Homeಕರ್ನಾಟಕಚುನಾವಣಾ ಪ್ರಚಾರದಲ್ಲಿ ಕೋಮುದ್ವೇಷ ಭಾಷಣ: ಅಡ್ಡಂಡ ಕಾರ್ಯಪ್ಪ ವಿರುದ್ಧ ಎಫ್‌ಐಆರ್‌

ಚುನಾವಣಾ ಪ್ರಚಾರದಲ್ಲಿ ಕೋಮುದ್ವೇಷ ಭಾಷಣ: ಅಡ್ಡಂಡ ಕಾರ್ಯಪ್ಪ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಚುನಾವಣಾ ಪ್ರಚಾರ ವೇಳೆ ಹಿಂದೂ ಮುಸ್ಲಿಂ ಗಲಭೆ ಸೃಷ್ಟಿಸುವ ರೀತಿಯಲ್ಲಿ ಕೋಮುದ್ವೇಷ ಭಾಷಣ ಮಾಡಿರುವ ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ನೀಡಿರುವ ದೂರಿನ ಅನ್ವಯ ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕಿನ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 153ಎ, 171ಜಿ ಮತ್ತು ಪ್ರಜಾಪ್ರತಿನಿಧಿ ಕಾಯ್ದೆಯ ಕಲಂ 125ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಚುನಾವಣಾ ಕ್ಷಿಪ್ರ ಪರಿಶೀಲನಾ ತಂಡ-4ರಲ್ಲಿ ಕೆಲಸ ಮಾಡುತ್ತಿರುವ ಆರ್‌.ಕುಮಾರಸ್ವಾಮಿಯವರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಧಿಕಾರಿ ನೀಡಿರುವ ದೂರಿನಲ್ಲಿ ಏನಿದೆ?

“ನಾನು ಕ್ಷಿಪ್ರ ಪರಿಶೀಲನಾ ತಂಡ- 4ರಲ್ಲಿ ಕೆಲಸ ಮಾಡುತ್ತಿದ್ದೇನೆ. ನನ್ನ ತಂಡದಲ್ಲಿ ಸಹಾಯಕ ಸಿಬ್ಬಂದಿಗಳಾದ ಸಿ.ಮಹೇಶ, ಪೊಲೀಸ್ ಸಹಾಯಕ ಉಪನಿರೀಕ್ಷಕರಾದ ಕೆ.ಜೆ.ಫ್ರಾನ್ಸಿಸ್, ಛಾಯಾಚಿತ್ರಗಾರ ಕೆ.ರಿಜ್ವಾನ್ನ್‌ ಇದ್ದೆವು.”

“ದಿನಾಂಕ 4-05-2023ರಂದು ಭಾರತೀಯ ಜನತಾ ಪಕ್ಷದ ಚುನಾವಣಾ ಪ್ರಚಾರದ ಸ್ಥಳವಾದ ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ಸುಮಾರು 12.45 ಗಂಟೆಗೆ ಕಾರ್ಯಕ್ರಮ ನಡೆಯುತ್ತಿತ್ತು. ಈ ಕಾರ್ಯಕ್ರಮಕ್ಕೆ ನನ್ನ ತಂಡದವರೊಂದಿಗೆ ಹೋಗಿದ್ದೆವು. ಪೊನ್ನಂಪೇಟೆ ನಗರದಲ್ಲಿ ವಾಸವಿರುವ ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪನವರು ಬಿಜೆಪಿ ಪರ ಪ್ರಚಾರದಲ್ಲಿ ನಿರತರಾಗಿದ್ದರು.”

“ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಮುಸ್ಲಿಂ ಜನಾಂಗಕ್ಕೆ ಘೋಷಿಸಿರುವ ಸೌಲಭ್ಯದ ಕುರಿತು ಕೊಡವ ಮತ್ತು ಕನ್ನಡ ಭಾಷೆಯಲ್ಲಿ ಮಾತನಾಡುವ ಸಂದರ್ಭದಲ್ಲಿ ಕೋಮುದ್ವೇಷ ಭಾಷಣ ಮಾಡಿದ್ದಾರೆ.”

“ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯದವರಿಗೆ ಉಚಿತ ವಸತಿ ನಿಲಯ ನೀಡುವುದಾಗಿ ತಿಳಿಸಿದ್ದು, ಈ ವಸತಿ ಶಾಲೆಗಳಲ್ಲಿ ಹಿಂದೂಗಳನ್ನು ಕೊಲ್ಲಲು ತರಬೇತಿ ನೀಡುವ ಉದ್ದೇಶ ಹೊಂದಿದ್ದಾರೆ. ಅದಕ್ಕಾಗಿ ಈ ಸೌಲಭ್ಯ ನೀಡಿದ್ದಾರೆ ಎಂದು ಆರೋಪಿಸಿ ಭಾಷಣ ಮಾಡಿದ್ದಾರೆ.”

“ಇದರಿಂದ ಧರ್ಮ ಧರ್ಮಗಳ ನಡುವೆ ಸಾಮರಸ್ಯ ಕದಡಿ, ಶತ್ರುತ್ವವನ್ನು ಉಂಟು ಮಾಡಿ ಸಾರ್ವಜನಿಕ ನೆಮ್ಮದಿಗೆ ಭಂಗ ಹಾಗೂ ಭಯ, ಭೀತಿ ಮೂಡಿಸುವ ಹಲವು ರೀತಿಯ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ. ಅಡ್ಡಂಡ ಕಾರ್ಯಪ್ಪ ಪ್ರಚೋದನಾಕಾರಿ ಭಾಷಣ ಮಾಡಿದ್ದು, ಮಾದರಿ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಕಾರ್ಯಪ್ಪ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನು ಪರಿಶೀಲಿಸಲು ಹಾಗೂ ವಿಡಿಯೊ ತುಣುಕುಗಳನ್ನು ಸಿಡಿ ರೂಪದಲ್ಲಿ ಸಲ್ಲಿಸಲು ಕಾಲಾವಕಾಶವನ್ನು ಅಧಿಕಾರಿ ತೆಗೆದುಕೊಂಡಿದ್ದಾರೆ.

ಲೂಸ್ ಟಾಕ್‌ಗಳಿಗೆ ಹೆಸರಾದ ಅಡ್ಡಂಡ ಕಾರ್ಯಪ್ಪ ಕೋಮುದ್ವೇಷ ಭಾಷಣ ಮಾಡುವುದು ಹೊಸದೇನೂ ಅಲ್ಲ. ಟಿಪ್ಪುವನ್ನು ಕೊಂದಿದ್ದು ಉರಿಗೌಡ, ನಂಜೇಗೌಡ ಎಂದು ತಮ್ಮ ನಾಟಕದಲ್ಲಿ ನಕಲಿ ಇತಿಹಾಸ ಸೃಷ್ಟಿಸಿ ವಿವಾದ ಮೈಮೇಲೆ ಎಳೆದುಕೊಂಡಿದ್ದರು.

ಒಕ್ಕಲಿಗರು ಮತ್ತು ಮುಸ್ಲಿಮರನ್ನು ಕಾರ್ಯಪ್ಪ ಎತ್ತಿಕಟ್ಟಲು ಯತ್ನಿಸುತ್ತಿದ್ದಾರೆಂಬ ಟೀಕೆಗಳು ವ್ಯಕ್ತವಾಗಿದ್ದವು. ಪ್ರಧಾನಿ ಮೋದಿಯವರು ಮಂಡ್ಯ ಜಿಲ್ಲೆಗೆ ಪ್ರವೇಶಿಸುವ ಸಂದರ್ಭದಲ್ಲಿ ಉರಿಗೌಡ, ನಂಜೇಗೌಡ ಮಹಾದ್ವಾರ ಸೃಷ್ಟಿಸಿ ವಿವಾದವನ್ನು ಮತ್ತಷ್ಟು ದೊಡ್ಡದಾಗಿಸಲಾಗಿತ್ತು. ಬಿಜೆಪಿ ನಾಯಕರೂ ಈ ಪಾತ್ರಗಳನ್ನೇ ಇಟ್ಟುಕೊಂಡು ಹೇಳಿಕೆಗಳನ್ನು ನೀಡುತ್ತಿದ್ದರು.

ಈ ವಿಚಾರವಾಗಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯವರು ಮಧ್ಯಪ್ರವೇಶಿಸಿ, ”ಸಿ.ಟಿ ರವಿ ಇರಬಹುದು, ಅಶ್ವತ್ಥ ನಾರಾಯಣ ಅವರಿರಬಹುದು, ಗೋಪಾಲಯ್ಯ ಅವರಿರಬಹುದು, ಈ ವಿಷಯದಲ್ಲಿ ಯಾರೆಲ್ಲ ಮಾತನಾಡುತ್ತಿದ್ದಾರೋ ಅವರೆಲ್ಲರಿಗೂ ಇತಿಹಾಸದ ಹಿನ್ನೆಲೆಯನ್ನು ಮನದಟ್ಟು ಮಾಡಿಕೊಟ್ಟಿದ್ದರಿಂದ ಅವರೆಲ್ಲರೂ ಸುಮ್ಮನಾಗಬೇಕು, ಸುಮ್ಮನಾಗಿದ್ದಾರೆ ಎಂದು ಭಾವಿಸಿದ್ದೇನೆ” ಎಂದಿದ್ದರು.

”ಕಲ್ಪನೆ ಮಾಡಿಕೊಂಡು ಬರೆಯುವುದು ಕಾದಂಬರಿ ಆಗುತ್ತದೆ, ಶಾಸನಗಳು ಮತ್ತು ಇತಿಹಾಸದ ಹಿನ್ನೆಲೆಯನ್ನು ಇಟ್ಟುಕೊಂಡು ಬರೆದಿರುವುದು ಮುಂದಿನ ಪೀಳಿಗೆಗೆ ಒಂದಿಷ್ಟು ಶಕ್ತಿಯಾಗುತ್ತದೆ. ಅಂತಹುದ್ಯಾವುದೂ ಇದುವರೆಗೆ ಕಂಡುಬಾರದೆ ಇರುವುದರಿಂದ ಹೇಳಿಕೆಗಳ ಮೂಲಕ ಯುವಕರಲ್ಲಿ ಮತ್ತು ಸಮಕಾಲೀನ ಜಗತ್ತಿನಲ್ಲಿ ಗೊಂದಲವನ್ನು ಸೃಷ್ಟಿ ಮಾಡಿ ವ್ಯಕ್ತಿಗಳ ಶಕ್ತಿಯನ್ನು ಹಾಳು ಮಾಡಬಹುದು, ಸಮುದಾಯಕ್ಕೆ ಧಕ್ಕೆಯನ್ನು ಕೂಡಾ ತರಬಾರದು” ಎಂದು ಸ್ವಾಮೀಜಿ ಎಚ್ಚರಿಸಿದ್ದರು.

ಇದಾದ ಬಳಿಕ ಹೇಳಿಕೆ ನೀಡಿದ್ದ ಅಡ್ಡಂಡ ಕಾರ್ಯಪ್ಪ, “”ನಿರ್ಮಲಾನಂದನಾಥರು ಒಕ್ಕಲಿಗ ಸಮುದಾಯಕ್ಕೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಳಿಗೆ ಅಲ್ಲ, ಒಕ್ಕಲಿಗ ಸಮುದಾಯದ ರಕ್ಷಣೆ ಮಾಡುವುದು ಅವರ ಕೆಲಸ ಹಾಗಂತ ಉರಿಗೌಡ, ನಂಜೇಗೌಡರ ಕುರಿತು ಚರ್ಚೆ ನಡೆಯಲೇಬಾರದು ಎಂದು ಹೇಳಿದ್ದು ಸರಿಯಲ್ಲ” ಎಂದಿದ್ದರು. ಬಳಿಕ ಸ್ವಾಮೀಜಿಯವರ ಬಳಿ ಕಾರ್ಯಪ್ಪ ಕ್ಷಮೆಯಾಚಿಸಿದ್ದರು.

ಇದನ್ನೂ ಓದಿರಿ: ನಿರ್ಮಲಾನಂದನಾಥರು ಒಕ್ಕಲಿಗರಿಗೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಲ್ಲ: ಅಡ್ಡಂಡ ಕಾರ್ಯಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...