Homeರಾಷ್ಟ್ರೀಯ‘ದ್ವೇಷ ಭಾಷಣ’: ಕೇರಳದ ಮಾಜಿ ಶಾಸಕ ಪಿ ಸಿ ಜಾರ್ಜ್‌ಗೆ 14 ದಿನಗಳ ನ್ಯಾಯಾಂಗ ಬಂಧನ

‘ದ್ವೇಷ ಭಾಷಣ’: ಕೇರಳದ ಮಾಜಿ ಶಾಸಕ ಪಿ ಸಿ ಜಾರ್ಜ್‌ಗೆ 14 ದಿನಗಳ ನ್ಯಾಯಾಂಗ ಬಂಧನ

- Advertisement -
- Advertisement -

ಏಪ್ರಿಲ್ 29 ರಂದು ತಿರುವನಂತಪುರಂನ ಅನಂತಪುರಿ ಹಿಂದೂ ಮಹಾ ಸಮ್ಮೇಳನದಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಪ್ರಕರಣದಲ್ಲಿ ಕೇರಳದ ಹಿರಿಯ ರಾಜಕಾರಣಿ ಪಿ.ಸಿ. ಜಾರ್ಜ್ ಅವರನ್ನು ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಗುರುವಾರ ಒಪ್ಪಿಸಿದೆ.

ತಿರುವನಂತಪುರಂನ ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅವರಿಗೆ ನೀಡಿದ್ದ ಜಾಮೀನನ್ನು ರದ್ದುಗೊಳಿಸಿದ ನಂತರ ಮಂಗಳವಾರ ರಾತ್ರಿ ಪೊಲೀಸರು ಪಿಸಿ ಜಾರ್ಜ್ ಅವರನ್ನು ಬಂಧಿಸಿದ್ದರು. ಪಿಸಿ ಜಾರ್ಜ್ ಅವರು ಈಗಾಗಲೇ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರಿಂದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಯಾವುದೇ ಜಾಮೀನು ಅರ್ಜಿಯನ್ನು ಸಲ್ಲಿಸಲಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬುಧವಾರ, ಅವರನ್ನು ಕೊಚ್ಚಿಯ ಪೊಲೀಸ್ ಠಾಣೆಯಿಂದ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಯಿತು. ಅವರು ಈ ತಿಂಗಳು ಕೊಚ್ಚಿಯ ದೇವಾಲಯದ ಉತ್ಸವವೊಂದರಲ್ಲಿ ಮಾಡಿದ ಮತ್ತೊಂದು ದ್ವೇಷ ಭಾಷಣದ ತನಿಖೆಯ ಭಾಗವಾಗಿ ತೆರಳಿದ್ದರು.

ಇದನ್ನೂ ಓದಿ: ಮುಸ್ಲಿಮರ ವಿರುದ್ದ ದ್ವೇಷ ಭಾಷಣ: ಕೇರಳದ ಮಾಜಿ ಶಾಸಕನ ಬಂಧನ, ಜಾಮೀನು

ಕೊಟ್ಟಾಯಂ ಜಿಲ್ಲಾ ಪಂಚಾಯತ್ ಸದಸ್ಯರಾಗಿರುವ ಜಾರ್ಜ್ ಅವರ ಪುತ್ರ ಶೋನ್, ತಮ್ಮ ತಂದೆಯ ಬಂಧನ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪಿತೂರಿ ಎಂದು ಆರೋಪಿಸಿದ್ದಾರೆ. “ಅವರು (ವಿಜಯನ್) ಜಾರ್ಜ್ ಅವರನ್ನು ಕನಿಷ್ಠ ಒಂದು ಗಂಟೆ ಜೈಲಿನಲ್ಲಿ ಇರಿಸುವ ಮೂಲಕ ಯಾರನ್ನೊ ಮನವೊಲಿಸಲು ಬಯಸಿದ್ದರು. ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಬಾಕಿ ಇರುವ ಸಮಯದಲ್ಲಿ ನನ್ನ ತಂದೆಯನ್ನು ಬಂಧಿಸುವ ಮೂಲಕ ಅವರು ಕೆಲವು ವಲಯಗಳನ್ನು ಸಮಾಧಾನಪಡಿಸಲು ಬಯಸಿದ್ದರು” ಎಂದು ಶೋನ್ ಹೇಳಿದ್ದಾರೆ.

ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂದು ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ತಿಳಿಸಿದ ನಂತರ ತಿರುವನಂತಪುರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾರ್ಜ್ ಅವರ ಜಾಮೀನನ್ನು ರದ್ದುಗೊಳಿಸಿದೆ. ಈ ತಿಂಗಳು ಕೊಚ್ಚಿಯಲ್ಲಿ ನಡೆದ ದೇವಸ್ಥಾನದ ಉತ್ಸವದ ಸಂದರ್ಭದಲ್ಲಿ ಜಾರ್ಜ್ ಮತ್ತೊಂದು ದ್ವೇಷ ಭಾಷಣ ಮಾಡಿ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂದು ಪ್ರಾಸಿಕ್ಯೂಷನ್ ನ್ಯಾಯಾಲಯದ ಗಮನಕ್ಕೆ ತಂದಿತ್ತು.

ಏಪ್ರಿಲ್ 29 ರಂದು ತಿರುವನಂತಪುರಂನ ಅನಂತಪುರಿ ಹಿಂದೂ ಮಹಾ ಸಮ್ಮೇಳನದಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ್ದಕ್ಕಾಗಿ ಪಿ.ಸಿ ಜಾರ್ಜ್ ವಿರುದ್ಧ ಹಲವು ಸಂಘಟನೆಗಳು ದೂರು ದಾಖಲಿಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದವು. ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪಿ.ಸಿ. ಜಾರ್ಜ್, “ಮುಸ್ಲಿಮರು ನಡೆಸುತ್ತಿರುವ ರೆಸ್ಟೋರೆಂಟ್‌ಗಳಿಗೆ ಹೋಗಬಾರದು. ಅವರು ದೇಶದ ಮೇಲೆ ಹಿಡಿತ ಸಾಧಿಸುವ ಉದ್ದೇಶದಿಂದ ಚಹಾದಲ್ಲಿ ಸಂತಾನಹರಣ ಆಗುವ ದ್ರವವನ್ನು ಅದರಲ್ಲಿ ಬಳಸುತ್ತಾರೆ” ಎಂದು ಹೇಳಿದ್ದರು.

ಇದನ್ನೂ ಓದಿ: ಕೇರಳದಲ್ಲಿ ಬಂಡವಾಳಶಾಹಿಗಳೊಂದಿಗೆ ಕೈಜೋಡಿಸಿದ ಆಪ್; ಹುಸಿಯಾಗುತ್ತಿರುವ ಪರ್ಯಾಯ ರಾಜಕಾರಣದ ಭರವಸೆ

33 ವರ್ಷಗಳ ಕಾಲ ರಾಜ್ಯ ವಿಧಾನಸಭೆಯಲ್ಲಿ ಪೂಂಜಾರ್ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಜಾರ್ಜ್ ಅವರು ಮುಸ್ಲಿಮರು ನಡೆಸುತ್ತಿರುವ ವ್ಯವಹಾರಗಳನ್ನು ಬಹಿಷ್ಕರಿಸುವಂತೆ ಮುಸ್ಲಿಮೇತರರನ್ನು ಅಂದಿನ ಭಾಷಣದಲ್ಲಿ ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...