಲಿ ಕಾಳಿಚರಣ್, ಮಿಲಿಂದ್‌ ಎಕ್ಬೋಟೆ, ಕ್ಯಾಪ್ಟನ್ ದಿಗೇಂದ್ರ ಕುಮಾರ್ (ನಿವೃತ್ತ) ಮತ್ತು ಇತರರು ಭಾಗವಹಿಸಿದ್ದರು.

ಕ್ಯಾಪ್ಟನ್‌ ದಿಗೇಂದ್ರ ಕುಮಾರ್‌‌ ಅವರು ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದವರಾಗಿದ್ದಾರೆ. ಯುದ್ಧದಲ್ಲಿ ತೋರಿದ ಶೌರ್ಯಕ್ಕಾಗಿ ಅವರಿಗೆ ‘ಮಹಾವೀರ ಚಕ್ರ’ ನೀಡಿ ಗೌರವಿಸಲಾಗಿತ್ತು ಎಂದು ಪೊಲೀಸ್ ಇನ್ಸ್‌ಪೆಕ್ಟರ್ (ಅಪರಾಧ) ಹರ್ಷವರ್ಧನ್ ಗಾಡೆ ಹೇಳಿದ್ದಾರೆ.

ಸ್ವಾಮಿ ಕಾಳಿಚರಣ್‌, ಮಿಲಿಂದ್‌‌ ಎಕ್ಬೋಟೆ, ಕ್ಯಾಪ್ಟನ್ ದಿಗೇಂದ್ರ ಕುಮಾರ್ ಮತ್ತು ಇತರ ಮೂವರ ವಿರುದ್ಧ ಐಪಿಸಿ ಸೆಕ್ಷನ್ 295 (ಎ), 298, 505 (2) ಅಡಿಯಲ್ಲಿ ಮಂಗಳವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ:ಭೀಮಾ ಕೋರೆಗಾಂವ್‌ ಪ್ರಕರಣ: ಸುರೇಂದ್ರ ಗಾಡ್ಲಿಂಗ್‌ ಕಂಪ್ಯೂಟರ್‌ಗೆ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ-ವರದಿ

ಎಫ್‌ಐಆರ್‌ನ ಪ್ರಕಾರ, ಎಲ್ಲಾ ಆರೋಪಿಗಳು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶದಿಂದ ಮತ್ತು ಜನರ ನಡುವೆ ಕೋಮು ಬಿರುಕು ಮೂಡಿಸುವ ಉದ್ದೇಶದಿಂದ ಪ್ರಚೋದಕ ಭಾಷಣಗಳನ್ನು ಮಾಡಿದ್ದಾರೆ.

ಕಾರ್ಯಕ್ರಮದ ವೀಡಿಯೊ ತುಣುಕನ್ನು ಪರಿಶೀಲಿಸಿದ ನಂತರ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇತ್ತೀಚೆಗೆ ರಾಯ್‌ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ ಆರೋಪದಲ್ಲಿ ಸ್ವಾಮಿ ಕಾಳಿಚರಣ್‌ ವಿರುದ್ದ ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

2018 ರಲ್ಲಿ ಪುಣೆ ಜಿಲ್ಲೆಯ ಕೋರೆಗಾಂವ್-ಭೀಮಾದಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಮಿಲಿಂದ್‌ ಏಕ್ಬೋಟೆ ಆರೋಪಿಯಾಗಿದ್ದಾನೆ.

ಇದನ್ನೂ ಓದಿ:ಭೀಮಾ ಕೋರೆಗಾಂವ್‌ ಖೈದಿಗಳ ಬಿಡುಗಡೆ ಮಾಡಿ-ಮೋದಿಗೆ ನೊಬೆಲ್ ಪ್ರಶಸ್ತಿ ವಿಜೇತರು ಮತ್ತು ಯುರೋಪಿಯನ್‌ ಸಂಸದರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...