Homeಮುಖಪುಟದ್ವೇ‍ಷ ಭಾಷಣ: ಮಹಾರಾಷ್ಟ್ರದಲ್ಲಿ ಹಿಂದೂ ಸಂಘಟನೆಗಳಿಂದ ಮುಸ್ಲಿಮರ ಮೇಲೆ ಆರ್ಥಿಕ ಬಹಿಷ್ಕಾರಕ್ಕೆ ಕರೆ

ದ್ವೇ‍ಷ ಭಾಷಣ: ಮಹಾರಾಷ್ಟ್ರದಲ್ಲಿ ಹಿಂದೂ ಸಂಘಟನೆಗಳಿಂದ ಮುಸ್ಲಿಮರ ಮೇಲೆ ಆರ್ಥಿಕ ಬಹಿಷ್ಕಾರಕ್ಕೆ ಕರೆ

- Advertisement -
- Advertisement -

ಭಾನುವಾರ ಹಿಂದುತ್ವ ಸಂಘಟನೆಗಳು, ಮುಸ್ಲಿಮರ ವಿರುದ್ಧ ಆರ್ಥಿಕ ಬಹಿಷ್ಕಾರಕ್ಕೆ ಕರೆ ನೀಡಿ ಮುಂಬೈ ಬಳಿ ರ್ಯಾಲಿ ನಡೆಸಿದವು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಲವಾರು ಹಿಂದುತ್ವ ಸಂಘಟನೆಗಳ ಸಮೂಹವಾದ ಸಕಲ್ ಹಿಂದೂ ಸಮಾಜವು ‘ಹಿಂದೂ ಜನ ಆಕ್ರೋಶ ಮೋರ್ಚಾ’ ರ್ಯಾಲಿಯನ್ನು ಮಹಾರಾಷ್ಟ್ರದ ಮೀರಾ ರಸ್ತೆಯಲ್ಲಿ ಆಯೋಜಿಸಲಾಗಿತ್ತು.

ಈ ವೇಳೆ ಮುಸ್ಲಿಮರ ಆರ್ಥಿಕ ಬಹಿಷ್ಕಾರಕ್ಕೆ ಕರೆ ನೀಡುವುದರ ಜೊತೆಗೆ, ರ್ಯಾಲಿಯಲ್ಲಿ ಭಾಗವಹಿಸಿದ ಕೆಲವರು “ಲವ್ ಜಿಹಾದ್” ಮತ್ತು “ಲ್ಯಾಂಡ್ ಜಿಹಾದ್” ವಿಚಾರವಾಗಿ ಮುಸ್ಲಿಮರ ವಿರುದ್ಧ ವಿಷಕಾರಿದ್ದಾರೆ.

ಈ ರ್ಯಾಲಿಯ ಭಾಷಣಕಾರರಲ್ಲಿ ಒಬ್ಬರಾದ ಕಾಜಲ್, ”ಇಸ್ಲಾಮಿಕ್ ಆಕ್ರಮಣಶೀಲತೆಯಲ್ಲಿ ಮೂರು ಪ್ರಮುಖ ಅಂಶಗಳಿವೆ. ಮೊದಲನೆಯದು ಲವ್ ಜಿಹಾದ್, ಎರಡನೆಯದು ಭೂ ಜಿಹಾದ್ ಮತ್ತು ಅಂತಿಮವಾಗಿ, ಮತಾಂತರದ ಸಮಸ್ಯೆ ಇದೆ” ಎಂದು ಆರೋಪ ಮಾಡಿದ್ದಾರೆ ಎಂದು ಹಿಂದೂಸ್ತಾನಿ ಪತ್ರಿಕೆಯ ವರದಿ ಮಾಡಿದೆ.

”ಈ ಮೂರಕ್ಕೂ ರಾಮ್ ನೇತೃತ್ವದ ಪರಿಹಾರವಿದೆ, ಅದೇನೆಂದರೆ ‘ಆರ್ಥಿಕ ಬಹಿಷ್ಕಾರ’. ಇದಕ್ಕೆ ರಾಜಕೀಯ ನಾಯಕರು, ಸುಪ್ರೀಂ ಕೋರ್ಟ್ ಅಥವಾ ಮಾಧ್ಯಮಗಳು ನಿಮ್ಮನ್ನು ತಡೆಯುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಹಿಂದುತ್ವ ಕಾರ್ಯಕ್ರಮಕ್ಕೆ ಅನುಮತಿ: ಮಹಾರಾಷ್ಟ್ರಕ್ಕೆ ಸುಪ್ರೀಂ ಸೂಚನೆ

”ಲವ್ ಜಿಹಾದ್” ಎಂಬುದು ಇಸ್ಲಾಂಗೆ ಮತಾಂತರಿಸುವ ಸಲುವಾಗಿ ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಮೋಹಿಸಲು ಸಂಚು ಹೂಡುತ್ತಾರೆ. ಅಂತೆಯೇ, ”ಲ್ಯಾಂಡ್ ಜಿಹಾದ್” ಪ್ರತಿಪಾದಕರು ಮುಸ್ಲಿಮರು ಸಾರ್ವಜನಿಕ ಭೂಮಿ ಮತ್ತು ಹಿಂದೂಗಳ ಒಡೆತನದ ಆಸ್ತಿಯನ್ನು ಅತಿಕ್ರಮಿಸುವ ಅಭಿಯಾನವನ್ನು ನಡೆಸುತ್ತಿದ್ದಾರೆ ಎಂದು ಕಾಜಲ್ ಆರೋಪಿಸಿದ್ದಾರೆ.

ರ್ಯಾಲಿಯಲ್ಲಿ ಶಾಸಕ ನಿತೇಶ್ ರಾಣೆ ಸೇರಿದಂತೆ ಭಾರತೀಯ ಜನತಾ ಪಕ್ಷದ ಮುಖಂಡರು ಮತ್ತು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದಂತಹ ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು. ಮೀರಾ ಭಯಂದರ್ ಸ್ವತಂತ್ರ ಶಾಸಕಿ ಗೀತಾ ಜೈನ್ ಧ್ವಜಾರೋಹಣ ಮಾಡಿದರು.

ಮಹಾರಾಷ್ಟ್ರದಾದ್ಯಂತ ನವೆಂಬರ್‌ನಿಂದ ಇಂತಹ ಅನೇಕ ರ್ಯಾಲಿಗಳು ನಡೆಯುತ್ತಿವೆ. ಬಹುತೇಕ ಎಲ್ಲ ರ್ಯಾಲಿಗಳಲ್ಲೂ ಭಾಷಣಕಾರರು ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ ಅಥವಾ ಸಮುದಾಯ ವಿರುದ್ಧ ಪಿತೂರಿ ನಡೆಸುವ ವಿಚಾರಗಳನ್ನು ಹರಿಬಿಡುತ್ತಿದ್ದಾರೆ.

ಫೆಬ್ರವರಿಯಲ್ಲಿ ಮಹಾರಾಷ್ಟ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಆ ಪ್ರಕಾರ ”ದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಹಿಂದುತ್ವ ಸಂಘಟನೆಗಳ ರ್‍ಯಾಲಿಗೆ ಅನುಮತಿ ನೀಡಬಹುದು. ಗುಂಪಿನಿಂದ ಒಂದೇ ರ್ಯಾಲಿಗೆ ಅನುಮತಿ ನೀಡಬೇಕು ಮತ್ತು ಈ ವೇಳೆ ಯಾವುದೇ ದ್ವೇಷದ ಭಾಷಣ ಮಾಡಬಾರದು ಎಂದು ಷರತ್ತು ವಿಧಿಸಿತ್ತು.

”ಕಾನೂನನ್ನು ಧಿಕ್ಕರಿಸಿ ಮತ್ತು ಸಾರ್ವಜನಿಕ ಆದೇಶವನ್ನು ಉಲ್ಲಂಘಿಸುವ ಯಾವುದೇ ದ್ವೇಷದ ಭಾಷಣವನ್ನು ಯಾರೂ ಮಾಡಬಾರದು ಎಂಬ ಷರತ್ತಿಗೆ ಒಳಪಟ್ಟು ಅನುಮತಿ ನೀಡಬಹುದು” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿತ್ತು. ಆದರೆ, ಮಹಾರಾಷ್ಟ್ರ ಸರ್ಕಾರ ಮತ್ತು ಹಿಂದೂ ಸಂಘಟನೆಗಳು ಸುಪ್ರೀಂ ಕೋರ್ಟ್ ಆದೇಶವನ್ನು ಧಿಕ್ಕರಿಸಿ ಇಂತಹ ದ್ವೇ‍ಷ ಬಿತ್ತುವ ರ್ಯಾಲಿಗಳನ್ನು ನಡೆಸುತ್ತಿವೆ.

ಮುಸ್ಲಿಮರ ಆರ್ಥಿಕ ಬಹಿಷ್ಕಾರದ ಕರೆಯನ್ನು ಬೆಂಬಲಿಸುವುದಾಗಿ ಮಹಾರಾಷ್ಟ್ರದ ಮಾಜಿ ಸಿಎಂ ನಾರಾಯಣ ರಾಣೆ ಅವರು ತಿಳಿಸಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಆ ಎಲ್ಲಾ ಹಣವನ್ನು ಅವರು ಹಿಂದೂ ಸಮುದಾಯದ ವಿರುದ್ಧ ಬಳಸುತ್ತಾರೆ. ಆ ಹಣವನ್ನು ಸಮುದಾಯದ ಏಳಿಗೆಗೆ ಬಳಸಿದರೆ ಯಾರಿಗೂ ಸಮಸ್ಯೆಯಾಗುವುದಿಲ್ಲ. ಆದರೆ ಅವರು ಹಿಂದೂಗಳ ವಿರುದ್ಧ ಭಯೋತ್ಪಾದನೆ, ಲವ್ ಜಿಹಾದ್ ಮತ್ತು ಇತರ ಹಲವು ವಿಷಯಗಳ ಹೆಸರಿನಲ್ಲಿ ಹಣವನ್ನು ಬಳಸುತ್ತಾರೆ” ಎಂದು ರಾಣೆ ಮುಸ್ಲಿಂ ಸಮುದಾಯದ ವಿರುದ್ಧ ದ್ವೇ‍ಷದ ಮಾತುಗಳನ್ನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...